ಜನಸ್ಪಂದನ ನ್ಯೂಸ್, ಬೆಳಗಾವಿ : ಲಾರಿಯ ಬ್ಯಾಟರಿ ಸ್ಫೋಟಗೊಂಡು ಬೆಳಗಾವಿ (Belagavi) ಜಿಲ್ಲೆಯ ಕೊಗನೊಳ್ಳಿ ಟೋಲ್ ನಾಕಾ (PB Road) ಬೆಂಕಿಗೆ ಆಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.
ಕೊಗನೊಳ್ಳಿ ಟೋಲ್ ನಾಕಾ ಬೆಳಗಾವಿ ಜಿಲ್ಲೆಯ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನಲ್ಲಿರುವ ಕರ್ನಾಟಕ- ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದೆ.
ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್ ಒಡೆತನದ ಕಾಲೇಜಿನ ಮೇಲೆ ED ದಾಳಿ.!
ಈ ಕೊಗನೊಳ್ಳಿ ಟೋಲ್ ನಾಕಾ ಬುಧವಾರ ರಾತ್ರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಈ ದುರ್ಘಟನೆಯಲ್ಲಿ ಲಾರಿ ಸಂಪೂರ್ಣ ಸುಟ್ಟು ಹೋಗಿದೆ ಎಂದು ಹೇಳಲಾಗುತ್ತಿದೆ. ಆದರೆ ಸುದೈವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ.
ಬುಧವಾರ ರಾತ್ರಿ ಬೆಳಗಾವಿಯಿಂದ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ರಾಷ್ಟ್ರೀಯ ಹೆದ್ದಾರಿ 4ರ ಮೂಲಕ ಲಾರಿಯೊಂದು ಹೊರಟಿತ್ತು, ಲಾರಿ ಕೂಗನೊಳ್ಳಿ ಟೋಲ್ ನಾಕಾ ಬಳಿ ಟೋಲ್ ದಾಟಲು ಬಂದು ನಿಂತಿತು.
ಇದನ್ನು ಓದಿ : ಎಂದಿಗೂ ಕನ್ನಡ ಮಾತನಾಡಲ್ಲ : SBI ಲೇಡಿ ಬ್ಯಾಂಕ್ ಮ್ಯಾನೇಜರ್ ಸೊಕ್ಕಿನ ಮಾತು.
ಇಲ್ಲಿ ಯಾವುದೋ ಕಾರಣಕ್ಕೆ ಚಾಲಕ
ಲಾರಿಯನ್ನು ತುಸು ಹಿಂದಕ್ಕೆ ಚಲಿಸಿದ್ದಾನೆ. ಆಗ ಆಯಿಲ್ ಟ್ಯಾಂಕ್ ರಸ್ತೆಯ ವಿಭಜಕಕ್ಕೆ ಗುದ್ದಿದೆ.
ಗುದ್ದಿದ ರಭಸಕ್ಕೆ ಹೊತ್ತಿಕೊಂಡ ಬೆಂಕಿ ಕಿಡಿಗಳು ಪಕ್ಕದಲ್ಲಿಯೇ ಇದ್ದ ಇನ್ನೊಂದು ಲಾರಿಯ ಬ್ಯಾಟರಿಗೆ ತಾಗಿದೆ. ಹೀಗೆ ಬೆಂಕಿ ಕಿಡಿ ತಾಗಿದ ಪರಿಣಾಮವಾಗಿ ಬ್ಯಾಟರಿ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡಿತು ಎಂದು ಹೇಳಲಾಗುತ್ತಿದೆ.
ಇದನ್ನು ಓದಿ : Jaipur : 7 ತಿಂಗಳಲ್ಲಿ 25 ಮದುವೆ ಮಾಡಿಕೊಂಡ 23 ವರ್ಷದ ʼಕಿʼಲೇಡಿ.!
ಆಗ ಬೆಂಕಿ ನೋಡನೋಡುತ್ತಿದ್ದಂತೆಯೇ ಟೋಲ್ ನಾಕಾದ ಟೋಲ್ ಕಲೆಕ್ಷನ್ ಕೇಂದ್ರಗಳಿಗೂ ವ್ಯಾಪಿಸಿದೆ. ತಕ್ಷಣವೇ ಟೋಲ್ ನಾಕಾದ ಸಿಬ್ಬಂದಿ ಹಾಗೂ ಲಾರಿಯಲ್ಲಿದ್ದವರು ದೂರ ಓಡಿ ಹೋ್ಇ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.
ಇತ್ತ ನಾಕಾದ ಎರಡು ಕಲೆಕ್ಷನ್ ಕೇಂದ್ರಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ.
ಇದನ್ನು ಓದಿ : ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವು.!
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಿಪ್ಪಾಣಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಟೋಲ್ ನಾಕಾಗೆ ಬೆಂಕಿ ಹತ್ತಿಕೊಂಡ ಪರಿಣಾಮವಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ಮಧ್ಯೆ ಸಂಚರಿಸಬೇಕಾದ ವಾಹನಗಳು ತಡರಾತ್ರಿಯವರೆಗೂ ಸಾಲುಗಟ್ಟಿ ನಿಂತ ದೃಶ್ಯ ಕಂಡು ಬಂದಿತು.
ವಿಡಿಯೋ :
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಕೂಗನೊಳ್ಳಿ ಟೋಲ್ ದಾಟಲು ಬಂದಿದ್ದ ಲಾರಿ, ಹಿಂದಕ್ಕೆ ಚಲಿಸುವಾಗ ಆಯಿಲ್ ಟ್ಯಾಂಕ್ ರಸ್ತೆಯ ವಿಭಜಕಕ್ಕೆ ಗುದ್ದಿದೆ. ಇದರಿಂದಾಗಿ, ಹೊತ್ತಿಕೊಂಡ ಬೆಂಕಿ ಕಿಡಿಗಳು ಪಕ್ಕದಲ್ಲಿಯೇ ಇದ್ದ ಲಾರಿಯ ಬ್ಯಾಟರಿಗೆ ತಾಗಿ ಸ್ಫೋಟ ಸಂಭವಿಸದೆ. ಲಾರಿ ಸಂಪೂರ್ಣ ಸುಟ್ಟಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ.#Accident pic.twitter.com/JxNZxdZoXV
— Prajavani (@prajavani) May 21, 2025
ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!
ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್ ಮ್ಯಾಪಿಂಗ್ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.
ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.
ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!
ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.
ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.
ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್ ಒಡೆತನದ ಕಾಲೇಜಿನ ಮೇಲೆ ED ದಾಳಿ.!
ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.
* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್ ಭೇಟಿ ಮಾಡಬೇಕು.
ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!
* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.
* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.
ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!
* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.
* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್ ನೈಟ್ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.
ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!
* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.