ಜನಸ್ಪಂದನ ನ್ಯೂಸ್, ವಿಜಯಪುರ : ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು (suspended) ಮಾಡಿ ಆದೇಶ ಹೊರಡಿಸಲಾಗಿದೆ.
ಡಿಡಿಪಿಐ ಎನ್.ಹೆಚ್.ನಾಗೂರ ಹಾಗೂ ಡಯಟ್ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಸ್ಪೆಂಡ್ ಮಾಡಲಾಗಿದೆ.
IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ (Neglected) ಆರೋಪ ಹಿನ್ನೆಲೆ 2009-10 ಹಾಗೂ 2011-12ರಲ್ಲಿ ಅನುದಾನ ದುರುಪಯೋಗ ಆರೋಪ ಮಾಡಲಾಗಿದೆ.
ಅಧಿಕಾರಿಗಳಿಂದ ಸ್ವಯಂ ಸೇವಾ ಸಂಸ್ಥೆಗಳಿಗೆ (Voluntary organization) ಅನುದಾನ ಬಿಡುಗಡೆಗೆ ಶಿಫಾರಸು ಮಾಡಿದ್ದಾರೆ.
ನಿಯಮಬಾಹಿರವಾಗಿ (Abnormally) ಅಸ್ತಿತ್ವದಲ್ಲಿ ಇರದ ಎನ್ಜಿಒಗಳಿಗೆ ಹಣ ಬಿಡುಗಡೆ ಆರೋಪ ಮಾಡಲಾಗಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ಅಮಾನತು ಮಾಡಿದ್ದಾರೆ.