ಶುಕ್ರವಾರ, ಜನವರಿ 2, 2026

Janaspandhan News

HomeCrime Newsಭೀಕರ ಅಪಘಾತ: ಖಾಸಗಿ ಬಸ್–ಲಾರಿ ಡಿಕ್ಕಿ, 9 ಜನ ಸಜೀವ ದಹನ.
spot_img
spot_img
spot_img

ಭೀಕರ ಅಪಘಾತ: ಖಾಸಗಿ ಬಸ್–ಲಾರಿ ಡಿಕ್ಕಿ, 9 ಜನ ಸಜೀವ ದಹನ.

- Advertisement -

ಜನಸ್ಪಂದನ ನ್ಯೂಸ್‌, ಚಿತ್ರದುರ್ಗ : ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ (Sea Bird) ಖಾಸಗಿ ಬಸ್, ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದಿಗೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ 9 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಈ ದುರ್ಘಟನೆ ಗುರುವಾರ ಮುಂಜಾನೆ ನಡೆದಿದೆ. ಬೆಂಗಳೂರು ನಗರದಿಂದ ರಾತ್ರಿ ಸುಮಾರು 8.30ಕ್ಕೆ ಹೊರಟಿದ್ದ ಕೆಎ 01–ಎಇ 5217 ಸಂಖ್ಯೆಯ ಸೀ ಬರ್ಡ್ ಬಸ್, ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಲಾರಿಯೊಂದು ಬಸ್‌ನ ಡೀಸೆಲ್ ಟ್ಯಾಂಕ್ ಭಾಗಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಯಿಂದ ಮೊದಲು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬಸ್‌ಗೂ ಬೆಂಕಿ ಆವರಿಸಿದೆ.

ಬೆಂಕಿಗೆ ಸಿಲುಕಿದ ಪ್ರಯಾಣಿಕರು :

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಅಪಘಾತದ ವೇಳೆ ಬಸ್‌ನಲ್ಲಿ ಒಟ್ಟು 29 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಡೀಸೆಲ್ ಟ್ಯಾಂಕ್ ಬಳಿ ಲಾರಿ ಡಿಕ್ಕಿ ಹೊಡೆದ ಕಾರಣ ಬೆಂಕಿ ವೇಗವಾಗಿ ಹರಡಿದ್ದು, ನಿದ್ರೆಯಲ್ಲಿದ್ದ ಕೆಲ ಪ್ರಯಾಣಿಕರಿಗೆ ತಕ್ಷಣ ಹೊರಬರಲು ಸಾಧ್ಯವಾಗಿಲ್ಲ. ಈ ಪೈಕಿ 9 ಮಂದಿ ಬಸ್ ಒಳಗಡೆಯೇ ಮೃತಪಟ್ಟಿದ್ದಾರೆ.

ಉಳಿದ 18 ಪ್ರಯಾಣಿಕರು ಕಿಟಕಿಗಳು ಮತ್ತು ಎಮರ್ಜೆನ್ಸಿ ದ್ವಾರಗಳ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಸಮೀಪದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಯಾಣಿಕರ ವಿವರ :

32 ಆಸನ ಸಾಮರ್ಥ್ಯದ ಬಸ್‌ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ 15 ಮಹಿಳೆಯರು ಮತ್ತು 14 ಪುರುಷರು ಸೇರಿದ್ದಾರೆ. ಹೆಚ್ಚಿನ ಪ್ರಯಾಣಿಕರು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮೂಲದವರಾಗಿದ್ದು, ಉಳಿದವರು ಕುಮಟಾ ಮತ್ತು ಶಿವಮೊಗ್ಗ ಮೂಲದವರಾಗಿದ್ದಾರೆ.

ಬಸ್ ಚಾಲಕ ಮತ್ತು ನಿರ್ವಾಹಕ ಸೇರಿ ಕೆಲವರು ಸಮಯಪ್ರಜ್ಞೆಯಿಂದ ಬಸ್‌ನಿಂದ ಹೊರ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ಸಂಸ್ಥೆಯ ಮಾಲೀಕರ ಹೇಳಿಕೆ :

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸೀ ಬರ್ಡ್ ಸಂಸ್ಥೆಯ ಮಾಲೀಕರು, ಬಸ್‌ನಲ್ಲಿ ಅಗತ್ಯವಿರುವ ಎಲ್ಲಾ ಸುರಕ್ಷತಾ ಕ್ರಮಗಳು ಮತ್ತು ಎರಡು ಎಮರ್ಜೆನ್ಸಿ ದ್ವಾರಗಳು ಇದ್ದವು ಎಂದು ತಿಳಿಸಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಸಂಸ್ಥೆಯ ಮಾಲೀಕರು ಆರೋಪಿಸಿದ್ದಾರೆ.

ಅಪಘಾತದ ಸಮಯದಲ್ಲಿ ಮೊಹಮ್ಮದ್ ರಫೀಕ್ ಬಸ್ ಚಾಲನೆ ಮಾಡುತ್ತಿದ್ದರು ಎಂದು ಸಂಸ್ಥೆಯು ಮಾಹಿತಿ ನೀಡಿದೆ.

ಪ್ರಯಾಣಿಕರ ಪಟ್ಟಿ ಬಿಡುಗಡೆ :

ಈ ಪಟ್ಟಿ ಅಪಘಾತದ ವೇಳೆ ಬಸ್‌ನಲ್ಲಿ ಇದ್ದ ಎಲ್ಲಾ ಪ್ರಯಾಣಿಕರ ವಿವರಗಳನ್ನು ಒಳಗೊಂಡಿದೆ. ಮೃತಪಟ್ಟವರು ಮತ್ತು ಗಾಯಗೊಂಡವರ ಗುರುತು ಪತ್ತೆ ಪ್ರಕ್ರಿಯೆ ಮುಂದುವರಿದಿದೆ. ಬಸ್‌ನ 28 ಸೀಟುಗಳು ಆನ್‌ಲೈನ್ ಮೂಲಕ ಬುಕ್ ಆಗಿದ್ದು, ರೆಡ್ ಬಸ್ ಮೂಲಕ 19 ಮತ್ತು ಅಭಿ ಬಸ್ ಮೂಲಕ 9 ಸೀಟುಗಳನ್ನು ಬುಕ್ ಮಾಡಲಾಗಿತ್ತು.

ಇದನ್ನು ಓದಿ : Car – KSRTC ಬಸ್ ಭೀಕರ ಅಪಘಾತ ; ಮೂವರು ಯುವಕರ ದುರ್ಮರಣ.

ಗೋಕರ್ಣಕ್ಕೆ ತೆರಳುತ್ತಿದ್ದವರು (24 ಜನ) :

  • ಮಂಜುನಾಥ್, ಸಂಧ್ಯಾ ಎಚ್, ಶಶಾಂಕ್ ಹೆಚ್ ವಿ, ದಿಲೀಪ್, ಪ್ರೀತಿಸ್ವರನ್, ಬಿಂದು ವಿ, ಕವಿತಾ ಕೆ, ಅನಿರುದ್ಧ್ ಬ್ಯಾನರ್ಜಿ, ಅಮೃತಾ, ಈಶಾ, ಶಶಿಕಾಂತ್ ಎಂ, ನವ್ಯಾ, ಅಭಿಷೇಕ್, ಕಿರಣ್ ಪಾಲ್ ಎಚ್, ಕೀರ್ತನ್ ಎಂ, ನಂದಿತಾ ಜಿ ಬಿ, ದೇವಿಕಾ ಎಚ್, ಗಗನಶ್ರೀ ಎಸ್, ರಸ್ಮಿ ಮಹಲೆ, ರಕ್ಷಿತಾ ಆರ್, ಸೂರಜ್, ಮಾನಸ, ಮಲ್ಲಣ್ಣ ಮತ್ತು ಹೇಮರಾಜ್ ಕುಮಾರ್.

ಕುಮಟಾಕ್ಕೆ ತೆರಳುತ್ತಿದ್ದವರು (2 ಜನ) :

  • ಮೇಘರಾಜ್, ವಿಜಯ್ ಭಂಡಾರಿ.

ಶಿವಮೊಗ್ಗಕ್ಕೆ ತೆರಳುತ್ತಿದ್ದವರು (2 ಜನ) :

  • ಮಸ್ರತುನ್ನಿಸಾ ಎಸ್ ಎನ್, ಸೈಯದ್ ಜಮೀರ್ ಗೌಸ್.

ಸಂಬಂಧಿತ ಸುದ್ದಿ : Belagavi : ನಿಪ್ಪಾಣಿ-ಮುಧೋಳ ಹೆದ್ದಾರಿಯಲ್ಲಿ ಬಸ್–ಲಾರಿ ನಡುವೆ ಭೀಕರ ಅಪಘಾತ.!

ತನಿಖೆ ಮುಂದುವರಿಕೆ :

ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ಪ್ರಗತಿಯಲ್ಲಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನ ಪಾತ್ರ ಸೇರಿದಂತೆ ಎಲ್ಲಾ ಅಂಶಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Courtesy : Suvarna News


Disclaimer : ಈ ವರದಿ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿಗಳ ಆಧಾರದ ಮೇಲೆ ತಯಾರಿಸಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಆರೋಪಗಳನ್ನು ಅಂತಿಮವೆಂದು ಪರಿಗಣಿಸಬಾರದು.

- Advertisement -
Janaspandhan News
Janaspandhan Newshttp://WWW.janaspandhan.com
Janaspandana News is a digital news platform that reports crime and local news from Karnataka.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments