Tuesday, October 22, 2024
spot_img
spot_img
spot_img
spot_img
spot_img
spot_img
spot_img

ಆರೋಪಿಗಳು ಪೊಲೀಸರಿಗೆ ಮೊಬೈಲ್ ನೀಡಲು ನಿರಾಕರಿಸುವುದು ಅಸಹಕಾರವಲ್ಲ: High court

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ತನಿಖಾ ಸಂಸ್ಥೆಗೆ ಆರೋಪಿಗಳು ತಮ್ಮ ಮೊಬೈಲ್ ಫೋನ್‌ಗಳನ್ನು ಸಲ್ಲಿಸದೆ ಇರುವುದನ್ನು ಅಸಹಕಾರ ಎಂದು ಕರೆಯಲಾಗದು ಎಂಬುದಾಗಿ ಆಂಧ್ರಪ್ರದೇಶ ಹೈಕೋರ್ಟ್ ಇತ್ತೀಚಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ಹೇಳಿಕೆ ನೀಡಿದೆ.

ಇದನ್ನು ಓದಿ : ವಿಚ್ಛೇದನದ ಬಳಿಕ ಸೊಸೆ, ಅತ್ತೆ -ಮಾವನ ಮನೆಯಲ್ಲಿ ಇರುವಂತಿಲ್ಲ; High court ಮಹತ್ವದ ತೀರ್ಪು.!

2021ರಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿಯ ಮೇಲೆ ನಡೆಸಿದ ಆಪಾದಿತ ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಸಂಸದ ಎನ್ ಸುರೇಶ್ ಬಾಬು ಮತ್ತು ಉದ್ಯಮಿ ಅವುಟು ಶ್ರೀನಿವಾಸ ರೆಡ್ಡಿ ಅವರಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಮೂರ್ತಿ ವಿಆರ್‌ಕೆ ಕೃಪಾ ಸಾಗರ್ ಅವರು ಈ ವಿಚಾರ ತಿಳಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಮಕ್ಕಳ ಮುಂದೆ S*x ಮಾಡುವುದು, ಬಟ್ಟೆ ಬದಲಿಸುವುದು ಲೈಂಗಿಕ ಕಿರುಕುಳವಿದ್ದಂತೆ; ಹೈಕೋರ್ಟ್ ಮಹತ್ವದ ತೀರ್ಪು.!

ವಾಟ್ಸಾಪ್‌ ಸಂದೇಶಗಳನ್ನು ಪಡೆಯಲು ಮತ್ತು ಅಪರಾಧದ ಗೂಗಲ್‌ ಟೈಮ್‌ಲೈನ್‌ಗಳನ್ನು ಸಂಗ್ರಹಿಸಲು ಫೋನ್‌ ಪೊಲೀಸರಿಗೆ ಅಗತ್ಯವಿದೆ.

ಆದರೆ ಆರೋಪಿಗಳು ತಮ್ಮ ಮೊಬೈಲ್ ಫೋನ್ ಗಳನ್ನು ಪೊಲೀಸರಿಗೆ ಸಲ್ಲಿಸಲು ವಿಫಲವಾಗಿದ್ದರು. ಹೀಗಾಗಿ ಅವರಿಗೆ ಜಾಮೀನು ನೀಡಬಾರದು ಎಂದು ಸರ್ಕಾರ ವಾದಿಸಿತ್ತು.

ಇದನ್ನು ಓದಿ : ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲ್ಲ : High court

ಆದರೆ ನ್ಯಾಯಾಲಯವು, ಫೋನ್‌ ವಶಪಡಿಸಿಕೊಳ್ಳಲಾಗಲಿಲ್ಲ ಎಂಬ ಕಾರಣಕ್ಕೆ ಉಳಿದ ಎಲೆಕ್ಟ್ರಾನಿಕ್‌ ಸಾಕ್ಷ್ಯ ಪಡೆಯಲು ಹಿಂಜರಿಯುವಂತಿಲ್ಲ ಎಂದು ಈ ವೇಳೆ ತಿಳಿಸಿತು. ಸಂವಿಧಾನದ 20(3)ನೇ ವಿಧಿಯಡಿ ಒದಗಿಸಲಾದ ರಕ್ಷಣೆಯ ಹಿನ್ನೆಲೆಯಲ್ಲಿ ಗ್ಯಾಜೆಟ್‌ ಆನ್‌ಲೈನ್‌ ಖಾತೆಗಳ ಪಾಸ್‌ವರ್ಡ್‌ ನೀಡುವಂತೆ ಆರೋಪಿಗೆ ಒತ್ತಾಯಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಅದು ಈ ಸಂದರ್ಭದಲ್ಲಿ ಉಲ್ಲೇಖಿಸಿದೆ

ಪ್ರಕರಣದ ಸುಮಾರು 34 ಆರೋಪಿಗಳಿಗೆ ಈಗಾಗಲೇ ಹೈಕೋರ್ಟ್ ಅಥವಾ ವಿಚಾರಣಾ ನ್ಯಾಯಾಲಯಗಳು ಜಾಮೀನು ನೀಡಿರುವುದನ್ನು ಗಮನಿಸಿದ ನ್ಯಾಯಾಲಯ ಅರ್ಜಿದಾರರ ಉದ್ಯೋಗ, ನಿವಾಸ ಮತ್ತು ಈ ಎಲ್ಲಾ ವರ್ಷಗಳಲ್ಲಿ ಅವರು ತನಿಖೆಗೆ ಲಭ್ಯವಿರುವುದನ್ನು ಗಮನಿಸಿದಾಗ ಅವರು ವಿಚಾರಣೆಯಿಂದ ತಪ್ಪಿಸುವ ಸಾಧ್ಯತೆಯಿಲ್ಲ ಎಂಬುದನ್ನು ಅದು ಸೂಚಿಸುತ್ತದೆ ಎಂದು ಪೀಠ ಹೇಳಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img