Home Blog

ಪ್ರೀತಿ ನಿರಾಕರಿಸಿದ ಯುವತಿ; ಹೈಟೆನ್ಷನ್ ಕಂಬ ಹತ್ತಿದ ಯುವಕ: ಆನೇಕಲ್‌ನಲ್ಲಿ ಹೈಡ್ರಾಮಾ.!

ಬೆಂಗಳೂರು ಗ್ರಾಮಂತರ : ಯುವತಿಯೋರ್ವಳು ಪ್ರೀತಿ ನಿರಾಕರಿಸಿದ ಹಿನ್ನಲೆಯಲ್ಲಿ ಯುವಕನೋರ್ವ ಹೈಟೆನ್ಷನ್ ಕಂಬ (ವಿದ್ಯುತ್ ಕಂಬ) ಹತ್ತಿದ ಹೈಡ್ರಾಮಾ ಸೃಷ್ಟಿದ ಘಟನೆ ಬೆಂಗಳೂರು ಗ್ರಾಮಾಂತರದ ಆನೇಕಲ್ಲಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಿನ್ನಯ್ಯನಪಾಳ್ಯದಲ್ಲಿ (Chinnayyanapalya) ಪ್ರೇಮ ವೈಫಲ್ಯ (Love Failure) ಹಿನ್ನೆಲೆ ಯುವಕನೊಬ್ಬ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಭಾರೀ ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ.

ಮದುವೆಗೆ ನಿರಾಕರಣೆ, ಹೈಡ್ರಾಮಾ ಸೃಷ್ಟಿಸಿದ ಯುವಕ :

ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದು ಯುವಕ ಈ ಆತಂಕಕಾರಿ ನಡೆ ತಳೆದಿದ್ದಾನೆ ಎನ್ನಲಾಗಿದೆ. ಸೋಮಶೇಖರ್ ಎಂಬ ಯುವಕನೇ ಹೈಟೆನ್ಷನ್ ಕಂಬ ಹತ್ತಿ ಭಾರೀ ಹೈಡ್ರಾಮಾ ಸೃಷ್ಟಿಸಿದ ಯುವಕ.

ಇತ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳೊಂದಿಗೆ ಪ್ರೇಮ ಸಂಬಂಧದಲ್ಲಿದ್ದನು ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಆದರೆ ಇತ್ತೀಚೆಗೆ ಯುವತಿ ಮದುವೆಗೆ ನಿರಾಕರಿಸಿದ್ದಲ್ಲದೆ, ಪ್ರೇಮ ಸಂಬಂಧವನ್ನೇ ಮುರಿದುಕೊಳ್ಳಲು ಮುಂದಾಗಿದ್ದಾಳೆ ಎಂದು ಹೇಳಲಾಗುತ್ತಿದೆ.

ಯುವತಿ ಮದುವೆಗೆ ನಿರಾಕರಿಸಿದ್ದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ಸೋಮಶೇಖರ್ ಆಕ್ರೋಶಗೊಂಡು ಮೊದಲು ತನ್ನ ಮನೆಯಲ್ಲೇ ದಾಂಧಲೆ ನಡೆಸಿದ್ದಾನೆ.

ಯುವತಿ ಬರುವವರೆಗೂ ಕೆಳಗೆ ಇಳಿಯುವುದಿಲ್ಲ :

ಮನೆಯ ಮೇಲ್ಛಾವಣಿಯ ಶೀಟ್‌ಗಳನ್ನು ಒಡೆದು ಹಾಕಿದ ಬಳಿಕವೂ ಕೋಪ ಶಮನವಾಗದೆ, ಮನೆ ಸಮೀಪದಲ್ಲಿದ್ದ ಹೈಟೆನ್ಷನ್ (High Tension) ವಿದ್ಯುತ್ ಕಂಬವನ್ನು ಹತ್ತಿ ಕುಳಿತುಕೊಂಡಿದ್ದಾನೆ. “ಯುವತಿ ಬರುವವರೆಗೂ ಕೆಳಗೆ ಇಳಿಯುವುದಿಲ್ಲ” ಎಂದು ಆತ ಹಠ ಹಿಡಿದಿದ್ದಾನೆ ಎನ್ನಲಾಗಿದೆ.

ಯುವಕ ಕಂಬ ಹತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಆನೇಕಲ್ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಬೆಸ್ಕಾಂ (BESCOM) ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸಪಟ್ಟರು.

ಹೈಟೆನ್ಷನ್ ಕಂಬದ ವಿದ್ಯುತ್ ಕಡಿತ :

ಹೈವೋಲ್ಟೇಜ್ ವಿದ್ಯುತ್ ಹರಿಯುತ್ತಿದ್ದ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳು ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಕಡಿತಗೊಳಿಸಿದರು. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಯುವಕನೊಂದಿಗೆ ಮಾತುಕತೆ ನಡೆಸಿ ಮನವೊಲಿಸಲು ಪ್ರಯತ್ನಿಸಿದರು.

ಇದನ್ನು ಓದಿ : ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಎಚ್ಚರಿಕೆ; 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.

ಕೆಲ ಗಂಟೆಗಳ ಕಾರ್ಯಾಚರಣೆಯ ಬಳಿಕ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಯಶಸ್ವಿಯಾದರು. ನಂತರ ಆತನನ್ನು ವಶಕ್ಕೆ ಪಡೆದ ಪೊಲೀಸರು ಕೌನ್ಸೆಲಿಂಗ್ (Counselling) ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ ಪ್ರೇಮ ವೈಫಲ್ಯದಿಂದಾಗಿ ಕೆಲ ಯುವಕರು ಮಾನಸಿಕ ಸಮತೋಲನ ಕಳೆದುಕೊಂಡು ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದಕ್ಕೆ ಮತ್ತೊಂದು ಉದಾಹರಣೆಯಾಗಿದೆ. ತಜ್ಞರ ಪ್ರಕಾರ, ಇಂತಹ ಸಂದರ್ಭಗಳಲ್ಲಿ ಕುಟುಂಬದ ಬೆಂಬಲ ಹಾಗೂ ಮಾನಸಿಕ ಆರೋಗ್ಯ ತಜ್ಞರ ಸಲಹೆ ಅತ್ಯಂತ ಮುಖ್ಯವಾಗುತ್ತದೆ.

ಸಂಪಾದಕೀಯ :

ಪ್ರೀತಿ ಮತ್ತು ಸಂಬಂಧಗಳು ವೈಯಕ್ತಿಕ ಆಯ್ಕೆಯ ವಿಷಯವಾಗಿದ್ದು, ನಿರಾಕರಣೆಯನ್ನು ಸಹ ಸಮಾಧಾನದಿಂದ ಸ್ವೀಕರಿಸುವ ಮನಸ್ಥಿತಿ ಬೆಳೆಸಿಕೊಳ್ಳುವುದು ಯುವಕ ಯುವತಿಯರಲ್ಲಿ ಅಗತ್ಯವಾಗಿದೆ. ಭಾವನಾತ್ಮಕ ಆಘಾತದ ಸಮಯದಲ್ಲಿ ಆತುರದ ನಿರ್ಧಾರಗಳು ಜೀವಕ್ಕೂ, ಸಾರ್ವಜನಿಕರ ಸುರಕ್ಷತೆಯಕ್ಕೂ ಅಪಾಯ ಉಂಟುಮಾಡಬಹುದು.

ಇಂದಿನ ಎಲ್ಲಾ ತಾಜಾ ಸುದ್ದಿಗಳನ್ನು ಇಲ್ಲಿ ಓದಿ

ಕುಟುಂಬದವರು ಮತ್ತು ಸ್ನೇಹಿತರು ಇಂತಹ ಸಂದರ್ಭಗಳಲ್ಲಿ ಮಾನಸಿಕ ಬೆಂಬಲ ನೀಡುವುದು ಬಹಳ ಮುಖ್ಯ. ಯುವಕರು, ಯುವತಿಯರು ಸಮಸ್ಯೆಗಳಿಗೆ ಅಪಾಯಕಾರಿ ದಾರಿ ಹಿಡಿಯುವ ಬದಲು ಕೌನ್ಸೆಲಿಂಗ್‌ (Counselling) ಮತ್ತು ಮಾನಸಿಕ ಆರೋಗ್ಯ ತಜ್ಞರ ನೆರವು ಪಡೆಯಬೇಕು.


Disclaimer: ಈ ಸುದ್ದಿಯಲ್ಲಿರುವ (ಹೈಟೆನ್ಷನ್ ಕಂಬ ಹತ್ತಿದ ಯುವಕ) ಮಾಹಿತಿ ವಿವಿಧ ಸ್ಥಳೀಯ ಮೂಲಗಳು ಮತ್ತು ಲಭ್ಯ ಮಾಹಿತಿಯ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ತನಿಖೆಯ ಅಂತಿಮ ವರದಿ ಹಾಗೂ ಪೊಲೀಸ್ ಮಾಹಿತಿಯ ಆಧಾರದ ಮೇಲೆ ಮುಂದಿನ ವಿವರಗಳಲ್ಲಿ ಬದಲಾವಣೆ ಸಂಭವಿಸಬಹುದು.

ಇಂದಿನ ರಾಶಿ ಭವಿಷ್ಯ: ಮೇ 20, 2026 ಬುಧವಾರದ ದ್ವಾದಶ ರಾಶಿಗಳ ಫಲಗಳು.!

ಇಂದಿನ ರಾಶಿ ಭವಿಷ್ಯ : ಇಂದಿನ ರಾಶಿ ಭವಿಷ್ಯ (ಮೇ 20, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ ಸ್ಥಿತಿಗಳಲ್ಲಿ ಏರುಪೇರುಗಳು ಕಾಣಿಸಬಹುದು.

ಹಾಗಾದರೆ ಯಾವ ರಾಶಿಗೆ ಏನು ಫಲ ಎಂಬುದನ್ನು ಈ ಲೇಖನದಲ್ಲಿ ಮೇಷದಿಂದ ಮೀನವರೆಗೆ ಎಲ್ಲಾ ರಾಶಿಗಳ ದಿನಭವಿಷ್ಯವನ್ನು ತಿಳಿದುಕೊಳ್ಳಬಹುದು. ಬನ್ನಿ ವಿವರವಾಗಿ ಇಂದಿನ ರಾಶಿ ಭವಿಷ್ಯದಲ್ಲಿ ತಿಳಿಯೋಣ.

ಇಂದಿನ ರಾಶಿ ಭವಿಷ್ಯ (May 20, 2026) ಎಲ್ಲಾ 12 ರಾಶಿಗಳ ಫಲ :

ಮೇಷ ರಾಶಿ (Aries) :

ಪ್ರಮುಖ ವಿಚಾರಗಳಲ್ಲಿ ಎದುರಾಗಿದ್ದ ಅಡೆತಡೆಗಳನ್ನು ನಿವಾರಿಸಿ ಯಶಸ್ಸಿನತ್ತ ಸಾಗುತ್ತೀರಿ. ಭೂ ಸಂಬಂಧಿತ ವ್ಯವಹಾರಗಳಿಂದ ಲಾಭ ದೊರೆಯುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿದ್ದು, ಅಗತ್ಯ ಸಮಯದಲ್ಲಿ ಹಣಕಾಸಿನ ನೆರವು ಸಿಗಲಿದೆ. ಸಮಾಜದಲ್ಲಿ ಗಣ್ಯ ವ್ಯಕ್ತಿಗಳ ಸಂಪರ್ಕ ಹೆಚ್ಚಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ನಿರುದ್ಯೋಗಿಗಳಿಗೆ ಅವಕಾಶಗಳು ದೊರೆಯುವ ಸೂಚನೆಗಳಿವೆ.

ವೃಷಭ ರಾಶಿ (Taurus) :

ಬಂಧು-ಮಿತ್ರರ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಗುತ್ತದೆ. ಮನೆಯ ಹೊರಗಿನ ವ್ಯವಹಾರಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ಮನೆಯಲ್ಲಿ ಶುಭ ಕಾರ್ಯಗಳ ಆಯೋಜನೆ ನಡೆಯಬಹುದು. ಉದ್ಯೋಗ ಕ್ಷೇತ್ರದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ. ಕೆಲವು ವಿಚಾರಗಳಲ್ಲಿ ಸಂಗಾತಿಯ ಸಲಹೆ ಪಡೆಯುವುದು ಉತ್ತಮ. ವಾಹನ ಚಾಲನೆ ವೇಳೆ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ (Gemini) :

ಹಣಕಾಸಿನ ವಿಚಾರಗಳು ಆಶಾದಾಯಕವಾಗಿರುತ್ತವೆ. ಹೊಸ ವ್ಯವಹಾರ ಆರಂಭಿಸುವ ಅವಕಾಶಗಳು ದೊರೆಯುತ್ತವೆ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ಸಿಗುತ್ತದೆ. ಬಂಧು-ಮಿತ್ರರಿಂದ ಶುಭ ಸಮಾರಂಭಗಳಿಗೆ ಆಹ್ವಾನಗಳು ಬರುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಅಥವಾ ಗೌರವ ಹೆಚ್ಚಾಗುವ ಸಾಧ್ಯತೆ ಇದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ಸಿಗಲಿದೆ.

ಕಟಕ ರಾಶಿ (Cancer) :

ಆಪ್ತ ಸ್ನೇಹಿತರಿಂದ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಆದಾಯದಲ್ಲಿ ಹೆಚ್ಚಳ ಕಂಡುಬರುತ್ತದೆ. ವ್ಯವಹಾರ ವಿಸ್ತರಣೆ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ಬೆಲೆಬಾಳುವ ವಸ್ತುಗಳು ಹಾಗೂ ವಾಹನ ಖರೀದಿಸುವ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ತೃಪ್ತಿದಾಯಕ ವಾತಾವರಣ ಇರುತ್ತದೆ.

ಸಿಂಹ ರಾಶಿ (Leo) :

ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಧಾರಗಳನ್ನು ತಪ್ಪಿಸುವುದು ಒಳಿತು. ನಿಮ್ಮ ಸುತ್ತಲಿನವರೊಂದಿಗೆ ಜಾಗರೂಕರಾಗಿ ವರ್ತಿಸಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಆಪ್ತ ಸ್ನೇಹಿತರೊಂದಿಗೆ ಭೋಜನ ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಆರ್ಥಿಕವಾಗಿ ಸ್ವಲ್ಪ ಪ್ರಗತಿ ಸಾಧಿಸುತ್ತೀರಿ. ಉದ್ಯೋಗ ಕ್ಷೇತ್ರದಲ್ಲಿ ಅನುಕೂಲಕರ ಪರಿಸ್ಥಿತಿ ಮುಂದುವರಿಯುತ್ತದೆ.

ಕನ್ಯಾ ರಾಶಿ (Virgo) :

ಮಕ್ಕಳ ಶಿಕ್ಷಣ ಸಂಬಂಧಿತ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕುಟುಂಬ ಸದಸ್ಯರ ಸಹಾಯದಿಂದ ಕೆಲವು ಪ್ರಮುಖ ಕೆಲಸಗಳು ಪೂರ್ಣಗೊಳ್ಳುತ್ತವೆ. ಸ್ನೇಹಿತರಿಂದ ವ್ಯವಹಾರಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿ ಸಿಗಬಹುದು. ಉದ್ಯೋಗ ಕ್ಷೇತ್ರದಲ್ಲಿ ಕೆಲಸದ ಒತ್ತಡ ಹೆಚ್ಚಾಗಿ ಮಾನಸಿಕ ಅಶಾಂತಿ ಉಂಟಾಗಬಹುದು.

ಇದನ್ನು ಓದಿ : ಇಂದಿನ ರಾಶಿ ಭವಿಷ್ಯ: ಮೇ 19, 2026 ಮಂಗಳವಾರದ ದ್ವಾದಶ ರಾಶಿಗಳ ಫಲಗಳು.!

ತುಲಾ ರಾಶಿ (Libra) :

ಆರ್ಥಿಕ ಪರಿಸ್ಥಿತಿ ಸ್ವಲ್ಪ ಅನಿಶ್ಚಿತವಾಗಿದ್ದರೂ ಅಗತ್ಯಕ್ಕೆ ಹಣ ಸಿಗುತ್ತದೆ. ಹಠಾತ್ ಧನಲಾಭದ ಸೂಚನೆಗಳಿವೆ. ದೂರ ಪ್ರಯಾಣಗಳನ್ನು ಮುಂದೂಡುವುದು ಒಳಿತು. ಹೊಸ ವ್ಯವಹಾರ ಆರಂಭಿಸಲು ಸ್ನೇಹಿತರ ಬೆಂಬಲ ದೊರೆಯುತ್ತದೆ. ವ್ಯವಹಾರದಲ್ಲಿನ ಸಮಸ್ಯೆಗಳನ್ನು ನಿವಾರಿಸಿ ಲಾಭ ಗಳಿಸುತ್ತೀರಿ. ನಿರುದ್ಯೋಗಿಗಳಿಗೆ ಸಂತಸದ ಸುದ್ದಿ ಸಿಗಬಹುದು.

ವೃಶ್ಚಿಕ ರಾಶಿ (Scorpio) :

ಹಣಕಾಸಿನ ವಿಚಾರಗಳು ಆಶಾದಾಯಕವಾಗಿರುತ್ತವೆ. ದೂರದ ಸ್ಥಳಗಳಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಬಾಲ್ಯದ ಸ್ನೇಹಿತರನ್ನು ಭೇಟಿ ಮಾಡಿ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತೀರಿ. ಹೊಸ ಯೋಜನೆಗಳಿಗೆ ಚಾಲನೆ ಸಿಗುತ್ತದೆ. ಪ್ರಮುಖ ವಿಷಯಗಳಲ್ಲಿ ನಿಮ್ಮ ಸ್ವಂತ ಆಲೋಚನೆಗಳಿಗೆ ಆದ್ಯತೆ ನೀಡುವುದು ಒಳಿತು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆ ಪಡೆಯುತ್ತೀರಿ.

ಧನುಸ್ಸು ರಾಶಿ (Sagittarius) :

ಬಂಧು-ಮಿತ್ರರಿಂದ ಅಗತ್ಯ ಸಹಾಯ ದೊರೆಯುತ್ತದೆ. ವಾಹನ ಖರೀದಿ ಪ್ರಯತ್ನಗಳು ಯಶಸ್ವಿಯಾಗುತ್ತವೆ. ದೀರ್ಘಕಾಲದ ಸಾಲದ ಒತ್ತಡ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ. ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸಿ. ವ್ಯವಹಾರ ಕ್ಷೇತ್ರದಲ್ಲಿ ಆತ್ಮವಿಶ್ವಾಸದಿಂದ ಮುನ್ನಡೆಯುತ್ತೀರಿ. ಉದ್ಯೋಗದಲ್ಲಿ ಮೇಲಧಿಕಾರಿಗಳ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಓದಿ : ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್; ಮುಷ್ಕರ ಬೇಡ, ಚರ್ಚೆ ನಡೆಸಿ ಎಂದ ಕೋರ್ಟ್.

ಮಕರ ರಾಶಿ (Capricorn) :

ಮಾನಸಿಕವಾಗಿ ಶಾಂತಿ ಅನುಭವಿಸುತ್ತೀರಿ. ವ್ಯವಹಾರ ಕ್ಷೇತ್ರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಕೈಗೊಂಡ ಕೆಲಸಗಳು ಪೂರ್ಣಗೊಳ್ಳಲು ಸ್ವಲ್ಪ ವಿಳಂಬವಾಗಬಹುದು. ಸಹೋದರರ ಸಹಾಯದಿಂದ ಕುಟುಂಬದ ಸಮಸ್ಯೆಗಳು ಬಗೆಹರಿಯುತ್ತವೆ. ಮಕ್ಕಳಿಗಾಗಿ ಮಾಡುವ ಪ್ರಯತ್ನಗಳು ಫಲಿಸುತ್ತವೆ. ಹಠಾತ್ ಆರ್ಥಿಕ ಲಾಭ ಸಿಗುವ ಸಾಧ್ಯತೆ ಇದೆ. ಉದ್ಯೋಗ ಕ್ಷೇತ್ರದಲ್ಲಿ ಅನುಕೂಲತೆ ಹೆಚ್ಚಾಗುತ್ತದೆ.

ಕುಂಭ ರಾಶಿ (Aquarius) :

ಸ್ನೇಹಿತರೊಂದಿಗಿನ ಭಿನ್ನಾಭಿಪ್ರಾಯಗಳು ಬಗೆಹರಿಯುತ್ತವೆ. ಆರ್ಥಿಕ ಪರಿಸ್ಥಿತಿ ಸುಧಾರಿಸಿ ಸಾಲ ತೀರಿಸಲು ಸಾಧ್ಯವಾಗುತ್ತದೆ. ಪ್ರಮುಖ ವಿಷಯಗಳಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಇತರರ ವಿಚಾರಗಳಲ್ಲಿ ತಲೆಹಾಕದಿರುವುದು ಒಳಿತು. ವ್ಯವಹಾರಗಳಲ್ಲಿ ಅಲ್ಪ ಲಾಭ ಕಂಡುಬರುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೀನ ರಾಶಿ (Pisces) :

ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಸ್ಥಿರಾಸ್ತಿ ಸಂಬಂಧಿತ ವಿವಾದಗಳು ಬಗೆಹರಿಯುವ ಸಾಧ್ಯತೆ ಇದೆ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಕುಟುಂಬ ಸದಸ್ಯರೊಂದಿಗೆ ಸಂತೋಷದ ಸಮಯ ಕಳೆಯುತ್ತೀರಿ. ಹೊಸ ವಸ್ತ್ರ ಮತ್ತು ಆಭರಣಗಳನ್ನು ಖರೀದಿಸುವ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸದ ಶೈಲಿಗೆ ಮೆಚ್ಚುಗೆ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗಲಿವೆ.


Disclaimer:  ಇಂದಿನ ರಾಶಿ ಭವಿಷ್ಯ (Horoscope) ಸಾಮಾನ್ಯ ಜ್ಯೋತಿಷ್ಯ ಲೆಕ್ಕಾಚಾರಗಳ ಆಧಾರದ ಮೇಲೆ ನೀಡಲಾಗಿದೆ. ವೈಯಕ್ತಿಕ ಫಲಿತಾಂಶಗಳು ಬದಲಾಗುವ ಸಾಧ್ಯತೆ ಇದೆ. ಇಲ್ಲಿರುವ ಇಂದಿನ ರಾಶಿ ಭವಿಷ್ಯ ಅಂತಿಮ ನಿರ್ಧಾರಕ್ಕೆ ಆಧಾರವಾಗಿ ಪರಿಗಣಿಸಬಾರದು.

ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಎಚ್ಚರಿಕೆ; 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.

0

ಬೆಂಗಳೂರು : ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದ್ದು, ರಾಜ್ಯದ ಈ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ (Pre-Monsoon Rain) ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಗುಡುಗು-ಮಿಂಚು ಸಹಿತ ಮಳೆ :

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದ್ದು, 10 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ (Orange Alert) ಹಾಗೂ ಉಳಿದ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಂಭವವೂ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಈ ಸುದ್ದಿಯನ್ನು ಓದಿ : ಇಂದಿನ ರಾಶಿ ಭವಿಷ್ಯ: ಮೇ 19, 2026 ಮಂಗಳವಾರದ ದ್ವಾದಶ ರಾಶಿಗಳ ಫಲಗಳು.!

ಸತತ ಮಳೆಯ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ನಗರ ಪ್ರದೇಶಗಳಲ್ಲಿ ಟ್ರಾಫಿಕ್ ಸಮಸ್ಯೆಯೂ ಎದುರಾಗಬಹುದು ಎಂದು ಅಂದಾಜಿಸಲಾಗಿದೆ.

ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ :

ಉತ್ತರ ಕರ್ನಾಟಕ ಭಾಗದ ಕಲಬುರಗಿ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಹೆಚ್ಚಾಗುವ (ಆರೆಂಜ್ ಅಲರ್ಟ್) ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ 115 ಮಿ.ಮೀ. ರಿಂದ 204 ಮಿ.ಮೀ.ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಗುಡುಗು-ಮಿಂಚಿನ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಬೆಂಗಳೂರಿಗೂ ಯೆಲ್ಲೋ ಅಲರ್ಟ್ :

ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಚೇರಿಯಿಂದ ಮನೆಗೆ ತೆರಳುವವರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಸೂಚಿಸಲಾಗಿದೆ. ನಗರದಲ್ಲಿ ಕೆಲವೆಡೆ ರಸ್ತೆ ಜಲಾವೃತವಾಗುವ ಸಾಧ್ಯತೆಯಿದ್ದು, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಇದನ್ನು ಓದಿ : ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್; ಮುಷ್ಕರ ಬೇಡ, ಚರ್ಚೆ ನಡೆಸಿ ಎಂದ ಕೋರ್ಟ್.

ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆ ಮುಂದುವರಿಯಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುವ ಮೊದಲು ಹವಾಮಾನ ಮಾಹಿತಿ ಪರಿಶೀಲಿಸಲು ಸೂಚಿಸಲಾಗಿದೆ.

ಸಾರ್ವಜನಿಕರಿಗೆ ಹವಾಮಾನ ಇಲಾಖೆಯ ಸಲಹೆ :

ಭಾರಿ ಮಳೆ ಮತ್ತು ಮಿಂಚಿನ ಸಾಧ್ಯತೆ ಇರುವ ಹಿನ್ನೆಲೆ ಮರಗಳ ಕೆಳಗೆ ನಿಲ್ಲಬಾರದು ಹಾಗೂ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದು ಎಂದು ಎಚ್ಚರಿಸಲಾಗಿದೆ. ರೈತರು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು.

ಗ್ರಾಮೀಣ ಪ್ರದೇಶಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುವ ಸಾಧ್ಯತೆ ಇರುವುದರಿಂದ ಮಕ್ಕಳು ಮತ್ತು ವೃದ್ಧರು ನೀರಿನ ಪ್ರದೇಶಗಳಿಗೆ ಹೋಗದಂತೆ ನೋಡಿಕೊಳ್ಳುವಂತೆ ಸೂಚಿಸಲಾಗಿದೆ.

ಮುಂದಿನ 48 ಗಂಟೆಗಳ ಕಾಲ ರಾಜ್ಯದ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುವ ಸಾಧ್ಯತೆ ಇದ್ದು, ತುರ್ತು ಕೆಲಸಗಳಿದ್ದರೆ ಮಾತ್ರ ಹೊರಗೆ ತೆರಳುವುದು ಒಳಿತು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಸತತ ಮಳೆಯಿಂದಾಗಿ ರಾಜ್ಯದ ಹಲವೆಡೆ ತಾಪಮಾನ ಕುಸಿದಿದ್ದು, ಬಿಸಿಲಿನ ತಾಪದಿಂದ ಜನರಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಂತಾಗಿದೆ.

ಇಂದಿನ ಎಲ್ಲಾ ತಾಜಾ ಸುದ್ದಿಗಳನ್ನು ಇಲ್ಲಿ ಓದಿ

ಎಚ್ಚರಿಕೆ (Alert) ಬಗ್ಗೆ ಮಾಹಿತಿ :

ಹವಾಮಾನ ಇಲಾಖೆಯು ಮಳೆಯ ತೀವ್ರತೆಯನ್ನು ಆಧರಿಸಿ ವಿವಿಧ ಅಲರ್ಟ್‌ಗಳನ್ನು ಘೋಷಿಸುತ್ತದೆ.

  • ‘ಯೆಲ್ಲೋ ಅಲರ್ಟ್’ (Yellow Alert) ಎಂದರೆ ಎಚ್ಚರಿಕೆಯಿಂದಿರಬೇಕು ಎಂಬ ಸೂಚನೆ.
  • ‘ಆರೆಂಜ್ ಅಲರ್ಟ್’ (Orange Alert) ಎಂದರೆ ಭಾರಿ ಮಳೆ ಸಾಧ್ಯತೆ ಇದ್ದು ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯ ಎಂಬ ಅರ್ಥ.
  • ‘ರೆಡ್ ಅಲರ್ಟ್’ (Red Alert) ಘೋಷಿಸಿದರೆ ಅತ್ಯಂತ ಭಾರಿ ಮಳೆ ಹಾಗೂ ಅಪಾಯದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

Disclaimer: ಈ ಸುದ್ದಿ ಭಾರತೀಯ ಹವಾಮಾನ ಇಲಾಖೆ (IMD), ವಿವಿಧ ಹವಾಮಾನ ವರದಿಗಳು ಮತ್ತು ಲಭ್ಯ ಮಾಹಿತಿಯ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ಹವಾಮಾನ ಪರಿಸ್ಥಿತಿ ಸ್ಥಳಾನುಸಾರ ಬದಲಾಗುವ ಸಾಧ್ಯತೆ ಇರುವುದರಿಂದ ಅಧಿಕೃತ ಇಲಾಖೆ ನೀಡುವ ತಾಜಾ ಮಾಹಿತಿಯನ್ನು ಪರಿಶೀಲಿಸುವುದು ಒಳಿತು.

ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್; ಮುಷ್ಕರ ಬೇಡ, ಚರ್ಚೆ ನಡೆಸಿ ಎಂದ ಕೋರ್ಟ್.

ಬೆಂಗಳೂರು : ನಾಳೆಯ (ಮೇ.20) KSRTC ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಮುಷ್ಕರ ಬೇಡ, ಚರ್ಚೆ ನಡೆಸಿ ಎಂದ ಕೋರ್ಟ್ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಆತಂಕದಲ್ಲಿದ್ದ ಲಕ್ಷಾಂತರ ಪ್ರಯಾಣಿಕರು ಹಾಗೂ ದಿನನಿತ್ಯದ ಕೂಲಿ ಕಾರ್ಮಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯಾದ್ಯಂತ ಮೇ 20ರಂದು ನಡೆಯಬೇಕಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ನ್ಯಾಯಾಲಯ ಈ ಮಹತ್ವದ ಆದೇಶ ಹೊರಡಿಸಿದ್ದು, ಸರ್ಕಾರ ಮತ್ತು ಸಾರಿಗೆ ಸಂಘಟನೆಗಳು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸೂಚಿಸಿದೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ PIL :

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿತ್ತು. ಮನೆ ಕೆಲಸ ಮಾಡುವ ಮಹಿಳೆ ವೇದಾವತಿ ಹಾಗೂ ಕಟ್ಟಡ ಕಾರ್ಮಿಕ ಶ್ರೀಧರ್ ಅವರು ಈ ಅರ್ಜಿ ಸಲ್ಲಿಸಿದ್ದು ವಿಶೇಷ ಗಮನ ಸೆಳೆಯಿತು. ಮುಷ್ಕರದಿಂದ ಸಾಮಾನ್ಯ ಜನರು, ವಿದ್ಯಾರ್ಥಿಗಳು ಹಾಗೂ ದಿನಗೂಲಿ ಕಾರ್ಮಿಕರಿಗೆ ಭಾರೀ ಸಮಸ್ಯೆಯಾಗಬಹುದು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಅರ್ಜಿದಾರರ ಬಗ್ಗೆ ಹೈಕೋರ್ಟ್ ಪ್ರಶಂಸೆ  :

ನ್ಯಾಯಮೂರ್ತಿ ಗೋವಿಂದರಾಜ ಅವರ ನೇತೃತ್ವದ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಾರ್ವಜನಿಕ ಹಿತದೃಷ್ಟಿಯಿಂದ ಸಮಾಜದ ಸಾಮಾನ್ಯ ವರ್ಗದವರು ನ್ಯಾಯಾಲಯದ ಮೊರೆ ಹೋಗಿರುವುದನ್ನು ಹೈಕೋರ್ಟ್ ಶ್ಲಾಘಿಸಿದೆ. ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿರುವುದನ್ನು ನ್ಯಾಯಾಲಯ ಗಮನಿಸಿದೆ.

ಮುಷ್ಕರ ನಡೆಸದಂತೆ ಕೋರ್ಟ್ ಸೂಚನೆ :

ಸರ್ಕಾರ ಮತ್ತು ಸಾರಿಗೆ ನೌಕರರ ಸಂಘಟನೆಗಳ ವಾದ ಆಲಿಸಿದ ಬಳಿಕ ನ್ಯಾಯಾಲಯ ಮುಷ್ಕರ ನಡೆಸದಂತೆ ಸೂಚನೆ ನೀಡಿದೆ. ಈ ಮಧ್ಯೆ ಕಾರ್ಮಿಕ ಆಯುಕ್ತರ ಮುಂದೆ ರಾಜಿ ಸಂಧಾನ ಪ್ರಕ್ರಿಯೆ ಮುಂದುವರಿದಿರುವುದರಿಂದ, ಈಗ ಮುಷ್ಕರ ನಡೆಸುವುದು ಕಾನೂನುಬಾಹಿರ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಸರ್ಕಾರಕ್ಕೆ ಮಹತ್ವದ ನಿರ್ದೇಶನ :

ಸಾರಿಗೆ ನೌಕರರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಮಾತುಕತೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಸಾರಿಗೆ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಈ ಕುರಿತು ಸರ್ಕಾರ ಮತ್ತು ಸಂಘಟನೆಗಳಿಗೆ ಅಧಿಕೃತ ನೋಟಿಸ್ ಜಾರಿಯಾಗಿದೆ.

ಇದನ್ನು ಓದಿ : IRIDO ನಲ್ಲಿ 6300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ, 12ನೇ, ಪದವೀಧರರಿಗೆ ಅವಕಾಶ.

ಸಾರ್ವಜನಿಕ ಸೇವೆ ಮೇಲೆ ಪರಿಣಾಮ ತಪ್ಪಿಸಲು ಕ್ರಮ :

ಸದ್ಯ KESMA ನಿಯಮಗಳಡಿ ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಮುಷ್ಕರಗಳ ಮೇಲೆ ನಿರ್ಬಂಧ ಜಾರಿಯಲ್ಲಿದೆ. ಇದೇ ಅವಧಿಯಲ್ಲಿ SSLC ಪೂರಕ ಪರೀಕ್ಷೆಗಳೂ ನಡೆಯುತ್ತಿರುವ ಹಿನ್ನೆಲೆ ಬಸ್ ಸಂಚಾರ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಲಯ ಸಾರ್ವಜನಿಕ ಹಿತದೃಷ್ಟಿಯಿಂದ ಮಧ್ಯಂತರ ಆದೇಶ ನೀಡಿದೆ.

ಪ್ರಯಾಣಿಕರಿಗೆ ತಾತ್ಕಾಲಿಕ ನೆಮ್ಮದಿ :

ಹೈಕೋರ್ಟ್ ಆದೇಶದ ನಂತರ ನಾಳೆ KSRTC, BMTC ಸೇರಿದಂತೆ ವಿವಿಧ ಸಾರಿಗೆ ನಿಗಮಗಳ ಬಸ್ ಸೇವೆಗಳು ಸಾಮಾನ್ಯವಾಗಿ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಸರ್ಕಾರ ಮತ್ತು ನೌಕರರ ನಡುವೆ ನಡೆಯುವ ಮಾತುಕತೆ ಯಾವ ತೀರ್ಮಾನಕ್ಕೆ ಬರುತ್ತದೆ ಎಂಬುದರ ಮೇಲೆ ಮುಂದಿನ ಬೆಳವಣಿಗೆ ಅವಲಂಬಿತವಾಗಿರಲಿದೆ.

KSRTC ನೌಕರರ ಪ್ರಮುಖ ಬೇಡಿಕೆ ಏನಾಗಿತ್ತು?

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ 25% ವೇತನ ಪರಿಷ್ಕರಣೆ. 2024 ಜನವರಿ 1ರಿಂದ ಪರಿಷ್ಕೃತ ವೇತನ ಜಾರಿ ಹಾಗೂ ವಿವಿಧ ಭತ್ಯೆಗಳ ಹೆಚ್ಚಳ ಸೇರಿವೆ. ಆದರೆ ಸರ್ಕಾರ ಈಗಾಗಲೇ ಘೋಷಿಸಿರುವ 12.50% ವೇತನ ಪರಿಷ್ಕರಣೆಯೇ ಅಂತಿಮ ಎಂದು ಹೇಳಿದ್ದು, ಹೆಚ್ಚುವರಿ ಹೆಚ್ಚಳ ಸದ್ಯ ಅಸಾಧ್ಯ ಎಂಬ ನಿಲುವು ವ್ಯಕ್ತಪಡಿಸಿತ್ತು.

ಇಂದಿನ ಎಲ್ಲಾ ತಾಜಾ ಸುದ್ದಿಗಳನ್ನು ಇಲ್ಲಿ ಓದಿ

ಈ ಹಿನ್ನಲೆಯಲ್ಲಿ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಂಡುಬಂದಿದವು. ಮುಷ್ಕರ ನಡೆದರೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ ಸಂಚಾರಕ್ಕೆ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆ ಇದ್ದ ಹಿನ್ನಲೆಯಲ್ಲಿ ಸಾರ್ವಜನಿಕರು ಪರ್ಯಾಯ ಪ್ರಯಾಣ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿತ್ತು.


Disclaimer: ಈ ಲೇಖನವು ಲಭ್ಯ ಮಾಹಿತಿಯ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ನ್ಯಾಯಾಲಯದ ಅಂತಿಮ ಆದೇಶಗಳು ಹಾಗೂ ಸರ್ಕಾರದ ಮುಂದಿನ ನಿರ್ಧಾರಗಳ ಆಧಾರದ ಮೇಲೆ ಪರಿಸ್ಥಿತಿಯಲ್ಲಿ ಬದಲಾವಣೆ ಸಂಭವಿಸಬಹುದು.

ಇಂದಿನ ರಾಶಿ ಭವಿಷ್ಯ: ಮೇ 19, 2026 ಮಂಗಳವಾರದ ದ್ವಾದಶ ರಾಶಿಗಳ ಫಲಗಳು.!

ಇಂದಿನ ರಾಶಿ ಭವಿಷ್ಯ : ಇಂದಿನ ರಾಶಿ ಭವಿಷ್ಯ (ಮೇ 19, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ ಸ್ಥಿತಿಗಳಲ್ಲಿ ಏರುಪೇರುಗಳು ಕಾಣಿಸಬಹುದು.

ಹಾಗಾದರೆ ಯಾವ ರಾಶಿಗೆ ಏನು ಫಲ ಎಂಬುದನ್ನು ಈ ಲೇಖನದಲ್ಲಿ ಮೇಷದಿಂದ ಮೀನವರೆಗೆ ಎಲ್ಲಾ ರಾಶಿಗಳ ದಿನಭವಿಷ್ಯವನ್ನು ತಿಳಿದುಕೊಳ್ಳಬಹುದು. ಬನ್ನಿ ವಿವರವಾಗಿ ಇಂದಿನ ರಾಶಿ ಭವಿಷ್ಯದಲ್ಲಿ ತಿಳಿಯೋಣ.

ಇಂದಿನ ರಾಶಿ ಭವಿಷ್ಯ (May 19, 2026) ಎಲ್ಲಾ 12 ರಾಶಿಗಳ ಫಲ :

ಮೇಷ ರಾಶಿ (Aries) :

ಹೊಸ ವಸ್ತ್ರ ಹಾಗೂ ಆಭರಣ ಖರೀದಿಸುವ ಯೋಗ ಇದೆ. ಗೃಹ ನಿರ್ಮಾಣಕ್ಕೆ ಸಂಬಂಧಿಸಿದ ಆಲೋಚನೆಗಳು ಕಾರ್ಯರೂಪಕ್ಕೆ ಬರುವ ಸಾಧ್ಯತೆ ಇದೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ. ಖರ್ಚುಗಳ ವಿಷಯದಲ್ಲಿ ಸ್ವಲ್ಪ ಜಾಗರೂಕತೆ ಅಗತ್ಯ. ದೇವಾಲಯಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ.

ವೃಷಭ ರಾಶಿ (Taurus) :

ಆತ್ಮೀಯರಿಂದ ಉತ್ತಮ ಬೆಂಬಲ ದೊರೆಯಲಿದೆ. ಕುಟುಂಬ ಸದಸ್ಯರೊಂದಿಗೆ ಅನಗತ್ಯ ವಿವಾದಗಳಿಂದ ದೂರವಿರುವುದು ಒಳಿತು. ಪ್ರಮುಖ ಕೆಲಸಗಳಲ್ಲಿ ವಿಳಂಬ ಉಂಟಾದರೂ ನಿಧಾನವಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮತ್ತಷ್ಟು ಪ್ರಗತಿ ಕಾಣಬಹುದು. ನಿರುದ್ಯೋಗಿಗಳಿಗೆ ಅನುಕೂಲಕರ ಅವಕಾಶಗಳು ಸಿಗುವ ಸಾಧ್ಯತೆ ಇದೆ.

ಮಿಥುನ ರಾಶಿ (Gemini) :

ಪ್ರಮುಖ ವಿಷಯಗಳಲ್ಲಿ ನಿರೀಕ್ಷಿತ ಯಶಸ್ಸು ದೊರೆಯಲಿದೆ. ಸಹೋದರರಿಂದ ಮಹತ್ವದ ಮಾಹಿತಿ ಸಿಗಬಹುದು. ದೀರ್ಘಾವಧಿಯ ಸಾಲಗಳಿಂದ ಸ್ವಲ್ಪ ಮಟ್ಟಿನ ಪರಿಹಾರ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗಲಿದೆ. ಮನೆಯ ಹೊರಗಿನ ವಾತಾವರಣ ಅನುಕೂಲಕರವಾಗಿರುತ್ತದೆ.

ಕಟಕ ರಾಶಿ (Cancer) :

ಕೈಗೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗಬಹುದು. ವೃತ್ತಿಪರ ಕ್ಷೇತ್ರದಲ್ಲಿ ಇತರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆ ಇದೆ. ಸಹೋದರರೊಂದಿಗೆ ಆಸ್ತಿ ಸಂಬಂಧಿತ ವಿವಾದಗಳು ಎದುರಾಗಬಹುದು. ದೂರ ಪ್ರಯಾಣದ ಸೂಚನೆಗಳಿವೆ. ಕುಟುಂಬ ಸದಸ್ಯರ ಮಾತುಗಳು ಮನಸ್ಸಿಗೆ ನೋವುಂಟುಮಾಡಬಹುದು. ವ್ಯಾಪಾರ ನಿಧಾನಗತಿಯಲ್ಲಿ ಸಾಗುತ್ತದೆ. ಆರ್ಥಿಕ ಪರಿಸ್ಥಿತಿ ಸ್ವಲ್ಪ ಕಳಪೆಯಾಗಿರಬಹುದು.

ಸಿಂಹ ರಾಶಿ (Leo) :

ಬಾಲ್ಯದ ಸ್ನೇಹಿತರಿಂದ ಆಹ್ವಾನಗಳು ಬರಬಹುದು. ವ್ಯವಹಾರ ಹೂಡಿಕೆಗಳು ಉತ್ತಮ ಲಾಭ ತರುವ ಸಾಧ್ಯತೆ ಇದೆ. ಭೂ ಖರೀದಿ ಮತ್ತು ಮಾರಾಟ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಬಂಧು-ಮಿತ್ರರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗ ನಿವಾರಣೆಯ ಪ್ರಯತ್ನಗಳು ಸಕಾರಾತ್ಮಕ ಫಲಿತಾಂಶ ನೀಡಬಹುದು.

ಕನ್ಯಾ ರಾಶಿ (Virgo) :

ವೃತ್ತಿ ಮತ್ತು ವ್ಯವಹಾರ ಕ್ಷೇತ್ರದಲ್ಲಿ ಹೊಸ ಪ್ರೋತ್ಸಾಹ ಸಿಗಲಿದೆ. ಸ್ನೇಹಿತರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ವಿವಾದಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಆಪ್ತರಿಂದ ಪಡೆಯಬಹುದು. ಮನೆಯ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳ ಅವಕಾಶ ಸಿಗಬಹುದು.

ಇದನ್ನು ಓದಿ : ಇಂದಿನ ರಾಶಿ ಭವಿಷ್ಯ: ಮೇ 18, 2026 ಸೋಮವಾರದ ದ್ವಾದಶ ರಾಶಿಗಳ ಫಲಗಳು.!

ತುಲಾ ರಾಶಿ (Libra) :

ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಸ್ವಲ್ಪ ಮಟ್ಟಿನ ಪರಿಹಾರ ದೊರೆಯಲಿದೆ. ಮನೆಯಲ್ಲಿ ಶುಭ ಕಾರ್ಯಗಳ ಚರ್ಚೆ ನಡೆಯಬಹುದು. ಆಧ್ಯಾತ್ಮಿಕ ಚಿಂತನೆಯಿಂದ ಮಾನಸಿಕ ಶಾಂತಿ ಸಿಗುತ್ತದೆ. ಪ್ರಮುಖ ವಿಷಯಗಳಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ನೀಡಲಾದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತೀರಿ.

ವೃಶ್ಚಿಕ ರಾಶಿ (Scorpio) :

ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ವೃತ್ತಿಪರ ವ್ಯವಹಾರಗಳಲ್ಲಿ ದೈಹಿಕ ಶ್ರಮ ಹೆಚ್ಚಾಗಬಹುದು. ಪ್ರಮುಖ ವಿಚಾರಗಳಲ್ಲಿ ಸ್ನೇಹಿತರ ಸಲಹೆ ಪಡೆಯುವುದು ಒಳಿತು. ಉದ್ಯೋಗ ಸಂಬಂಧಿತ ಆತುರದ ನಿರ್ಧಾರಗಳು ತೊಂದರೆ ತರಬಹುದು. ಆರ್ಥಿಕವಾಗಿ ಸ್ವಲ್ಪ ಮಟ್ಟಿನ ಅನುಕೂಲಕರ ಪರಿಸ್ಥಿತಿ ಕಂಡುಬರುತ್ತದೆ.

ಧನುಸ್ಸು ರಾಶಿ (Sagittarius) :

ಪ್ರಾರಂಭಿಸಿದ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಶಂಸೆ ಪಡೆಯುತ್ತೀರಿ. ಸಹೋದರರಿಂದ ಸ್ಥಿರಾಸ್ತಿ ಲಾಭ ಸಿಗುವ ಸಾಧ್ಯತೆ ಇದೆ. ದೂರ ಪ್ರಯಾಣಗಳಲ್ಲಿ ಹೊಸ ಪರಿಚಯಗಳು ಆಗಬಹುದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಸಿಗಬಹುದು. ಉದ್ಯೋಗ ಕ್ಷೇತ್ರದಲ್ಲಿ ಕಠಿಣ ಪರಿಶ್ರಮಕ್ಕೆ ವಿಶೇಷ ಮನ್ನಣೆ ದೊರೆಯಲಿದೆ.

ಈ ಸುದ್ದಿಯನ್ನು ಓದಿ : ಮೇ 20 ಸಾರಿಗೆ ಮುಷ್ಕರ ಹಿನ್ನೆಲೆ KSRTC ಖಡಕ್ ಎಚ್ಚರಿಕೆ; ‘ನೋ ವರ್ಕ್‌, ನೋ ಪೇ’ ಆದೇಶ.

ಮಕರ ರಾಶಿ (Capricorn) :

ವ್ಯವಹಾರದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಲಾಭ ದೊರೆಯುತ್ತದೆ. ಮನೆ ನಿರ್ಮಾಣ ಕಾರ್ಯಗಳು ನಿಧಾನಗತಿಯಲ್ಲಿ ಸಾಗಬಹುದು. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಆರ್ಥಿಕ ಪರಿಸ್ಥಿತಿ ಸಾಮಾನ್ಯವಾಗಿ ಉತ್ತಮವಾಗಿರುತ್ತದೆ.

ಕುಂಭ ರಾಶಿ (Aquarius) :

ಆರೋಗ್ಯ ಸಮಸ್ಯೆಗಳಿಂದ ಸ್ವಲ್ಪ ಮಟ್ಟಿನ ಪರಿಹಾರ ಸಿಗುತ್ತದೆ. ಕೈಗೊಂಡ ಕೆಲಸಗಳಿಗೆ ತಕ್ಕ ಮನ್ನಣೆ ದೊರೆಯುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆಯಾಗುತ್ತದೆ. ವ್ಯವಹಾರದಲ್ಲಿ ಹೊಸ ನಿರ್ಧಾರಗಳನ್ನು ತೆಗೆದುಕೊಂಡು ಲಾಭ ಗಳಿಸುವ ಸಾಧ್ಯತೆ ಇದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೀನ ರಾಶಿ (Pisces) :

ಇತರರ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಬದಲಾಯಿಸುವುದು ಉತ್ತಮ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸಗಳು ವೇಗವಾಗಿ ಪೂರ್ಣಗೊಳ್ಳುತ್ತವೆ. ಕುಟುಂಬ ಸದಸ್ಯರಿಂದ ಉತ್ತಮ ಬೆಂಬಲ ಸಿಗಲಿದೆ. ಹಳೆಯ ಸ್ನೇಹಿತರೊಂದಿಗೆ ಅಮೂಲ್ಯ ಸಮಯ ಕಳೆಯುವ ಅವಕಾಶ ಸಿಗುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ.


Disclaimer:  ಇಂದಿನ ರಾಶಿ ಭವಿಷ್ಯ (Horoscope) ಸಾಮಾನ್ಯ ಜ್ಯೋತಿಷ್ಯ ಲೆಕ್ಕಾಚಾರಗಳ ಆಧಾರದ ಮೇಲೆ ನೀಡಲಾಗಿದೆ. ವೈಯಕ್ತಿಕ ಫಲಿತಾಂಶಗಳು ಬದಲಾಗುವ ಸಾಧ್ಯತೆ ಇದೆ. ಇಲ್ಲಿರುವ ಇಂದಿನ ರಾಶಿ ಭವಿಷ್ಯ ಅಂತಿಮ ನಿರ್ಧಾರಕ್ಕೆ ಆಧಾರವಾಗಿ ಪರಿಗಣಿಸಬಾರದು.

IRIDO ನಲ್ಲಿ 6300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ, 12ನೇ, ಪದವೀಧರರಿಗೆ ಅವಕಾಶ.

0

ಜನಸ್ಪಂದನ ನ್ಯೂಸ್‌, ನೌಕರಿ : 10ನೇ, 12ನೇ ಮತ್ತು ಪದವೀಧರರಿಗೆ ಒಂದು ಒಳ್ಳೆಯ ಸುವರ್ಣಾವಕಾಶ. ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ (IRIDO) ಯಲ್ಲಿ ದೇಶಾಧ್ಯಂತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ.

ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ (Indian Rural Industrial Development Organization – IRIDO) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ದೇಶಾದ್ಯಂತ ಒಟ್ಟು 6300 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ (Online) ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆಯಡಿ ಚಾಲಕ (Driver), ಎಂಟಿಎಸ್‌ (MTS) ಸೇರಿದಂತೆ ಹಲವು ಹುದ್ದೆಗಳು ಖಾಲಿ ಇದ್ದು, ಭಾರತದೆಲ್ಲೆಡೆ ಉದ್ಯೋಗ ಅವಕಾಶ ದೊರೆಯಲಿದೆ.

ಹುದ್ದೆಗಳ ವಿವರ :

  • ಇಲಾಖೆ ಹೆಸರು: ಭಾರತೀಯ ಗ್ರಾಮೀಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ (IRIDO).
  • ಒಟ್ಟು ಹುದ್ದೆಗಳು: 6300.
  • ಹುದ್ದೆಗಳ ಹೆಸರು: ಚಾಲಕ, MTS ಹಾಗೂ ಇತರೆ ಹುದ್ದೆಗಳು.
  • ಉದ್ಯೋಗ ಸ್ಥಳ: ಅಖಿಲ ಭಾರತ.
  • ಅರ್ಜಿ ವಿಧಾನ: ಆನ್‌ಲೈನ್ (Online Mode).

ವೇತನ ಶ್ರೇಣಿ :

ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.18,000 ರಿಂದ ರೂ.2,15,900 ವರೆಗೆ ವೇತನ (Salary) ನೀಡಲಾಗುತ್ತದೆ. ಹುದ್ದೆಯ ಪ್ರಕಾರ ವೇತನದಲ್ಲಿ ವ್ಯತ್ಯಾಸ ಇರಲಿದೆ.

ವಯೋಮಿತಿ :

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷವಾಗಿರಬೇಕು, ಮತ್ತು
  • ಗರಿಷ್ಠ 45 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :

  • ಒಬಿಸಿ (OBC) ಅಭ್ಯರ್ಥಿಗಳಿಗೆ: 3 ವರ್ಷ
  • ಎಸ್‌ಸಿ/ಎಸ್‌ಟಿ (SC/ST) ಅಭ್ಯರ್ಥಿಗಳಿಗೆ: 5 ವರ್ಷ
  • ಪಿಡಬ್ಲ್ಯೂಬಿಡಿ (PwBD) ಅಭ್ಯರ್ಥಿಗಳಿಗೆ: 10 ವರ್ಷ

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, 12ನೇ ತರಗತಿ, ಪದವಿ (Degree) ಅಥವಾ ಸ್ನಾತಕೋತ್ತರ ಪದವಿ (Post Graduation) ಪೂರ್ಣಗೊಳಿಸಿರಬೇಕು.

ಇದನ್ನು ಓದಿ : SSLC ಪಾಸಾಗಿದ್ದೀರಾ? ಕರ್ನಾಟಕ ಹೈಕೋರ್ಟ್‌ನಲ್ಲಿ ಗ್ರೂಪ್-ಡಿ ಹುದ್ದೆಗಳ ನೇಮಕಾತಿ.

ಅರ್ಜಿ ಶುಲ್ಕ :

  • SC/ST/OBC/EWS ಅಭ್ಯರ್ಥಿಗಳು: ₹350/-
  • ಇತರ ಅಭ್ಯರ್ಥಿಗಳು: ₹690/-

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳ ಆಯ್ಕೆ ಪರೀಕ್ಷೆ, ದಾಖಲೆ ಪರಿಶೀಲನೆ (Document Verification) ಮತ್ತು ಇತರೆ ಮಾನದಂಡಗಳ ಆಧಾರದ ಮೇಲೆ ನಡೆಯುವ ಸಾಧ್ಯತೆ ಇದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವುದು ಉತ್ತಮ.

ಅರ್ಜಿ ಸಲ್ಲಿಸುವ ವಿಧಾನ :

1. ಅಧಿಕೃತ ವೆಬ್‌ಸೈಟ್‌ (Website) ಗೆ ಭೇಟಿ ನೀಡಿ.
2. ನೇಮಕಾತಿ ಅಧಿಸೂಚನೆ (Notification) ಯನ್ನು ಸಂಪೂರ್ಣವಾಗಿ ಓದಿ.
3. ಆನ್‌ಲೈನ್ ಅರ್ಜಿ ಲಿಂಕ್ ತೆರೆಯಿರಿ.
4. ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ.
5. ಅಗತ್ಯ ದಾಖಲೆಗಳು, ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ (Upload) ಮಾಡಿ.
6. ಅರ್ಜಿ ಶುಲ್ಕ ಪಾವತಿಸಿ.
7. ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ (Printout) ತೆಗೆದುಕೊಂಡು ಭದ್ರವಾಗಿ ಇಟ್ಟುಕೊಳ್ಳಿ.

ಇಂದಿನ ಎಲ್ಲಾ ತಾಜಾ ಸುದ್ದಿಗಳನ್ನು ಇಲ್ಲಿ ಓದಿ

ಪ್ರಮುಖ ದಿನಾಂಕಗಳು :

  • ಅರ್ಜಿ ಪ್ರಾರಂಭ ದಿನಾಂಕ: 01 ಮೇ 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಮೇ 2026

ಪ್ರಮುಖ ಮಾಹಿತಿ :

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಕಡ್ಡಾಯವಾಗಿ ಓದಬೇಕು. ತಪ್ಪು ಮಾಹಿತಿ ನೀಡಿದರೆ ಅರ್ಜಿ ತಿರಸ್ಕೃತವಾಗುವ ಸಾಧ್ಯತೆ ಇದೆ.

• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ


Disclaimer: ಈ ಲೇಖನದಲ್ಲಿರುವ (IRIDO) ಮಾಹಿತಿ ವಿವಿಧ ಸಾರ್ವಜನಿಕ ಮೂಲಗಳು ಹಾಗೂ ಪ್ರಕಟಿತ ಅಧಿಸೂಚನೆ ಆಧಾರಿತವಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮತ್ತು ಅಧಿಸೂಚನೆಯನ್ನು ಪರಿಶೀಲಿಸಿ ದೃಢಪಡಿಸಿಕೊಳ್ಳುವುದು ಸೂಕ್ತ.

ಮೇ 20 ಸಾರಿಗೆ ಮುಷ್ಕರ ಹಿನ್ನೆಲೆ KSRTC ಖಡಕ್ ಎಚ್ಚರಿಕೆ; ‘ನೋ ವರ್ಕ್‌, ನೋ ಪೇ’ ಆದೇಶ.

ಜನಸ್ಪಂದನ ನ್ಯೂಸ್, ಬೆಂಗಳೂರು :‌ ಮೇ 20 ರಂದು KSRTC ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಸರ್ಕಾರ ಖಡಕ್ ಎಚ್ಚರಿಕೆ ನೀಡಿ ‘ನೋ ವರ್ಕ್‌, ನೋ ಪೇ’ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಮೇ 20ರಿಂದ ಸಾರಿಗೆ ನೌಕರರು (Transport Employees Strike) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಲ್ಲಿ ಆತಂಕ ಹೆಚ್ಚಾಗಿದೆ.

ಮುಷ್ಕರದ ಹಿನ್ನೆಲೆ ಕೆಎಸ್‌ಆರ್‌ಟಿಸಿ (KSRTC) ಆಡಳಿತ ಮಂಡಳಿ ನೌಕರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಮುಷ್ಕರದಲ್ಲಿ ಭಾಗಿಯಾಗದಂತೆ ಹಾಗೂ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಎಚ್ಚರಿಕೆ ನೀಡಿದೆ.

ಅನಿರ್ದಿಷ್ಟಾವಧಿ ಮುಷ್ಕರ :

ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ’ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಓದಿ : ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗೆ ಬೆಂಕಿ; 68 ಪ್ರಯಾಣಿಕರ ಸುರಕ್ಷಿತ ರಕ್ಷಣೆ.

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ (MD) ಅಕ್ರಂಪಾಷಾ ಅವರು ಎಲ್ಲಾ ವಿಭಾಗಾಧಿಕಾರಿಗಳಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಬುಧವಾರ ಯಾವುದೇ ನೌಕರರು ಮುಷ್ಕರದಲ್ಲಿ ಭಾಗಿಯಾಗಬಾರದು ಹಾಗೂ ಮುಷ್ಕರಕ್ಕೆ ಬೆಂಬಲ ಸೂಚಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಲಾಗಿದೆ.

ನೋ ವರ್ಕ್‌, ನೋ ಪೇ :

ಕೆಲಸಕ್ಕೆ ಗೈರಾಗುವ ಸಿಬ್ಬಂದಿಗೆ ‘ನೋ ವರ್ಕ್‌, ನೋ ಪೇ’ (No Work No Pay) ನಿಯಮ ಅನ್ವಯವಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದೇ ವೇಳೆ, ಅನಿವಾರ್ಯ ಪರಿಸ್ಥಿತಿ ಹೊರತುಪಡಿಸಿ ಯಾವುದೇ ಸಿಬ್ಬಂದಿಗೆ ರಜೆ ಮಂಜೂರು ಮಾಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಅಗತ್ಯವಿದ್ದರೆ ವಾರದ ರಜೆ ರದ್ದುಪಡಿಸಿ ಕರ್ತವ್ಯಕ್ಕೆ ನಿಯೋಜಿಸುವಂತೆ ಕೂಡ ಆದೇಶಿಸಲಾಗಿದೆ. ಮುಷ್ಕರದ ದಿನ ಗೈರುಹಾಜರಾಗುವ ನೌಕರರ ವಿರುದ್ಧ ಶಿಸ್ತು ಕ್ರಮ (Disciplinary Action) ಕೈಗೊಳ್ಳುವುದಾಗಿ ನಿಗಮ ತಿಳಿಸಿದೆ.

ಸಾರಿಗೆ ಇಲಾಖೆಯ ಪ್ರಕಾರ, ಕಾರ್ಮಿಕ ಸಂಘಟನೆಗಳು ನೀಡಿರುವ ಮುಷ್ಕರ ನೋಟಿಸ್ ವಿಚಾರವು ಈಗಾಗಲೇ ರಾಜ್ಯ ಕಾರ್ಮಿಕ ಆಯುಕ್ತರ ಮುಂದೆ ರಾಜಿ ಸಂಧಾನ ಹಂತದಲ್ಲಿದೆ.

ಇದನ್ನು ಓದಿ : ಇಂದಿನ ರಾಶಿ ಭವಿಷ್ಯ: ಮೇ 18, 2026 ಸೋಮವಾರದ ದ್ವಾದಶ ರಾಶಿಗಳ ಫಲಗಳು.!

ಕೈಗಾರಿಕಾ ವಿವಾದಗಳ ಕಾಯಿದೆ-1947 (Industrial Disputes Act) ಅನ್ವಯ ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆಗಳ ನೌಕರರು ಸಂಧಾನ ಪ್ರಕ್ರಿಯೆ ನಡೆಯುತ್ತಿರುವ ವೇಳೆ ಮುಷ್ಕರ ನಡೆಸುವಂತಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಇನ್ನೊಂದೆಡೆ, ಸಾರಿಗೆ ನೌಕರರ ಸಂಘಟನೆಗಳು ಸರ್ಕಾರಕ್ಕೆ ಮೇ 19ರವರೆಗೆ ಗಡುವು ನೀಡಿವೆ. ಆ ಬಳಿಕ ನಡೆಯುವ ಯಾವುದೇ ಮಾತುಕತೆಗೆ ಬರುವುದಿಲ್ಲ ಎಂದು ಜಂಟಿ ಕ್ರಿಯಾ ಸಮಿತಿ ಹೇಳಿದೆ. ಪ್ರತಿ ಬಾರಿ ಕೊನೆಯ ಕ್ಷಣದಲ್ಲಿ ಮಾತುಕತೆ ನಡೆಸುವ ಸರ್ಕಾರದ ಕ್ರಮಕ್ಕೆ ಈ ಬಾರಿ ಅವಕಾಶ ನೀಡುವುದಿಲ್ಲ ಎಂದು ಸಂಘಟನೆಗಳು ಖಡಕ್ ಸಂದೇಶ ರವಾನಿಸಿವೆ.

KSRTC ನೌಕರರ ಪ್ರಮುಖ ಬೇಡಿಕೆ :

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ 25% ವೇತನ ಪರಿಷ್ಕರಣೆ, 2024 ಜನವರಿ 1ರಿಂದ ಪರಿಷ್ಕೃತ ವೇತನ ಜಾರಿ ಹಾಗೂ ವಿವಿಧ ಭತ್ಯೆಗಳ ಹೆಚ್ಚಳ ಸೇರಿವೆ. ಆದರೆ ಸರ್ಕಾರ ಈಗಾಗಲೇ ಘೋಷಿಸಿರುವ 12.50% ವೇತನ ಪರಿಷ್ಕರಣೆಯೇ ಅಂತಿಮ ಎಂದು ಹೇಳಿದ್ದು, ಹೆಚ್ಚುವರಿ ಹೆಚ್ಚಳ ಸದ್ಯ ಅಸಾಧ್ಯ ಎಂಬ ನಿಲುವು ವ್ಯಕ್ತಪಡಿಸಿದೆ.

ಇಂದಿನ ಎಲ್ಲಾ ತಾಜಾ ಸುದ್ದಿಗಳನ್ನು ಇಲ್ಲಿ ಓದಿ

ಈ ಹಿನ್ನಲೆಯಲ್ಲಿ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ. ಮುಷ್ಕರ ನಡೆದರೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ ಸಂಚಾರಕ್ಕೆ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ಸಾರ್ವಜನಿಕರು ಪರ್ಯಾಯ ಪ್ರಯಾಣ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.


Disclaimer: ಮೇಲಿನ ಮಾಹಿತಿ (KSRTC) ವಿವಿಧ ಮಾಧ್ಯಮ ವರದಿಗಳು ಹಾಗೂ ಲಭ್ಯ ಮಾಹಿತಿಗಳ ಆಧಾರದಲ್ಲಿ ಸಿದ್ಧಪಡಿಸಲಾಗಿದೆ. ಮುಷ್ಕರ, ಬಸ್ ಸಂಚಾರ ಹಾಗೂ ಸರ್ಕಾರಿ ಆದೇಶಗಳಿಗೆ ಸಂಬಂಧಿಸಿದ ಅಂತಿಮ ಮಾಹಿತಿಗಾಗಿ ಅಧಿಕೃತ ಪ್ರಕಟಣೆಗಳನ್ನು ಪರಿಶೀಲಿಸುವುದು ಸೂಕ್ತ.

ಇಂದಿನ ರಾಶಿ ಭವಿಷ್ಯ: ಮೇ 18, 2026 ಸೋಮವಾರದ ದ್ವಾದಶ ರಾಶಿಗಳ ಫಲಗಳು.!

ಜನಸ್ಪಂದನ ನ್ಯೂಸ್‌, ಭವಿಷ್ಯ : ಇಂದಿನ ರಾಶಿ ಭವಿಷ್ಯ (ಮೇ 18, 2026) ವು ದ್ವಾದಶ ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ನೀಡುವ ಸಾಧ್ಯತೆ ಇದೆ. ಕುಟುಂಬ, ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ ಸ್ಥಿತಿಗಳಲ್ಲಿ ಏರುಪೇರುಗಳು ಕಾಣಿಸಬಹುದು.

ಹಾಗಾದರೆ ಯಾವ ರಾಶಿಗೆ ಏನು ಫಲ ಎಂಬುದನ್ನು ಈ ಲೇಖನದಲ್ಲಿ ಮೇಷದಿಂದ ಮೀನವರೆಗೆ ಎಲ್ಲಾ ರಾಶಿಗಳ ದಿನಭವಿಷ್ಯವನ್ನು ತಿಳಿದುಕೊಳ್ಳಬಹುದು. ಬನ್ನಿ ವಿವರವಾಗಿ ಇಂದಿನ ರಾಶಿ ಭವಿಷ್ಯದಲ್ಲಿ ತಿಳಿಯೋಣ.

ಇಂದಿನ ರಾಶಿ ಭವಿಷ್ಯ (May 18, 2026) ಎಲ್ಲಾ 12 ರಾಶಿಗಳ ಫಲ :

ಮೇಷ ರಾಶಿ (Aries) :

ಕೈಗೊಂಡ ಕೆಲಸಗಳಲ್ಲಿ ಉತ್ತಮ ಬೆಂಬಲ ದೊರೆಯಲಿದೆ. ಆರೋಗ್ಯದ ಬಗ್ಗೆ ಸ್ವಲ್ಪ ಹೆಚ್ಚು ಕಾಳಜಿ ವಹಿಸುವುದು ಉತ್ತಮ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿದ್ದು, ದೂರ ಪ್ರಯಾಣದ ಸೂಚನೆಗಳಿವೆ. ಸಹೋದರರಿಂದ ಆರ್ಥಿಕ ಸಹಾಯ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಕ್ಷೇತ್ರದಲ್ಲಿ ತೃಪ್ತಿಕರ ವಾತಾವರಣ ಕಂಡುಬರುತ್ತದೆ. ವ್ಯವಹಾರಗಳಲ್ಲಿ ಆತುರದ ನಿರ್ಧಾರಗಳನ್ನು ತಪ್ಪಿಸುವುದು ಒಳಿತು.

ವೃಷಭ ರಾಶಿ (Taurus) :

ದೀರ್ಘಕಾಲದ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗಬಹುದು. ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ. ಕುಟುಂಬ ಸದಸ್ಯರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗಬಹುದು. ಹೂಡಿಕೆ ಸಂಬಂಧಿತ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಕುಟುಂಬದವರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅಗತ್ಯ.

ಮಿಥುನ ರಾಶಿ (Gemini) :

ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ವ್ಯರ್ಥ ಖರ್ಚುಗಳಿಂದ ಹಣಕಾಸಿನ ಒತ್ತಡ ಎದುರಾಗಬಹುದು. ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳು ಕಾಣಿಸಬಹುದು. ವ್ಯವಹಾರ ಮತ್ತು ಹೂಡಿಕೆ ವಿಚಾರಗಳಲ್ಲಿ ಎಚ್ಚರಿಕೆಯಿಂದ ಮುಂದುವರಿಯಿರಿ. ಕುಟುಂಬದ ಆರೋಗ್ಯದ ಕಡೆ ಗಮನ ಹರಿಸಿ.

ಕಟಕ ರಾಶಿ (Cancer) :

ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಪಾಲುದಾರಿಕೆ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯಬಹುದು. ಕುಟುಂಬ ಸದಸ್ಯರಿಂದ ಸಹಾಯ ಮತ್ತು ಬೆಂಬಲ ಸಿಗಲಿದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಕ್ಷೇತ್ರದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ.

ಸಿಂಹ ರಾಶಿ (Leo) :

ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ದೂರದ ಸ್ಥಳಗಳಿಂದ ಬರುವ ಮಾಹಿತಿಗಳು ನಿಮಗೆ ಉಪಯುಕ್ತವಾಗುತ್ತವೆ. ಸಂಬಂಧಿಕರೊಂದಿಗಿನ ವಿವಾದಗಳು ಬಗೆಹರಿಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳು ವೇಗವಾಗಿ ಪೂರ್ಣಗೊಳ್ಳುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ.

ಕನ್ಯಾ ರಾಶಿ (Virgo) :

ಕೆಲಸಗಳಲ್ಲಿ ಅಡೆತಡೆಗಳು ಎದುರಾದರೂ ಧೈರ್ಯದಿಂದ ಮುನ್ನಡೆಯುತ್ತೀರಿ. ಅನಿರೀಕ್ಷಿತ ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ಮಾರಾಟ ವ್ಯವಹಾರಗಳಲ್ಲಿ ಹೊಸ ಲಾಭ ಸಿಗಲಿದೆ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶ ಸಿಗುತ್ತದೆ. ಉದ್ಯೋಗದಲ್ಲಿ ಬಡ್ತಿ ಅಥವಾ ಗೌರವ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನು ಓದಿ : ತುಮಕೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ; 17 ವರ್ಷದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ತುಲಾ ರಾಶಿ (Libra) :

ವೃತ್ತಿಪರ ಕ್ಷೇತ್ರದಲ್ಲಿ ಅಪೇಕ್ಷಿತ ಹುದ್ದೆಗಳು ದೊರೆಯುವ ಸಾಧ್ಯತೆ ಇದೆ. ವ್ಯವಹಾರದಲ್ಲಿನ ಅಡೆತಡೆಗಳನ್ನು ಯಶಸ್ವಿಯಾಗಿ ನಿವಾರಿಸುತ್ತೀರಿ. ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಸಿಗಬಹುದು. ಹಣಕಾಸಿನ ವಿಷಯಗಳು ಆಶಾದಾಯಕವಾಗಿರುತ್ತವೆ. ದೂರದ ಸ್ಥಳಗಳ ಸ್ನೇಹಿತರಿಂದ ಮಹತ್ವದ ಮಾಹಿತಿ ದೊರೆಯಲಿದೆ.

ವೃಶ್ಚಿಕ ರಾಶಿ (Scorpio) :

ಭೂ ಸಂಬಂಧಿತ ವ್ಯವಹಾರಗಳಲ್ಲಿ ಹೊಸ ಒಪ್ಪಂದಗಳು ನಡೆಯಬಹುದು. ದೀರ್ಘಕಾಲದ ವಿವಾದಗಳು ಬಗೆಹರಿದು ಮಾನಸಿಕ ಶಾಂತಿ ದೊರೆಯಲಿದೆ. ವ್ಯವಹಾರ ಕ್ಷೇತ್ರದಲ್ಲಿ ಸಣ್ಣ ಮಟ್ಟಿನ ಲಾಭಗಳು ಕಂಡುಬರುತ್ತವೆ. ಸಂಬಂಧಿಕರಿಂದ ಅನಿರೀಕ್ಷಿತ ಆರ್ಥಿಕ ಸಹಾಯ ದೊರೆಯುವ ಸಾಧ್ಯತೆ ಇದೆ.

ಧನುಸ್ಸು ರಾಶಿ (Sagittarius) :

ಬೆಲೆಬಾಳುವ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಇದೆ. ದೀರ್ಘಕಾಲದ ಸಾಲಗಳಿಂದ ಸ್ವಲ್ಪ ಮಟ್ಟಿಗೆ ಮುಕ್ತಿ ದೊರೆಯಬಹುದು. ಭೋಜನ ಮತ್ತು ಮನರಂಜನಾ ಕಾರ್ಯಕ್ರಮಗಳಿಗೆ ಆಹ್ವಾನಗಳು ಬರುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಪ್ರೋತ್ಸಾಹ ಮತ್ತು ಅವಕಾಶಗಳು ದೊರೆಯುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಓದಿ : ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗೆ ಬೆಂಕಿ; 68 ಪ್ರಯಾಣಿಕರ ಸುರಕ್ಷಿತ ರಕ್ಷಣೆ.

ಮಕರ ರಾಶಿ (Capricorn) :

ಮೇಲಧಿಕಾರಿಗಳ ಬೆಂಬಲದಿಂದ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನಮಾನ ಹೆಚ್ಚಾಗುತ್ತದೆ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ನಿವಾರಣೆ ಸಿಗಲಿದೆ. ಸಮಾಜದಲ್ಲಿ ಗೌರವ ಮತ್ತು ಮನ್ನಣೆ ಹೆಚ್ಚಾಗುತ್ತದೆ. ಶತ್ರುಗಳಿಂದಲೂ ಅನಿರೀಕ್ಷಿತ ಆಹ್ವಾನಗಳು ಬರಬಹುದು. ಸಂಗಾತಿಯ ಸಲಹೆಯೊಂದಿಗೆ ಹೊಸ ಯೋಜನೆಗಳನ್ನು ಪ್ರಾರಂಭಿಸುವ ಸಾಧ್ಯತೆ ಇದೆ.

ಕುಂಭ ರಾಶಿ (Aquarius) :

ಆರ್ಥಿಕ ಪರಿಸ್ಥಿತಿ ಸ್ಥಿರವಾಗಿರದಿದ್ದರೂ ಅಗತ್ಯಕ್ಕೆ ಹಣ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗಲಿವೆ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯಗಳು ಹೆಚ್ಚಾಗುತ್ತವೆ. ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಜಾರಿಗೆ ತರುತ್ತೀರಿ. ಮಕ್ಕಳ ಉದ್ಯೋಗ ಮತ್ತು ವಿವಾಹ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೀನ ರಾಶಿ (Pisces) :

ವಾಹನ ಖರೀದಿ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ತಮ್ಮದೇ ಆದ ಆಲೋಚನೆಗಳನ್ನು ಜಾರಿಗೆ ತರುತ್ತೀರಿ. ಕೈಗೊಂಡ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಪ್ರಮುಖ ವ್ಯಕ್ತಿಗಳಿಂದ ಪ್ರಶಂಸೆ ಮತ್ತು ಗೌರವ ಸಿಗುತ್ತದೆ. ಕುಟುಂಬ ಸದಸ್ಯರಿಂದ ಶುಭ ಸುದ್ದಿ ಕೇಳಿಬರಲಿದೆ. ಹೊಸ ವ್ಯವಹಾರ ಆರಂಭಿಸುವ ಅಡೆತಡೆಗಳು ನಿವಾರಣೆಯಾಗುತ್ತವೆ.


Disclaimer:  ಇಂದಿನ ರಾಶಿ ಭವಿಷ್ಯ (Horoscope) ಸಾಮಾನ್ಯ ಜ್ಯೋತಿಷ್ಯ ಲೆಕ್ಕಾಚಾರಗಳ ಆಧಾರದ ಮೇಲೆ ನೀಡಲಾಗಿದೆ. ವೈಯಕ್ತಿಕ ಫಲಿತಾಂಶಗಳು ಬದಲಾಗುವ ಸಾಧ್ಯತೆ ಇದೆ. ಇಲ್ಲಿರುವ ಇಂದಿನ ರಾಶಿ ಭವಿಷ್ಯ ಅಂತಿಮ ನಿರ್ಧಾರಕ್ಕೆ ಆಧಾರವಾಗಿ ಪರಿಗಣಿಸಬಾರದು.

ತುಮಕೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ; 17 ವರ್ಷದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಜನಸ್ಪಂದನ ನ್ಯೂಸ್‌, ತುಮಕೂರು : ತುಮಕೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆಯೊಂದು ನಡೆದಿದ್ದು, 17 ವರ್ಷದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಹಿನ್ನಲೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗ್ರಾಮದಲ್ಲಿ ನಡೆದ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ (Missing Case) 17 ವರ್ಷದ ಬಾಲಕಿ ಮೇಘನಾ ಪ್ರಕರಣದಲ್ಲಿ ಇದೀಗ ಆಕೆಯ ತಂದೆಯ ಮೇಲೆಯೇ ಕೊಲೆ (Murder) ಆರೋಪ ಕೇಳಿಬಂದಿದ್ದು, ಈ ಘಟನೆ ಗ್ರಾಮಸ್ಥರಲ್ಲೂ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಏಕಾಏಕಿ ಬಾಲಕಿ ನಾಪತ್ತೆ :

ಪೊಲೀಸ್ ಮೂಲಗಳ ಪ್ರಕಾರ, ಮೇಘನಾ ಏಪ್ರಿಲ್ 16ರಂದು ಏಕಾಏಕಿ ನಾಪತ್ತೆಯಾಗಿದ್ದಳು. ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳಿದ ತಾಯಿ ನಿರ್ಮಲಾ, ಮಗಳು ಮನೆಯಲ್ಲಿ ಕಾಣಿಸದಿದ್ದರಿಂದ ಆತಂಕಗೊಂಡಿದ್ದರು.

ಮಗಳ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದ್ದು, ಅದೇ ವೇಳೆ ಗಂಡ ತಿಮ್ಮರಾಯಪ್ಪ ಕೂಡ ಮನೆದಲ್ಲಿ ಇರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತಾಯಿ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಬಾಲಕಿ ನಾಪತ್ತೆ ದೂರು ದಾಖಲಿಸಿದ್ದರು.

ತನಿಖೆ ಆರಂಭಿಸಿದ ಪೊಲೀಸರು ಕುಟುಂಬದ ಹಿನ್ನೆಲೆ ಹಾಗೂ ಮನೆಯೊಳಗಿನ ಕಲಹಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಮೇಘನಾಳ ಮದುವೆ ವಿಚಾರವಾಗಿ ಕಳೆದ ಕೆಲವು ತಿಂಗಳುಗಳಿಂದ ಮನೆಯೊಳಗೆ ಗಲಾಟೆಗಳು ನಡೆಯುತ್ತಿದ್ದವು ಎಂದು ತಿಳಿದುಬಂದಿದೆ.

ಮದುವೆಗೆ ತಂದೆಯ ವಿರೋಧ?

ಕುಟುಂಬದವರು ಸಂಬಂಧಿಕರ ಮನೆಯ ಹುಡುಗನೊಂದಿಗೆ ಮದುವೆ ಮಾಡುವ ಯೋಜನೆ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಇದಕ್ಕೆ ತಂದೆ ತಿಮ್ಮರಾಯಪ್ಪ ವಿರೋಧ ವ್ಯಕ್ತಪಡಿಸುತ್ತಿದ್ದ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಪ್ರಕರಣದ ಕುರಿತು ಪೊಲೀಸರು ಅನುಮಾನಾಸ್ಪದ ಅಂಶಗಳನ್ನು ಗಮನಿಸಿ ತಿಮ್ಮರಾಯಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಹಲವು ಮಹತ್ವದ ಮಾಹಿತಿಗಳು ಹೊರಬಂದಿವೆ ಎಂದು ತಿಳಿದು ಬಂದಿದೆ. ವಿಚಾರಣೆ ವೇಳೆ ಆತ ಮಗಳನ್ನು ಕೊಲೆ ಮಾಡಿರುವ ಬಗ್ಗೆ ಸುಳಿವು ನೀಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇಘನಾಳನ್ನು ಕೊಂದು ಶವವನ್ನು ನಿರ್ಜನ ಪ್ರದೇಶದಲ್ಲಿ ಮಣ್ಣಿನಲ್ಲಿ ಮುಚ್ಚಿಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನು ಓದಿ : ರಾಯಚೂರಿನಲ್ಲಿ ಅಮಾನವೀಯ ಕೃತ್ಯ : ಅಪ್ರಾಪ್ತೆಯ ಮೇಲೆ ತಂದೆ ಹಾಗೂ ಸ್ನೇಹಿತರಿಂದ 2 ವರ್ಷ ಲೈಂಗಿಕ ದೌರ್ಜನ್ಯ?

ಘಟನೆ ಸಂಬಂಧ ಇನ್ನಷ್ಟು ಸತ್ಯಾಂಶಗಳನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆ ಮುಂದಿನ ತನಿಖೆ ಕೈಗೊಂಡಿದೆ. ಸ್ಥಳೀಯರು ಈ ಪ್ರಕರಣವನ್ನು “ಮರ್ಯಾದೆ ಹತ್ಯೆ” (Honour Killing) ಕೋನದಲ್ಲೂ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಗ್ರಾಮದಲ್ಲಿ ಈ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಬಾಲಕಿಯ ಸಾವಿಗೆ ನ್ಯಾಯ ದೊರಕಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕವೇ ನಿಖರ ಕಾರಣ ಮತ್ತು ಘಟನೆಗೆ ಸಂಬಂಧಿಸಿದ ಸಂಪೂರ್ಣ ಸತ್ಯ ಬಹಿರಂಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಮಾಜಕ್ಕೆ ಅಪಾಯಕಾರಿ :

ಅಪ್ರಾಪ್ತ ವಯಸ್ಸಿನ ಮಕ್ಕಳ ಭವಿಷ್ಯ ಮತ್ತು ಬದುಕಿನ ಬಗ್ಗೆ ಕುಟುಂಬಗಳಲ್ಲಿ ಸಂವೇದನಾಶೀಲತೆ ಅತ್ಯಂತ ಮುಖ್ಯವಾಗಿದೆ. ಮದುವೆ, ಕುಟುಂಬದ ಒತ್ತಡ ಅಥವಾ ಮಾನ-ಮರ್ಯಾದೆ ಹೆಸರಿನಲ್ಲಿ ಹಿಂಸೆಗೆ ತಿರುಗುವುದು ಸಮಾಜಕ್ಕೆ ಅಪಾಯಕಾರಿ ಬೆಳವಣಿಗೆ.

ಇಂದಿನ ಎಲ್ಲಾ ತಾಜಾ ಸುದ್ದಿಗಳನ್ನು ಇಲ್ಲಿ ಓದಿ

ಇಂತಹ ಘಟನೆಗಳು ಪೋಷಕರು ಮತ್ತು ಮಕ್ಕಳ ನಡುವೆ ಉತ್ತಮ ಸಂವಹನ ಹಾಗೂ ಕಾನೂನು ಅರಿವಿನ ಅಗತ್ಯವನ್ನು ಮತ್ತೊಮ್ಮೆ ನೆನಪಿಸುತ್ತವೆ. ಮಕ್ಕಳ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಸಮಾಜ ಹಾಗೂ ಕುಟುಂಬಗಳು ಹೆಚ್ಚು ಜಾಗರೂಕರಾಗಬೇಕಾಗಿದೆ.


Disclaimer: ಮೇಲಿನ ಮಾಹಿತಿ (ಬಾಲಕಿ ನಾಪತ್ತೆ) ವಿವಿಧ ಮಾಧ್ಯಮ ವರದಿಗಳು ಮತ್ತು ಪ್ರಾಥಮಿಕ ಪೊಲೀಸ್ ಮಾಹಿತಿಗಳ ಆಧಾರದಲ್ಲಿ ಸಿದ್ಧಪಡಿಸಲಾಗಿದೆ. ತನಿಖೆ ಮುಂದುವರಿದಿರುವುದರಿಂದ ಅಧಿಕೃತ ವರದಿ ಹೊರಬರುವವರೆಗೆ ಅಂತಿಮ ನಿರ್ಣಯವೆಂದು ಪರಿಗಣಿಸಬಾರದು.

ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗೆ ಬೆಂಕಿ; 68 ಪ್ರಯಾಣಿಕರ ಸುರಕ್ಷಿತ ರಕ್ಷಣೆ.

ಜನಸ್ಪಂದನ ನ್ಯೂಸ್‌, ತಿರುವನಂತಪುರಂ (ಕೇರಳಂ) : ಇಂದು ಬೆಳಗಿನ ಜಾವ ರಾಜಧಾನಿ ಎಕ್ಸ್‌ಪ್ರೆಸ್‌ (Rajdhani Express) ಒಂದು ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡ ಘಟನೆ ಮಧ್ಯ ಪ್ರದೇಶದ ಲುನಿರಿಚಾ ಮತ್ತು ವಿಕ್ರಮ್‌ಗಢ ಅಲೋಟ್ ರೈಲು ನಿಲ್ದಾಣಗಳ ನಡುವೆ ಸಂಭವಿಸಿದೆ.

ಕೇರಳದ ತಿರುವನಂತಪುರಂ (Thiruvananthapuram) ನಿಂದ ಹಜರತ್ ನಿಜಾಮುದ್ದೀನ್ (Hazrat Nizamuddin) ಕಡೆಗೆ ಸಂಚರಿಸುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ (Rajdhani Express) ರೈಲಿನ ಒಂದು ಬೋಗಿಗೆ ಬೆಂಕಿ ಹೊತ್ತಿಕೊಂಡ ಘಟನೆ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ.

B-1 ಕೋಚ್‌ನಲ್ಲಿ ಕಾಣಿಸಿಕೊಂಡ ಬೆಂಕಿ :

ರೈಲು ಸಂಖ್ಯೆ 12431ರ ಬಿ-1 (B-1 Coach) ಕೋಚ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಕೆಲಕಾಲ ದೆಹಲಿ-ಮುಂಬೈ ಪ್ರಮುಖ ರೈಲು ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

ರೈಲಿನ ಬೋಗಿಗೆ ಬೆಂಕಿ ಹತ್ತಿದ ಘಟನೆ ಭಾನುವಾರ ಬೆಳಿಗ್ಗೆ ಸುಮಾರು 5:15ರ ವೇಳೆಗೆ ಮಧ್ಯಪ್ರದೇಶದ (Madhya Pradesh) ಕೋಟಾ ರೈಲ್ವೆ ವಿಭಾಗದ ಲುನಿರಿಚಾ ಮತ್ತು ವಿಕ್ರಮ್‌ಗಢ ಅಲೋಟ್ ರೈಲು ನಿಲ್ದಾಣಗಳ ನಡುವೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ರೈಲು ಸಿಬ್ಬಂದಿ ಎಚ್ಚರಿಕೆ ವಹಿಸಿದ್ದು, ತುರ್ತು ಕ್ರಮಗಳ ಮೂಲಕ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

68 ಪ್ರಯಾಣಿಕರ ಸುರಕ್ಷಿತ ರಕ್ಷಣೆ :

ರೈಲಿನ ಬಿ-1 ಕೋಚ್‌ನಲ್ಲಿ ಒಟ್ಟು 68 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಗಾರ್ಡ್ ಲೋಕೋ ಪೈಲಟ್‌ಗೆ ಮಾಹಿತಿ ನೀಡಿದ್ದು, ತಕ್ಷಣ ರೈಲನ್ನು ನಿಲ್ಲಿಸಲಾಯಿತು. ಬಳಿಕ ಸುಮಾರು 15 ನಿಮಿಷಗಳೊಳಗೆ ಎಲ್ಲಾ ಪ್ರಯಾಣಿಕರನ್ನು ಕೋಚ್‌ನಿಂದ ಹೊರಗೆ ಕರೆತರಲಾಯಿತು.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಘಟನೆ ವರದಿಯಾಗಿಲ್ಲ. ತಕ್ಷಣವೇ ರೈಲ್ವೆಯ ಪರಿಹಾರ ಮತ್ತು ರಕ್ಷಣಾ ತಂಡಗಳು (Rescue Teams) ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡವು. ಹತ್ತಿರದ ರೈಲು ನಿಲ್ದಾಣಗಳಿಂದ ಹೆಚ್ಚುವರಿ ಸಿಬ್ಬಂದಿಯನ್ನೂ ಕಳುಹಿಸಲಾಯಿತು.

ಬೆಂಕಿಗೆ ಆಹುತಿಯಾದ ಬೋಗಿ :

ಬೆಂಕಿ ಬಹಳ ವೇಗವಾಗಿ ವ್ಯಾಪಿಸಿದ್ದರಿಂದ ಕೆಲವೇ ಕ್ಷಣಗಳಲ್ಲಿ ಬಿ-1 ಕೋಚ್ ಬಹುತೇಕ ಸಂಪೂರ್ಣ ಸುಟ್ಟುಹೋಗಿದೆ. ಸುರಕ್ಷತಾ ಕ್ರಮವಾಗಿ ಪೀಡಿತ ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಲಾಗಿದ್ದು, ರೈಲಿನ ವಿದ್ಯುತ್ ಸರಬರಾಜು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ರೈಲ್ವೆ ಅಧಿಕಾರಿಗಳ ಮಾಹಿತಿ ಪ್ರಕಾರ, ರಾಜಧಾನಿ ಎಕ್ಸ್‌ಪ್ರೆಸ್ ರತ್ಲಂ ಜಂಕ್ಷನ್‌ನಿಂದ ಬೆಳಗಿನ ಜಾವ ಹೊರಟಿದ್ದು, ಮುಂದಿನ ನಿಲ್ದಾಣ ಕೋಟಾ ಜಂಕ್ಷನ್ ಆಗಿತ್ತು. ಆದರೆ ಮಧ್ಯದಲ್ಲೇ ಈ ಅವಘಡ ಸಂಭವಿಸಿದೆ.

ರೈಲಿನ ಬೋಗಿಗೆ ಬೆಂಕಿ ; ಸಂಚಾರದಲ್ಲಿ ವ್ಯತ್ಯಯ :

ಘಟನೆಯ ಪರಿಣಾಮವಾಗಿ ದೆಹಲಿ-ಮುಂಬೈ ಮಾರ್ಗದಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಅಡಚಣೆ ಉಂಟಾಯಿತು. ಹಳಿ ಮತ್ತು ತಾಂತ್ರಿಕ ದುರಸ್ತಿ ಕಾರ್ಯಗಳನ್ನು ವೇಗಗೊಳಿಸಲು ಟವರ್ ವ್ಯಾಗನ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

ಇದನ್ನು ಓದಿ : SSLC ಪಾಸಾಗಿದ್ದೀರಾ? ಕರ್ನಾಟಕ ಹೈಕೋರ್ಟ್‌ನಲ್ಲಿ ಗ್ರೂಪ್-ಡಿ ಹುದ್ದೆಗಳ ನೇಮಕಾತಿ.

ಹಿರಿಯ ರೈಲ್ವೆ ಅಧಿಕಾರಿಗಳು ಹಾಗೂ ತಾಂತ್ರಿಕ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಸಂಪೂರ್ಣ ತನಿಖೆಗೆ ಆದೇಶಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪ್ರಯಾಣಿಕರ ಸುರಕ್ಷತೆ ಮಹತ್ವ :

ಇತ್ತೀಚಿನ ದಿನಗಳಲ್ಲಿ ರೈಲುಗಳಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ತುರ್ತು ಸಂದರ್ಭಗಳಲ್ಲಿ ಸಿಬ್ಬಂದಿಯ ತಕ್ಷಣದ ಸ್ಪಂದನೆ ಹಾಗೂ ರಕ್ಷಣಾ ಕ್ರಮಗಳಿಂದ ದೊಡ್ಡ ಅನಾಹುತ ತಪ್ಪಿರುವುದು ಗಮನಾರ್ಹವಾಗಿದೆ. ಪ್ರಯಾಣಿಕರು ಸಹ ಪ್ರಯಾಣದ ವೇಳೆ ಸುರಕ್ಷತಾ ನಿಯಮಗಳನ್ನು ಪಾಲಿಸುವುದು ಅಗತ್ಯ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಸಂಪಾದಕೀಯ :

ರೈಲಿನ ಬೋಗಿಗೆ ಬೆಂಕಿ ತಗುಲಿದ ಸಂದರ್ಭದಲ್ಲಿ ಪ್ರಯಾಣಿಕರು ಗಾಬರಿಯಾಗದೇ ತಕ್ಷಣ ಎಚ್ಚರಿಕೆಯಿಂದ ವರ್ತಿಸುವುದು ಅತ್ಯಂತ ಮುಖ್ಯ.

  • ಮೊದಲು ಹತ್ತಿರದ ರೈಲ್ವೆ ಸಿಬ್ಬಂದಿ, ಟಿಟಿಇ (TTE) ಅಥವಾ ಗಾರ್ಡ್‌ಗೆ ತಕ್ಷಣ ಮಾಹಿತಿ ನೀಡಬೇಕು.
  • ಬೆಂಕಿ ಕಾಣಿಸಿಕೊಂಡ ಪ್ರದೇಶದಿಂದ ದೂರ ಸರಿದು ತುರ್ತು ನಿರ್ಗಮನ (Emergency Exit) ಮಾರ್ಗದ ಮೂಲಕ ಸುರಕ್ಷಿತವಾಗಿ ಹೊರಬರಬೇಕು.
  • ಲಗೇಜ್ ತೆಗೆದುಕೊಳ್ಳಲು ಸಮಯ ವ್ಯರ್ಥ ಮಾಡದೇ ಮೊದಲು ಪ್ರಾಣರಕ್ಷಣೆಗೇ ಆದ್ಯತೆ ನೀಡಬೇಕು.

ಪ್ರಮುಖ ಸುದ್ದಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ

  • ಹೊಗೆ ಹೆಚ್ಚಿದ್ದರೆ ಮೂಗು ಮತ್ತು ಬಾಯಿಯನ್ನು ರುಮಾಲ್ ಅಥವಾ ಬಟ್ಟೆಯಿಂದ ಮುಚ್ಚಿಕೊಂಡು ಕೆಳಭಾಗವಾಗಿ ಚಲಿಸುವುದು ಸುರಕ್ಷಿತ.
  • ಬೆಂಕಿ ಅವಘಡದ ವೇಳೆ ಮಕ್ಕಳು ಹಾಗೂ ವೃದ್ಧರಿಗೆ ಮೊದಲು ಸಹಾಯ ಮಾಡುವಂತೆ ರೈಲ್ವೆ ಇಲಾಖೆ ಸಲಹೆ ನೀಡುತ್ತದೆ.

Disclaimer: ಈ ಲೇಖನವು (ರೈಲಿನ ಬೋಗಿಗೆ ಬೆಂಕಿ) ವಿವಿಧ ವರದಿಗಳು ಮತ್ತು ಲಭ್ಯ ಮಾಹಿತಿಯ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ಘಟನೆಯ ಕುರಿತು ಅಧಿಕೃತ ತನಿಖೆಯ ನಂತರ ಹೆಚ್ಚಿನ ವಿವರಗಳು ಬದಲಾಗುವ ಸಾಧ್ಯತೆ ಇದೆ.