Thursday, September 19, 2024
spot_img
spot_img
spot_img
spot_img
spot_img
spot_img
spot_img

Belagavi : ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಳಗಾವಿ : ಈ ವರ್ಷ ರಾಜ್ಯದಲ್ಲಿ ಗಣೇಶೋತ್ಸವದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಿದೆ. ಸದ್ಯ ಬೆಳಗಾವಿ ಗಣೇಶೋತ್ಸವ ವಿಸರ್ಜನೆಯಲ್ಲಿ ದುರಂತವೊಂದು ಸಂಭವಿಸಿದೆ.

ಇದನ್ನು ಓದಿ : Special news : ಗರ್ಭ ಧರಿಸಿ ಮಕ್ಕಳಿಗೆ ಜನ್ಮ ನೀಡಬಲ್ಲ ಏಕೈಕ ಗಂಡು ಪ್ರಾಣಿ ಯಾವುದು ಗೊತ್ತಾ.?

ಅದ್ಧೂರಿ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಮೂವರು ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ಚಾಕು ಇರಿದಿದ್ದಾರೆ.

ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಾಗಿದ್ದು, ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ.

ಈ ಘಟನೆಯಲ್ಲಿ ಪ್ರವೀಣ್ ಗುಂಡ್ಯಾಗೋಳ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ದಾಖಲಿಸಲಾಗಿದೆ. ಗಾಯಾಳುಗಳಾದ ದರ್ಶನ್​​ ಪಾಟೀಲ್​, ಸತೀಶ್​​ ಪೂಜಾರಿಗೆ ಬಿಮ್ಸ್​​ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗಣಪತಿ ಮೆರವಣಿಗೆಯಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ವೇಳೆ ಕಾಲು ತಾಗಿದೆ. ಹೀಗಾಗಿ ಮೆರವಣಿಗೆಯಿಂದ ಹೊರಬಂದು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಮೂವರಿಗೆ ಚಾಕು ಇರಿಯಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Special news : ಭಾರತದ ಈ ಗ್ರಾಮದಲ್ಲಿ ಯುವತಿ ವಾರಕ್ಕೊಬ್ಬನ ಜೊತೆ ಲಿವ್ ಇನ್ ರಿಲೇಷನ್‌ಶಿಪ್’ನಲ್ಲಿರಬಹುದಂತೆ.!

ಚಾಕು ಇರಿದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬೆನ್ನತ್ತಿ ಚೇಸ್​ ಮಾಡಿ ಹಿಡಿದಿದ್ದಾರೆ. ಬೈಕ್​ನಲ್ಲಿ ಪರಾರಿಯಾಗುತ್ತಿದ್ದ ಮೂವರು ಆರೋಪಿಗಳು ವಿಶ್ವೇಶ್ವರಯ್ಯನಗರದಲ್ಲಿ ಸೆರೆಯಾಗಿದ್ದಾರೆ. ಸಿಪಿಐ ವಿಶ್ವನಾಥ್ ಕಬ್ಬೂರ ಮತ್ತು ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img