ಜನಸ್ಪಂದನ ನ್ಯೂಸ್, ಧಾರವಾಡ : ಧಾರವಾಡ ಪೊಲೀಸರು, ಪೊಕ್ಸೋ (POCSO) ಪ್ರಕರಣದ ಆರೋಪಿಯನ್ನು ಸೆರೆಹಿಡಿಯಲು ನ್ಯಾಯಾಧೀಶರ ಪಾತ್ರ ಸೃಷ್ಟಿಸಿ (Create the character of the judge), ಸಿನಿಮೀಯ ರೀತಿಯಲ್ಲಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ಘಟನೆ ನಡೆದಿದೆ.
ಘಟನೆಯ ವಿವರ :
2021ರಲ್ಲಿ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಧಾರವಾಡದ ಬಡಾವಣೆಯೊಂದರ ನಿವಾಸಿಯಾಗಿರುವ ವಿಜಯ ಎಂಬಾತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು.
ಇದನ್ನು ಓದಿ : ದೇಶದಲ್ಲಿ ಪ್ರತಿವರ್ಷ ಎರಡು Million ಜನರ ಸಾವಿಗೆ ಕಾರಣವಾಯ್ತು ಈ ಎಣ್ಣೆ.!
ಆರೋಪಿ ವಿಜಯ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ನಿಂದ ಬಂಧನ ವಾರಂಟ್ (arrest warrant) ಜಾರಿಯಾಗಿತ್ತು. ಇಂದು (ಫೆ. 09) ಪೊಲೀಸರು ವಿಜಯನನ್ನು ಅರೆಸ್ಟ್ ಮಾಡಿ ಜಡ್ಜ್ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ಆರೋಪಿ ವಿಜಯ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆರೋಪಿ ವಿಜಯ್ನನ್ನು ಪೊಲೀಸರು ಜೈಲಿಗೆ ಕರೆದುಕೊಂಡು ಹೊರಟಿದ್ದರು.
ಆದರೆ ವಿಜಯ್ ಪೊಲೀಸರಿಂದ ತಪ್ಪಿಸಿಕೊಂಡು ಕಟ್ಟಡದ ಮೇಲೇರಿದ್ದಾನೆ. ನಂತರ ನ್ಯಾಯಾಧೀಶರು ಕೂಡಲೇ ಇಲ್ಲಿಗೆ ಬರಬೇಕು, ಇಲ್ಲದಿದ್ದರೆ ಸೂಸೈಡ್ ಮಾಡಿಕೊಳ್ತೇನೆ ಎಂದು ಬೆದರಿಸಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು (Dharwad SubCity Police Station) ಬಂದಿದ್ದಾರೆ.
ಇದನ್ನು ಓದಿ : ರೂಮ್ನಲ್ಲಿ ಮಹಿಳೆಯ ಜೊತೆ ಖ್ಯಾತ ರಾಜಕಾರಣಿ ; ವಿಡಿಯೋ Viral.!
ಆರೋಪಿ ವಿಜಯ್ ಹುಚ್ಚಾಟವನ್ನು ನೋಡಲು ಸ್ಥಳಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಉಪನ್ಯಾಸಕ ಡಾ. ವಿಶ್ವನಾಥ್ ಚಿಂತಾಮಣಿ (Karnataka University Lecturer Dr. Vishwanath Chintamani) ಬಂದಿದ್ದರು. ಈ ವೇಳೆ ಪೊಲೀಸರು ಖತರ್ನಾಕ ಐಡಿಯಾ ಮಾಡಿ ಜಡ್ಜ್ ಪಾತ್ರವನ್ನು ಸೃಷ್ಟಿಸಿದರು.
ಉಪನ್ಯಾಸಕ ವಿಶ್ವನಾಥ್ ಚಿಂತಾಮಣಿ ಅವರಿಗೆ ಕಪ್ಪು ಕೋಟ್ ಧರಿಸಲು ತಿಳಿಸಿ ಕರೆದುಕೊಂಡು ಬಂದಿದ್ದಾರೆ. ಬಳಿಕ, ಉಪನ್ಯಾಸಕ ವಿಶ್ವನಾಥ್ ಚಿಂತಾಮಣಿ ಅವರೇ ನ್ಯಾಯಾಧೀಶ ಎಂದು ಆರೋಪಿ ವಿಜಯ್ಗೆ ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ : ಬಿಟ್ಟು ಹೋದ Wife ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾದ ಪತಿ ; ಏನು ಮಾಡಿದ ಗೊತ್ತಾ.?
ಪೊಲೀಸರು ಅಂದುಕೊಂಡಂತೆ ವಿಶ್ವನಾಥ್ ಚಿಂತಾಮಣಿ ಅವರು ಕೂಡ ಡ್ರಾಮಾ ಮಾಡಿದ್ದಾರೆ. ಉಪನ್ಯಾಸಕರ ನಟನೆಯನ್ನು ನಂಬಿ, ಆರೋಪಿ ವಿಜಯ್ ಅವರೊಂದಿಗೆ ಮಾತನಾಡಲು ಆರಂಭಿಸಿದನು.
ಈ ವೇಳೆ ಉಪನ್ಯಾಸಕ ವಿಶ್ವನಾಥ್ ಚಿಂತಾಮಣಿ ನೈಸ್ ಆಗಿ ಮಾತನಾಡಿ ಆರೋಪಿ ವಿಜಯ್ನನ್ನು ಕಟ್ಟಡದಿಂದ ಕೆಳಗೆ ಇಳಿಸಿದರು. ಕೂಡಲೇ, ಪೊಲೀಸರು ಆರೋಪಿಯನ್ನು ಬಂಧಿಸಿ, ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ತೆರಳಿದರು ಎಂದು ತಿಳಿದು ಬಂದಿದೆ.
ಹಿಂದಿನ ಸುದ್ದಿ : Health : ಕುಂಬಳಕಾಯಿ ಬೀಜದಿಂದ ನಿವಾರಣೆಯಾಗುತ್ತೆ ಈ ಸಮಸ್ಯೆಗಳು.!
ಜನಸ್ಪಂದನ ನ್ಯೂಸ್, ಆರೋಗ್ಯ : ಭಾರತದಲ್ಲಿ ತರಕಾರಿಗಳಲ್ಲಿ ಪ್ರಸಿದ್ಧಿ ಪಡೆದ ಒಂದು ವಿಶಿಷ್ಠವಾದ ತರಕಾರಿ ಎಂದರೆ ಅದು ಕುಂಬಳಕಾಯಿ (Pumpkin). ವಿಶೇಷವಾಗಿ ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಉತ್ಪಾದನೆ ಮಾಡಲಾಗುತ್ತದೆ.
ಇದನ್ನು ಓದಿ : Free ಸಿಗರೇಟ್ಗಾಗಿ ಲಾಂಗ್ ತೋರಿಸಿದ ವ್ಯಕ್ತಿ ; ಮುಂದೆನಾಯ್ತು.? ಪೊಲೀಸರೇ ಹಂಚಿಕೊಂಡ ವಿಡಿಯೋ ನೋಡಿ.!
ಕುಂಬಳಕಾಯಿ ಬಳಸಿ ಅಡುಗೆ ಮಾಡುವಾಗ ಬಹಳಷ್ಟು ಜನರು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ವಿಶ್ವದ 100 ಅತ್ಯಂತ ಶಕ್ತಿಶಾಲಿ ಆಹಾರಗಳ ಪಟ್ಟಿಯಲ್ಲಿ ಕುಂಬಳಕಾಯಿ ಬೀಜ ಆರನೇ ಸ್ಥಾನವನ್ನು ಪಡೆದಿದೆ.
ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ಕುಂಬಳಕಾಯಿ ಬೀಜಗಳು ಪೌಷ್ಠಿಕಾಂಶದ ವಿಷಯದಲ್ಲಿ ಮೀನಿಗಿಂತಲೂ ಹೆಚ್ಚು ಶಕ್ತಿಯುತವಾಗಿವೆ.
ಇದನ್ನು ಓದಿ : ಬೆಳಗಾವಿ : ಅನೈತಿಕ ಸಂಬಂಧಕ್ಕೆ ಅಡ್ಡಿ ; Lover ಜೊತೆ ಸೇರಿ ಗಂಡನನ್ನು ಕೊಂದು ನದಿಗೆ ಎಸೆದ ಪತ್ನಿ.!
* ರಂಜಕ, ಮೆಗ್ನೀಸಿಯಮ್ ಮತ್ತು ಸತುವನ್ನು (phosphorus, Magnesium and zinc) ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಕುಂಬಳಕಾಯಿ ಬೀಜಗಳು, ಮೂಳೆ ಸಾಂದ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಆಸ್ಟಿಯೊಪೊರೋಸಿಸ್ ಅನ್ನು ತಡೆಯಲು ಸಹಾಯಕವಾಗಿವೆ.
* ಇದರಲ್ಲಿರುವ ಫೈಬರ್ ಮತ್ತು ಪ್ರೋಟೀನ್ ಹಸಿವು ಮತ್ತು ತೂಕವನ್ನು ನಿಯಂತ್ರಿಸುತ್ತದೆ (Controls hungry and weight). ಇನ್ನೂ 100 ಗ್ರಾಂ ಕುಂಬಳಕಾಯಿ ಬೀಜಗಳು ಕೇವಲ 164 ಕ್ಯಾಲೊರಿಗಳನ್ನು ಹೊಂದಿವೆ (100 grams of pumpkin seeds has only 164 calories) ಎಂದು ವರದಿಗಳು ತಿಳಿಸಿವೆ.
ಇದನ್ನು ಓದಿ : ಕುಡಿದ ನಶೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಕುಡುಕರಿಂದ ಹಲ್ಲೆ ; ಮುಂದೆನಾಯ್ತು.? ಈ Video ನೋಡಿ.!
* ಕುಂಬಳಕಾಯಿ ಬೀಜಗಳಲ್ಲಿನ ಫೈಟೊಕೆಮಿಕಲ್ ಸಂಯುಕ್ತಗಳು (Phytochemical compounds) ಕೂದಲು ಉದುರುವಿಕೆಗೆ ಕಾರಣವಾಗುವ ಹಾರ್ಮೋನ್ ಡೈಹೈಡ್ರೊಟೆಸ್ಟೊಸ್ಟೆರಾನ್ (ಡಿಎಚ್ ಟಿ) ಉತ್ಪಾದನೆಯನ್ನು ತಡೆಗಟ್ಟಲು ಸಹಾಯ ಮಾಡುತ್ತವೆ. ಇದರಿಂದಾಗಿ ಕೂದಲು ಉದುರುವ ಸಮಸ್ಯೆ ಕ್ರಮೇಣವಾಗಿ ಕಡಿಮೆಯಾಗುವುದು.
ಕುಂಬಳಕಾಯಿ ಬೀಜಗಳಲ್ಲಿನ ಡಿಎಚ್ ಟಿ ಮಟ್ಟವನ್ನು ಕಡಿಮೆ ಮಾಡಿ ಕೂದಲು ಉದುರುವಿಕೆ ನಿಧಾನಗೊಳಿಸಿ, ಇರುವ ಕೂದಲನ್ನು ಸಂರಕ್ಷಿಸಲು (To preserve existing hair) ಸಹಾಯ ಮಾಡುತ್ತದೆ.
ಇದನ್ನು ಓದಿ : ಮಹಾ ಕುಂಭ ಮೇಳಕ್ಕೆ ಹೋಗಿದ್ದ Belagavi ನಾಲ್ವರು ಸೇರಿ ಆರು ಜನ ರಸ್ತೆ ಅಪಘಾತದಲ್ಲಿ ಸಾವು.!
* ಈ ಬೀಜಗಳಲ್ಲಿ ಇರುವ ಸತುವು ದೇಹವನ್ನು ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯ ನೀಡುತ್ತದೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು (The immune system) ಬಲಪಡಿಸುತ್ತದೆ.
* ಇದರಲ್ಲಿರುವ ಕ್ಯಾರೊಟಿನಾಯ್ಡ್ಗಳು ಮತ್ತು ಆಂಟಿಆಕ್ಸಿಡೆಂಟ್ಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್ಗಳ ವಿರುದ್ಧ ಕೆಲಸ (Work against free radicals) ಮಾಡುತ್ತವೆ.
* ಹೃದಯದ ಲಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ.
ಇದನ್ನು ಓದಿ : Prayagraj ಕಾಲ್ತುಳಿದಲ್ಲಿ ಮೃತಪಟ್ಟ ತಾಯಿ -ತಂಗಿಯ ಆಭರಣ ಸುರಕ್ಷಿತವಾಗಿ ಮನೆಗೆ : ಸಹೋದರ.!
* ಒಮೆಗಾ -3 ಮತ್ತು ಒಮೆಗಾ -6 ಕೊಬ್ಬಿನಾಮ್ಲಗಳು ಕೆಟ್ಟ ಕೊಲೆಸ್ಟ್ರಾಲ್ (LDL), ಉರಿಯೂತವನ್ನು ಕಡಿಮೆ ಮಾಡುತ್ತವೆ.
* ವಿಟಮಿನ್ ಇ ಹೊಂದಿರುವುದರಿಂದ ಉರಿಯೂತವನ್ನು ಕಡಿಮೆ ಮಾಡುವ ಗುಣ (Anti- inflammatory properties) ಹೊಂದಿದೆ.
* ಕುಂಬಳಕಾಯಿ ಬೀಜವು ಕಬ್ಬಿಣ, ಸೆಲೆನಿಯಂ, ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳಿಂದ (Antioxidant) ಸಮೃದ್ಧವಾಗಿದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಉತ್ತಮವಾಗಿವೆ.
ಇದನ್ನು ಓದಿ : ಮೊದಲ ಗಂಡನಿಂದ ಡಿವೋರ್ಸ್ ಪಡೆಯದಿದ್ದರೂ 2ನೇ ಪತಿಯಿಂದ ಹೆಂಡತಿ ಜೀವನಾಂಶ ಪಡೆಯಬಹುದು : ಸುಪ್ರೀಂ ಕೋರ್ಟ್
* ಈ ಬೀಜಗಳ ನಿಯಮಿತ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ.
* ಕುಂಬಳಕಾಯಿ ಬೀಜಗಳು ಇನ್ಸುಲಿನ್ ಅನ್ನು ಸುಧಾರಿಸಿ, ಮಧುಮೇಹದಿಂದಾಗುವ ತೊಂದರೆಗಳನ್ನು ತಡೆಯುತ್ತವೆ (Improve insulin, prevent complications of diabetes).
* ನ್ಯೂಟ್ರಿಷನ್ ರಿಸರ್ಚ್ ನಡೆಸಿದ ಅಧ್ಯಯನದ ಪ್ರಕಾರ, ಕುಂಬಳಕಾಯಿ ಬೀಜಗಳನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಂಡಿದ್ದ ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿಕೊಂಡಿದ್ದಾರೆ (Lower sugar levels) ಎನ್ನಲಾಗಿದೆ.
ಇದನ್ನು ಓದಿ : ಸಸ್ಪೆಂಡ್ ಮಾಡಿದ ಹಿರಿಯ ಅಧಿಕಾರಿಯ ಕಚೇರಿ ಮುಂದೆಯೇ Tea Shop ಇಟ್ಟ ಇನ್ಸ್ಪೆಕ್ಟರ್ ; ವಿಡಿಯೋ ವೈರಲ್.!
* ಕುಂಬಳಕಾಯಿ ಬೀಜಗಳು ಕಬ್ಬಿಣ ಮತ್ತು ಮ್ಯಾಂಗನೀಸ್ನ ಮೂಲವಾಗಿವೆ. ಕಬ್ಬಿಣವು ದೇಹದಲ್ಲಿನ ರಕ್ತಹೀನತೆಯನ್ನು (Anemia) ತೆಗೆದು ಹಾಕುವಲ್ಲಿ ಸಹಾಯ ಮಾಡುತ್ತದೆ. ಇನ್ನೂ ಮ್ಯಾಂಗನೀಸ್ ದೇಹ ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಕುಂಬಳಕಾಯಿ ಬೀಜಗಳು ಕ್ಯಾನ್ಸರ್ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು (positive effects) ಬೀರುತ್ತವೆ ಎಂಬ ಅಂಶವನ್ನು ಅಧ್ಯಯನಗಳು ಕಂಡು ಹಿಡಿದಿವೆ.