ಶುಕ್ರವಾರ, ಜನವರಿ 2, 2026

Janaspandhan News

HomeCrime Newsವಿಚ್ಛೇದನ ನೋಟಿಸ್‌ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಪತಿ.
spot_img
spot_img
spot_img

ವಿಚ್ಛೇದನ ನೋಟಿಸ್‌ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಪತಿ.

- Advertisement -

ಜನಸ್ಪಂದನ ನ್ಯೂಸ್‌, ಬೆಂಗಳೂರು : ಪತ್ನಿಯ ಮೇಲೆ ಗುಂಡು ಹಾರಿಸಿ ಹತ್ಯೆ ನಡೆಸಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯು ಬಳಸಿದ್ದ ಪಿಸ್ತೂಲ್ ಕುರಿತು ಮಾಗಡಿ ರಸ್ತೆ ಠಾಣೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಘಟನೆ ಬಳಿಕ ಆರೋಪಿ ಬಾಲ ಮುರುಗನ್‌ನಿಂದ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಪಿಸ್ತೂಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದು ಪರವಾನಗಿ ಹೊಂದಿದ ಆಯುಧವೋ ಅಥವಾ ಅನಧಿಕೃತ (ಕಂಟ್ರಿಮೇಡ್) ಪಿಸ್ತೂಲ್ ಆಗಿದೆಯೋ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಪಿಸ್ತೂಲ್ ಪರವಾನಗಿ ಹೊಂದಿದ್ದಲ್ಲಿ ಅದರ ದಾಖಲಾತಿಗಳ ಪರಿಶೀಲನೆ ನಡೆಯುತ್ತಿದ್ದು, ಅನಧಿಕೃತ ಆಯುಧವಾಗಿದ್ದಲ್ಲಿ ಅದು ಎಲ್ಲಿ ಖರೀದಿಸಲಾಯಿತು, ಯಾರಿಂದ ದೊರಕಿತು ಎಂಬ ಎಲ್ಲ ಅಂಶಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಮಂಗಳವಾರ ರಾತ್ರಿಯಿಂದಲೇ ಆರೋಪಿಯನ್ನು ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗಿದ್ದು, ಕೆಲವು ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಚ್ಛೇದನ (Divorce) ನೋಟಿಸ್‌ :

ವಿಚಾರಣೆ ವೇಳೆ ಆರೋಪಿ, ಪತ್ನಿ ವಿಚ್ಛೇದನಕ್ಕೆ ಸಂಬಂಧಿಸಿದ ನೋಟಿಸ್ ಕಳುಹಿಸಿದ್ದುದೇ ಈ ಕೃತ್ಯಕ್ಕೆ ಕಾರಣ ಎಂದು ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪತ್ನಿಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನವನ್ನು ಆರೋಪಿ ಹೊಂದಿದ್ದರಿಂದ ದಂಪತಿ ನಡುವೆ ನಿರಂತರ ಕಲಹ ನಡೆಯುತ್ತಿತ್ತು ಎನ್ನಲಾಗಿದೆ.

ಈ ಹಿನ್ನೆಲೆ ಪತ್ನಿ ಕಾನೂನು ಮಾರ್ಗದ ಮೂಲಕ ವಿಚ್ಛೇದನಕ್ಕೆ ಮುಂದಾಗಿದ್ದಳು. ಇದರಿಂದ ಆಕ್ರೋಶಗೊಂಡ ಆರೋಪಿ, ಕೃತ್ಯಕ್ಕೆ ಮುಂದಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಸ್ಥಳ ಮಹಜರು, ಮರಣೋತ್ತರ ಪರೀಕ್ಷೆ :

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳ ಮಹಜರು ನಡೆಸಿ, ಹತ್ಯೆಯಾದ ಭುವನೇಶ್ವರಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಬಾಲ ಮುರುಗನ್ ಹಾಗೂ ಭುವನೇಶ್ವರಿ ಸುಮಾರು 14 ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ 12 ವರ್ಷದ ಮಗ ಮತ್ತು 4 ವರ್ಷದ ಮಗಳು ಇದ್ದಾರೆ.

ಇದನ್ನು ಓದಿ : ಪೊಲೀಸ್ ವಶದಲ್ಲಿದ್ದ ಆರೋಪಿ ಸಿನಿಮೀಯ ಶೈಲಿಯಲ್ಲಿ ಪರಾರಿ; ವಿಡಿಯೋ ವೈರಲ್.

ಕೌಟುಂಬಿಕ ಕಲಹದ ಹಿನ್ನೆಲೆ :

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಪತ್ನಿಯ ಮೇಲೆ ನಿರಂತರವಾಗಿ ಅನುಮಾನ ವ್ಯಕ್ತಪಡಿಸುತ್ತಿದ್ದ. ಈ ವಿಚಾರವೇ ದಂಪತಿ ನಡುವೆ ತೀವ್ರ ಕೌಟುಂಬಿಕ ಕಲಹಕ್ಕೆ ಕಾರಣವಾಗಿತ್ತು. ಕಲಹದಿಂದ ಬೇಸತ್ತ ಭುವನೇಶ್ವರಿ, ವಿಚ್ಛೇದನ ಪಡೆಯಲು ತೀರ್ಮಾನಿಸಿ ಕೋರ್ಟ್ ಮೂಲಕ ನೋಟಿಸ್ ಕಳುಹಿಸಿದ್ದರು.

ಆದರೆ ಆರೋಪಿ ಇದಕ್ಕೆ ಒಪ್ಪಿರಲಿಲ್ಲ. ವಾರದ ಹಿಂದೆ ವಿಚ್ಛೇದನ ನೋಟಿಸ್‌ ಬಂದ ಬಳಿಕ, ಆರೋಪಿ ಕೃತ್ಯಕ್ಕೆ ಸಂಚು ರೂಪಿಸಿದ್ದಿರಬಹುದು ಎಂಬ ಪ್ರಾಥಮಿಕ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಘಟನೆ ವಿವರ :

ಪೊಲೀಸರು ನೀಡಿರುವ ಮಾಹಿತಿಯಂತೆ, ಡಿಸೆಂಬರ್ 23, 2025 ರಂದು ಸಂಜೆ ಮಾಗಡಿ ರಸ್ತೆ ಠಾಣೆ ವ್ಯಾಪ್ತಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಭುವನೇಶ್ವರಿ ಅವರ ಮೇಲೆ ಆರೋಪಿ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಸಂಬಂಧಿತ ಸುದ್ದಿ : ಅನೈತಿಕ ಸಂಬಂಧ ಹೊಂದಿದ್ದ ಆರೋಪ ; ತಮ್ಮನನ್ನೇ ಮಣ್ಣಲ್ಲಿ ಹೋತು ಹಾಕಿದ ಅಣ್ಣ.

ಪ್ರಕರಣ ದಾಖಲಿಸಿಕೊಂಡಿರುವ ಮಾಗಡಿ ರಸ್ತೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.


Disclaimer : ಈ ವರದಿ ಪೊಲೀಸ್ ಮೂಲಗಳು ಮತ್ತು ಪ್ರಾಥಮಿಕ ತನಿಖಾ ಮಾಹಿತಿಯ ಆಧಾರದ ಮೇಲೆ ತಯಾರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಅಂತಿಮವೆಂದು ಪರಿಗಣಿಸಬಾರದು.

- Advertisement -
Janaspandhan News
Janaspandhan Newshttp://WWW.janaspandhan.com
Janaspandana News is a digital news platform that reports crime and local news from Karnataka.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments