Saturday, June 14, 2025

Janaspandhan News

HomeBelagavi NewsNH : ಪುಣೆ‌ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ; 3 ಸಾವು.!
spot_img
spot_img

NH : ಪುಣೆ‌ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ; 3 ಸಾವು.!

ಜನಸ್ಪಂದನ ನ್ಯೂಸ್, ಬೆಳಗಾವಿ : ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ ಹರಿದು ಮೂವರು ಸಾವಿಗೀಡಾಗಿದ್ದು, ಆರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು (Kittur) ತಾಲೂಕಿನ ಇಟಗಿ ಕ್ರಾಸ್​ನ ಪುಣೆ‌ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (NH) – 4ರಲ್ಲಿ ನಡೆದಿದೆ.

ಮೃತಪಟ್ಟವರು ರಾಮಚಂದ್ರ ಜಾಧವ್ (45), ಮಗ ಮಹೇಶ್ ರಾಮಚಂದ್ರ ಜಾಧವ್ (18), ರಾಮಣ್ಣ ಅಲಿಯಾಸ್ ರಮೇಶ್ (38) ಎಂದು ತಿಳಿದು ಬಂದಿದೆ.

ಇದನ್ನು ಓದಿ : HFWS : ಹೆಲ್ತ್ ಅಂಡ್ ಫ್ಯಾಮಿಲಿ ವೆಲ್ಫೇರ್ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇವರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದವರು (From Shiroli village in Chincholi taluk of Kalaburagi district) ಎಂಬ ಮಾಹಿತಿ ಲಭ್ಯವಾಗಿದೆ.

ಲಕ್ಷ್ಮೀಬಾಯಿ, ಅನುಶ್ರೀ ಮತ್ತು ಭೀಮವ್ವ (55) ಸೇರಿದಂತೆ ಆರು ಮಂದಿಗೆ ಗಂಭೀರ ಗಾಯಗಳಾಗಿವೆ (serious injured). ಗಾಯಾಳುಗಳನ್ನು ಹೆದ್ದಾರಿ ಗಸ್ತು ಸಿಬ್ಬಂದಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನು ಓದಿ : Tiger : ಹುಲಿಯ ಜೊತೆ ಸೆಲ್ಫಿಗೆ ಮುಂದಾದ ಯುವಕ ; ಮುಂದೆನಾಯ್ತು.? ವಿಡಿಯೋ.

ಕಾರ್ಮಿಕರು NHAIನಲ್ಲಿ ದಿನಗೂಲಿ ಕೆಲಸಕ್ಕಾಗಿ ಕಲಬುರಗಿಯ ಶಹಬಾದ್, ಸೇಡಂ, ಚಿಂಚೋಳಿಯಿಂದ ಬಂದಿದ್ದರು. ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಆಯಿಲ್ ತುಂಬಿದ್ದ ಟ್ಯಾಂಕರ್ ಏಕಾಏಕಿ ಹರಿದು (A tanker full of oil suddenly bursts onto the workers), (NH) – 4 ರ ಬದಿ ಇರುವ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ.

ಘಟನೆ ನಡೆದ ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ಆರ್. ಬಿ ಬಸರಗಿ ಕೂಡ ಭೇಟಿ ನೀಡಿ ಮಾಹಿತಿ ಪಡೆದರು.

ಇದನ್ನು ಓದಿ : Belagavi : ಬಾಲಕಿ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ.!

ಆಯಿಲ್ ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಕೂಡ ಸ್ಥಳಕ್ಕೆ ಬಂದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತಿದ್ದಾರೆ ಎಂದು ತಿಳಿದು ಬಂದಿದೆ

belagavi accident 4 death 1
ಸರ್ವಿಸ್ ರಸ್ತೆಗೆ ಬಿದ್ದ ಟ್ಯಾಂಕರ್
ನೀವು ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ನಿಮ್ಮ ಮನೆಗಳಲ್ಲಿ ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಪ್ರತಿನಿತ್ಯವೂ ಎಲ್ಲರೂ ಬಳಸುವ ಆಹಾರ ಪದಾರ್ಥವೆಂದರೆ ಅದು ಹಾಲು (Milk). ಮಕ್ಕಳ ಆರೋಗ್ಯಕ್ಕೂ ಹಾಲು ಬಹಳ ಮುಖ್ಯವಾಗಿದೆ.

ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂ ದೇಹಕ್ಕೆ ಬಹಳ ಮುಖ್ಯ (Calcium is very important for the body). ಅಷ್ಟೇ ಅಲ್ಲ ದೇಹಕ್ಕೆ ಹಾಲಿನಿಂದ ಬಹಳಷ್ಟು ಪ್ರಯೋಜನವಿದೆ. ಈಗ ಬಹಳ ಜನರು ದನಗಳಿಂದ ನೇರವಾಗಿ ಹಾಲು ಪಡೆಯುವುದು ಬಹಳ ಕಡಿಮೆಯಾಗಿದೆ. ಹಳ್ಳಿಗಳಲ್ಲಿಯೂ ಈಗ ಪ್ಯಾಕೆಟ್ ಮಾಡಲಾದ ಹಾಲನ್ನೇ ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಏವಿಯನ್ ಇನ್ಫ್ಲುಯೆನ್ಸ ವೈರಸ್, ಮೈಕೋಬ್ಯಾಕ್ಟೀರಿಯಂ, ಇ. ಕೋಲಿ, ಲಿಸ್ಟೇರಿಯಾ ಮತ್ತು ಕ್ಯಾಂಪಿಲೋಬ್ಯಾಕ್ಟರ್ ಅನ್ನು ಕೊಲ್ಲಲು ಹಾಲನ್ನು ಸಾಮಾನ್ಯವಾಗಿ 71 ಡಿಗ್ರಿ ಸೆಲ್ಸಿಯಸ್ನಲ್ಲಿ ಬಿಸಿ ಮಾಡಲಾಗುತ್ತದೆ. ಇವೆಲ್ಲವೂ ವಿವಿಧ ಕಾಯಿಲೆಗಳು ಮತ್ತು ರೋಗಗಳಿಗೆ ಕಾರಣವಾಗಬಹುದಾದ ಬ್ಯಾಕ್ಟೀರಿಯಾಗಳಾಗಿವೆ ಎಂಬುದು ತಜ್ಞರ ಅಭಿಪ್ರಾಯ.

ಟೈಫಾಯಿಡ್ ಜ್ವರ, ಲಿಸ್ಟೀರಿಯೊಸಿಸ್, ಕ್ಷಯ, ಡಿಫ್ತೀರಿಯಾ ಮತ್ತು ಬ್ರೂಸೆಲೋಸಿಸ್ ಹರಡುವಿಕೆ ಬ್ಯಾಕ್ಟೀರಿಯಾವನ್ನು ಪಾಶ್ಚರೀಕರಣವು ಕೊಲ್ಲುತ್ತದೆ (Pasteurization kills bacteria). ಇದು ಆ ಹಾಲಿನ ಯಾವುದೇ ರುಚಿಯ ಮೇಲೆ ಪರಿಣಾಮ ಬೀರುವುದಿಲ್ಲ ಹೀಗಾಗಿ ಹಾಲನ್ನು ಹೆಚ್ಚು ಕುದಿಸಿಡುವುದು ಸರಿಯಲ್ಲ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಮನೆಯಲ್ಲಿ ಹಾಲನ್ನು ಬಳಸುವಾಗ ಈ ಹಾಲನ್ನು ಸರಿಯಾದ ತಾಪಮಾನದಲ್ಲಿ ಕುದಿಸದೇ ಇದ್ದರೆ ಹಾನಿಕಾರಕ ಬ್ಯಾಕ್ಟೀರಿಯಾ ಹಾಗೂ ವೈರಸ್‌ಗಳು ಬೆಳವಣಿಗೆಯಾಗುವ ಸಾಧ್ಯತೆ ಇರುತ್ತದೆ.

ಹಾಲನ್ನು ಕುದಿಸುವುದು ಅದರಲ್ಲಿರುವ ಮಧ್ಯಮ ಹಾಗೂ ಸಣ್ಣ ಫ್ಯಾಟಿ ಆಸಿಡ್‌ಗಳ ಹಾಜರಾತಿಯನ್ನು ಹೆಚ್ಚಿಸುತ್ತದೆ. ಈ ಫ್ಯಾಟಿ ಆಮ್ಲ ಅಥವಾ ಆಸಿಡ್ ಹಾಲಿನಿಂದ ಅಜೀರ್ಣ ಹಾಗೂ ಅಲರ್ಜಿ ಸಮಸ್ಯೆಯುಳ್ಳವರಿಗೆ ಉಪಯುಕ್ತವಾಗಿದೆ.

ಇದನ್ನು ಓದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

ಇನ್ನೂ‌ ಹಾಲನ್ನು 100 ಅಥವಾ ಅದಕ್ಕಿಂತ ಹೆಚ್ಚಿನ ಡಿಗ್ರಿಯಲ್ಲಿ ಪ್ಯಾಶ್ಚರೈಸ್ ಮಾಡುವುದರಿಂದ ಹಾಲಿನಲ್ಲಿರುವ ಕೆಲವೊಂದು ವಿಟಮಿನ್ ಹಾಗೂ ಮಿನರಲ್‌ಗಳು ನಷ್ಟವಾಗುತ್ತವೆ. ಅಲ್ಲದೇ ಬಿ2, ಬಿ3, ಬಿ6 ಹಾಗೂ ಫೋಲಿಕ್ ಆಮ್ಲ ನಷ್ಟಗೊಳ್ಳಬಹುದು.

ತಜ್ಞರು ಸಹ ಸಾಕಷ್ಟು ಸಮಯದವರೆಗೆ ಹಾಲನ್ನು ಕುದಿಸುವುದು ವಿಟಮಿನ್ ಡಿ ಅಂಶವನ್ನು ಕಡಿಮೆ ಮಾಡುತ್ತದೆ. ಇದು ದೇಹದಲ್ಲಿರುವ ಕ್ಯಾಲ್ಸಿಯಂ ಹೀರುವಿಕೆಗೆ ಋಣಾತ್ಮಕ ಪರಿಣಾಮ (negative effect) ಬೀರುತ್ತದೆ. ನ್ಯೂಟ್ರಿಯಂಟ್ ನಷ್ಟವನ್ನು ಕಡಿಮೆ ಮಾಡಲು, ಹಾಲನ್ನು ನಾಲ್ಕರಿಂದ ಐದು ನಿಮಿಷ ಕುದಿಸಿದರೆ ಸಾಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನು ಓದಿ : Job : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಲನ್ನು ಯಾವಾಗಲೂ ದೊಡ್ಡದಾದ ಪಾತ್ರೆಯಲ್ಲಿ ಕುದಿಸಲು ಇಡಿ. ತಳ ಗಟ್ಟಿಯಾಗಿರುವ ಪಾತ್ರೆಯನ್ನು ಆಯ್ಕೆಮಾಡಿಕೊಳ್ಳುವುದು ಉತ್ತಮ. ಇದರಿಂದ ಹಾಲು ಉಕ್ಕದಂತೆ ತಡೆಯಬಹುದು. ತಳ ಗಟ್ಟಿ ಇದ್ದರೆ ಹಾಲು ಪಾತ್ರೆ ತಳ ಹಿಡಿದುಕೊಳ್ಳುವುದಿಲ್ಲ.

ಹಾಲನ್ನು ಕುದಿಸುವಾಗ ಪಾತ್ರೆಯ ಮೇಲ್ಭಾಗದಲ್ಲಿ ಅಡ್ಡಲಾಗಿ ಮರದ ಸೌಟನ್ನು ಇರಿಸಿ. ಇದರಿಂದ ಹಾಲು ಉಕ್ಕುವಾಗ ಅದು ಕೆಳಕ್ಕೆ ಹರಿಯದಂತೆ ಸೌಟು ತಡೆಯುತ್ತದೆ. ಇನ್ನು ಚಿಟಿಕೆ ಉಪ್ಪು ಸೇರಿಸುವುದರಿಂದ ಕೂಡ ಹಾಲು ಉಕ್ಕದಂತೆ ತಡೆಯಬಹುದಾಗಿದೆ.

spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments