Wednesday, February 5, 2025
HomeSpecial NewsSpecial news : ಗುಡ್ಡದಂತ ಸಮಸ್ಯೆ ಬಂದರೂ ಎಳ್ಳಷ್ಟು ಹೆದರಿಕೊಳ್ಳದವರಿಗೆ ಧೈರ್ಯ, ವಿಶ್ವಾಸ ಬರೋದೆಲ್ಲಿಂದ.?
spot_img
spot_img
spot_img
spot_img

Special news : ಗುಡ್ಡದಂತ ಸಮಸ್ಯೆ ಬಂದರೂ ಎಳ್ಳಷ್ಟು ಹೆದರಿಕೊಳ್ಳದವರಿಗೆ ಧೈರ್ಯ, ವಿಶ್ವಾಸ ಬರೋದೆಲ್ಲಿಂದ.?

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಆನೆ ದಾರಿಯಲ್ಲಿ ಹೋಗುತ್ತಿದ್ದ ವೇಳೆ ನಾಯಿಗಳು ಬೊಗಳಿದರೆ ಅದು ಕ್ಯಾರೆ ಎನ್ನುವುದಿಲ್ಲ. ಯಾಕೆಂದರೆ ಆ ಪ್ರಾಣಿಗೆ ಅದರದ್ದೆ ಆದ ಸ್ಥಾನ ಇದೆ. ಈ ಮಾತಿಗೆ ಅನ್ವಯಿಸುವಂತೆ ಜೀವನದಲ್ಲಿ ಎಷ್ಟೇ ಕಷ್ಟಗಳು (Problems) ಬಂದರೂ ಅದನ್ನು ಎದುರಿಸಿ ಮುಂದೆ ಬರುವ ಕೆಲವು ಜನರಿದ್ದಾರೆ. ಅವರಿಗೆ ಯಾವುದೇ ಸಮಸ್ಯೆ ಇರಲಿ ಎಲ್ಲಿಲ್ಲದ ಆತ್ಮವಿಶ್ವಾಸ (Confidence) ಮತ್ತು ಮುಖದಲ್ಲಿ ಮಂದಹಾಸ ಇದ್ದೇ ಇರುತ್ತದೆ. ಅವರು ಮಾನಸಿಕವಾಗಿ ಧೈರ್ಯವಂತರಾಗಿದ್ದರೆ (mentally brave) ಯಾವುದೇ ಸಮಸ್ಯೆಗಳನ್ನು ತುಂಬಾ ಸರಳವಾಗಿ ನಿಭಾಯಿಸುವ ಶಕ್ತಿ ಅವರಲ್ಲಿರುತ್ತದೆ.

* ಹೆಚ್ಚಿನ ಆಂತರಿಕ ಶಕ್ತಿ ಹೊಂದಿರುವ ಜನರು (People with high inner strength) ದುರ್ಬಲರಾಗಿರುವುದು ಎಂದರೆ ಹೇಡಿತನದ ಲಕ್ಷಣವಲ್ಲ ಎಂಬುದನ್ನು ಅರಿತುಕೊಂಡಿರುತ್ತಾರೆ. ಇವರು ತಮ್ಮ ದುರ್ಬಲತೆಯನ್ನು (weak) ಸ್ವೀಕರಿಸುತ್ತಾರೆ. ಇದು ಧೈರ್ಯ ಮತ್ತು ವಿಶ್ವಾಸಾರ್ಹತೆಗೆ ಸಾಕ್ಷಿ ಎನ್ನಬಹುದು.

ಇದನ್ನು ಓದಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ Green signal.!

* ಸಂಪರ್ಕಗಳನ್ನು ಬೆಳೆಸಿಕೊಳ್ಳುವುದು ಈ ಜನರ ಉತ್ತಮ ಅಭ್ಯಾಸವಾಗಿದೆ. ಇವರು ಸಂಪರ್ಕಗಳನ್ನು ಬೆಳೆಸಿಕೊಂಡು, ತಮ್ಮ ಸಂಬಂಧಗಳನ್ನು ಗೌರವಿಸುತ್ತಾರೆ. ಅಲ್ಲದೇ ಅದನ್ನು ಉಳಿಸಿಕೊಳ್ಳಲು ಸಮಯ ಹಾಗೂ ಶಕ್ತಿಯನ್ನು ವಿನಿಯೋಗಿಸುತ್ತಾರೆ (expends energy). ಕುಟುಂಬ ಹಾಗೂ ಸ್ನೇಹಿತರ ಬಾಂಧವ್ಯ ಬೆಳೆಸಿಕೊಳ್ಳುವುದರಿಂದ ಅವರಲ್ಲಿ ಜೀವನದ ಸವಾಲುಗಳನ್ನು ಎದುರಿಸುವ ಶಕ್ತಿಯು‌ ಹೆಚ್ಚುತ್ತದೆ.

* ಆಂತರಿಕ ಶಕ್ತಿಯನ್ನು ಹೊಂದಿರುವ ವ್ಯಕ್ತಿಗಳು ಅನಾನುಕೂಲತೆಯ ಬಗ್ಗೆ ತಲೆನೆ ಕೆಡಿಸಿಕೊಳ್ಳುವುದಿಲ್ಲ. ಎಂತಹ ಪರಿಸರಗಳಲ್ಲಿಯೂ ಅವರು ಹೊಂದಿಕೊಂಡು ತಮಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತಾರೆ. ಕಷ್ಟವೆಂದು ಹೇಳುತ್ತಾ ಕುಳಿತುಕೊಳ್ಳದೇ ಅದನ್ನು ಹಿಮ್ಮೆಟ್ಟಿಸುವುದು (reversing) ಹೇಗೆಂದು ಯೋಚಿಸಿ, ಪರಿಹಾರ ಕಂಡುಕೊಳ್ಳುತ್ತಾರೆ.

* ಹೆಚ್ಚಿನ ಆಂತರಿಕ ಶಕ್ತಿಯನ್ನು ಹೊಂದಿರುವವರು ಸಾವಧಾನವಾಗಿರುತ್ತಾರೆ. ತಮ್ಮ ಭಾವನೆಗಳು, ಆಲೋಚನೆಗಳು ಮತ್ತು ಕ್ರಿಯೆಗಳ (feelings, thoughts and actions) ಬಗ್ಗೆ ತಿಳಿದುಕೊಂಡಿರುತ್ತಾರೆ.‌ ಅಂತಹವರು ತಮ್ಮೊಳಗೆ ಶಾಂತ ಮನೋಭಾವ ಬೆಳೆಸಿಕೊಂಡಿರುತ್ತಾರೆ.

* ಈ ಜನರು ಕೃತಜ್ಞತೆಯ ಭಾವವನ್ನು (A sense of gratitude) ಹೊಂದಿರುತ್ತಾರೆ. ಕೃತಜ್ಞತೆಯು ನಿಮಗೆ ಸಕಾರಾತ್ಮಕ ದೃಷ್ಟಿಕೋನವನ್ನು ಬೆಳೆಸಲು ಸಹಾಯ ಮಾಡುತ್ತದೆ. ಜೀವನದಲ್ಲಿ ಸರಳ ಸಂತೋಷಗಳನ್ನು ಹುಡುಕುತ್ತಾರೆ. ತಮ್ಮಲ್ಲಿಲ್ಲ ಎಂದು ತಲೆಕೆಡಿಕೊಳ್ಳುವುದರ ಬದಲಿಗೆ ತಮ್ಮಲ್ಲಿ ಏನಿದೆಯೋ ಅದರಲ್ಲಿ ಸಂತೋಷವನ್ನು ಕಾಣುತ್ತಾರೆ.

ಇದನ್ನು ಓದಿ : 150 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ ; Chikkodi ಮೂಲದ ಯೋಧ ಸೇರಿ ಐವರು ಹುತಾತ್ಮ.!

* ಆಂತರಿಕವಾಗಿ ಗಟ್ಟಿಯಾಗಿರುವುದು ಇವರ ಇನ್ನೊಂದು ಗುಣ. ತಮ್ಮ ಮಾನಸಿಕ ಗಟ್ಟಿತನವನ್ನು ನಿರ್ಮಿಸುವ ಕೆಲಸ ಮಾಡುತ್ತಾರೆ. ಇದು ವಿಫಲತೆಗಳನ್ನು ಹಿಮ್ಮೆಟ್ಟಿಸಲು ಹಾಗೂ ತೊಂದರೆಗಳನ್ನು ಎದುರಿಸಲು ಧೈರ್ಯ ನೀಡುತ್ತದೆ.

* ಆಂತರಿಕ ಶಕ್ತಿಯನ್ನು ಹೊಂದಿರುವ ಜನರು ಆಳವಾದ ಆಂತರಿಕ ಶಕ್ತಿಯನ್ನು (Deep inner strength) ಹೊಂದಿರುತ್ತಾರೆ. ಈ ಜನರು ತಮ್ಮ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯದ ಕುರಿತು ಕಾಳಜಿ ವಹಿಸುತ್ತಾರೆ. ಜೀವನದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಅವರು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಗಟ್ಟಿಯಾಗಿರುತ್ತಾರೆ.

ಹಿಂದಿನ ಸುದ್ದಿ : C. T ರವಿ ಅರೆಸ್ಟ್ ಪ್ರಕರಣ : ಸಿಪಿಐ ಸಸ್ಪೆಂಡ್.!

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಾಪುರ (Khanapura in Belagavi district) ಸಿಪಿಐ ಮಂಜುನಾಥ ನಾಯಕ ಅವರನ್ನು ಅಮಾನತು ಮಾಡಿ (suspend) ಐಜಿಪಿ ವಿಕಾಸ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ : ಮೋಸ ಮಾಡಿ ಮದುವೆಯಾಗಲು ರೆಡಿಯಾಗ್ತಿದ್ದ Lover; ಮರ್ಮಾಂಗವನ್ನೇ ಕಟ್ ಮಾಡಿದ ಪ್ರೇಯಸಿ.!

MLC ಸಿ. ಟಿ. ರವಿ ಅವರನ್ನು ಅರೆಸ್ಟ್ ಮಾಡಿ ತಡರಾತ್ರಿ ಖಾನಾಪೂರ ಪೊಲೀಸ್ ಠಾಣೆಗೆ ಕರೆ ತರಲಾಗಿತ್ತು. ಈ ವೇಳೆ ಸಿಪಿಐ ಮಂಜುನಾಥ ಠಾಣೆಯ ಹೊರಗಡೆ (Outside the station) ಗಲಾಟೆ ಮಾಡಿದ ಬಿಜೆಪಿ ನಾಯಕರನ್ನು ಠಾಣೆಯೊಳಗಡೆ ಬಿಟ್ಟಿದ್ದರು.

ಇದಾದ ನಂತರ ಠಾಣೆಯಲ್ಲಿ ಬಿಜೆಪಿ ನಾಯಕರು ಸಹ ಸಭೆ (meeting) ಸೇರಿದ್ದರು. ಈ ಸಂದರ್ಭದಲ್ಲಿ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್, ಡಿಸಿಪಿ ರೋಹನ ಜಗದೀಶ ಅವರು ಕೂಡ ಅರ್ಧ ಗಂಟೆ ಚರ್ಚೆ ಮಾಡಿದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು (Home Minister) ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸದ್ಯ ಐಜಿಪಿ ವಿಕಾಸಕುಮಾರ ವಿಕಾಸ ಅವರು ಸಿಪಿಐ ಮಂಜುನಾಥ ನಾಯಕ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಸಿ ಟಿ ರವಿ ಖಾನಾಪುರ ಠಾಣೆಗೆ ಕರೆತಂದು ನಿಷ್ಕಾಳಜಿತನ, ಕರ್ತವ್ಯ ಲೋಪ, (Negligence, dereliction of duty) ಬೇಜಬ್ದಾರಿತನ ಪ್ರದರ್ಶನ ಆರೋಪ ಹಾಗೂ ಆಪಾದಿತರನ್ನು (Allegedly) ಹೊರತುಪಡಿಸಿ ಠಾಣೆಯೊಳಗೆ ಯಾರನ್ನೂ ಬಿಡದಂತೆ ಆದೇಶ (order) ನೀಡಿದ್ದರೂ ನಿರ್ಲಕ್ಷ್ಯ ವಹಿಸಿದ ಆರೋಪಿಸಲಾಗಿದೆ.

ಈ ಅವಧಿಯಲ್ಲಿ ಠಾಣೆಯ ಒಳಗಡೆ ಬಿಜೆಪಿ ನಾಯಕರು ಸೇರಿದಂತೆ ಎಲ್ಲರನ್ನೂ ಬಿಟ್ಟಿದ್ದರು. ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ (Violation of order) ಆರೋಪದಡಿ ಇನ್ಸ್‌ಪೆಕ್ಟ‌ರ್ ಅವರನ್ನು ಅಮಾನತು ಮಾಡಲಾಗಿದೆ.

ಇದನ್ನು ಓದಿ : ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಪ್ರಕರಣದ ಆರೋಪಿ ಜಯೇಶ್‌ ಹಿಂಡಲಗಾ ಜೈಲಲ್ಲೇ ಆತ್ಮಹತ್ಯೆಗೆ ಯತ್ನ.!

ಇತ್ತ ಸಿಪಿಐ ಅಮಾನತು ಖಂಡಿಸಿ ವಿವಿಧ ಸಂಘಟನೆಗಳು ಖಾನಾಪುರ ಬಂದ್ ಗೆ ಕರೆ ನೀಡಿವೆ ಎಂದು ತಿಳಿದು ಬಂದಿದೆ.

ಡಿ.26 ರಂದು ಕನ್ನಡಪರ ಸಂಘಟನೆಗಳು (Pro- Kannada organizations) ಖಾನಾಪುರ ಬಂದ್ ಗೆ ಕರೆ ನೀಡಿವೆ ಎನ್ನಲಾಗಿದೆ. ಬಂದ್ ಕರೆಗೆ ಬಿಜೆಪಿ- ಜೆಡಿಎಸ್ ಪಕ್ಷಗಳು ಸಹ ಬೆಂಬಲ ನೀಡಿವೆ.

ಸಿಪಿಐ ಅಮಾನತು ಮಾಡಿರುವುದನ್ನು ಪ್ರಶ್ನಿಸಿ ಹಾಗೂ ಅಮಾನತು ಆದೇಶ ಹಿಂಪಡೆಯುವಂತೆ (withdraw the order of suspension) ಆಗ್ರಹಿಸಿ ನಾಳೆ ಖಾನಾಪುರದಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!