Wednesday, September 17, 2025

Janaspandhan News

HomeCrime NewsFire : 36 ಲಕ್ಷ ವರದಕ್ಷಿಣೆ ಬೇಡಿಕೆ : ಪತ್ನಿ ಸುಟ್ಟು ಹಾಕಿದ ಪತಿ ;...
spot_img
spot_img
spot_img

Fire : 36 ಲಕ್ಷ ವರದಕ್ಷಿಣೆ ಬೇಡಿಕೆ : ಪತ್ನಿ ಸುಟ್ಟು ಹಾಕಿದ ಪತಿ ; ಸತ್ಯ ಬಿಚ್ಚಿಟ್ಟ ಮಗ.!

- Advertisement -

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವರದಕ್ಷಿಣೆ ವಿಚಾರವಾಗಿ ಪತಿಯೋರ್ವ ಪತ್ನಿಗೆ ಬೆಂಕಿ (Fire) ಹಚ್ಚಿ ಕೊಲೆ ಮಾಡಿರುವ ಘಟನೆಯೋದು ನಡೆದಿರುವ ಬಗ್ಗೆ ವರದಿಯಾಗಿದೆ.

ಗ್ರೇಟರ್ ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿರ್ಸಾ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ, ಬೆಂಕಿ (Fire) ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ 6 ವರ್ಷದ ಮಗ ನೀಡಿದ ಹೇಳಿಕೆ ಪೊಲೀಸರಿಗೆ ಪ್ರಮುಖ ಸುಳಿವು ಒದಗಿಸಿದೆ.

ಮಗನ ಹೇಳಿಕೆಯ ಪ್ರಕಾರ, ತನ್ನ ಅಪ್ಪನೇ ತಾಯಿಯನ್ನು ತನ್ನ ಮುಂದೆಯೇ ಹಲ್ಲೆ ಮಾಡಿ ಬೆಂಕಿ (Fire) ಹಚ್ಚಿದ್ದಾನೆ. ಆಕೆ ಹಲವು ದಿನಗಳಿಂದ ಹಿಂಸೆಗೆ ಒಳಗಾಗುತ್ತಿದ್ದಾಳೆ ಎಂಬುದನ್ನೂ ಬಾಲಕ ಬಿಚ್ಚಿಟ್ಟಿದ್ದಾನೆ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

ಘಟನೆಯ ವಿಡಿಯೋಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವುಗಳಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಹಾಗೂ ಬೆಂಕಿ (Fire) ಹೊತ್ತಿಕೊಂಡ ನಂತರ ಆಕೆ ಮೆಟ್ಟಿಲುಳಿದು ಬರುತ್ತಿರುವ ದೃಶ್ಯಗಳು ಕಾಣಿಸಿವೆ.

ಮೃತಳ ಅಕ್ಕ ಕಾಂಚನ್ ಮಾತನಾಡಿ, ತಮ್ಮ ತಂಗಿಯ ಪತಿ ವಿಪಿನ್ ಹಾಗೂ ಆತನ ಮನೆಯವರು 36 ಲಕ್ಷ ರೂ. ವರದಕ್ಷಿಣೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ತಂಗಿ ನಿರಂತರ ಹಿಂಸೆಗೆ ಒಳಗಾಗುತ್ತಿದ್ದರು ಎಂದು ಅವರು ಹೇಳಿದ್ದಾರೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

ಕಾಂಚನ್ ಅವರ ಪ್ರಕಾರ, ತಂಗಿಯನ್ನು ಹಲ್ಲೆ ಮಾಡಿದ ನಂತರ ಬೆಂಕಿ (Fire) ಹಚ್ಚಲಾಯಿತು. ತಂಗಿಯ ಮಕ್ಕಳೂ ಆ ಸಮಯದಲ್ಲಿ ಅಲ್ಲೇ ಇದ್ದರು. ತಮಗೂ ಹಲ್ಲೆ ನಡೆಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.


KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

KSCCF

ಜನಸ್ಪಂದನ ನ್ಯೂಸ್‌, ನೌಕರಿ : ಬೆಂಗಳೂರು ಮೂಲದ ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF) 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ KSCCF ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSCCF ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ನೇಮಕಾತಿ ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF).
  • ಒಟ್ಟು ಹುದ್ದೆಗಳು : 34.
  • ಹುದ್ದೆಗಳ ಹೆಸರು : ಮಾರಾಟ ಸಹಾಯಕ ಮತ್ತು ಇತರೆ ಹುದ್ದೆಗಳು.
  • ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,500 ರಿಂದ ರೂ.29,600/- ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ.
ವಯೋಮಿತಿ :
  • ಕನಿಷ್ಠ ವಯಸ್ಸು : 18 ವರ್ಷ.
  • ಗರಿಷ್ಠ ವಯಸ್ಸು : 35 ವರ್ಷ.
KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಅರ್ಜಿ ಶುಲ್ಕ :
  • SC/ST/ಪ್ರವರ್ಗ-I/PWD ಅಭ್ಯರ್ಥಿಗಳು : ರೂ.500/-
  • ಇತರೆ ಎಲ್ಲಾ ಅಭ್ಯರ್ಥಿಗಳು : ರೂ.1000/-
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / 10ನೇ ತರಗತಿ, ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಪೂರೈಸಿರಬೇಕು.
ಆಯ್ಕೆ ವಿಧಾನ :

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ KSCCF ಅಧಿಕೃತ ಅಧಿಸೂಚನೆಯ ಪ್ರಕಾರ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSCCF ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯವಿದ್ದರೆ ಮಾತ್ರ).
  6. ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ (Printout) ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಪ್ರಾರಂಭ ದಿನಾಂಕ : 16 ಆಗಸ್ಟ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
ಪ್ರಮುಖ ಲಿಂಕ್‌ಗಳು :

👉 Disclaimer : The above given information is available On online, candidates should check it properly before applying. This is for information only.

- Advertisement -
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments