ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಿತ್ತೂರು (Kittur) ತಾಲೂಕಿನ ತಿಮ್ಮಾಪುರ ಸಮೀಪ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿಯಾಗಿದ್ದು, 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯಿಂದ ಬೆಳಗಾವಿಗೆ (Hubli to Belagavi) ಬರುತ್ತಿದ್ದ ವೇಳೆ ಈ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ಬಸ್ ಅತಿ ವೇಗವಾಗಿ ಬರುತ್ತಿತ್ತು ಎನ್ನಲಾಗಿದೆ. ಈ ಬಸ್ ಅಪಘಾತಕ್ಕೀಡಾದ ಹಿನ್ನಲೆಯಲ್ಲಿ ಕೆಲ ಕಾಲ ಸಂಚಾರಕ್ಕೆ ಅಡ್ಡಿಯುಂಟಾಗಿತ್ತೆಂದು ತಿಳಿದು ಬಂದಿದೆ.
ಈ ಖಾಸಗಿ ಬಸ್ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ಕಿತ್ತೂರ ಸಮೀಪದ ತಿಮ್ಮಾಪುರ ಬಳಿ ಬ್ರೇಕ್ ಫೇಲ್ ಆಗಿ, ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿ ಸರ್ವೀಸ್ ರಸ್ತೆಗೆ ಬಂದು ಬಿದ್ದಿದೆ ಎಂದು ತಿಳಿದು ಬಂದಿದೆ.
ರೈಲು ಹತ್ತುವಾಗ ಜಾರಿ ಬಿದ್ದ ವ್ಯಕ್ತಿಯ ಜೀವ ಉಳಿಸಿದ ಪೊಲೀಸ್ : ವಿಡಿಯೋ Virul.!
ಬಸ್ನಲ್ಲಿದ್ದ 30 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ 10 ಮಂದಿಯ ಪರಿಸ್ಥಿತಿ ಗಂಭೀರವಾಗಿದೆ (Serious) ಎನ್ನಲಾಗಿದೆ. ಗಾಯಾಳುಗಳನ್ನು ಬಸ್ಸಿನ ಹಿಂದಿನ ಗಾಜು ಒಡೆದು ಹೊರತೆಗೆದು ಆಸ್ಪತ್ರೆಗೆ ಕಳುಹಿಸಲಾಗಿದೆ.
ಅಪಘಾತವಾದ ವಿಷಯ ತಿಳಿದ ಕೂಡಲೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ, ಆಸ್ಪತ್ರೆಗೆ ರವಾನಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಕಿತ್ತೂರು ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜನಸ್ಪಂದನ ನ್ಯೂಸ್, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.