ಜನಸ್ಪಂದನ ನ್ಯೂಸ್, ಹುಬ್ಬಳ್ಳಿ : ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜಿನ ಕ್ಯಾಂಪಸ್ನಲ್ಲಿ 24ರ ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಹತ್ಯೆಯಾದ ಯುವತಿ ನೇಹಾ ಹಿರೇಮಠ ಎಂದು ತಿಳಿದು ಬಂದಿದ್ದು, ಈಕೆ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನಿರಂಜನ ಹಿರೇಮಠ ಪುತ್ರಿ ಎಂದು ತಿಳಿದುಬಂದಿದೆ.
ಇದನ್ನು ಓದಿ : ಮಹಾರಾಷ್ಟ್ರಕ್ಕೆ ಮದುವೆಗೆ ತೆರಳಿದ ಕ್ರೂಸರ್ Accident ; ಬಾಗಲಕೋಟೆ ಮೂಲದ ಐವರ ಸಾವು.!
ಆರೋಪಿ ಫಯಾಜ್ ಕಾಲೇಜಿನಿಂದ ಯುವತಿ ಹೊರ ಬರುವುದನ್ನು ಕಾದು ಆಕೆಯ ಮೇಲೆ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ.
ಸದ್ಯ ಪೊಲೀಸರು ಆರೋಪಿ ಫಯಾಜ್ ಎಂಬಾತನನ್ನು ಬೆಳಗಾವಿ ಜಿಲ್ಲೆಯ ಸೌದತ್ತಿಯಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿ ಸಂತ್ರಸ್ತೆಯ ಸೀನಿಯರ್ ಕಾಲೇಜಿನಲ್ಲಿಯೇ ಓದುತ್ತಿದ್ದನು. ಕೊಲೆಯ ನಂತರ ಆರೋಪಿ ಕೈಯಲ್ಲಿ ಚಾಕು ಹಿಡಿದು ಪರಾರಿಯಾಗಿದ್ದನು.. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ನೇಹಾಳನ್ನು ಸ್ನೇಹಿತರು ಮತ್ತು ಅಧ್ಯಾಪಕರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾಳೆ
ಇದನ್ನು ಓದಿ : ವರದಿಗಾರ ಕೇಳಿದ ಪ್ರಶ್ನೆಗೆ ಸೆ*ಕ್ಸ್ ಎಂದು ಉತ್ತರಿಸಿದ TMC ನಾಯಕಿ ; ಏನದು ಪ್ರಶ್ನೆ? ವಿಡಿಯೋ ನೋಡಿ.!
ನೇಹಾ ಬಿವಿಬಿಯಲ್ಲಿ ಎಂಸಿಎ 1ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಲವು ತಿಂಗಳಿಂದ ಆರೋಪಿ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನು. ಇತ್ತೀಚೆಗೆ ಆಕೆಗೆ ಪ್ರಪೋಸ್ ಮಾಡಿದ್ದನ್ನು ಸಂತ್ರಸ್ತೆ ತಿರಸ್ಕರಿಸಿದ್ದಳು.
ಇದರಿಂದ ಕೋಪಗೊಂಡಿದ್ದ ಆರೋಪಿ ನೇಹಾಳನ್ನು ಕೊಲೆ ಮಾಡಲು ಮುಂದಾಗಿದ್ದ. ತನ್ನ ಪ್ರಸ್ತಾಪವನ್ನು ತಿರಸ್ಕರಿಸಿದ ಹುಡುಗಿಯನ್ನು ಕೊಲೆ ಮಾಡುವುದಾಗಿ ಆರೋಪಿ ತನ್ನ ಸ್ನೇಹಿತರ ಬಳಿ ಹೇಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.