Wednesday, September 17, 2025

Janaspandhan News

HomeGeneral NewsFemale PSI : ಬಿ ರಿಪೋರ್ಟ್‌ಗಾಗಿ ಲಂಚ : ಮಹಿಳಾ ಪಿಎಸ್‌ಐ ಲೋಕಾಯುಕ್ತ ಬಲೆಗೆ.!
spot_img
spot_img
spot_img

Female PSI : ಬಿ ರಿಪೋರ್ಟ್‌ಗಾಗಿ ಲಂಚ : ಮಹಿಳಾ ಪಿಎಸ್‌ಐ ಲೋಕಾಯುಕ್ತ ಬಲೆಗೆ.!

- Advertisement -

ಜನಸ್ಪಂದನ ನ್ಯೂಸ್, ಬೆಂಗಳೂರು : ಗೋವಿಂದಪುರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (Female PSI) ಸಾವಿತ್ರಿ ಬಾಯಿ ಅವರು ಬಿ ರಿಪೋರ್ಟ್ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ.

ರೂ.1.25 ಲಕ್ಷಕ್ಕೆ ಬೇಡಿಕೆ ; ಹಣದೊಂದಿಗೆ ಬಂಧನ :

ಹೆಚ್‌ಬಿಆರ್ ಲೇಔಟ್ ನಿವಾಸಿ ಮೊಹಮದ್ ಯೂನಸ್ ವಿರುದ್ಧ ದಾಖಲಾದ ಪ್ರಕರಣದಲ್ಲಿ B ರಿಪೋರ್ಟ್ ಸಲ್ಲಿಸುವ ಸಲುವಾಗಿ ಮಹಿಳಾ ಪಿಎಸ್‌ಐ (Female PSI) ಸಾವಿತ್ರಿ ಬಾಯಿ ಅವರು ರೂ.1.25 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ದೂರುದಾರನಿಂದ ಹಣ ಸ್ವೀಕರಿಸುತ್ತಿದ್ದ ವೇಳೆ, DSP ಪೂವಯ್ಯ ನೇತೃತ್ವದ ಲೋಕಾಯುಕ್ತ ತಂಡ ಮಹಿಳಾ ಪಿಎಸ್‌ಐ (Female PSI) ಅವರನ್ನು ಹಣದ ಸಮೇತ ಬಂಧಿಸಿದೆ. ಪ್ರಸ್ತುತ ಅಧಿಕಾರಿಯ ವಿಚಾರಣೆ ನಡೆಯುತ್ತಿದೆ ಎಂದು ಲೋಕಾಯುಕ್ತ ಮೂಲಗಳು ಮಾಹಿತಿ ನೀಡಿವೆ.

ಪ್ರಕರಣದ ಹಿಂದಿನ ಹಿನ್ನೆಲೆ ಏನು?

ಮದುವೆಯಾದರೂ ಕೂಡ ವಿಷಯ ತಿಳಿಸದೇ ಆರೋಪಿ ಮೊಹಮದ್ ಯೂನಸ್ ಮತ್ತೊಬ್ಬ ಯುವತಿಯ ಜೊತೆ ಸಹಜೀವನ ನಡೆಸುತ್ತಿದ್ದರು. ವಿಷಯ ಬೆಳಕಿಗೆ ಬಂದಾಗ ಯುವತಿ ಅವರನ್ನು ಪ್ರಶ್ನಿಸಲು ಹೋಗಿದ್ದಾಗ ಗಲಾಟೆ ಉಂಟಾಗಿ ಆಕೆಯ ಮೇಲೆ ಹಲ್ಲೆ ನಡೆದಿತ್ತು.

ಮೇ 5ರಂದು ಆರೋಪಿಯು ಯುವತಿಯನ್ನು ಮತ್ತೆ ಭೇಟಿಯಾಗಿ ದೂರು ವಾಪಸ್ ಪಡೆಯುವಂತೆ ಒತ್ತಡ ಹೇರಿದ್ದ. ಆಕೆ ನಿರಾಕರಿಸಿದಾಗ ಮತ್ತೊಮ್ಮೆ ಹಲ್ಲೆ ನಡೆಸಿದ್ದಾನೆ. ಈ ಹಿನ್ನೆಲೆಯಲ್ಲಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಲೋಕಾಯುಕ್ತದಿಂದ ಕಟ್ಟುನಿಟ್ಟಿನ ಕ್ರಮ :

ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಮಹಿಳಾ ಪಿಎಸ್‌ಐ (Female PSI) ಸಾವಿತ್ರಿ ಬಾಯಿ ಹಣ (ಲಂಚ) ಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಮಾಹಿತಿ ಮೇರೆಗೆ ಲೋಕಾಯುಕ್ತವು ಕೈಚಳಕ ತೋರಿಸಿದ್ದು, ಇದೀಗ ಹಣದೊಂದಿಗೆ ಅಧಿಕಾರಿ (Female PSI) ಯನ್ನು ಬಂಧಿಸಿದೆ. ಸಲ್ಲದೆ ಆರೋಪದ ಬಗ್ಗೆ ಮುಂದಿನ ತನಿಖೆ ಮುಂದುವರೆದಿದೆ.


“ಹಳ್ಳಕ್ಕೆ ಬಿದ್ದ ಬೆಳಗಾವಿ–ಮಂಗಳೂರು Bus : ಓರ್ವ ಸಾವು, 18 ಪ್ರಯಾಣಿಕರಿಗೆ ಗಾಯ”

Bus

ಜನಸ್ಪಂದನ ನ್ಯೂಸ್, ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ ವೇಳೆಯಲ್ಲಿ ಬಸ್ (Bus) ಅಪಘಾತಕ್ಕಿಡಾಗಿದೆ.

ಈ ದುರ್ಘಟನೆಯಲ್ಲಿ (Bus accident) ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, 18 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಅಪಘಾತಕ್ಕೆ ಒಳಗಾದ ವಾಹನ ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ (Bus) ಆಗಿದೆ.

ಬಸ್ (Bus) ಅಗಸೂರು ಬಳಿ ಇರುವ ಜಗದೀಶ ಡಾಬಾ ಎದುರುದಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಘಟನೆ ಸೋಮವಾರ ಬೆಳಗಿನ 3 ಗಂಟೆ ಸುಮಾರಿಗೆ ಸಂಭವಿಸಿದೆ.

ಅಪಘಾತ ಸಂಭವಿಸುವ ವೇಳೆಗೆ ಬಹುತೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು. ಬಸ್ (Bus) ಉರುಳಿದ ಶಬ್ದದಿಂದ ಪ್ರಯಾಣಿಕರು ಬೆಚ್ಚಿಬಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರು ಹಾಗೂ ಅಂಕೋಲಾ ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್ (Bus) ಮೇಲಕ್ಕೆತ್ತುವ ಸಂದರ್ಭದಲ್ಲಿ ಅದರೊಳಗೆ ಸಿಲುಕಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಯಿತು.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಗಾಯಾಳುಗಳನ್ನು ತಕ್ಷಣವೇ ಅಂಕೋಲಾ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. Bus ಅಪಘಾತದ ದೃಶ್ಯವನ್ನು ನೋಡಿದರೆ ಇನ್ನು ಹೆಚ್ಚಿನ ಪ್ರಾಣಾಪಾಯ ಸಂಭವಿಸಿರಬಹುದೆಂಬ ಭಾವನೆ ಬರುತ್ತಿದೆ. ಆದರೆ ಅದೃಷ್ಟವಶಾತ್ ಅಂತ ಘಟನೆ ಸಂಭವಿಸಿಲ್ಲ ಎನ್ನಲಾಗುತ್ತಿದೆ.

Bus ಅಪಘಾತದ ವಿಡಿಯೋ :

- Advertisement -
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments