ಜನಸ್ಪಂದನ ನ್ಯೂಸ್, ಆರೋಗ್ಯ : ಮಧುಮೇಹ ನಿಯಂತ್ರಣಕ್ಕೆ ಫಾಲ್ಸಾ (Falsa) ಅಥವಾ ಚೂರಿ ಹಣ್ಣಿನಲ್ಲಿದೆ ಅದ್ಭುತ ಪ್ರಯೋಜನಗಳು.! ಆರೋಗ್ಯಕರ ಆಹಾರ ಪದ್ಧತಿ ಮಧುಮೇಹ ನಿಯಂತ್ರಣಕ್ಕೆ ಪ್ರಮುಖ ಪಾತ್ರ ವಹಿಸುತ್ತದೆ. ಹಣ್ಣುಗಳು ದೈನಂದಿನ ಆಹಾರದ ಒಂದು ಅವಿಭಾಜ್ಯ ಭಾಗವಾಗಿದ್ದರೂ, ಮಧುಮೇಹಿಗಳು ಎಲ್ಲಾ ಹಣ್ಣುಗಳನ್ನು ಸೇವಿಸುವುದು ಸೂಕ್ತವಲ್ಲ.
ಕೆಲವು ಹಣ್ಣುಗಳಲ್ಲಿ ಸಕ್ಕರೆ ಅಂಶ ಹೆಚ್ಚು ಇರುವುದರಿಂದ ಅದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದರೆ ಫಾಲ್ಸಾ ಹಣ್ಣು (Falsa) ಅಥವಾ ಚೂರಿ ಹಣ್ಣು ಮಧುಮೇಹಿಗಳಿಗೆ ಉತ್ತಮ ಆಯ್ಕೆಯಾಗಬಹುದು.
ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!
ಇದರಲ್ಲಿ ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸೋಡಿಯಂ, ಕ್ಯಾಲ್ಸಿಯಂ, ವಿಟಮಿನ್ A, ವಿಟಮಿನ್ C ಸೇರಿದಂತೆ ಹಲವು ಅಗತ್ಯ ಪೋಷಕಾಂಶಗಳಿವೆ.
ಫಾಲ್ಸಾ (Falsa) ಹಣ್ಣಿನ ಆರೋಗ್ಯಕರ ಲಾಭಗಳು :
- ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ಕಡಿಮೆ ಮಾಡುತ್ತದೆ.
- ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಸೋಂಕಿನಿಂದ ರಕ್ಷಿಸುತ್ತದೆ.
- ಪುರುಷರಲ್ಲಿ ವೀರ್ಯದ ಗುಣಮಟ್ಟ ಸುಧಾರಿಸಲು ಸಹಕಾರಿಯಾಗುತ್ತದೆ.
- ಜ್ಯೂಸ್ ರೂಪದಲ್ಲಿ ಸೇವಿಸಿದರೆ ದೇಹಕ್ಕೆ ಟಾನಿಕ್ ಆಗಿ ಕೆಲಸ ಮಾಡುತ್ತದೆ.
- ಪಿತ್ತ ಸಮಸ್ಯೆ ನಿಯಂತ್ರಿಸಲು ಸಹಕಾರಿಯಾಗಿದೆ.
- ರಕ್ತದೊತ್ತಡವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ.
- ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.
Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್ ಸವಾರ ; ವಿಡಿಯೋ ವೈರಲ್.!
ಫಾಲ್ಸಾ (Falsa) ಹಣ್ಣಿನ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ. ಇದರಿಂದ ರಕ್ತದಲ್ಲಿನ ಸಕ್ಕರೆ ಏರಿಕೆಯಾಗುವುದನ್ನು ತಡೆಯಬಹುದು. ಜೊತೆಗೆ, ಫಾಲ್ಸಾ ಹಣ್ಣಿನಲ್ಲಿ ಇರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ಗಳು ಮಧುಮೇಹಿಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ.
ಮಧುಮೇಹಿಗಳು ಫಾಲ್ಸಾ (Falsa) ಹಣ್ಣನ್ನು ನೇರವಾಗಿ ತಿನ್ನಬಹುದು ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ಜ್ಯೂಸ್ ತಯಾರಿಸುವಾಗ ಸಕ್ಕರೆ ಸೇರಿಸದೇ ಸೇವಿಸುವುದು ಮುಖ್ಯ.
ಸಂಪಾದಕೀಯ : ಈ ಲೇಖನವು ಸಾಮಾನ್ಯ ಮಾಹಿತಿಯನ್ನು ಆಧರಿಸಿದ್ದು, ಯಾವುದೇ ಹಣ್ಣನ್ನು ಔಷಧಿಯಂತೆ ಬಳಸುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಅಗತ್ಯ.
> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.
Belagavi : ಮಳೆಯಿಂದಾಗಿ ಜಿಲ್ಲೆಯ ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ.!
ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ (ಆಗಸ್ಟ್ 20) ಜಿಲ್ಲೆಯ ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಇದುವರೆಗೆ ಬೆಳಗಾವಿ (Belagavi) ಜಿಲ್ಲೆಯ ಕೆಲವು ತಾಲೂಕುಗಳಿಗೆ ಮಾತ್ರ ಸೀಮಿತವಾಗಿದ್ದ ರಜೆಯನ್ನು ಈಗ ಸಂಪೂರ್ಣ ಜಿಲ್ಲೆಗೆ ವಿಸ್ತರಿಸಲಾಗಿದೆ.
ರೆಡ್ ಅಲರ್ಟ್ ಘೋಷಣೆ :
ಕೇಂದ್ರ ಹವಾಮಾನ ಇಲಾಖೆಯು ಆಗಸ್ಟ್ 20ರವರೆಗೆ ಬೆಳಗಾವಿ (Belagavi) ಜಿಲ್ಲೆಯ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಸತತ ಮಳೆಯಿಂದಾಗಿ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಮತ್ತು ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.
ಪ್ರವಾಹದ ಅಪಾಯ ಹೆಚ್ಚಳ :
ಹಿಡಕಲ್ ಜಲಾಶಯ ಈಗಾಗಲೇ ಸಂಪೂರ್ಣ ತುಂಬಿಕೊಂಡಿದ್ದು, ಪ್ರತಿದಿನ ಸಾವಿರಾರು ಕ್ಯೂಸೆಕ್ ನೀರು ಒಳಹರಿಯುತ್ತಿದೆ. ಈಗಾಗಲೇ 25,000 ಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಿಡಕಲ್ ಜಲಾಶಯ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಬಳ್ಳಾರಿ ನಾಲಾ ಸೇರಿ ಬೆಳಗಾವಿ (Belagavi) ಜಿಲ್ಲೆಯ ಗೋಕಾಕ ಬಳಿ ಘಟಪ್ರಭಾ ನದಿಗೆ 40,000 ಕ್ಯೂಸೆಕ್ ನೀರು ಸೇರುತ್ತಿರುವುದರಿಂದ ಪ್ರವಾಹದ ಅಪಾಯ ಮತ್ತಷ್ಟು ಹೆಚ್ಚಾಗಿದೆ.
ನಾಗರಿಕರಿಗೆ ಎಚ್ಚರಿಕೆ :
- ನದಿಪಾತ್ರದ ಬಳಿ ವಾಸಿಸುವವರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು.
- ಸಂಚಾರದ ವೇಳೆ ಸೇತುವೆಗಳು ಮತ್ತು ಜಲಾವೃತ ಪ್ರದೇಶಗಳನ್ನು ತಪ್ಪಿಸಬೇಕು.
- ಮಕ್ಕಳು, ವೃದ್ಧರು ಹಾಗೂ ಮಹಿಳೆಯರ ಸುರಕ್ಷತೆಗೆ ಪೋಷಕರು ವಿಶೇಷ ಗಮನ ಹರಿಸಬೇಕು.
- ಅಗತ್ಯ ವಸ್ತುಗಳನ್ನು ಮುಂಚಿತವಾಗಿ ಸಿದ್ಧಪಡಿಸಿಕೊಂಡಿರಬೇಕು.
ಬೆಳಗಾವಿ (Belagavi) ಜಿಲಾ ಸಚಿವರ ಮನವಿ :
ಬೆಳಗಾವಿ (Belagavi) ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ನಾಗರಿಕರ ಜೀವ ರಕ್ಷಣೆ ಸರ್ಕಾರದ ಮೊದಲ ಆದ್ಯತೆ ಎಂದು ತಿಳಿಸಿ, ಈ ಸಂಕಷ್ಟದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಜಾಗರೂಕರಾಗಿದ್ದು ಪರಸ್ಪರ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.