Friday, July 11, 2025

Janaspandhan News

HomeJobCentral Bank : ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 4500 ಹುದ್ದೆಗಳಿಗೆ ಅರ್ಜಿ ಆಹ್ವಾನ.!
spot_img
spot_img

Central Bank : ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 4500 ಹುದ್ದೆಗಳಿಗೆ ಅರ್ಜಿ ಆಹ್ವಾನ.!

- Advertisement -

ಜನಸ್ಪಂದನ ನ್ಯೂಸ್‌, ನೌಕರಿ : ಸೆಂಟ್ರಲ್ ಬ್ಯಾಂಕ್ (Central Bank) ಆಫ್‌ ಇಂಡಿಯಾದಲ್ಲಿ ಖಾಲಿ ಇರುವ 4,500 (ಅಪ್ರೆಂಟಿಸ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Central Bank Of India ದ Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಅಪ್ರೆಂಟಿಸ್ ಕಾಯಿದೆ- 196 ರ ಅಡಿಯಲ್ಲಿ ಮತ್ತು ಅಪ್ರೆಂಟಿಸ್‌ಶಿಪ್ ನೀತಿಯ ಪ್ರಕಾರ ಅರ್ಹ ಅಭ್ಯರ್ಥಿಗಳಿಂದ ಸೆಂಟ್ರಲ್ ಬ್ಯಾಂಕ್ (Central Bank) ಆಫ್‌ ಇಂಡಿಯಾದಲ್ಲಿ 4500 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಉನ್ನತ ಶಿಕ್ಷಣ ಸಚಿವಾಲಯದ ಸಹಭಾಗಿತ್ವದಲ್ಲಿ ಬ್ಯಾಂಕ್ ಈ ಅಪ್ರೆಂಟಿಸ್‌ಶಿಪ್ ನೀಡುತ್ತಿದೆ.

Central Bank ನೇಮಕಾತಿ ವಿವರಗಳು :
  • ಸಂಸ್ಥೆ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank) .
  • ಒಟ್ಟು ಹುದ್ದೆಗಳ ಸಂಖ್ಯೆ : 4500.
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಉದ್ಯೋಗ ಸ್ಥಳ : ಭಾರತಾದ್ಯಂತ.
ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!
ಹುದ್ದೆಗಳ ಪ್ರಕಾರ :
  • ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ತರಬೇತಿ ಪಡೆದ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ.
ವೇತನ ಶ್ರೇಣಿ :
  • ಈ ಹುದ್ದೆಗಳಿಗೆ ಆಯ್ಕೆಯದ ಅಭ್ಯಾರ್ಥಿಗಳಿಗೆ ರೂ. 15,000/- ಪ್ರತಿ ತಿಂಗಳು ಬ್ಯಾಂಕಿನ (Central Bank) ನಿಯಮಾವಳಿಯಂತೆ ವೇತನ ನೀಡಲಾಗುವುದು.
ಇದನ್ನು ಓದಿ : MECL : ಮಿನಿರಲ್ ಎಪ್ಲೋರೇಷನ್ & ಕನ್ಸಲ್ಟೆನ್ಸಿ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!
ಶೈಕ್ಷಣಿಕ ವಿದ್ಯಾರ್ಹತೆ :
  • ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ (Degree) ಪೂರ್ಣಗೊಳಿಸಿರಬೇಕು. ಯಾವುದೇ ವಿಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ : (07-06-2025 ಕ್ಕೆ)
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿವ ಅಭ್ಯರ್ಥಿಯ ಕನಿಷ್ಠ ವರ್ಷ : 20 ವರ್ಷ.
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿವ ಅಭ್ಯರ್ಥಿಯ ಗರಿಷ್ಠ ವರ್ಷ :  28 ವರ್ಷ.
ಇದನ್ನು ಓದಿ : ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!
ವಯೋಮಿತಿ ಸಡಿಲಿಕೆ :
  • ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷ.
  • SC/ST ಅಭ್ಯರ್ಥಿಗಳಿಗೆ : 05 ವರ್ಷ.
  • ವಿಕಲಚೇತನ ಅಭ್ಯರ್ಥಿಗಳಿಗೆ : 
  • ಯುಆರ್ : 10 ವರ್ಷ.
  • OBC : 13 ವರ್ಷ.
  • SC/ST : 15 ವರ್ಷ.
ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!
ಅರ್ಜಿ ಶುಲ್ಕ :
  • ವಿಕಲಚೇತನ (PwBD) ಅಭ್ಯರ್ಥಿಗಳು : ರೂ. 400/-
  • SC/ST/Women/EWS ಅಭ್ಯರ್ಥಿಗಳು : ರೂ. 600/-
  • OBC ಅಭ್ಯರ್ಥಿಗಳು : ರೂ. 800/-
ಶುಲ್ಕ ಪಾವತಿ ವಿಧಾನ :
  • ಆನ್‌ಲೈನ್ (Online) ಮೂಲಕ ಶುಲ್ಕ ಪಾವತಿ ಮಾಡಲು ಅವಕಾಶವಿದೆ.
ಆಯ್ಕೆ ವಿಧಾನ :
  • ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ:
  • Online test : ಬ್ಯಾಂಕಿಂಗ್ ಜ್ಞಾನ, ಸಾಮಾನ್ಯ ಅರಿವು, ಸಂಖ್ಯಾತ್ಮಕ ನಿರ್ಣಯ, ಅಂಕಗಣಿತ, ಇಂಗ್ಲೀಷ್ ಸೇರಿದಂತೆ ವಿಷಯಗಳನ್ನು ಒಳಗೊಂಡಂತೆ ಪರೀಕ್ಷೆ ನಡೆಸಲಾಗುತ್ತದೆ.
  • Local language test : ಅಭ್ಯರ್ಥಿಗಳು ಆಯ್ಕೆ ಮಾಡಿದ ರಾಜ್ಯದ ಪ್ರಕಾರ ಸ್ಥಳೀಯ ಭಾಷೆಯಲ್ಲಿ ನೈಪುಣ್ಯದ ಪರೀಕ್ಷೆ ನಡೆಯಲಿದೆ.
ಇದನ್ನು ಓದಿ : Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!
ಅರ್ಜಿ ಸಲ್ಲಿಸುವ ವಿಧಾನ :
  • ಅಧಿಕೃತ (Central Bank Of India) ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಅರ್ಜಿ ಸಲ್ಲಿಸಲು ಮೊದಲು ನಿಮ್ಮ Email ID, Mobile Number, ಶೈಕ್ಷಣಿಕ ದಾಖಲೆಗಳನ್ನು ಸಿದ್ಧಪಡಿಸಿ.
  • Online ಅರ್ಜಿ ಸಲ್ಲಿಕೆ ಲಿಂಕ್‌ನಲ್ಲಿ ಅರ್ಜಿ ನಮೂನೆ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು Upload ಮಾಡಿ ಹಾಗೂ ಫೋಟೋ ಸೈನ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಅರ್ಜಿ ಸಲ್ಲಿಸಿ ಮತ್ತು ನಿಮ್ಮ Application ಸಂಖ್ಯೆಯನ್ನು ಉಳಿಸಿಟ್ಟುಕೊಳ್ಳಲು ಪ್ರಿಂಟ್‌ (Print) ತೆಗೆದುಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಜೂನ್ 07, 2025.
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜೂನ್ 23, 2025.
  • ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : ಜೂನ್ 25, 2025.
  • ಆನ್‌ಲೈನ್ ಪರೀಕ್ಷೆ (approximate) : ಜುಲೈ 03, 2025.
ಇದನ್ನು ಓದಿ : Greens : ಅರೆ ನೀವು ತಿಂದಿರಾ? ಈ 1 ಸೊಪ್ಪಿನ ಆರೋಗ್ಯದ ರಹಸ್ಯಗಳು ಇಗೋ ಇಲ್ಲಿವೆ!
ಕರ್ನಾಟಕದಲ್ಲಿ ಹುದ್ದೆಗಳು ಎಲ್ಲಲ್ಲಿ?

ಬೆಂಗಳೂರು ಗ್ರಾಮಾಂತರ-3, ಬೆಂಗಳೂರು ನಗರ-37, ಚಾಮರಾಜನಗರ-1, ಚಿಕ್ಕಬಳ್ಳಾಪುರ-3, ಚಿಕ್ಕಮಗಳೂರು-1, ಹಾಸನ-3, ಕೊಡಗು-3, ಕೋಲಾರ-1, ಮಂಡ್ಯ-2, ಮೈಸೂರು-4, ರಾಮನಗರ-2, ತುಮಕೂರು-1, ಬಾಗಲಕೋಟೆ-4, ಬಳ್ಳಾರಿ-2, ಬೆಳಗಾವಿ-3, ಬೀದರ್-1, ಚಿತ್ರದುರ್ಗ-1, ದಕ್ಷಿಣ ಕನ್ನಡ-3, ದೇವನಗೆರೆ-3, ದಾರವಾಡ-4. ಗದಗ-2, ಹಾವೇರಿ-3, ಕಲಬುರಗಿ-2, ಕೊಪ್ಪಳ-2, ರಾಯಚೂರು-3, ಶಿವಮೊಗ್ಗ-1,ಉಡುಪಿ-2, ಉತ್ತರ ಕನ್ನಡ-4, ವಿಜಯನಗರ-1, ವಿಜಯಪುರ-3, ಯಾದಗಿರಿ-2

ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.

Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿಯ ಬಣಜವಾಡ ಕಾಲೇಜು ಬಳಿಯ ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ (Accident) ದಲ್ಲಿ ಮೂವರು ಬಲಿಯಾಗಿದ್ದಾರೆ. ಗುರುವಾರ ತಡ ರಾತ್ರಿ ಈ ದುರ್ಘಟನೆ (Accident) ಸಂಭವಿಸಿದೆ.

ಕೊಲ್ಲಾಪುರ (Kolhapur) ಜಿಲ್ಲೆ ಶಿರೋಳ ತಾಲೂಕು ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30), ಶಿರೋಳ ತಾಲೂಕು ಪುಡವಾಡ (Pudawad) ಗ್ರಾಮದ ಶಿವಂ ಯುವರಾಜ್ ಚವಾಣ್ (24) ಮತ್ತು ಸಾಂಗ್ಲಿ ಜಿಲ್ಲೆ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಅಪಘಾತ (Accident) ನಡೆದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!

ಮೊದಲಿಗೆ ಕಾಗವಾಡ (Kagawad) ಕಡೆಯಿಂದ ಕೆಂಪು ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಮತ್ತು ಅಥಣಿಯಿಂದ ಕಾಗವಾಡಕ್ಕೆ ತೆರಳುತ್ತಿದ್ದ ಪಿಕಪ್ ವಾಹನದ ನಡುವೆ ಅಪಘಾತ (Accident) ವಾಗಿದೆ. ಗಾಯಗೊಂಡ ಚಾಲಕ ಮತ್ತು ಕ್ಲೀನರ್ ಸಹಾಯಕ್ಕೆ ಬೇಡಿಕೊಳ್ಳುತ್ತಿದ್ದರು.

ಇದನ್ನು ಗಮನಿಸಿದ ಸ್ಕಾರ್ಪಿಯೋ (Scorpio) ಚಾಲಕ ತನ್ನ ವಾಹನವನ್ನು ಬದಿಗೆ ಸರಿಸಿ ಅವರನ್ನು ರಕ್ಷಿಸಲು ಮುಂದಾದಾಗ ಅಥಣಿ ಕಡೆಯಿಂದ ಬಂದ ಇನೋವಾ (Innova) ಕಾರು ನೇರವಾಗಿ ರಕ್ಷಿಸಲು ಮುಂದಾದ ವ್ಯಕ್ತಿಗೆ ಡಿಕ್ಕಿ ಹೊಡೆದು ಈ ಘಟನೆ (Accident) ಸಂಭವಿಸಿದೆ.

ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!

ದುರ್ಘಟನೆ (Accident) ಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅಥಣಿಯ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ, ಪಿಕಪ್ ವಾಹನ, ಇನೋವಾ ಮತ್ತು ಸ್ಕಾರ್ಪಿಯೋ ನಡುವೆ ಈ ಅಪಘಾತ (Accident) ಸಂಭವಿಸಿದೆ.

ಇನೋವಾದಲ್ಲಿದ್ದ ಇಬ್ಬರೂ ಸೇರಿ ಒಟ್ಟು ಮೂವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೊದಲು ಅಪಘಾತವಾಗಿದ್ದ ಲಾರಿ ಹಾಗೂ ಪಿಕಪ್ ವಾಹನದ ಚಾಲಕ, ಕ್ಲೀನರ್​ಗಳು ಗಾಯಾಳುಗಳಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.

- Advertisement -
spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments