ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇಂದಿನಿಂದ ಕೇಂದ್ರದ ಭಾರತ್ ಬ್ರಾಂಡ್ ಅಕ್ಕಿ ಜನರ ಕೈಗೆ ಸಿಗಲಿದೆ.
ಚುನಾವಣೆ ಸಮೀಪಿಸುತ್ತಿದಂತೆಯೇ ಎಲ್ಲಾ ಪಕ್ಷಗಳು ತಂತ್ರಗಳನ್ನು ರೂಪಿಸಲು ಆರಂಭಿಸುತ್ತಿರುವ ಹಿನ್ನಲೆಯಲ್ಲಿ ಈ ಯೋಜನೆ ತನ್ನ ಜಾರಿಗೊಳಿಸಲಾಗುತ್ತಿದೆ.
ಇದನ್ನು ಓದಿ : ಫೆ. 6 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಸೆಳೆಯುತ್ತಿದ್ದರೆ, ಇದೀಗ ಅದಕ್ಕೆ ಟಕ್ಕರ್ ಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರತಿ ಒಂದು ಕೆ.ಜಿ ಅಕ್ಕಿಗೆ ರೂ.29 ದರ ನಿಗದಿಪಡಿಸಿ, ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ‘ಭಾರತ್ ಬ್ರ್ಯಾಂಡ್’ ಅಕ್ಕಿ ಮಾರಾಟ ಮಾಡಲು ಮುಂದಾಗಿದೆ.
ಈಗಾಗಲೇ, ‘ಭಾರತ್ ಬ್ರ್ಯಾಂಡ್’ ಗೋಧಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದ್ದು, ಇದೀಗ ಇದರೊಂದಿಗೆ ಅಕ್ಕಿಯನ್ನೂ ಸೇರಿಸಲಾಗಿದೆ.
ಪ್ರತಿ ಒಂದು ಕೆ.ಜಿ ಅಕ್ಕಿಗೆ ರೂ.29 ದರ ನಿಗದಿಪಡಿಸಲಾಗಿದ್ದು, 5 KG ಮತ್ತು 10 KG ಚೀಲಗಳಲ್ಲಿ ದೊರೆಯಲಿದೆ ಎಂದು ತಿಳಿದುಬಂದಿದೆ.
ಇದನ್ನು ಓದಿ : ಸಂಗೀತ ಕೇಳುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!
ಇಂದು ಸಂಜೆಯಿಂದ ಬೆಂಗಳೂರಿನಲ್ಲಿ ಅಕ್ಕಿ ಲಭ್ಯವಾಗಲಿದ್ದು, ಕೆಲವೇ ದಿನಗಳಲ್ಲಿ ಇಡೀ ಕರ್ನಾಟಕದಲ್ಲಿ ಅಕ್ಕಿ ಲಭ್ಯವಾಗಲಿದೆ.
ರಿಲಯನ್ಸ್, ಫಿಪ್ಕಾರ್ಟ್, ಬಿಗ್ಬಾಸ್ಕೆಟ್ ಹಾಗೂ ಇನ್ನಿತರ ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ಅಕ್ಕಿ ಖರೀದಿ ಮಾಡಬಹುದಾಗಿದೆ. ದಿನಸಿ ಅಂಗಡಿಗಳಲ್ಲಿಯೂ ಕೆಲವೇ ದಿನದಲ್ಲಿ ಅಕ್ಕಿ ಲಭ್ಯವಾಗಲಿದೆ.