Friday, October 18, 2024
spot_img
spot_img
spot_img
spot_img
spot_img
spot_img
spot_img

ಠಾಣೆಯಲ್ಲೇ ಕಿತ್ತಾಡಿಕೊಂಡ ಎಎಸ್‌ಐ ಹಾಗೂ ಹೆಡ್‌ಕಾನ್‌ಸ್ಟೇಬಲ್‌ Suspend..!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪರಸ್ಪರ ಕಿತ್ತಾಡಿಕೊಂಡಿದ್ದ ಎಎಸ್‌ಐ ಹಾಗೂ ಹೆಡ್‌ಕಾನ್‌ಸ್ಟೆಬಲ್‌ ಅವರನ್ನು ಅಮಾನತು ಮಾಡಿ ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ ಅವರು ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ : ಮಳೆಗಾಲದಲ್ಲಿ ಹೊರಗೆ ಬಿಟ್ಟ ಶೂ ಹಾಕುವಾಗ ಎಚ್ಚರ ; ಯಾಕಂತೀರಾ.? ಈ Video ನೋಡಿ.!

ಅಮಾನತುಗೊಂಡ ಸಿಬ್ಬಂದಿ ಸಹಾಯಕ ಸಬ್‌ಇನ್‌ಸ್ಟೆಕ್ಟರ್‌ ಮಂಜುನಾಥ್‌ ಹಾಗೂ ಹೆಡ್‌ಕಾನ್‌ಸ್ಟೆಬಲ್‌ ಅಂಜನಮೂರ್ತಿ ಎಂದು ತಿಳಿದು ಬಂದಿದೆ.

ಜುಲೈ 16ರಂದು ಪ್ರಕರಣವೊಂದರ ಬಗ್ಗೆ ಎಎಸ್‌ಐ ಮಂಜುನಾಥ್ ಅವರು ಬೇರೆ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿದ್ದಂತ ಸಂದರ್ಭದಲ್ಲಿ ಅಂಜನಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದಷ್ಟೇ ಅಲ್ಲದೇ ಎಎಸ್‌ಐ ಮಂಜುನಾಥ್ ಮೇಲೆ ಹೆಡ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ಅವರು ಹಲ್ಲೆಗೂ ಮುಂದಾಗಿದ್ದಾರೆ.

ಇದನ್ನು ಓದಿ : ಹಳೆಯ ಹಾಡಿಗೆ 90 ವರ್ಷದ ಅಜ್ಜಿಯ ಮಸ್ತ್‌ ಮಸ್ತ್ ಸ್ಟೆಪ್ಸ್ ; ವಿಡಿಯೋ ನೋಡಿದ್ರೆ ವಾವ್ ಅನ್ನೋದು ಗ್ಯಾರಂಟಿ.!

ಈ ವೇಳೆಯಲ್ಲಿ ಠಾಣೆಯಲ್ಲಿದ್ದ ಇತರ ಸಿಬ್ಬಂದಿಗಳು ಜಗಳ ಬಿಡಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.

ಪ್ರಾಥಮಿಕ ವಿಚಾರಣೆ ವೇಳೆ ಇಬ್ಬರೂ ತಪ್ಪು ಎಸಗಿರುವುದು ಸಾಬೀತಾಗಿದ್ದು ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನು ಓದಿ : Video : ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟ ; ಎರಡು ಅಮೂಲ್ಯ ಎತ್ತು ಬಲಿ, ರೈತನ ಮೆದುಳು ನಿಷ್ಕ್ರಿಯ.!

ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಸಿಪಿ ಅವರಿಗೆ ವಿಸ್ತೃತ ವರದಿ ಸಲ್ಲಿಸಲಾಗಿತ್ತು. ಅವರು ವಿಚಾರಣೆ ನಡೆಸಿ ನಗರ ಪೊಲೀಸ್‌ ಕಮಿಷನರ್‌ಗೆ ವರದಿ ಸಲ್ಲಿಸಿದ್ದರು.

ವರದಿ ಆಧರಿಸಿ ಅಮಾನತು ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img