ಜನಸ್ಪಂದನ ನ್ಯೂಸ್, ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಒಬ್ಬ ಪರ ಸ್ತ್ರೀಯೊಂದಿಗೆ ಸಂಬಂಧ ಹೊಂದಿದ್ದು, ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ ಘಟನೆ ನಡೆದಿದೆ.
ಇದನ್ನು ಓದಿ : 2 ಮಕ್ಕಳ ತಂದೆಯಾಗಿರುವ lover ಗಾಗಿ ಭಾರತಕ್ಕೆ ಬಂದ ಪಾಕಿಸ್ತಾನದ ಚೆಲುವೆ.!
ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಸಿ 124 ನಂಬರ್ ಪ್ರಸನ್ ಟಿ. ಸಸ್ಪೆಂಡ್ ಆದ ಕಾನ್ಸ್ಟೇಬಲ್ ಎಂದು ತಿಳಿದು ಬಂದಿದೆ.
ಪತ್ನಿಯಿಂದ ದೂರು ಪಡೆದು ನಂತರ ಹಿರಿಯ ಅಧಿಕಾರಿಗಳಿಂದ ತನಿಖೆ ಮಾಡಿಸಿ ಆರೋಪ ಸತ್ಯವೆಂದು ಗೊತ್ತಾದ ಬಳಿಕ ಎಸ್ಪಿ ಅಮಾನತ್ತುಗೊಳಿಸಿದ್ದಾರೆ.
ಪರಸ್ತ್ರೀ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ಪೊಲೀಸಪ್ಪ, ಕೆಲ ತಿಂಗಳಿಂದ ಮನೆಯ ದಾರಿಯನ್ನೇ ಮರೆತಿದ್ದನಂತೆ.
ಇದನ್ನು ಓದಿ : Special news : ಕ್ಯಾನ್ಸರ್, ಹೃದ್ರೋಗ ಅಪಾಯ ಕಡಿಮೆಯಂತೆ ಈ ರಕ್ತದ ಗುಂಪು ಹೊಂದಿರುವವರಿಗೆ.!
ದಂಪತಿಗೆ ಇಬ್ಬರು ಮಕ್ಕಳಿದ್ದು, ಮಕ್ಕಳನ್ನು ಕಟ್ಟಿಕೊಂಡು ಕುಟುಂಬ ನಡೆಸಲು ಪ್ರಸನ್ನ ಅವರ ಪತ್ನಿ ಪರದಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಈ ಮಧ್ಯೆ ಮತ್ತೊಬ್ಬಳೊಂದಿಗೆ ರಂಗಿನಾಟ ಆಡುತ್ತಿದ್ದದನ್ನು ಪ್ರಶ್ನೆ ಮಾಡಿದಕ್ಕೆ ಪತ್ನಿಯ ತಲೆಗೆ ಕಬ್ಬಿಣದ ವಸ್ತುವಿನಿಂದ ಹೊಡೆದು ಹಲ್ಲೆ ಮಾಡಿದ್ದ ಎನ್ನಲಾಗಿದೆ. ಆತನ ದೌರ್ಜನ್ಯದಿಂದ ಬೇಸತ್ತು ಪತ್ನಿ ದೂರು ನೀಡಿದ್ದರು.
ಇದನ್ನು ಓದಿ : ಮಿನಿ ಸ್ಕರ್ಟ್ ಹಾಕ್ಕೊಂಡು ಬ್ರಾ, ಅಂಡರ್ವೇರ್ ತೋರಿಸುತ್ತ ಓಡಾಡಿದ ಗಾಯಕಿ ; ವಿಡಿಯೋ Viral.!
ಈ ಹಿನ್ನಲೆ ಹಿರಿಯ ಅಧಿಕಾರಿಗಳಿಂದ ಎಸ್ಪಿ ತನಿಖೆ ಮಾಡಿಸಿದ್ದರು. ಆರೋಪ ಸತ್ಯವೆಂದು ಸಾಬೀತಾದ ಹಿನ್ನೆಲೆ ಈ ಕ್ರಮ ಕೈಗೊಂಡಿದ್ದಾರೆ.