Wednesday, March 12, 2025
HomeNewsತನಿಷ್ಕ್ ಜ್ಯುವೆಲ್ಲರ್ಸ್​ ಶೋರೂಮ್​ಗೆ ನುಗ್ಗಿ 25 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ ; ವಿಡಿಯೋ...
spot_img
spot_img
spot_img
spot_img
spot_img

ತನಿಷ್ಕ್ ಜ್ಯುವೆಲ್ಲರ್ಸ್​ ಶೋರೂಮ್​ಗೆ ನುಗ್ಗಿ 25 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ ; ವಿಡಿಯೋ ನೋಡಿ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಅಂದಾಜು 25 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿರುವ ಘಟನೆ ಬಿಹಾರದ ಆರ್ರಾ ಪ್ರದೇಶದಲ್ಲಿ ನಡೆದಿದೆ.

ಇಂದು ಸೋಮವಾರ (ಮಾ.10) ಬಿಹಾರದ ಆರ್ರಾ ಪ್ರದೇಶದಲ್ಲಿರುವ ತನಿಷ್ಕ್ ಜ್ಯುವೆಲ್ಲರ್ಸ್ ಶೋರೂಮ್​ನಲ್ಲಿ ಅಂದಾಜು 25 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ಹಣ ದೋಚ್ಚಿ ಪರಾರಿಯಾಗಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಇದನ್ನು ಓದಿ : ಬೇಸಿಗೆಯಲ್ಲಿ ಯಾವ Juice ಕುಡಿಯುವುದು ಆರೋಗ್ಯಕ್ಕೆ ಉತ್ತಮ ಗೊತ್ತಾ.?

ಘಟನೆಯ ಸಂಪೂರ್ಣ ದೃಶ್ಯ CCTV ಯಲ್ಲಿ ಸೆರೆಯಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಸದ್ಯ ಅರ್ರಾ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆ ಮುಂದರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನು ಓದಿ : 8 ಅಡಿ ಉದ್ದದ ಹಾವನ್ನು ಹಿಡಿದು ಹಗ್ಗದಂತೆ ಸ್ಕಿಪ್ಪಿಂಗ್ ಆಡಿದ ಮಕ್ಕಳು ; ವಿಡಿಯೋ ವೈರಲ್.!

ಚಿನ್ನಾಭರಣ, ಬಂಗಾರ ಸರಗಳು, ನೆಕ್ಲೇಸ್​ ಮತ್ತು ಕೆಲ ವಜ್ರಗಳು ಹಾಗೂ ನಗದು ಹಣ ಸೇರಿ ಬಾಳುವ ವಸ್ತುಗಳನ್ನು ದರೋಡೆಕೊರರು ದೋಚ್ಚಿ ಪರಾರಿಯಾಗಿದ್ದಾರೆಂದು ಶೋರೂಮ್​ ಮಾಲೀಕ ಕುಮಾರ್ ಮೃತ್ಯುಂಜಯ ಮಾಧ್ಯಮಗಳಿಗೆ ಹೇಳಿದ್ದಾರೆ.

ದರೋಡೆಕೋರರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೋರೂಮ್​ನ ಕರೆಗೆ ಪೊಲೀಸರು ಮೊದಲು ಸ್ಪಂದಿಸಲಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ : ಮೊಬೈಲ್‌ನಲ್ಲಿ ಮಾತನಾಡುತ್ತಾ ಮಗುವನ್ನ ಆಟೋದಲ್ಲೇ ಬಿಟ್ಟು ಹೋದ ತಾಯಿ ; ಚಾಲಕ ಮಾಡಿದ್ದೇನು.? ಈ ವಿಡಿಯೋ ನೋಡಿ.!

8 ರಿಂದ 9 ಶಸ್ತ್ರಾಸ್ತ್ರ ಇದ್ದ ಜನರಿರುವ ತಂಡ ಜ್ಯುವೆಲ್ಲರ್ಸ್ ಶೋರೂಮ್​ಗೆ ನುಗ್ಗಿ ಒಳಗೆ ಇದ್ದ ಸಿಬ್ಬಂದಿ ಮತ್ತು ಉದ್ಯೋಗಿಗಳಿಗೆ ಗನ್​ ತೋರಿಸಿ ಬೆದರಿಸುತ್ತಿರುವುದು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಯಲ್ಲಿ ಕಂಡುಬಂದಿದೆ.

ನಂತರ ದರೋಡೆಕೋರರು ಕೌಂಟರ್‌ (counter) ನಲ್ಲಿದ್ದ ನಗದು (cash) ಮತ್ತು ಹಲವಾರು ಆಭರಣಗಳನ್ನು ದೋಚಿರುವ ದೃಶ್ಯಗಳು CCTVಯಲ್ಲಿ ಸೆರೆಯಾಗಿವೆ.

ವಿಡಿಯೋ ನೋಡಿ :

ಹಿಂದಿನ ಸುದ್ದಿ : ಲಾರಿಗೆ ಗುದ್ದಿದ ಕಾರು : ಸ್ಥಳದಲ್ಲಿಯೇ ಐವರು ಸಾ*.!

ಜನಸ್ಪಂದನ ನ್ಯೂಸ್‌, ಚಿತ್ರದುರ್ಗ : ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರಾ ಗ್ರಾಮದ ಬಳಿ ನಡೆದಿದೆ.

ಇದನ್ನು ಓದಿ : ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು (ಮಾ.​ 09) ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟ ಕಾರಿನವರ ಗುರುತು ಪತ್ತೆಯಾಗಿಲ್ಲ.

ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರು ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಇದನ್ನು ಓದಿ : ಮಾಲೀಕ ತೀರಿಕೊಂಡಾಗ ಈ ನಾಯಿ ಅಳು ನೋಡಿದರೆ ನೀವೂ ಭಾವುಕರಾಗುತ್ತಿರಿ ; ನೋಡಿ ಹೃದಯಸ್ಪರ್ಶಿ Video.!

ಡಿಕ್ಕಿ ರಬ್ಬಸಕ್ಕೆ ಕಾರಿನಲ್ಲಿದ್ದ ಆರು ಜನರ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಈ ದುರ್ಘಟನೆಯಲ್ಲಿ ಸಾವಗೀಡಾದ ದುರ್ದೈವಿಗಳನ್ನು  ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50) ಎಂದು ಮೃತರ ಗುರುತು ಪತ್ತೆಯಾಗಿದೆ.

ಇದನ್ನು ಓದಿ : Airportನಲ್ಲಿ ಗುಂಡು ಹಾರಿಸಿಕೊಂಡು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆತ್ಮಹ*!

ಮೃತರಾದ ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ ಎಂದು ಹೇಳಲಾಗುತ್ತಿದ್ದು, ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!