ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಎಸ್ ಟಿ ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರ ಪ್ರಚಾರ (campaign) ಮಾಡಿದ್ದಾರೆ.
ಶಾಸಕರ ಕಚೇರಿಯಲ್ಲಿ ನಡೆದ ಚುನಾವಣಾ (election) ಪ್ರಚಾರ ಸಭೆಯಲ್ಲಿ ಶಾಸಕ ಪುಟ್ಟಣ್ಣ ಪರವಾಗಿ ಮತ ಯಾಚಿಸಿದರು.
ಇದನ್ನು ಓದಿ : Warrant : ನಟಿ ಜಯಪ್ರದಾರನ್ನು ತಕ್ಷಣವೇ ಬಂಧಿಸಲು ಕೋರ್ಟಿನಿಂದ ಆದೇಶ.!
ಆಡಳಿತ ರೂಢ ಕಾಂಗ್ರೆಸ್, ಬೆಂಗಳೂರು ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ಪುಟ್ಟಣ್ಣ ಅವರನ್ನು ಅಭ್ಯರ್ಥಿಯನ್ನಾಗಿ (candidate) ಘೋಷಿಸಿದೆ. ಇತ್ತ ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್ ಸಹ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.
ಇನ್ನೂ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಬಹಿರಂಗವಾಗಿಯೇ ಮಾಡುವ ಮೂಲಕ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ
ಇನ್ನೂ ವಿಧಾನಸಭೆಗೆ ಆಗಮಿಸಿದ ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿಕೊಂಡು ಬಂದಿದ್ದರು. ಆದರೆ, ಎಸ್ಟಿ ಸೋಮಶೇಖರ್ ಮಾತ್ರ ಕೇಸರಿ ಶಾಲು ಹಾಕಿಕೊಂಡು ಬಂದಿರಲಿಲ್ಲ.
ಇದನ್ನು ಓದಿ : Belagavi : ವಕೀಲನ ಮೇಲೆ ಮಾರಣಾಂತಿಕ ಹಲ್ಲೆ ; ಇಬ್ಬರು ಪೊಲೀಸ್ ವಶಕ್ಕೆ.!
ಸರ್ಕಾರದ ವಿರುದ್ಧ ಬಿಜೆಪಿ ಸದಸ್ಯರೆಲ್ಲರೂ ಸಭಾತ್ಯಾಗ ಮಾಡಿದ್ದರು. ಆದರೆ, ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್ ಸಭಾತ್ಯಾಗ ಮಾಡದೇ ಸದನದಲ್ಲಿ ಕುಳಿತುಕೊಳ್ಳುವ ಮೂಲಕ ಬಿಜೆಪಿ ನಾಯಕರಿಗೆ ಮುಜುಗರವನ್ನುಂಟು (Embarrassment) ಮಾಡಿದರು.