ಜನಸ್ಪಂದನ ನ್ಯೂಸ್, ಬೆಂಗಳೂರು : ಪ್ರಸಿದ್ದ ರಾಜಕಾರಣಿ ಹಾಗೂ ತಿರುಪತಿ ಜನಸೇನಾ ಪಕ್ಷದ ಉಸ್ತುವಾರಿ (In charge of Tirupati Janasena Party) ಕಿರಣ್ ರಾಯಲ್ ಅವರದ್ದು ಎನ್ನಲಾದ ಖಾಸಗಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಹಿಳೆಯೊಬ್ಬಳು ಕೆಲ ದಿನಗಳ ಹಿಂದೆ 1 ಕೋಟಿ ರೂ. ಗಿಂತ ಹೆಚ್ಚು ನಗದು ಮತ್ತು 25 ಪವನ್ ಚಿನ್ನವನ್ನು (gold and money) ತೆಗೆದುಕೊಂಡು ವಂಚಿಸಿದ್ದಾರೆ. ಹೀಗಾಗಿ ನಾನು ಸೂಸೈಡ್ ಮಾಡಿಕೊಳ್ಳುತ್ತೇನೆ ಎಂದು ಕಿರಣ್ ರಾಯಲ್ ವಿರುದ್ಧ ಆರೋಪಿಸಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದರು.
ಇದನ್ನು ಓದಿ : ಬಿಟ್ಟು ಹೋದ Wife ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾದ ಪತಿ ; ಏನು ಮಾಡಿದ ಗೊತ್ತಾ.?
ಈ ಬೆಳವಣಿಗೆಯ ಬಳಿಕ ಇದೀಗ ಮತ್ತೊಂದು ವಿಡಿಯೋ ಬಯಲಿಗೆ ಬಂದಿದೆ. ಮಹಿಳೆಯ ಜೊತೆ ನಿಕಟವಾಗಿರುವ (Being intimate with a woman) ಜನಸೇನಾ ಉಸ್ತುವಾರಿ ಕಿರಣ್ ರಾಯಲ್ ಅವರದ್ದು ಎನ್ನಲಾದ ವಿಡಿಯೋ ವೈರಲ್ ಆಗಿದೆ.
ಅಲ್ಲದೇ ಮಹಿಳೆಗೆ ಮೋಸ ಮಾಡಿದ ಕಿರಣ್ ಅವರನ್ನು ಕೂಡಲೇ ಅರೆಸ್ಟ್ ಮಾಡಬೇಕೆಂದು ಒತ್ತಾಯ ಕೇಳಿ ಬರುತ್ತಿವೆ. ಈ ಬಗ್ಗೆ ಪವನ್ ಕಲ್ಯಾಣ್ ಏಕೆ ಮಾತನಾಡುತ್ತಿಲ್ಲ ಎಂದು ಮಹಿಳಾ ಸಂಘಟನೆಗಳು (Women’s organizations) ಆಕ್ರೋಶ ವ್ಯಕ್ತಪಡಿಸಿವೆ ಎಂದು ವರದಿಯಿಂದ ತಿಳಿದು ಬಂದಿದೆ.
ಇದನ್ನು ಓದಿ : Free ಸಿಗರೇಟ್ಗಾಗಿ ಲಾಂಗ್ ತೋರಿಸಿದ ವ್ಯಕ್ತಿ ; ಮುಂದೆನಾಯ್ತು.? ಪೊಲೀಸರೇ ಹಂಚಿಕೊಂಡ ವಿಡಿಯೋ ನೋಡಿ.!
ಈ ಮಧ್ಯೆ ರಾಜಕೀಯ ಪ್ರತಿನಿಧಿಯಾಗಿ ಅನರ್ಹ ವ್ಯಕ್ತಿಯಾಗಿರುವ ಕಿರಣ್ ರಾಯಲ್ ನೀಚ ಎಂದು YSRCP ಪಕ್ಷದ ಮಹಿಳಾ ನಾಯಕರು ಕಿಡಿಕಾರುತ್ತಿದ್ದಾರೆ. ತನ್ನ ಮ್ಯಾಜಿಕ್ ಮಾತುಗಳಿಂದ ಮಹಿಳೆಯರನ್ನು ಯಾಮಾರಿಸಿ ಮೋಸ ಮಾಡುತ್ತಿದ್ದಾನೆ. ತಕ್ಷಣವೇ ಜನಸೇನಾದಿಂದ ಆತನನ್ನು ಹೊರಹಾಕಬೇಕು ಎಂದು ಒತ್ತಾಯಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.
ವಿಡಿಯೋ ಇಲ್ಲಿದೆ :
Not sure, is it Kiran Royal 🙄
(JanaSena Party leader who is part of the NDA Alliance in #AndhraPradesh) #ViralVideos pic.twitter.com/4FmLMCi0vX https://t.co/bsox2yKLNZ
— Yeswanth K Reddy (@yeswanth86) February 9, 2025
ಹಿಂದಿನ ಸುದ್ದಿ : Health : ಕುಂಬಳಕಾಯಿ ಬೀಜದಿಂದ ನಿವಾರಣೆಯಾಗುತ್ತೆ ಈ ಸಮಸ್ಯೆಗಳು.!
ಜನಸ್ಪಂದನ ನ್ಯೂಸ್, ಆರೋಗ್ಯ : ಭಾರತದಲ್ಲಿ ತರಕಾರಿಗಳಲ್ಲಿ ಪ್ರಸಿದ್ಧಿ ಪಡೆದ ಒಂದು ವಿಶಿಷ್ಠವಾದ ತರಕಾರಿ ಎಂದರೆ ಅದು ಕುಂಬಳಕಾಯಿ (Pumpkin). ವಿಶೇಷವಾಗಿ ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಉತ್ಪಾದನೆ ಮಾಡಲಾಗುತ್ತದೆ.
ಕುಂಬಳಕಾಯಿ ಬಳಸಿ ಅಡುಗೆ ಮಾಡುವಾಗ ಬಹಳಷ್ಟು ಜನರು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ವಿಶ್ವದ 100 ಅತ್ಯಂತ ಶಕ್ತಿಶಾಲಿ ಆಹಾರಗಳ ಪಟ್ಟಿಯಲ್ಲಿ ಕುಂಬಳಕಾಯಿ ಬೀಜ ಆರನೇ ಸ್ಥಾನವನ್ನು ಪಡೆದಿದೆ.
ಇದನ್ನು ಓದಿ : ಬೆಳಗಾವಿ : ಅನೈತಿಕ ಸಂಬಂಧಕ್ಕೆ ಅಡ್ಡಿ ; Lover ಜೊತೆ ಸೇರಿ ಗಂಡನನ್ನು ಕೊಂದು ನದಿಗೆ ಎಸೆದ ಪತ್ನಿ.!
ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ಕುಂಬಳಕಾಯಿ ಬೀಜಗಳು ಪೌಷ್ಠಿಕಾಂಶದ ವಿಷಯದಲ್ಲಿ ಮೀನಿಗಿಂತಲೂ ಹೆಚ್ಚು ಶಕ್ತಿಯುತವಾಗಿವೆ.
* ರಂಜಕ, ಮೆಗ್ನೀಸಿಯಮ್ ಮತ್ತು ಸತುವನ್ನು (phosphorus, Magnesium and zinc) ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಕುಂಬಳಕಾಯಿ ಬೀಜಗಳು, ಮೂಳೆ ಸಾಂದ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಆಸ್ಟಿಯೊಪೊರೋಸಿಸ್ ಅನ್ನು ತಡೆಯಲು ಸಹಾಯಕವಾಗಿವೆ.
ಇದನ್ನು ಓದಿ : ಕುಡಿದ ನಶೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಕುಡುಕರಿಂದ ಹಲ್ಲೆ ; ಮುಂದೆನಾಯ್ತು.? ಈ Video ನೋಡಿ.!
* ಇದರಲ್ಲಿರುವ ಫೈಬರ್ ಮತ್ತು ಪ್ರೋಟೀನ್ ಹಸಿವು ಮತ್ತು ತೂಕವನ್ನು ನಿಯಂತ್ರಿಸುತ್ತದೆ (Controls hungry and weight). ಇನ್ನೂ 100 ಗ್ರಾಂ ಕುಂಬಳಕಾಯಿ ಬೀಜಗಳು ಕೇವಲ 164 ಕ್ಯಾಲೊರಿಗಳನ್ನು ಹೊಂದಿವೆ (100 grams of pumpkin seeds has only 164 calories) ಎಂದು ವರದಿಗಳು ತಿಳಿಸಿವೆ.
* ಕುಂಬಳಕಾಯಿ ಬೀಜಗಳಲ್ಲಿನ ಫೈಟೊಕೆಮಿಕಲ್ ಸಂಯುಕ್ತಗಳು (Phytochemical compounds) ಕೂದಲು ಉದುರುವಿಕೆಗೆ ಕಾರಣವಾಗುವ ಹಾರ್ಮೋನ್ ಡೈಹೈಡ್ರೊಟೆಸ್ಟೊಸ್ಟೆರಾನ್ (ಡಿಎಚ್ ಟಿ) ಉತ್ಪಾದನೆಯನ್ನು ತಡೆಗಟ್ಟಲು ಸಹಾಯ ಮಾಡುತ್ತವೆ. ಇದರಿಂದಾಗಿ ಕೂದಲು ಉದುರುವ ಸಮಸ್ಯೆ ಕ್ರಮೇಣವಾಗಿ ಕಡಿಮೆಯಾಗುವುದು.
ಇದನ್ನು ಓದಿ : ಕುಡಿದ ನಶೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಕುಡುಕರಿಂದ ಹಲ್ಲೆ ; ಮುಂದೆನಾಯ್ತು.? ಈ Video ನೋಡಿ.!
ಕುಂಬಳಕಾಯಿ ಬೀಜಗಳಲ್ಲಿನ ಡಿಎಚ್ ಟಿ ಮಟ್ಟವನ್ನು ಕಡಿಮೆ ಮಾಡಿ ಕೂದಲು ಉದುರುವಿಕೆ ನಿಧಾನಗೊಳಿಸಿ, ಇರುವ ಕೂದಲನ್ನು ಸಂರಕ್ಷಿಸಲು (To preserve existing hair) ಸಹಾಯ ಮಾಡುತ್ತದೆ.
* ಈ ಬೀಜಗಳಲ್ಲಿ ಇರುವ ಸತುವು ದೇಹವನ್ನು ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯ ನೀಡುತ್ತದೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು (The immune system) ಬಲಪಡಿಸುತ್ತದೆ.
ಇದನ್ನು ಓದಿ : ಮಹಾಕುಂಭ ಮೇಳಕ್ಕೆ ಹೋಗಿದ್ದ Belagavi ನಾಲ್ವರು ಸೇರಿ ಆರು ಜನ ರಸ್ತೆ ಅಪಘಾತದಲ್ಲಿ ಸಾವು.!
* ಇದರಲ್ಲಿರುವ ಕ್ಯಾರೊಟಿನಾಯ್ಡ್ಗಳು ಮತ್ತು ಆಂಟಿಆಕ್ಸಿಡೆಂಟ್ಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್ಗಳ ವಿರುದ್ಧ ಕೆಲಸ (Work against free radicals) ಮಾಡುತ್ತವೆ.
* ಹೃದಯದ ಲಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ.
* ಒಮೆಗಾ -3 ಮತ್ತು ಒಮೆಗಾ -6 ಕೊಬ್ಬಿನಾಮ್ಲಗಳು ಕೆಟ್ಟ ಕೊಲೆಸ್ಟ್ರಾಲ್ (LDL), ಉರಿಯೂತವನ್ನು ಕಡಿಮೆ ಮಾಡುತ್ತವೆ.
ಇದನ್ನು ಓದಿ : ನೀವೂ ಎಂದಾದರೂ ಭೂಮಿ ತಿರುಗುವುದನ್ನು ನೋಡಿದ್ದೀರಾ.? ಇಲ್ವಾ, ಹಾಗಾದರೆ ಈ Vedio ನೋಡಿ.!
* ವಿಟಮಿನ್ ಇ ಹೊಂದಿರುವುದರಿಂದ ಉರಿಯೂತವನ್ನು ಕಡಿಮೆ ಮಾಡುವ ಗುಣ (Anti- inflammatory properties) ಹೊಂದಿದೆ.
* ಕುಂಬಳಕಾಯಿ ಬೀಜವು ಕಬ್ಬಿಣ, ಸೆಲೆನಿಯಂ, ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳಿಂದ (Antioxidant) ಸಮೃದ್ಧವಾಗಿದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಉತ್ತಮವಾಗಿವೆ.
* ಈ ಬೀಜಗಳ ನಿಯಮಿತ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ.
ಇದನ್ನು ಓದಿ : ಮೊದಲ ಗಂಡನಿಂದ ಡಿವೋರ್ಸ್ ಪಡೆಯದಿದ್ದರೂ 2ನೇ ಪತಿಯಿಂದ ಹೆಂಡತಿ ಜೀವನಾಂಶ ಪಡೆಯಬಹುದು : ಸುಪ್ರೀಂ ಕೋರ್ಟ್
* ಕುಂಬಳಕಾಯಿ ಬೀಜಗಳು ಇನ್ಸುಲಿನ್ ಅನ್ನು ಸುಧಾರಿಸಿ, ಮಧುಮೇಹದಿಂದಾಗುವ ತೊಂದರೆಗಳನ್ನು ತಡೆಯುತ್ತವೆ (Improve insulin, prevent complications of diabetes).
* ನ್ಯೂಟ್ರಿಷನ್ ರಿಸರ್ಚ್ ನಡೆಸಿದ ಅಧ್ಯಯನದ ಪ್ರಕಾರ, ಕುಂಬಳಕಾಯಿ ಬೀಜಗಳನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಂಡಿದ್ದ ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿಕೊಂಡಿದ್ದಾರೆ (Lower sugar levels) ಎನ್ನಲಾಗಿದೆ.
ಇದನ್ನು ಓದಿ : ಪತಿಗೆ ‘ಹೆತ್ತವರನ್ನು ಬಿಟ್ಟು ನನ್ನ ಜೊತೆ ವಾಸಿಸು’ ಎಂದು ಹೇಳುವುದು ಕ್ರೌರ್ಯಕ್ಕೆ ಸಮ : Highcourt
* ಕುಂಬಳಕಾಯಿ ಬೀಜಗಳು ಕಬ್ಬಿಣ ಮತ್ತು ಮ್ಯಾಂಗನೀಸ್ನ ಮೂಲವಾಗಿವೆ. ಕಬ್ಬಿಣವು ದೇಹದಲ್ಲಿನ ರಕ್ತಹೀನತೆಯನ್ನು (Anemia) ತೆಗೆದು ಹಾಕುವಲ್ಲಿ ಸಹಾಯ ಮಾಡುತ್ತದೆ. ಇನ್ನೂ ಮ್ಯಾಂಗನೀಸ್ ದೇಹ ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಕುಂಬಳಕಾಯಿ ಬೀಜಗಳು ಕ್ಯಾನ್ಸರ್ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು (positive effects) ಬೀರುತ್ತವೆ ಎಂಬ ಅಂಶವನ್ನು ಅಧ್ಯಯನಗಳು ಕಂಡು ಹಿಡಿದಿವೆ.