HomeCrime Newsಟೈರ್ ಸ್ಪೋಟಗೊಂಡು ಮನೆ ಅಂಗಳಕ್ಕೆ ಹಾರಿ ಬಿದ್ದ ಕಾರು; ಸಿಸಿಟಿವಿ ವಿಡಿಯೋ ವೈರಲ್.
spot_img
spot_img

ಟೈರ್ ಸ್ಪೋಟಗೊಂಡು ಮನೆ ಅಂಗಳಕ್ಕೆ ಹಾರಿ ಬಿದ್ದ ಕಾರು; ಸಿಸಿಟಿವಿ ವಿಡಿಯೋ ವೈರಲ್.

ಜನಸ್ಪಂದನ ನ್ಯೂಸ್‌, ಮಂಗಳೂರು: ಏಕಾಏಕಿ ಟೈರ್ ಸ್ಪೋಟಗೊಂಡ ಪರಿಣಾಮ ಕಾರೊಂದು ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಹಾರಿ ಅಂಗಳಕ್ಕೆ ಬಿದ್ದು ಪಲ್ಟಿಯಾದ ಭೀಕರ ಘಟನೆ ಮಂಗಳೂರಿನ ಮರಕಡ ಪ್ರದೇಶದಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಪಾದ್ರಿಯೊಬ್ಬರು ಪವಾಡದಂತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರದ ಕಾವೂರು–ಮರವೂರು ರಸ್ತೆಯ ಮರಕಡ ಎಂಬಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ. ಅಪಘಾತದ ಸಂಪೂರ್ಣ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಮರಕಡ ಕಾರು ಅಪಘಾತ (Accident) ದ ವೈರಲ್‌ ವಿಡಿಯೋ :

ಈ ಅಪಘಾತದಲ್ಲಿ ಗಾಯದಿಂದ ಪಾರಾದವರನ್ನು ಮಂಗಳೂರಿನ ಬೋಂದೆಲ್‌ನ ಸಂತ ಲಾರೆನ್ಸ್ ಚರ್ಚ್‌ನ ಧರ್ಮಗುರು ಫಾದರ್ ಆಂಡ್ರೂ ಲಿಯೋ ಡಿಸೋಜಾ ಎಂದು ಗುರುತಿಸಲಾಗಿದೆ. ಘಟನೆ ವೇಳೆ ಫಾದರ್ ಆಂಡ್ರೂ ಅವರು ಸ್ವತಃ ಕಾರು ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮಾಹಿತಿಯಂತೆ, ಫಾದರ್ ಆಂಡ್ರೂ ಅವರು ನೀರುಡೆಯಲ್ಲಿರುವ ತಮ್ಮ ನಿವಾಸದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಬಳಿಕ ಬಜ್ಪೆ ಮಾರ್ಗವಾಗಿ ಬೋಂದೆಲ್ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮರಕಡ ಪ್ರದೇಶದ ಬಳಿ ಬರುತ್ತಿದ್ದಾಗ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್ ಆಗಿದ್ದು, ಇದರಿಂದ ಚಾಲನೆ ಮೇಲಿನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಗೆ ಜಾರಿಕೊಂಡು ಪಕ್ಕದ ಮನೆಯ ಕಾಂಪೌಂಡ್ ಏರಿ ಗೋಡೆಗೆ ಡಿಕ್ಕಿ ಹೊಡೆದು ಅಂಗಳಕ್ಕೆ ಬಿದ್ದಿದೆ.

ಘಟನೆಯ ಸದ್ದು ಕೇಳಿ ಸ್ಥಳೀಯರು ತಕ್ಷಣ ಧಾವಿಸಿ, ಮಗುಚಿ ಬಿದ್ದ ಕಾರನ್ನು ನೇರವಾಗಿ ನಿಲ್ಲಿಸಿ ಕಾರಿನೊಳಗಿದ್ದ ಫಾದರ್ ಆಂಡ್ರೂ ಅವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಬಳಿಕ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರ ಪ್ರಕಾರ, ಫಾದರ್ ಆಂಡ್ರೂ ಅವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ.

ಘಟನೆಗೆ ಪ್ರತಿಕ್ರಿಯಿಸಿದ ಫಾದರ್ ಆಂಡ್ರೂ, “ದೇವರ ಕೃಪೆಯಿಂದ ನಾನು ಬದುಕಿದ್ದೇನೆ” ಎಂದು ತಿಳಿಸಿದ್ದಾರೆ. ಅಪಘಾತದಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಇದನ್ನು ಓದಿ : ಭೀಕರ ಅಪಘಾತ: ಖಾಸಗಿ ಬಸ್–ಲಾರಿ ಡಿಕ್ಕಿ, 9 ಜನ ಸಜೀವ ದಹನ.

ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾರು ಕಾಂಪೌಂಡ್ ಹಾರಿ ಮನೆಯ ಗೋಡೆಗೆ ಡಿಕ್ಕಿ ಹೊಡೆದು ಅಂಗಳಕ್ಕೆ ಬಿದ್ದು ಪಲ್ಟಿಯಾಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದ್ದು, ನಂತರ ಸ್ಥಳೀಯರು ಕಾರನ್ನು ಮೇಲಕ್ಕೆತ್ತಿ ಪಾದ್ರಿಯನ್ನು ರಕ್ಷಿಸುವ ದೃಶ್ಯಗಳು ದಾಖಲಾಗಿವೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆಯುತ್ತಿದೆ.

Janaspandhan News
Janaspandhan Newshttp://WWW.janaspandhan.com
Janaspandana News is a digital news platform that reports crime and local news from Karnataka.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments