ಜನಸ್ಪಂದನ ನ್ಯೂಸ್, ಡೆಸ್ಕ್ : ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ 159 ಜನರಿದ್ದ ವಿಮಾನ (plane) ದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯೊಂದು ಅಮೇರಿಕಾದಲ್ಲಿ ನಡೆದಿದೆ. ಏಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅಮೆರಿಕನ್ ಏರ್ಲೈನ್ಸ್ (Airlines) ವಿಮಾನವು ಲಾಸ್ ವೇಗಾಸ್ ವಿಮಾನ (plane) ನಿಲ್ದಾಣಕ್ಕೆ ಮರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ (plane) ದ ಎಡ ಎಂಜಿನ್ನಿಂದ ಹೊಗೆನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಪೈಲಟ್ ತಕ್ಷಣವೇ ಲಾಸ್ ವೇಗಾಸ್ ವಿಮಾನ (plane) ನಿಲ್ದಾಣಕ್ಕೆ ಮರಳಿ ಸುರಕ್ಷಿತವಾಗಿ ಲ್ಯಾಂಡಿಗ್ ಮಾಡಿದ್ದಾರೆ. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆದ ಪರಿಣಾಮ ಅದರಲ್ಲಿದ್ದ 159 ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನು ಓದಿ : First Night ದಿನವೇ “ಮುಟ್ಟಿದ್ರೆ 35 ಪೀಸ್ ಮಾಡ್ತೀನಿ” ಎಂದ ವಧು ; ಬೆಚ್ಚಿಬಿದ್ದ ವರ.!
ಫ್ಲೈಟ್ ಟ್ರ್ಯಾಕಿಂಗ್ ವೆಬ್ಸೈಟ್ ಫ್ಲೈಟ್ರಾಡಾರ್ 24 ಪ್ರಕಾರ, ಅಮೇರಿಕನ್ ಏರ್ಲೈನ್ಸ್ ಫ್ಲೈಟ್ 1665 ಲಾಸ್ ವೇಗಾಸ್ನ ಹ್ಯಾರಿ ರೀಡ್ ಅಂತರಾಷ್ಟ್ರೀಯ ವಿಮಾನ (plane) ನಿಲ್ದಾಣದಿಂದ ಸ್ಥಳೀಯ ಸಮಯ ಬೆಳಿಗ್ಗೆ 8:11 ರ ಸುಮಾರಿಗೆ ಉತ್ತರ ಕೆರೊಲಿನಾದ ಷಾರ್ಲೆಟ್ಗೆ ಹೊರಟಿತು.
ವಿಮಾನ (plane) ನಿಲ್ದಾಣದ ವಕ್ತಾರರು ಟೇಕ್ ಆಫ್ ಆದ ನಂತರ ಅದರ ಎಡ ಎಂಜಿನ್ನಿಂದ ಬೆಂಕಿ ಬಂದಿತು ಎಂದು ಹೇಳಿದರು. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಹಾರಾಟದಲ್ಲಿರುವಾಗ ಎಂಜಿನ್ನಿಂದ ಹೊಗೆ ಮತ್ತು ಜ್ವಾಲೆಗಳು ಬರುತ್ತಿರುವುದನ್ನು ಕಾಣಬಹುದಾಗಿದೆ.
ಇದನ್ನು ಓದಿ : Sexual : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಗುಂಡೇಟು.!
ನಂತರ ವಿಮಾನವು ಬೆಳಿಗ್ಗೆ 8:20 ರ ಸುಮಾರಿಗೆ ಲಾಸ್ ವೇಗಾಸ್ ವಿಮಾನ (plane) ನಿಲ್ದಾಣಕ್ಕೆ ಮರಳಿತು ಎಂದು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಹೇಳಿಕೆಯಲ್ಲಿ ತಿಳಿಸಿದೆ.
ಲ್ಯಾಂಡ್ ಆದ ವಿಮಾನವನ್ನು ಪರಿಶೀಲಿಸಿದ ಸಿಬ್ಬಂದಿಗೆ ಯಾವುದೇ ತಾಂತ್ರಿಕ ದೋಷ ಅಥವಾ ಬೆಂಕಿಯ ಸೂಚನೆ ಕಂಡುಬಂದಿಲ್ಲ. ಆದಾಗ್ಯೂ, ಹಾರಾಟವನ್ನು ರದ್ದುಗೊಳಿಸಲಾಯಿತು ಮತ್ತು ಪ್ರಯಾಣಿಕರನ್ನು ಮತ್ತೊಂದು ವಿಮಾನದಲ್ಲಿ ಅವರ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.
ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!
ಆದರೂ ಸಹ ಆಕಾಶದಲ್ಲಿ ವಿಮಾನಕ್ಕೆ ಬೆಂಕಿ ಹೊತ್ತಿಕೊಳ್ಳುವ ದೃಶ್ಯವನ್ನು ಕೆಲವರು ತಮ್ಮ ಫೋನ್ಗಳಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಘಟನೆಯ ಸಮಯದಲ್ಲಿ 153 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ವಿಮಾನದಲ್ಲಿದ್ದರು ಎಂದು ಅಮೇರಿಕನ್ ಹೇಳಿದರು. ಏರ್ಬಸ್ A321 ವಿಮಾನವನ್ನು ಮೌಲ್ಯಮಾಪನಕ್ಕಾಗಿ ಸೇವೆಯಿಂದ ಹಿಂತೆಗೆದುಕೊಳ್ಳಲಾಗಿದ್ದು, ಘಟನೆಯ ಬಗ್ಗೆ FAA ತನಿಖೆ ನಡೆಸುತ್ತದೆ ಎಂದು ಸಂಸ್ಥೆ ತಿಳಿಸಿದೆ.
ವಿಡಿಯೋ :
https://twitter.com/i/status/1938025013614956876
Belagavi : ಮೂಡಲಗಿ ತಾಲೂಕಿನ 4 ಸೇತುವೆಗಳು ಜಲಾವೃತ ; ಸಂಚಾರ ಸ್ಥಗಿತ.
ಜನಸ್ಪಮದನ ನ್ಯೂಸ್, ಮೂಡಲಗಿ : ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಬಿಡುವು ನೀಡದೆ ಸುರಿಯುವ ಮಳೆಯಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ (Mudalagi, Belagavi) ತಾಲೂಕಿನಲ್ಲಿ 4 ಸೇತುವೆಗಳು ಜಲಾವೃತವಾದ ಹಿನ್ನಲೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ (Mudalagi, Belagavi) ತಾಲೂಕಿನಲ್ಲಿ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲೂಕಿನ ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆಗಳು ಗುರುವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 26 ರ ದ್ವಾದಶ ರಾಶಿಗಳ ಫಲಾಫಲ.!
ಘಟಪ್ರಭಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ (Mudalagi, Belagavi) ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪೂರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ ಬುಧುವಾರ (ಜೂ.25) ಜಲಾವೃತಗೊಂಡಿತ್ತು.
ಗುರುವಾರ (ಜೂ.26) ಬೆಳಿಗ್ಗೆ ಸುಣಧೋಳಿ ಹಾಗೂ ಮೂಡಲಗಿ (Mudalagi, Belagavi) ಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ, ವಡೇರಹಟ್ಟಿ ಹಾಗೂ ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ವಡೇರಹಟ್ಟಿ ಸೇತುವೆ, ಕಮಲದಿನ್ನಿ ಹಾಗೂ ಹುಣಶ್ಯಾಳ ಪಿವೈಗೆ ಸಂಪರ್ಕ ಕಲ್ಪಿಸುವ ಕಮಲದಿನ್ನಿ ಸೇತುವೆಗಳು ಜಲಾವೃತಗೊಂಡ ಪರಿಣಾಮ ಹಲವು ಸಂಚಾರ ಸ್ಥಗಿತಗೊಂಡು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಇದನ್ನು ಓದಿ : BPCL : ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ಉದ್ಯೋಗವಕಾಶ.!
ಮೂಡಲಗಿ : ಇನ್ನೊಂದು ಘಟನೆಯಲ್ಲಿ, ಮೂಡಲಗಿ ಪಟ್ಟಣದ ಸಂಗಪ್ಪನ ವೃತ್ತದ ಹತ್ತಿರ ಹರಿದು ಹೋಗುವ ಹಳ್ಳದ ಪಕ್ಕದಲ್ಲಿರುವ ಬಾವಿಯಲ್ಲಿ ಗುರುವಾರ ಬೆಳಗ್ಗೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಬಾವಿಯಲ್ಲಿರುವ ಶವವನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆಯಲಾಗಿದ್ದು, ಪಟ್ಟಣದ ನಿವಾಸಿ ಗುರುಪಾದಪ್ಪ ಬಬಲೇಶ್ವರ (42) ಎಂದು ಗುರುತಿಸಲಾಗಿದೆ.
ಇದನ್ನು ಓದಿ : First Night ದಿನವೇ “ಮುಟ್ಟಿದ್ರೆ 35 ಪೀಸ್ ಮಾಡ್ತೀನಿ” ಎಂದ ವಧು ; ಬೆಚ್ಚಿಬಿದ್ದ ವರ.!
ಸಾವಿಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಸದ್ಯ ಸಾರ್ವಜನಿಕ ವಲಯದಲ್ಲಿ ಮಾತ್ರ ಕುಡಿದ ಮತ್ತಿನಲ್ಲಿ ಬಾವಿಗೆ ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗುತ್ತಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.






