ರಸ್ತೆ ಅಪಘಾತ

ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ಸ್ಥಳದಲ್ಲೇ ಮೃತ್ಯು.

ಜನಸ್ಪಂದನ ನ್ಯೂಸ್, ರಾಯಚೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿವಾಳ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಧ್ರಪ್ರದೇಶ ಮೂಲದ ಟಂ ಟಂ ವಾಹನ ಹಾಗೂ ಬುಲೆರೋ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಯಿಂದಾಗಿ ವಾಹನಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕೆಲವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆ ಮೂಲಗಳ ಪ್ರಕಾರ, ಕೆಲವು ಗಾಯಾಳುಗಳ ಸ್ಥಿತಿ ಇನ್ನೂ ಗಂಭೀರವಾಗಿದೆ.

ಈವರೆಗೆ ಮೃತಪಟ್ಟವರ ಮತ್ತು ಗಾಯಾಳುಗಳ ಸಂಪೂರ್ಣ ವಿವರಗಳು ಲಭ್ಯವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಪಘಾತದ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಅಪಘಾತ ಸುದ್ದಿ ಓದಿ : ಭೀಕರ ಅಪಘಾತ: ಖಾಸಗಿ ಬಸ್–ಲಾರಿ ಡಿಕ್ಕಿ, 9 ಜನ ಸಜೀವ ದಹನ.

ಎರಡು ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ಮೃತರದವರನ್ನು
▪️ ಸಣ್ಣ ಯಲ್ಲಪ್ಪ (45)
▪️ ಹರಿ (25)
▪️ ರಂಗನಾಥ (12)
▪️ ಬಸವರಾಜ್ (40)
▪️ ಟಾಟಾ ಏಸ್ ಚಾಲಕ ಎಂದು ಗುರುತಿಸಲಾಗಿದೆ. ಎಲ್ಲರೂ ಆಂಧ್ರಪ್ರದೇಶ ಮೂಲದವರಾಗಿದ್ದಾರೆ ಎನ್ನಲಾಗಿದೆ.


ಮತ್ತೊಂದು ಭೀಕರ ಅಪಘಾತ – ವೇಗವೇ ಪ್ರಾಣಹಂತಕ!

ಇದೇ ವೇಳೆ, ರಾಜಸ್ಥಾನದ ಉದಯಪುರದಲ್ಲಿ ನಡೆದ ಮತ್ತೊಂದು ಭೀಕರ ರಸ್ತೆ ಅಪಘಾತ ಕೂಡ ದೇಶಾದ್ಯಂತ ಆತಂಕ ಮೂಡಿಸಿದೆ. ಜನವರಿ 17ರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ, ಆರು ಮಂದಿ ಯುವಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ.

ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವೇಳೆ ಕಾರು 140 ಕಿಮೀ ವೇಗದಲ್ಲಿ ಸಂಚರಿಸುತ್ತಿದ್ದು, ಚಾಲಕನ ಕೈಯಲ್ಲಿ ಸಿಗರೇಟ್ ಮತ್ತು ಜೋರಾಗಿ ಮ್ಯೂಸಿಕ್ ಹಾಕಿಕೊಂಡಿದ್ದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ರಸ್ತೆ ಅಪಘಾತ ವಿಡಿಯೋ :

ವಿಡಿಯೋದಲ್ಲಿ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಯುವಕ ಚಾಲಕನಿಗೆ ನಿಧಾನವಾಗಿ ಚಾಲನೆ ಮಾಡಲು ಹೇಳುತ್ತಿರುವುದು ಸ್ಪಷ್ಟವಾಗಿ ಕೇಳಿಬರುತ್ತದೆ. ಆದರೆ ಕೆಲವೇ ಕ್ಷಣಗಳಲ್ಲಿ ಅಪಘಾತ ಸಂಭವಿಸಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದನ್ನು ಓದಿ : ತುಮಕೂರು ಬಳಿ ಭೀಕರ ಅಪಘಾತ: ಲಾರಿಗೆ ಕ್ರೂಸರ್ ಡಿಕ್ಕಿ, 4 ಅಯ್ಯಪ್ಪ ಮಾಲಾಧಾರಿಗಳು ಮೃತ್ಯು


🚦 ಎಚ್ಚರಿಕೆ ಸಂದೇಶ :

  • 👉 ಅತಿವೇಗವೇ ಅಪಘಾತಗಳಿಗೆ ಪ್ರಮುಖ ಕಾರಣ.
  • 👉 ವಾಹನ ಚಾಲನೆ ವೇಳೆ ಮದ್ಯಪಾನ, ಮೊಬೈಲ್ ಬಳಕೆ ಅಪಾಯಕಾರಿ.
  • 👉 ಜೀವಕ್ಕಿಂತ ದೊಡ್ಡದು ಯಾವುದೂ ಇಲ್ಲ – ಸುರಕ್ಷಿತ ಚಾಲನೆ ಅತಿ ಮುಖ್ಯ.

Disclaimer: ಈ ವರದಿಯಲ್ಲಿನ ಮಾಹಿತಿ ಸಾರ್ವಜನಿಕ ಮೂಲಗಳು ಮತ್ತು ಪ್ರಾಥಮಿಕ ವರದಿಗಳ ಆಧಾರದ ಮೇಲೆ ನೀಡಲಾಗಿದೆ. ಹೆಚ್ಚಿನ ವಿವರಗಳು ಲಭ್ಯವಾದ ನಂತರ ಸುದ್ದಿಯಲ್ಲಿ ಬದಲಾವಣೆ ಸಾಧ್ಯ. ಯಾವುದೇ ತಪ್ಪು ಮಾಹಿತಿಗೆ ನಮ್ಮ ನ್ಯೂಸ್‌ ವೆಬ್‌ಸೈಟ್ ಜವಾಬ್ದಾರಿಯಿಲ್ಲ.

Leave a Comment

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Scroll to Top