Wednesday, July 2, 2025

Janaspandhan News

HomeCrime NewsAccident : ಮಾಜಿ ಶಾಸಕರ ಪುತ್ರನ ಕಾರು ಅಪಘಾತ ; ಮೂವರ ಸಾವು.
spot_img
spot_img

Accident : ಮಾಜಿ ಶಾಸಕರ ಪುತ್ರನ ಕಾರು ಅಪಘಾತ ; ಮೂವರ ಸಾವು.

- Advertisement -

ಜನಸ್ಪಂದನ ನ್ಯೂಸ್, ಬೆಳಗಾವಿ : ಎರಡು ಕಾರುಗಳ ನಡುವೆ ಭೀಕರ ಅಪಘಾತ (Terrible accident) ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಈ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ (Bailhongal in Belagavi district) ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಸಮೀಪ ಸೋಮವಾರ ನಡೆದಿದೆ.

ಇದನ್ನು ಓದಿ : ಸರ್ಕಾರಿ ಕಚೇರಿಯಲ್ಲೇ Officer ಕಾಮದಾಟ ; ಹಲ್​ಚಲ್​ ಸೃಷ್ಟಿಸಿದ ವಿಡಿಯೋ.

ಸಾವನ್ನಪ್ಪಿದವರು ಅನಿಸ್ ಸೈಯ್ಯದ್ (26), ಉಮೇಹೈಮಾನ ಸೈಯ್ಯದ್ (22), ಒಂದು ವರ್ಷದ ಮಗು ಅಹ್ಮದ್ ಸೈಯ್ಯದ್ ಎಂದು ತಿಳಿದು ಬಂದಿದೆ. ಇವರು ಹಿರೇಬಾಗೇವಾಡಿ ಗ್ರಾಮದ ನಿವಾಸಿಗಳು.

ಆಯಿಷಾ ಸೈಯ್ಯದ (18) ಹಾಗೂ ಮತ್ತೊಂದು ಕಾರಿನಲ್ಲಿದ್ದ ಮಾಜಿ ಶಾಸಕ ಆರ್. ವಿ. ಪಾಟೀಲ ಅವರ ಪುತ್ರ ಸುರೇಶಗೌಡ ಪಾಟೀಲ ಗಾಯಗೊಂಡು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ : 10ನೇ ಪಾಸಾಗಿದ್ರೆ ಸಾಕು : ಬ್ಯಾಂಕ್ ಆಫ್ ಬರೋಡಾದಲ್ಲಿ 500 ಉದ್ಯೋಗಾವಕಾಶ.

ಗೋಕಾಕದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ಬರುವಾಗ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಮಾಜಿ ಶಾಸಕ ಆರ್. ವಿ. ಪಾಟೀಲ ಅವರ ಪುತ್ರನ ಕಾರನ್ನು ಓವರ್ ಟೆಕ್ (Overtake the car) ಮಾಡಲು ಹೋಗಿ ಕಾರಿಗೆ ಎದುರಿನಿಂದ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಕೊನೆಯುಸಿರೆಳೆದಿದ್ದಾರೆ.

ಬೈಲಹೊಂಗಲ ಪೊಲೀಸ್ ಠಾಣೆಯ ಸಿಪಿಐ ಪಂಚಾಕ್ಷರಿ ಸಾಲಿಮಠ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments