ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿನ ಹೋಟೆಲ್ನಲ್ಲಿ ಹೈಟೆಕ್ ವೇಶ್ಯಾವಾಟಿಕೆ (High -tech prostitution) ನಡೆಸುತ್ತಿದ್ದಾತನನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ನಡೆದಿದೆ.
ಆರೋಪಿಯು ಸರ್ಕಾರಿ ಕೆಲಸ ಬಿಟ್ಟು ಥೈಲ್ಯಾಂಡ್ನಿಂದ (Thailand) ಯುವತಿಯನ್ನು ಕರೆತಂದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.
ಇದನ್ನು ಓದಿ : Geaser ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಸ್ನಾನ ದೃಶ್ಯ ಸೆರೆ ಹಿಡಿದ ದುಷ್ಕರ್ಮಿ.!
ಕೆಎಸ್ಆರ್ಟಿಸಿ ನೌಕರಿ ತೊರೆದಿದ್ದ (KSRTC left the job) ಆರೋಪಿ, ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದನು.
ಅಲ್ಲದೇ ವೈಶ್ಯಾವಾಟಿಕೆಗಾಗಿ ಥೈಲ್ಯಾಂಡ್ನಿಂದ ಯುವತಿಯನ್ನು ಕರೆಸಿದ್ದನು ಎನ್ನಲಾಗಿದೆ.
ಇದನ್ನು ಓದಿ : ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1,036 ವಿವಿಧ ಹುದ್ದೆಗೆ ನೇರ ನೇಮಕಾತಿ.!
ವೇಶ್ಯಾವಾಟಿಕೆ ದಂಧೆ ಕುರಿತು ಮಾಹಿತಿ ತಿಳಿದ ಸರಸ್ವತಿಪುರಂ ಠಾಣೆ ಪೊಲೀಸರು, ಶನಿವಾರ ಹೊಟೇಲ್ ಮೇಲೆ ದಾಳಿ ನಡೆಸಿದರು.
ಈ ವೇಳೆ ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಆರೋಪಿ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ.
ಹಿಂದಿನ ಸುದ್ದಿ : ವಿಚ್ಛೇದನದ ಕೇಸ್ ನಲ್ಲಿ ಪುರುಷರು ಸಹ ಸಂತ್ರಸ್ತರು : ಹೈಕೋರ್ಟ್.
ಜನಸ್ಪಂದನ ನ್ಯೂಸ್, ಬೆಂಗಳೂರು : ಇತ್ತೀಚೆಗೆ ವೈವಾಹಿಕ ವಿವಾದಗಳ ಪ್ರಕರಣಗಳಲ್ಲಿ (A case of matrimonial disputes) ಮಹಿಳೆಯರು ಹೆಚ್ಚಾಗಿ ಬಲಿಪಶುಗಳಾಗಿದ್ದರೂ, ಅಂತಹ ಪ್ರಕರಣಗಳಲ್ಲಿ ಪುರುಷರು ಸಹ ಸಂತ್ರಸ್ತರು. ಹೀಗಾಗಿ ಲಿಂಗ ಸಮಾನತೆಯ ಸಮಾಜ ಈಗಿನ ಅಗತ್ಯವಾಗಿದೆ (A gender egalitarian society is the need of the hour) ಎಂದು ಕರ್ನಾಟಕ High court ಅಭಿಪ್ರಾಯಪಟ್ಟಿದೆ.
ಇದನ್ನು ಓದಿ : ಬಸ್ನಿಂದ ತಲೆ ಹೊರಹಾಕಿದ ಮಹಿಳೆ ; Lorry ಡಿಕ್ಕಿಯಾಗಿ ದೇಹದಿಂದ ಬೇರ್ಪಟ್ಟ ರುಂಡ.!
ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರು ಹೊರಡಿಸಿದ ಆದೇಶದಲ್ಲಿ ಈ ಬಗ್ಗೆ ತಿಳಿಸಲಾಗಿದೆ.
ಮಹಿಳೆಯೊಬ್ಬರು ತಮ್ಮ Divorce ಕುರಿತು ತಾವು ಹಾಜರಾಗಬೇಕಿರುವ ಕೋರ್ಟ್ ತಮ್ಮ ಮನೆಯಿಂದ 130 ಕಿಲೋಮೀಟರ್ ದೂರದಲ್ಲಿದೆ.
ಇದನ್ನು ಓದಿ : ಒಂದು ತಿಂಗಳು Tea ಕುಡಿಯುವುದನ್ನು ಬಿಡಬೇಕು ಅಂತ ಅನ್ಕೊಂಡಿದ್ದೀರಾ.? ಅದಕ್ಕೂ ಮುಂಚೆ ಈ ಸುದ್ದಿ ಓದಿ.
ಹೀಗಾಗಿ ಪ್ರತಿ ಸಲವೂ ವಿಚಾರಣೆಗೆ ಹಾಜರಾಗಲು ಕಷ್ಟವಾಗುತ್ತಿದೆ ಎಂದು ವರ್ಗಾವಣೆ ಅರ್ಜಿಯನ್ನು (Transfer application) ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ (Dismissed).
ಮಹಿಳೆ ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ಪ್ರಕರಣದಲ್ಲಿ ಪ್ರತಿವಾದಿ ಆಕೆಯ ಪತಿ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿದರೆ, ಪತಿಗೆ ಇನ್ನಷ್ಟು ತೊಂದರೆಯಾಗುತ್ತೆ ಎಂದು ವಾದಿಸಿದ್ದು, ಇದನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ.
ಇದನ್ನು ಓದಿ : ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ Spa and Beauty parlour ಮೇಲೆ ಪೊಲೀಸರ ದಾಳಿ.!
ಮಹಿಳೆಗೆ ಪುರುಷನಂತೆಯೇ ಸಮಾನ ಹಕ್ಕುಗಳಿವೆ. ವಾಸ್ತವವಾಗಿ, ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯರು ಪ್ರಾಥಮಿಕ ಬಲಿಪಶುಗಳು. ಆದರೆ ಪುರುಷರು ಸ್ತ್ರೀಯರ ಕ್ರೌರ್ಯದಿಂದ ಪ್ರಭಾವಿತರಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.
ಆದ್ದರಿಂದ, ಲಿಂಗ ಸಮಾನ ಸಮಾಜದ ಅವಶ್ಯಕತೆ ಇದೆ. ಆ ರೀತಿಯ ಸಮಾಜ ಲಿಂಗ ಅಥವಾ ಲಿಂಗದ ಆಧಾರದ ಮೇಲೆ ಕರ್ತವ್ಯಗಳನ್ನು ಬೇರ್ಪಡಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಹೈಕೋರ್ಟ್ ತಿಳಿಸಿದೆ.