ಜನಸ್ಪಂದನ ನ್ಯೂಸ್, ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಯಲ್ಲಿ (Kali river) ನದಿಯಲ್ಲಿ ಮುಳುಗಿ ಆರು ಜನ ಪ್ರವಾಸಿಗರು ಮೃತಪಟ್ಟ ಘಟನೆ ನಡೆದಿದೆ.
ಮೃತ ದುರ್ದೈವಿಗಳು ಜೀರ್ ಅಹ್ಮದ್ (40) ಅಲ್ಛೀಯಾ (10), ಮೋಹಿನ್ (6), ರೇಷ್ಮಾ ಉನ್ನಿಸಾ (38), ಇಫ್ರಾ (15), ಅಬೀದ್ (12) ಎಂದು ತಿಳಿದು ಬಂದಿದೆ.
ಇದನ್ನು ಓದಿ : ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡ್ಕೊಂಡ ಶಿಕ್ಷಕಿ ; ಫೇಶಿಯಲ್, ಮೇಕಪ್ ಎಲ್ಲವೂ ಅಲ್ಲಿಯೇ, Video Viral.!
ಅಕ್ವಾಡ ಗ್ರಾಮದ ಕಾಳಿ ನದಿಯಲ್ಲಿ ಇಬ್ಬರು ಬಾಲಕರು ಸೇರಿದಂತೆ ಆರು ಮಂದಿ ನೀರುಪಾಲಾಗಿದ್ದಾರೆ. ಮೃತರು ಹುಬ್ಬಳ್ಳಿ (Hubli) ಮೂಲದವರು ಎನ್ನಲಾಗಿದೆ.
ಒಂದೇ ಕುಟುಂಬದ 8 ಮಂದಿ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದರು. ಕಾಳಿ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದಾರೆ.
ಐದು ಮಂದಿಯ ಶವ ಪತ್ತೆಯಾಗಿದ್ದು, ಮತ್ತೊಬ್ಬರಿಗಾಗಿ ತೀವ್ರ ಹುಡುಕಾಟ ನಡೆದಿದೆ.
ಇದನ್ನು ಓದಿ : ರದ್ದಾದ ರೇಷನ್ ಕಾರ್ಡ್ ಪಟ್ಟಿ ಆನ್ಲೈನ್ನಲ್ಲಿ ಬಿಡುಗಡೆ ; ನಿಮ್ಮ ಹೆಸರು ಈ ಲಿಸ್ಟ್ನಲ್ಲಿದೆಯಾ ಹೀಗೆ Check ಮಾಡಿ.!
ಸ್ಥಳಕ್ಕೆ ದಾಂಡೇಲಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.