ಜನಸ್ಪಂದನ ನ್ಯೂಸ್, ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿಗೆ (CCB) ಟ್ರಾನ್ಸ್ಫರ್ (Tarnsfer) ಆಗಿದ್ದ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : Video : ಮಹಿಳಾ ಎಸ್ಐ ಜೊತೆ SI ಸರಸ ಸಲ್ಲಾಪ : ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ.!
ಬೆಂಗಳೂರು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಬಿಡದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಹಿಂದೆ ಕುಂಬಳಗೋಡಿನ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆಗೊಂಡಿದ್ದರು.
ಇದನ್ನು ಓದಿ : ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಡಿ 300 ಯುನಿಟ್ ವಿದ್ಯುತ್ ಫ್ರೀ ; ಡೈರೆಕ್ಟ್ Link ಇಲ್ಲಿದೆ.!
ಆದರೆ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಿಮ್ಮೇಗೌಡ ಸಾವಿಗೆ ಶರಣಾಗಿದ್ದಾರೆ. ತಮ್ಮ ತೋಟದ ಜಾಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ.
ಚನ್ನಪಟ್ಟಣದ ಹಳ್ಳಿಯೊಂದರ ನಿವಾಸಿಯಾದ ಇನ್ಸ್ಪೆಕ್ಟರ್ ತಿಮ್ಮೇಗೌಡ, 1998ರ ರೂರಲ್ ಬ್ಯಾಚ್ ನವರು. ಗ್ರಾಮೀಣ ಕೃಪಾಂಕದಲ್ಲಿ ಆಯ್ಕೆಯಾಗಿದ್ದ ತಿಮ್ಮೇಗೌಡ ವಿಧಾನಸಭೆ ಚುನಾವಣೆ ವೇಳೆಗೆ ಬಿಡದಿಯಿಂದ ಅತ್ತಿಬೆಲೆಗೆ ವರ್ಗಾವಣೆಯಾಗಿದ್ದರು.
ಇದನ್ನು ಓದಿ : ಇಂದಿನಿಂದ FASTag ನಿಯಮದಲ್ಲಿ ಬದಲಾವಣೆ ; ಹಳೆ ಫಾಸ್ಟ್ ಟ್ಯಾಗ್ ಹೊಂದಿದವರು ಹೀಗೆ ಮಾಡಿ.!
2023ರ ಸೆಪ್ಟೆಂಬರ್ನಲ್ಲಿ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ನಡೆದ ಬಳಿಕ ಅಮಾನತುಗೊಂಡಿದ್ದರು. ನಂತರ ಕುಂಬಳಗೋಡು ಠಾಣೆಗೆ ವರ್ಗಾವಣೆಯಾಗಿದ್ದು, ಇತ್ತೀಚೆಗೆ ಸಿಸಿಬಿಗೆ ವರ್ಗಾವಣೆಯಾಗಿತ್ತು.
ಎರಡು ತಿಂಗಳ ಹಿಂದೆಯಷ್ಟೇ ಅವರನ್ನು ಬೆಂಗಳೂರಿನ ಸಿಸಿಬಿ ವಿಭಾಗಕ್ಕೆ ವರ್ಗ ಮಾಡಲಾಗಿತ್ತು. ಕುಟುಂಬದವರಿಗೆ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆಗೆ ದೇಹವನ್ನು ಕಳುಹಿಸಲಾಗಿದೆ.
ಇದನ್ನು ಓದಿ : Special news : ಇಲ್ಲಿ ಮದುವೆಗೂ ಮುಂಚೆಯೇ ತಾಯಿ ಆಗ್ತಾರೆ ಹೆಣ್ಣು ಮಕ್ಕಳು ; ಭಾರತದ ಈ ಜನಾಂಗದಲ್ಲಿದೆ ವಿಚಿತ್ರ ಸಂಪ್ರದಾಯ.!
ತಿಮ್ಮೇಗೌಡ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಯಾದಗಿರಿಯಲ್ಲಿ ಪಿಎಸ್ಐ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ರಾಜ್ಯ ಸರ್ಕಾರಕ್ಕೆ ಮುಜುಗರ ಸೃಷ್ಟಿಸುವ ಬೆನ್ನಲ್ಲೇ ಇನ್ನೊಬ್ಬ ಎಸ್ಐ ಆತ್ಮಹತ್ಯೆ ಪ್ರಕರಣ ನಡೆದಿದೆ.