HomeGeneral Newsಮಣಿಪಾಲದಲ್ಲಿ ಯುವಜೋಡಿಯ ಅಸಭ್ಯ ವರ್ತನೆ: ವಿಡಿಯೋ ವೈರಲ್, ಸ್ಥಳೀಯರ ಆಕ್ರೋಶ.
spot_img
spot_img

ಮಣಿಪಾಲದಲ್ಲಿ ಯುವಜೋಡಿಯ ಅಸಭ್ಯ ವರ್ತನೆ: ವಿಡಿಯೋ ವೈರಲ್, ಸ್ಥಳೀಯರ ಆಕ್ರೋಶ.

ಜನಸ್ಪಂದನ ನ್ಯೂಸ್‌, ಉಡುಪಿ : ಮಣಿಪಾಲದಲ್ಲಿ ತಡರಾತ್ರಿ ಯುವಜೋಡಿಯೊಂದು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ (misconduct) ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಮಣಿಪಾಲವು ಗುಣಮಟ್ಟದ ಶಿಕ್ಷಣಕ್ಕಾಗಿ ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳನ್ನು ಆಕರ್ಷಿಸುವ ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಆದರೆ ಇತ್ತೀಚಿನ ಘಟನೆಯೊಂದು ಸಾರ್ವಜನಿಕ ಸ್ಥಳಗಳಲ್ಲಿ ನಡೆದುಕೊಳ್ಳುವ ಶಿಸ್ತಿನ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದೆ.

ಸಾರ್ವಜನಿಕ ರಸ್ತೆಯಲ್ಲೇ ಯುವಜೋಡಿಯ ಅಸಭ್ಯ ವರ್ತನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರ ಪ್ರಕಾರ, ಸಾರ್ವಜನಿಕ ಸ್ಥಳಗಳ ಗೌರವ ಕಾಪಾಡುವುದು ಪ್ರತಿಯೊಬ್ಬರ ಹೊಣೆಗಾರಿಕೆ. ಇಂತಹ ವರ್ತನೆಗಳಿಂದ ಸ್ಥಳದ ಘನತೆಗೆ ಧಕ್ಕೆಯಾಗುತ್ತದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷ ಅಥವಾ ವ್ಯಾಲೆಂಟೈನ್ಸ್ ಡೇ (New Year or Valentine’s Day) ಸಂದರ್ಭಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಆದರೆ ಇತ್ತೀತಲಾಗಿ ದಿನಂಪ್ರತಿ ಇಂತಹ ಘಟನೆಗಳು ಖುಲಂ ಖುಲ್ಲಾ ನಡೆಯುತ್ತಿವೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಇದನ್ನು ಓದಿ : ಚಲಿಸುವ ಆಂಬ್ಯುಲೆನ್ಸ್‌ನಲ್ಲಿ ಅಸಭ್ಯ ವರ್ತನೆ: 5 ಕಿಮೀ ಬೆನ್ನಟ್ಟಿ ಯುವತಿ, ಯುವಕರನ್ನು ಹಿಡಿದ ಸಾರ್ವಜನಿಕರು!

ಘಟನೆ ವೇಳೆ ಸ್ಥಳೀಯರು ಯುವಜೋಡಿಯನ್ನು ಪ್ರಶ್ನಿಸಿದಾಗ ಮಾತಿನ ಚಕಮಕಿ ನಡೆದಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದ ದೃಶ್ಯಗಳನ್ನು ಕೆಲವರು ತಮ್ಮ ಮೊಬೈಲ್‌ಗಳಲ್ಲಿ ದಾಖಲಿಸಿಕೊಂಡಿದ್ದು, ಅದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಯುವಜೋಡಿಯ ಅಸಭ್ಯ ವರ್ತನೆ ವಿಡಿಯೋ :

Courtesy : Social Media / Twitter

ಈ ಯುವಜೋಡಿಯ ಅಸಭ್ಯ ವರ್ತನೆ ಘಟನೆಯಿಂದ ಸಾರ್ವಜನಿಕ ಶಿಸ್ತಿನ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಇಂತಹ ಘಟನೆಗಳನ್ನು ತಡೆಯಲು ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ. ಪ್ರಸ್ತುತ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಸಂಪಾದಕೀಯ :

ನಡು ರಸ್ತೆಯಲ್ಲಿಯೇ ಅಸಭ್ಯವಾಗಿ ವರ್ತಿಸುವುದು ಯಾವ ಸಂದರ್ಭದಲ್ಲೂ ಸರಿಯಲ್ಲ. ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಸಾಮಾನ್ಯವಾಗಿರುವುದರಿಂದ, ಪ್ರತಿಯೊಬ್ಬರೂ ಶಿಸ್ತು ಮತ್ತು ಗೌರವ ಕಾಪಾಡಬೇಕು.

ಇಂತಹ ವರ್ತನೆಗಳು ಇತರರಿಗೆ ಅಸೌಕರ್ಯ ಮತ್ತು ಅಸಹಜತೆ ಉಂಟುಮಾಡಬಹುದು. ವಿಶೇಷವಾಗಿ ಕುಟುಂಬಗಳು, ಮಕ್ಕಳು ಇರುವ ಸ್ಥಳಗಳಲ್ಲಿ ಇದು ಹೆಚ್ಚು ಪರಿಣಾಮ ಬೀರುತ್ತದೆ. ಸ್ವಾತಂತ್ರ್ಯ ಎಂದರೆ ನಿಯಮಗಳನ್ನು ಮೀರಿ ನಡೆದುಕೊಳ್ಳುವುದು ಅಲ್ಲ, ಅದು ಜವಾಬ್ದಾರಿಯುತ ವರ್ತನೆಯೊಂದಿಗೆ ಇರಬೇಕು.

ಪ್ರಮುಖ ಸುದ್ದಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಸಮಾಜದ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಅಸಭ್ಯ ವರ್ತನೆಗಳಿಂದ ಸ್ಥಳದ ಗೌರವಕ್ಕೂ ಧಕ್ಕೆಯಾಗಬಹುದು. ಇಂತಹ ಘಟನೆಗಳು ಸಾರ್ವಜನಿಕ ಶಿಸ್ತಿನ ಬಗ್ಗೆ ಕೆಟ್ಟ ಸಂದೇಶವನ್ನು ನೀಡುತ್ತವೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಸದಾಚಾರ ಮತ್ತು ಸಂಯಮ ಪಾಲಿಸುವುದು ಅತ್ಯಂತ ಅಗತ್ಯ.


Disclaimer: ಈ ಸುದ್ದಿಯ (ಯುವಜೋಡಿಯ ಅಸಭ್ಯ ವರ್ತನೆ) ಮಾಹಿತಿ ಸಾಮಾಜಿಕ ಜಾಲತಾಣಗಳು ಮತ್ತು ಸ್ಥಳೀಯ ಮೂಲಗಳ ಆಧಾರದ ಮೇಲೆ ಸಂಗ್ರಹಿಸಲಾಗಿದೆ. ಘಟನೆಯ ಪೂರ್ಣ ವಿವರಗಳು ಹಾಗೂ ಅಧಿಕೃತ ದೃಢೀಕರಣಕ್ಕಾಗಿ ಸಂಬಂಧಿತ ಅಧಿಕಾರಿಗಳ ಮಾಹಿತಿ ನಿರೀಕ್ಷಿಸಲಾಗಿದೆ.

Janaspandhan News
Janaspandhan Newshttp://WWW.janaspandhan.com
Janaspandana News is a digital news platform that reports crime and local news from Karnataka.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments