ಜನಸ್ಪಂದನ ನ್ಯೂಸ್, ತುಮಕೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ (Violation of Code of Conduct) ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಎಫ್ಐಆರ್ ದಾಖಲಾಗಿದೆ.
ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡ್ಕೊಂಡ ಶಿಕ್ಷಕಿ ; ಫೇಶಿಯಲ್, ಮೇಕಪ್ ಎಲ್ಲವೂ ಅಲ್ಲಿಯೇ, Video Viral.!
ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಏಪ್ರಿಲ್ 13 ರಂದು ತುಮಕೂರಿನಲ್ಲಿ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ಡಿ.ಕೆ. ಸುರೇಶ್ ವಿರುದ್ಧ ಅವಹೇಳನಕಾರಿಯಾಗಿ (Disparagingly) ಮಾತನಾಡಿದ್ದರು ಎಂದು ಆರೋಪಿಸಿ ಕಾಂಗ್ರೆಸ್ ದೂರು ನೀಡಿದೆ ಎನ್ನಲಾಗಿದೆ.
ಡಿ.ಕೆ. ಸುರೇಶ್ ಕೋತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು ಹಣದ ದಾಹಕ್ಕೆ ಏನು ಬೇಕಾದ್ರೂ ಅವರು ಮಾಡುತ್ತಾರೆ.
ಪ್ರಕೃತಿ ಸಂಪತ್ತು ವಿದೇಶಿಗಳಿಗೆ ಮಾರಾಟ ಮಾಡಿ ಹಣ ಮಾಡಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದರು.
ಇದನ್ನು ಓದಿ : SSLC ಪಾಸಾಗಿದ್ದೀರಾ : ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ; ಅಪ್ಲೈ ಮಾಡಿ.!