Saturday, July 27, 2024
spot_img
spot_img
spot_img
spot_img
spot_img
spot_img

ಈ 2 ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ; CM ಮಹತ್ವದ ಘೋಷಣೆ.!

spot_img

ಜನಸ್ಪಂದನ ನ್ಯೂಸ್, ದಾವಣಗೆರೆ : ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿರುವ ಪರಿವಾರ/ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಸಭೆ ಕರೆದು ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದ್ದಾರೆ.

ರಾಜನಹಳ್ಳಿಯ (Rajanahalli) ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಇದನ್ನು ಓದಿ : ಶಿಕ್ಷಕಿಯ ಜೊತೆ ಶಿಕ್ಷಕನ ಲವ್ವಿಡವ್ವಿ ; ಬೆತ್ತಲೆಯಿದ್ದಾಗಲೇ red ಹ್ಯಾಂಡ್ಆಗಿ ಹಿಡಿದ ಶಿಕ್ಷಕನ ಹೆಂಡ್ತಿ.!

ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ನಿಮ್ಮ ಮೇಲಿದ್ದ ಎಲ್ಲ ಪ್ರಕರಣಗಳನ್ನು (cases) ವಾಪಸ್‌ ಪಡೆಯಲೂ ಸೂಚಿಸಲಾಗಿದೆ ಎಂದರು.

ಬೇಡ ಜನಾಂಗದಲ್ಲಿ ಜನಿಸಿದ ವಾಲ್ಮೀಕಿಯವರು ರಾಮಾಯಣವನ್ನು ರಚಿಸಿ ಮಹರ್ಷಿಯಾದರು. ರಾಮಾಯಣ ಮಹಾನ್ ಗ್ರಂಥ. ಮಹಾನ್ ಗ್ರಂಥಗಳನ್ನು ಮೇಲ್ಜಾತಿಯವರು ಮಾತ್ರ ರಚಿಸಲು ಸಾಧ್ಯವೆಂಬ ಪ್ರತೀತಿಯಿತ್ತು.

ಇದನ್ನು ಓದಿ : ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಗೆ ಹೊಸ rules ; ನೀವು ಈ ಯೋಜನೆಗೆ ಅನರ್ಹರೇ ಅಂತ ಲಿಂಕ್ ಚೆಕ್ ಮಾಡಿ.!

ಆದರೆ ಕಾವ್ಯ ಸಾಹಿತ್ಯವನ್ನು ಶೂದ್ರರು ರಚಿಸಬಹುದೆಂಬುದನ್ನು ಮಹರ್ಷಿ ವಾಲ್ಮೀಕಿ ನಿರೂಪಿಸಿದರು ಎಂದರು.

spot_img
spot_img
- Advertisment -spot_img