ಜನಸ್ಪಂದನ ನ್ಯೂಸ್, ಮಂಗಳೂರು : ಉಳ್ಳಾಲದ ತಲಪಾಡಿ ಕೆ. ಸಿ. ರೋಡಿನಲ್ಲಿರುವ ಕೋಟೆಕಾರ್ ಸಹಕಾರಿ ಸಂಘದಲ್ಲಿ (Kotekar Cooperative Society) ಐದು ಜನ ದುಷ್ಕರ್ಮಿಗಳು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ (Show me the gun) ಸುಮಾರು 12 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹೊತ್ತೊಯ್ದ ಘಟನೆ ನಡೆದಿದೆ.
ಹಾಡಹಗಲೇ ಫಿಯೇಟ್ ಕಾರಿನಲ್ಲಿ ಬಂದ ಐದು ಮಂದಿ ದರೋಡೆಕೋರರ ತಂಡ (Gang of robbers) ಕೈಯಲ್ಲಿ ಬಂದೂಕು, ತಲವಾರು, ಚಾಕು ಹಿಡಿದಿದ್ದರು.
ಇದನ್ನು ಓದಿ : ಇನ್ಮುಂದೆ BPL ಕಾರ್ಡ್ ಹೊಂದಿದ ಕುಟುಂಬಗಳಿಗೆ CT Scan ಮತ್ತು MRI ಸ್ಕ್ಯಾನಿಂಗ್ ಸೇವೆ Free Free.!
ಈ ವೇಳೆ ಬ್ಯಾಂಕ್ ನಲ್ಲಿ ನಾಲ್ಕೈದು ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಈ ವೇಳೆ ತಾವು ತಂದಿದ್ದ ಮಾರಕಾಸ್ತ್ರಗಳನ್ನು (Weapons) ತೋರಿಸಿ ಚಿನ್ನದ ಒಡವೆ, ನಗದು ದೋಚಿ ಮಂಗಳೂರು ಕಡೆಗೆ ಎಸ್ಕೇಪ್ ಆಗಿದ್ದಾರೆ.
ದರೋಡೆಕೋರರು 12 ಕೋಟಿಗೂ ಅಧಿಕ ಹಣ ದೋಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ನಾಲ್ಕೈದು ಚೀಲದಲ್ಲಿ ಹಣ ತುಂಬಿಸಿದ್ದಾರೆ (They filled four or five bags with money) ಎನ್ನಲಾಗಿದ್ದು, ಪಕ್ಕಾ ಪ್ಲ್ಯಾನ್ ಮಾಡಿ ದರೋಡೆಕೋರರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : SCI : ಭಾರತದ ಸುಪ್ರೀಂ ಕೋರ್ಟ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿ ತನಿಖೆ ಶುರು ಮಾಡಿದ್ದಾರೆ.
ದರೋಡೆಯ ವಿಡಿಯೋ ಇಲ್ಲಿದೆ :
ಹಿಂದಿನ ಸುದ್ದಿ : ಭೀಕರ ರಸ್ತೆ ಅಪಘಾತ ; ಒಂಭತ್ತು ಜನರ ಸಾವು.!
ಜನಸ್ಪಂದನ ನ್ಯೂಸ್, ಡೆಸ್ಕ್ : ವೇಗವಾಗಿ ಬಂದ ಕಾರು (The fastest car) ನಿಂತಿದ್ದ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಪ್ರಯಾಣಿಕರು ಸಾವಿಗೀಡಾದ ಘಟನೆ ಮಹಾರಾಷ್ಟ್ರದ ನಾರಾಯಣಗಾಂವ್ (Narayanagaon in Maharashtra) ಬಳಿಯ ನಾಸಿಕ್- ಪುಣೆ ಹೆದ್ದಾರಿಯಲ್ಲಿ Nashik- Pune Highway ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಇದನ್ನು ಓದಿ : ಪ್ರೇಯಸಿಯ ಖಾಸಗಿ Video, ಪೋಟೋ ವೈರಲ್ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ.!
ಟ್ರಕ್ ವೊಂದು ಹಿಂದಿನಿಂದ ಬಂದ ಮಿನಿವ್ಯಾನ್ ಗೆ ಡಿಕ್ಕಿ ಹೊಡೆದಿದ್ದು, ನಿಂತಿದ್ದ ಬಸ್ಗೆ ಮಿನಿವ್ಯಾನ್ ಗೆ ಡಿಕ್ಕಿ ಹೊಡೆದಿದೆ ಎಂದು ಪುಣೆ ಗ್ರಾಮೀಣ ಪೊಲೀಸ್ ಎಸ್ಪಿ ಪಂಕಜ್ ದೇಶಮುಖ್ (Pune Rural Police SP Pankaj Deshmukh) ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಟ್ರಕ್ ನಾರಾಯಣಗಾಂವ್ ಕಡೆಗೆ ಹೊರಟಿದ್ದ ಮಿನಿವ್ಯಾನ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಮಿನಿ ವ್ಯಾನ್ ಹೈವೇ ಬದಿ ನಿಲ್ಲಿಸಿದ್ದ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ.
ಇದನ್ನು ಓದಿ : ಸಿಎಂ ಸಿದ್ದು ಹೆಸರಿನಲ್ಲಿ Free Recharge ಅಂತಾ ಲಿಂಕ್ ಬಂತಾ ; ಕ್ಲಿಕ್ ಮಾಡುವ ಮುನ್ನ ಈ ಸುದ್ದಿ ಓದಿ.
ವಾಹನದಲ್ಲಿದ್ದ ನಾಲ್ವರು ಗಂಡಸರು, ನಾಲ್ವರು ಮಹಿಳೆಯರು ಜೊತೆಗೆ ಐದು ವರ್ಷದ ಮಗು ಸೇರಿ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ.
ಅಪಘಾತದಲ್ಲಿ ಏಳು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ : ಚೆನ್ನೈಯನ್ನು ಹಿಂದಿಕ್ಕಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆದ Bangalore ; ಯಾವುದರಲ್ಲಿ ಗೊತ್ತಾ.?