ಜನಸ್ಪಂದನ ನ್ಯೂಸ್, ಡೆಸ್ಕ್ : ಆಹಾರ ಹಾಗೂ ಪಾನೀಯಗಳ ರುಚಿ ಹೆಚ್ಚಿಸಲು ಸಾಮಾನ್ಯವಾಗಿ ಬಳಸುವ ಸೆಲರಿ (Celery), ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ವಿಶೇಷವಾಗಿ ಸೆಲರಿ ನೀರು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ತೂಕ ಇಳಿಸಲು ಸಹಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಸೆಲರಿ (Celery) ನೀರು ತಯಾರಿಸುವ ಸರಳ ವಿಧಾನ :
ಒಂದು ಪಾತ್ರೆಯಲ್ಲಿ ಒಂದು ಲೋಟ ನೀರನ್ನು ತೆಗೆದುಕೊಳ್ಳಿ. ಅದಕ್ಕೆ ಒಂದು ಚಮಚ ಸೆಲರಿ (Celery) ಸೇರಿಸಿ ಮಧ್ಯಮ ಉರಿಯಲ್ಲಿ ಕುದಿಸಿ. ನೀರು ಅರ್ಧಕ್ಕೆ ಇಳಿದ ಬಳಿಕ ಗ್ಯಾಸ್ ಆಫ್ ಮಾಡಿ. ತಣ್ಣಗಾದ ನಂತರ ಫಿಲ್ಟರ್ ಮಾಡಿ ಲೋಟದಲ್ಲಿ ಹಾಕಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ ಫಲಿತಾಂಶ ನೀಡುತ್ತದೆ.
ಇದನ್ನು ಓದಿ : ISRO (LPSC) ದಲ್ಲಿ 10ನೇ ತರಗತಿಯಿಂದ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶ.!
ಚಯಾಪಚಯ ಕ್ರಿಯೆ ಹೆಚ್ಚಿಸಿ ಕೊಬ್ಬು ಕರಗಿಸುವ ಗುಣ :
ಸೆಲರಿ (Celery) ನೀರಿನಲ್ಲಿರುವ ಪೋಷಕಾಂಶಗಳು ದೇಹದ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ಸಂಗ್ರಹವಾಗಿರುವ ಕೊಬ್ಬನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ದಿನನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸುಮಾರು 30 ದಿನಗಳವರೆಗೆ ಸೇವಿಸಿದರೆ ತೂಕ ಇಳಿಕೆಯಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು.
ಸೆಲರಿ (Celery) ಯಿಂದಾಗುವ ಮತ್ತಷ್ಟು ಆರೋಗ್ಯ ಪ್ರಯೋಜನಗಳು :
- ಹೊಟ್ಟೆಯ ಸಮಸ್ಯೆಗಳನ್ನು ತಗ್ಗಿಸಲು ಸಹಕಾರಿ
- ಕರುಳಿನ ಆರೋಗ್ಯ ಸುಧಾರಣೆ
- ಸಂಧಿವಾತ ನೋವಿನಿಂದ ನಿವಾರಣೆ
- ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ನೆರವು.
ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?
ಸೆಲರಿ (Celery) ನೀರನ್ನು ನಿಯಮಿತವಾಗಿ ಆಹಾರ ಯೋಜನೆಯಲ್ಲಿ ಸೇರಿಸಿಕೊಳ್ಳುವುದರಿಂದ ದೇಹದ ಸಮಗ್ರ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ.
> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.
“ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್ನ ಸೂಚನೆ ಆಗಿರಬಹುದು”

ಜನಸ್ಪಂದನ ನ್ಯೂಸ್, ಆರೋಗ್ಯ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ಖಂಡಿತ ನಿರ್ಲಕ್ಷಿಸಬೇಡಿ, ಅದು ಕಿಡ್ನಿ (Kidney) ಫೆಲ್ಯೂರ್ನ ಸೂಚನೆ ಆಗಿರಬಹುದು”.! ಬನ್ನಿ ಈ ಬಗ್ಗೆ ತಿಳಿಯೋಣ.!
ಮೂತ್ರಪಿಂಡಗಳು (Kidney) ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ರಕ್ತವನ್ನು ಶುದ್ಧೀಕರಿಸುವ ಫಿಲ್ಟರ್ನಂತಿವೆ. ಇವು ದೇಹದಿಂದ ಟಾಕ್ಸಿನ್ ಹಾಗೂ ಹೆಚ್ಚುವರಿ ದ್ರವವನ್ನು ತೆಗೆದುಹಾಕಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ ಮತ್ತು ಮೂಳೆಗಳಿಗೆ ಅಗತ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುತ್ತವೆ.
ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!
ಆದರೆ, ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ದೇಹದಲ್ಲಿ ವಿಷಕಾರಿ ವಸ್ತುಗಳು ಮತ್ತು ದ್ರವ ಸಂಗ್ರಹವಾಗಿ ಕಿಡ್ನಿ ಫೆಲ್ಯೂರ್ ಎಂಬ ಗಂಭೀರ ಸ್ಥಿತಿಗೆ ಕಾರಣವಾಗಬಹುದು.
ಈ ಕಾಯಿಲೆಯ ಆರಂಭಿಕ ಲಕ್ಷಣಗಳು ಸಾಮಾನ್ಯವಾಗಿ ಆಯಾಸ ಅಥವಾ ದೌರ್ಬಲ್ಯದಂತೆ ಕಾಣುವ ಕಾರಣ. ಅನೇಕರು ಅದನ್ನು ನಿರ್ಲಕ್ಷಿಸುತ್ತಾರೆ ಆದರೆ, ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಪರಿಸ್ಥಿತಿ ಮಾರಕವಾಗಬಹುದು. ಆದ್ದರಿಂದ ದೇಹದಲ್ಲಿ ಕಾಣುವ ಕೆಳಗಿನ ಬದಲಾವಣೆಗಳಿಗೆ ತಕ್ಷಣ ಗಮನ ನೀಡುವುದು ಅತ್ಯಗತ್ಯ.!
ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?
ಕಿಡ್ನಿ (Kidney) ವೈಪಲ್ಯದ ಲಕ್ಷಣಗಳು :
1. ಕಾಲುಗಳಲ್ಲಿ ನೋವು ಮತ್ತು ಊತ :
ಪಾದಗಳು ಹಾಗೂ ಕಣಕಾಲುಗಳಲ್ಲಿ ಊತ ಉಂಟಾಗುವುದು ಮೂತ್ರಪಿಂಡ ವೈಫಲ್ಯದ ಪ್ರಮುಖ ಸೂಚನೆ. ಮೂತ್ರಪಿಂಡಗಳು ಹೆಚ್ಚುವರಿ ನೀರು ಮತ್ತು ಸೋಡಿಯಂ ಅನ್ನು ಹೊರಹಾಕಲು ಅಸಮರ್ಥವಾಗುವಾಗ, ದ್ರವವು ದೇಹದ ಕೆಳಭಾಗದಲ್ಲಿ ಸಂಗ್ರಹವಾಗಿ ಊತ ಮತ್ತು ನೋವಿಗೆ ಕಾರಣವಾಗುತ್ತದೆ.
2. ನಿರಂತರ ಆಯಾಸ :
ಮೂತ್ರಪಿಂಡಗಳು ಸರಿಯಾಗಿ ಕೆಲಸ ಮಾಡದಿದ್ದರೆ, ಎರಿಥ್ರೋಪೊಯೆಟಿನ್ ಎಂಬ ಹಾರ್ಮೋನ್ ಉತ್ಪಾದನೆ ಕಡಿಮೆಯಾಗುತ್ತದೆ. ಇದರ ಕೊರತೆಯಿಂದ ರಕ್ತಹೀನತೆ (Anemia) ಉಂಟಾಗಿ, ಅಂಗಾಂಶಗಳು ಮತ್ತು ಸ್ನಾಯುಗಳಿಗೆ ಆಮ್ಲಜನಕ ಸರಿಯಾಗಿ ತಲುಪದೆ, ವ್ಯಕ್ತಿ ಯಾವಾಗಲೂ ದಣಿದ ಹಾಗೆ ಅನುಭವಿಸುತ್ತಾರೆ.
ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!
3. ಚರ್ಮದಲ್ಲಿ ತುರಿಕೆ ಮತ್ತು ಬಣ್ಣ ಬದಲಾವಣೆ :
ರಕ್ತದಲ್ಲಿ ವಿಷಕಾರಿ ವಸ್ತುಗಳು ಹೆಚ್ಚಾಗಿ ಸಂಗ್ರಹವಾಗುವ ಕಾರಣ ಚರ್ಮದಲ್ಲಿ ನಿರಂತರ ತುರಿಕೆ ಉಂಟಾಗಬಹುದು. ಕೆಲವೊಮ್ಮೆ ಚರ್ಮ ಒಣಗುವುದು, ಹಳದಿ ಅಥವಾ ಕಂದು ಬಣ್ಣಕ್ಕೆ ತಿರುಗುವುದು ಸಹ ಕಿಡ್ನಿ ಸಮಸ್ಯೆಯ ಸೂಚನೆ ಆಗಬಹುದು.
4. ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ :
ರಾತ್ರಿ ಆಗಾಗ್ಗೆ ಮೂತ್ರ ವಿಸರ್ಜನೆ, ಮೂತ್ರದ ಪ್ರಮಾಣದಲ್ಲಿ ಏರಿಕೆ ಅಥವಾ ಇಳಿಕೆ, ನೊರೆ ಮೂತ್ರ (ಪ್ರೋಟೀನ್ ಇರುವಿಕೆ), ಗಾಢ ಬಣ್ಣ ಅಥವಾ ರಕ್ತದ ಅಂಶ ಇರುವಿಕೆ. ಇವೆಲ್ಲವೂ ಮೂತ್ರಪಿಂಡಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಾಸವನ್ನು ಸೂಚಿಸುತ್ತವೆ.
5. ಉಸಿರಾಟದ ತೊಂದರೆ :
ಮೂತ್ರಪಿಂಡ (Kidney) ವೈಫಲ್ಯದಿಂದ ಹೆಚ್ಚುವರಿ ದ್ರವವು ಶ್ವಾಸಕೋಶದ ಸುತ್ತಲೂ ಸಂಗ್ರಹವಾಗಿ ಉಸಿರಾಟ ಕಷ್ಟವಾಗಬಹುದು. ಜೊತೆಗೆ ರಕ್ತಹೀನತೆಯಿಂದಾಗಿ ದೇಹಕ್ಕೆ ಆಮ್ಲಜನಕ ಕಡಿಮೆಯಾಗುವುದರಿಂದ, ಕಡಿಮೆ ಶಾರೀರಿಕ ಚಟುವಟಿಕೆಯಲ್ಲಿಯೂ ಉಸಿರಾಟ ತೊಂದರೆ ಉಂಟಾಗುತ್ತದೆ.
ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!
ಸಂಪಾದಕೀಯ :
ಈ ಲಕ್ಷಣಗಳಲ್ಲಿ ಯಾವುದಾದರೂ ಕಂಡುಬಂದರೆ, ತಕ್ಷಣ ವೈದ್ಯಕೀಯ ಸಲಹೆ ಪಡೆಯುವುದು ಬಹಳ ಮುಖ್ಯ. ಸಮಯಕ್ಕೆ ಚಿಕಿತ್ಸೆ ಪಡೆದರೆ ಮೂತ್ರಪಿಂಡ (Kidney) ಗಳ ಆರೋಗ್ಯವನ್ನು ಕಾಪಾಡಬಹುದು ಮತ್ತು ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.






