ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ಠಾಣೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.
ಮೃತಪಟ್ಟವರು ಕಾಮಾಕ್ಷಿಪಾಳ್ಯ ಠಾಣೆ ಎಎಸ್ಐ ಶಿವಶಂಕರ ಚಾರಿ (45) ಎಂದು ತಿಳಿದು ಬಂದಿದೆ.
ಇದನ್ನು ಓದಿ : ಮಕ್ಕಳ ಮುಂದೆ S*x ಮಾಡುವುದು, ಬಟ್ಟೆ ಬದಲಿಸುವುದು ಲೈಂಗಿಕ ಕಿರುಕುಳವಿದ್ದಂತೆ; ಹೈಕೋರ್ಟ್ ಮಹತ್ವದ ತೀರ್ಪು.!
ಶಿವಶಂಕರ ಅವರು ಗುರುವಾರ ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ರೌಂಡ್ಸ್ಗೆ ಹೋದಾಗ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ.
ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ.
ಇದನ್ನು ಓದಿ : ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲ್ಲ : High court
ಶಿವಶಂಕರ ಚಾರಿ ಅವರು 1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು ಎಂದು ತಿಳಿದು ಬಂದಿದೆ. ಕಳೆದ ಒಂದೂವರೆ ವರ್ಷದಿಂದ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.