Tuesday, May 13, 2025
HomeGeneral Newsಕಾರಿನಲ್ಲಿ‌ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆಗೆ ಶರಣಾದ Businessman.!
spot_img
spot_img
spot_img

ಕಾರಿನಲ್ಲಿ‌ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆಗೆ ಶರಣಾದ Businessman.!

ಜನಸ್ಪಂದನ ನ್ಯೂಸ್, ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ (Karkala in Udupi district) ತಾಲೂಕಿನ ನಿಟ್ಟೆಯ ದೂಪದಕಟ್ಟೆ ಸಮೀಪ ಉದ್ಯಮಿಯೊಬ್ಬರು ತಮ್ಮ ಕಾರಿನಲ್ಲಿ ಗುಂಡು ಹಾರಿಸಿಕೊಂಡು (Shooting) ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ (Business man) ಎನ್‌ ಆರ್ ದಿಲೀಪ್ ಎಂದು ತಿಳಿದು ಬಂದಿದೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಕೆಲ ವರ್ಷಗಳಿಂದ ಕುಟುಂಬದ ಜೊತೆ ಮಂಗಳೂರಿನಲ್ಲಿ ವಾಸವಾಗಿದ್ದ ದಿಲೀಪ್ ಎನ್ ಆರ್ ಅವರು, ಅಲ್ಲಿಯೇ ಉದ್ಯಮ ನಡೆಸುತ್ತಿದ್ದರು.

ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿಯ ಸಮೀಪ ಎಸ್ಟೇಟ್ ಮುಂಭಾಗ ತಮ್ಮ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದಿಲೀಪ್ ಕುಮಾರ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇನ್ನೂ ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments