Saturday, January 18, 2025
HomeNational NewsLive in ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿ ಭೀಕರ ಹತ್ಯೆಗೈದು ಫ್ರಿಡ್ಜ್​ನೊಳಗಿಟ್ಟ ಗೆಳೆಯ.!
spot_img

Live in ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿ ಭೀಕರ ಹತ್ಯೆಗೈದು ಫ್ರಿಡ್ಜ್​ನೊಳಗಿಟ್ಟ ಗೆಳೆಯ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ವಿವಾಹಿತ ವ್ಯಕ್ತಿಯೋರ್ವ ಲಿವ್- ಇನ್ ಸಂಬಂಧದಲ್ಲಿದ್ದ (live in relationship) ಗೆಳತಿಯನ್ನು ಕೊಲೆ ಮಾಡಿ ಆಕೆಯ ಮೃತದೇಹವನ್ನು 8 ತಿಂಗಳ ಕಾಲ ಫ್ರಿಡ್ಜ್ ನಲ್ಲಿಟ್ಟಿರುವ ಆಘಾತಕಾರಿ (shocking) ಘಟನೆ ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಉಜ್ಜಯಿನಿ ನಿವಾಸಿ ಸಂಜಯ್ ಪಾಟಿದಾರ್ ಎಂಬಾತ ಪಿಂಕಿ ಪ್ರಜಾಪತಿ ಎಂಬ ಮಹಿಳೆಯನ್ನು ಕೊಲೆ ಮಾಡಿ ಆಕೆಯ ಮೃತದೇಹವನ್ನು 8 ತಿಂಗಳ ಕಾಲ ಫ್ರಿಡ್ಜ್ ನಲ್ಲಿಟ್ಟಿದ್ದ ಎಂದು ವರದಿಯಾಗಿದೆ.

ಇದನ್ನು ಓದಿ : ಕರ್ತವ್ಯದ ವೇಳೆ ದುರ್ನಡತೆ ; ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ Suspend.!

ಆರೋಪಿಯ ಬಾಡಿಗೆ ಮನೆಯಲ್ಲಿದ್ದ ಫ್ರಿಡ್ಜ್ ನಲ್ಲಿ ಸೀರೆಯುಟ್ಟು, ಆಭರಣ ಧರಿಸಿದ್ದ ಮಹಿಳೆಯ ಕೊಳೆತ ಮೃತದೇಹ ಪತ್ತೆಯಾಗಿದ್ದು, ಮೃತದೇಹದ ಕೈಗಳನ್ನು ಕತ್ತಿಗೆ ಕಟ್ಟಿಹಾಕಲಾಗಿದೆ (The hands are tied to the sword). ಈ ಬಗ್ಗೆ ಪೊಲೀಸರು ಜೂನ್ ನಲ್ಲಿ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ಪಿಂಕಿ ಪ್ರಜಾಪತಿ ಜೊತೆ ಸಂಜಯ್ ಪಾಟಿದಾರ್ ಲಿವ್- ಇನ್ ಸಂಬಂಧದಲ್ಲಿದ್ದಳು. ಈ ನಡುವೆ ತನ್ನನ್ನು ವಿವಾಹವಾಗುವಂತೆ ಮಹಿಳೆ ಒತ್ತಾಯಿಸಿದ್ದು (forced), ಇದರಿಂದಾಗಿ ಪಾಟಿದಾರ್ ತನ್ನ ಸ್ನೇಹಿತನ ಸಹಾಯದಿಂದ ಕೊಲೆ ಮಾಡಿದ್ದಾನೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : 7 ಮದುವೆ ಮುಚ್ಚಿಟ್ಟು ಮತ್ತೆ ಮದುವೆಯಾಗಿದ್ದ Lady ; ವಿಚಾರ ತಿಳಿದು ಪತಿ ಮಾಡಿದ್ದೇನು ಗೊತ್ತಾ.?

ಈ ಕುರಿತು ದೇವಾಸ್ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಟ್ ಅವರು ತಿಳಿಸಿದ್ದು, ಮನೆಯಿಂದ ದುರ್ವಾಸನೆ (stench) ಬರುವುದನ್ನು ಅರಿತ ನೆರೆಹೊರೆಯವರು ಮನೆಯ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಮಾಲೀಕ ಬಂದು ಪರಿಶೀಲನೆ ನಡೆಸಿದಾಗ ಮಹಿಳೆಯ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆಯಾಗಿದೆ. ಈ ವಿಚಾರವನ್ನು ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ

ಇನ್ನು ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಮಾಹಿತಿಯನ್ನು ಅಸಲಿ ಸತ್ಯ ಬಾಯ್ಬಿಟ್ಟಿದ್ದಾನೆ. ತನಗೆ ವಿವಾಹವಾಗಿದ್ದು, ಪಿಂಕಿ ತನ್ನನ್ನು ಮದುವೆಯಾಗು ಎಂದು ಪೀಡಿಸಿದ್ದಕ್ಕೆ ಸ್ನೇಹಿತರ ಜತೆ ಸೇರಿ ಕೊಲೆ ಮಾಡಿದ್ದೇನೆ. ಬಳಿಕ ದೇಹವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿ ಇಟ್ಟಿರುವುದಾಗಿ ತಿಳಿಸಿದ್ದಾನೆ.

ಇದನ್ನು ಓದಿ : Belagavi : ಫೈರಿಂಗ್ ನಡೆಸಿ ಉದ್ಯಮಿಯ ಹತ್ಯೆಗೆ ಯತ್ನ ; ಬೆಚ್ಚಿಬಿದ್ದ ಜನರು.!

ಸದ್ಯ ಸಂಜಯ್‌ ಪಾಟಿದಾರ್‌ ಅನ್ನು ಅರೆಸ್ಟ್ ಮಾಡಿರುವ ಪೊಲೀಸರು ಈತನಿಗೆ ಸಹಾಯ ಮಾಡಿದ ಸ್ನೇಹಿತರ ಪತ್ತೆ ಕಾರ್ಯ ನಡೆಸಿದ್ದಾರೆ.

ಹಿಂದಿನ ಸುದ್ದಿ : 7 ಮದುವೆ ಮುಚ್ಚಿಟ್ಟು ಮತ್ತೆ ಮದುವೆಯಾಗಿದ್ದ ಲೇಡಿ ; ವಿಚಾರ ತಿಳಿದು ಪತಿ ಮಾಡಿದ್ದೇನು ಗೊತ್ತಾ.?

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಬಸವೇಶ್ವರನಗರ ಠಾಣೆಯಲ್ಲಿ, ಏಳು ಮದುವೆಯಾಗಿದ್ದ (A woman who had seven marriages) ವಿಚಾರ ಮುಚ್ಚಿಟ್ಟ ಕಿಲಾಡಿ ಲೇಡಿ, ಎಂಟನೇ ಮದುವೆಯಾಗಿ ಪತಿಯ ಮನೆಯಲ್ಲಿದ್ದ ನಗದು, ಚಿನ್ನಾಭರಣ ದೋಚಿ ಆತನ ವಿರುದ್ದವೇ ಸುಳ್ಳು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

ಇದನ್ನು ಓದಿ : ವೃದ್ದರನ್ನು ಬಹಳ ಹೊತ್ತು ಕಾಯಿಸಿದ ಅಧಿಕಾರಿಗಳಿಗೆ ನಿಂತು ಕೆಲಸ ಮಾಡುವ ಶಿಕ್ಷೆ ನೀಡಿದ IAS ಆಫೀಸರ್.!

ಸುಳ್ಳು ಪ್ರಕರಣ (false case) ದಾಖಲಿಸಿದ ಆರೋಪದಡಿ ಮಹಿಳೆ ಸೇರಿ ನಾಲ್ವರ ವಿರುದ್ದ ಪ್ರಕರಣ ದಾಖಲಾಗಿದೆ.

ಮೋಸ ಹೋದ ರಾಮ ಕೃಷ್ಣ (62) ಅವರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ಮಂಡ್ಯ ಜಿಲ್ಲೆ ಮದ್ದೂರು ಟೌನ್‌ನ (Maddur Town of Mandya District) ನಾಲ್ವರ ವಿರುದ್ಧ ಬಿಎನ್ 2 0 314, 316(2), 318(4), 351(2), 351(3), 61(2), 82(1), 82(2), 83, 3(5) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನು ಓದಿ : ಪ್ರಾಣಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತವೆ ಅಂದ್ರೆ ನೀವು ನಂಬುತ್ತಿರಾ.? ಈ Video ನೋಡಿ.!

ಘಟನೆಯ ಹಿನ್ನೆಲೆ :
ದೂರುದಾರ ರಾಮಕೃಷ್ಣ ಅವರು ಪತ್ನಿ ಸಾವನ್ನಪ್ಪಿದ್ದಾರೆ. 2020ರ ನವೆಂಬರ್‌ನಲ್ಲಿ ಅವರಿಗೆ ಮ್ಯಾಟ್ರಿಮೋನಿ ವೆಬ್‌ಸೈಟ್‌ನಲ್ಲಿ ಎಚ್. ಎಂ. ವಿಜಯಲಕ್ಷ್ಮೀ ಪರಿಚಯವಾಗಿದೆ. ನಂತರ ರಾಮನಗರದ ದೇವಸ್ಥಾನವೊಂದರಲ್ಲಿ ಗುರು- ಹಿರಿಯರ ಸಮ್ಮುಖದಲ್ಲಿ ವಿಜಯಲಕ್ಷ್ಮೀ ಅವರನ್ನು ರಾಮಕೃಷ್ಣ ಎರಡನೇ ಮದುವೆಯಾಗಿದ್ದರಂತೆ (second marriage).

ಈ ಮದುವೆಗೂ ಮುಂಚೆ ಈ ಹಿಂದೆ ನನಗೆ ಮದುವೆಯಾಗಿದ್ದು, ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ವಿಜಯಲಕ್ಷ್ಮೀ ರಾಮಕೃಷ್ಣಗೆ ತಿಳಿಸಿದ್ದರು.

ಇದನ್ನು ಓದಿ : ತಂದೆತಾಯಿಯನ್ನು ನೋಡಿಕೊಳ್ಳದ ಮಕ್ಕಳಿಗೆ ಆಸ್ತಿ ಸಿಗುವುದಿಲ್ಲ ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!

ಬಳಿಕ ರಾಮಕೃಷ್ಣ ಅವರನ್ನು ಮದುವೆಯಾದ ಕೆಲ ದಿನಗಳ ಬಳಿಕ ಅವರ ಪಿಎಫ್ ಹಣ ಕಬಳಿಸುವ ಉದ್ದೇಶದಿಂದ ಸಣ್ಣಪುಟ್ಟ ವಿಚಾರಕ್ಕೆ ಮನೆಯಲ್ಲಿ ಜಗಳ ಮಾಡುವುದು, ಮಾನಸಿಕ ಮತ್ತು ದೈಹಿಕ ಹಿಂಸೆ (Mental and physical violence) ನೀಡುವುದು, ಪಿಎಫ್ ಹಣ ನೀಡದಿದ್ದಲ್ಲಿ ನೇಣು ಹಾಕಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ರಾಮಕೃಷ್ಣ ಆರೋಪಿಸಿದ್ದಾರೆ.

ತಾನು ಏಳು ಮದುವೆಯಾಗಿರುವ ವಿಚಾರವನ್ನು ವಿಜಯಲಕ್ಷ್ಮಿ ಮುಚ್ಚಿಟ್ಟಿದ್ದಾರೆ. ಮದುವೆ ಆದ ಗಂಡಂದಿರಿಗೆ ಗೊತ್ತಾಗದಂತೆ ನಗದು ಹಣ ಹಾಗೂ ಚಿನ್ನಾಭರಣ ದೋಚಿದ್ದಾರೆ. ವಾಪಸ್ಸು ಕೊಡು ಎಂದು ಕೇಳಿದರೆ ನೇಣು ಹಾಕಿಕೊಳ್ಳುವುದಾಗಿ ಬೆದರಿಸಿದ್ದಾರಂತೆ. ಇದೇ ರೀತಿ ರಾಮಕೃಷ್ಣ ಅವರಿಗೆ ತಿಳಿಯದಂತೆ ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಆಭರಣಗಳು ಮತ್ತು 25 ಲಕ್ಷ ನಗದು ಕದ್ದೊಯ್ದಿದ್ದಾರೆ.

ಇದನ್ನು ಓದಿ : ಜಾತ್ರೆಯಲ್ಲಿ ರೊಚ್ಚಿಗೆದ್ದು ಜನರನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿದ ಆನೆ ; Shocking ವಿಡಿಯೋ ಇಲ್ಲಿದೆ.!

ಅಲ್ಲದೇ ರಾಮಕೃಷ್ಣ ವಿರುದ್ಧ ಮದ್ದೂರು ಹಾಗೂ ಮಂಡ್ಯ ನ್ಯಾಯಾಲಯಗಳಲ್ಲಿ ಚೆಕ್ ಬೌನ್ಸ್ ಎಂದು ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!