ಜನಸ್ಪಂದನ ನ್ಯೂಸ್, ಬಳ್ಳಾರಿ : ಬಳ್ಳಾರಿ (Ballari) ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮನೆ, ಕಚೇರಿಗಳ ಮೇಲೆ ಶನಿವಾರ ಮುಂಜಾನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ತಂಡ ದಾಳಿ (raid) ನಡೆಸಿದೆ.
ಶಾಸಕರಿಗೆ ಸೇರಿದ ಬೆಂಗಳೂರು, ಚೆನ್ನೈನಲ್ಲಿರುವ ಕಚೇರಿಗಳ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.
ಇದನ್ನು ಓದಿ : ಈ 2 ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ; CM ಮಹತ್ವದ ಘೋಷಣೆ.!
ಅಲ್ಲದೇ ಭರತ್ ರೆಡ್ಡಿ ಅವರ ತಂದೆ, ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮತ್ತು ಸಂಬಂಧಿಗಳ ಮನೆಗಳು, ಕಚೇರಿಗಳಲ್ಲೂ ಶೋಧ ನಡೆಯುತ್ತಿದೆ.
ಗ್ರಾನೈಟ್ ಉದ್ಯಮದಲ್ಲಿ (granite industry) ಶಾಸಕ ಭರತ್ ರೆಡ್ಡಿ ಅವರ ಕುಟುಂಬ ತೊಡಗಿಸಿಕೊಂಡಿದ್ದು, ಕೊಪ್ಪಳ ಜಿಲ್ಲೆಯ ಕುಕನೂರು, ಆಂಧ್ರ ಪ್ರದೇಶದ ಒಂಗೋಲ್ಗಳಲ್ಲಿ ಕ್ವಾರಿಗಳನ್ನು ಹೊಂದಿದೆ.
ಇನ್ನು ಬೆಂಗಳೂರಿನಿಂದ ಇ.ಡಿ ಅಧಿಕಾರಿಗಳ (ED officer’s) ತಂಡ ಆಗಮಿಸಿದ್ದು, ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೆ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನು ಓದಿ : Lokayukta : ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ಟೇಬಲ್.!
ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಚಿತ ಕುಕ್ಕರ್ಗಳನ್ನು ಹಂಚಿದ್ದರು. ಅಲ್ಲದೇ ಈ ಹಿಂದೆ ಭರತ್ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದರು.