ಜನಸ್ಪಂದನ ನ್ಯೂಸ್, ಬಸ್ತಿ (ಉತ್ತರ ಪ್ರದೇಶ) : ಬಸ್ತಿ ಜಿಲ್ಲೆಯ ಪೈಕೌಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಪಿರೈಲಾ ಗ್ರಾಮದಲ್ಲಿ, ವ್ಯಕ್ತಿಯೋರ್ವ ಎರಡನೇ ಮದುವೆ (Marriage) ಮಾಡಿಕೊಳ್ಳಲು ಹೊರಟ ವೇಳೆ ಮೊದಲ ಪತ್ನಿ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾಳೆ.
ಹೀಗೆ ಪೊಲೀಸ್ ಜತೆಗೆ ಮೊದಲ ಪತ್ನಿ (Marriage) ಮಂಟಪಕ್ಕೆ ಎಂಟ್ರಿ ನೀಡುತ್ತಿರುವ ಈ ಘಟನೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ದೈನಿಕ್ ಭಾಸ್ಕರ್ನಲ್ಲಿ ವರದಿಯಾಗಿದೆ.
ವಿನಯ್ ಅಂಗದ್ ಶರ್ಮಾ ಪೈಕೌಲಿಯಾ ಗ್ರಾಮದ ಯುವತಿಯೊಂದಿಗೆ ಮದುವೆ (Marriage) ಯಾಗಲು ಮುಂದಾಗಿದ್ದಾಗ, ಮೊದಲ ಪತ್ನಿ ರೇಷ್ಮಾ ಪೊಲೀಸರಿಗೆ ಜೊತೆಯಾಗಿಯೇ ಮಂಟಪಕ್ಕೆ ಬಂದಿದ್ದಾಳೆ. ನ.17ರ ರಾತ್ರಿ 11.30ರ ವೇಳೆಗೆ ಮದುವೆ ಕಾರ್ಯಕ್ರಮ ನಡೆಯುತ್ತಿದ್ದಂತೆಯೇ ಮೊದಲ ಪತ್ನಿಯ ಆಗಮನದಿಂದ ಹೈಡ್ರಾಮಾ ನಡೆದಿದೆ.
ಇದನ್ನು ಓದಿ : ಕರ್ನಾಟಕದ ಈ 4 Railway ನಿಲ್ದಾಣಗಳಿಗೆ ಹೊಸ ಹೆಸರು ; ನಿಮ್ಮ ನಿಲ್ದಾಣದ ಹೆಸರೇನು?
ಮೊದಲ ಪತ್ನಿ ಜೀವಂತ ಇರುವಾಗಲೇ ಇನ್ನೊಂದು ಮದುವೆ (Marriage) ಯಾಕೆ ಮಾಡಿಕೊಳ್ಳುತ್ತಿರುವೆ ಎಂದು ಕೇಳಿದ್ದಾರೆ.
ರೇಷ್ಮಾ, ತನ್ನ ಹಿನ್ನಲೆ ಹಿಸ್ಟರಿಯನ್ನು ಪ್ರಸ್ತಾಪಿಸಿ, “ನಾನು ಜೀವಂತ ಇರುವಾಗ ಮತ್ತೊಬ್ಬರೊಂದಿಗೆ ಮದುವೆ (Marriage) ಮಾಡುವುದು ಹೇಗೆ ಸಾಧ್ಯ? ನನ್ನ ಬಳಿ ಇದಕ್ಕೆ ಬೇಕಾದ ಕಾನೂನು ಪುರಾವೆ ಇದೆ ಎಂದು ವಿನಯ್ ಶರ್ಮಾ ನನ್ನು ಪ್ರಶ್ನಿಸಿದ್ದಾಳೆ.
ವೈರಲ್ ವಿಡಿಯೋದಲ್ಲಿ ಮಂಟಪದಲ್ಲಿ ನಡೆದ ಈ ಘರ್ಷಣೆಯನ್ನು ಸ್ಪಷ್ಟವಾಗಿ ನೋಡಬಹುದು. ರೇಷ್ಮಾ ತನ್ನ ಫೋಟೋಗಳು ಮತ್ತು ಮದುವೆ ನೋಂದಣಿ ದಾಖಲೆಗಳನ್ನು ಪ್ರದರ್ಶಿಸಿ, “ನಾನು ಈ ವ್ಯಕ್ತಿಯೊಂದಿಗೆ ಮದುವೆಯಾಗಿದ್ದೆ, ನಮಗೆ ವಿಚ್ಛೇದನ ಕೂಡ ಆಗಿಲ್ಲ. ಇನ್ನು ನಾನು ಪತಿಗೆ ಬೇರೆ ಮದುವೆಗೆ ಒಪ್ಪಿಗೆ ಕೂಡ ನೀಡಿಲ್ಲ” ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ, ವಿನಯ್ನೊಂದಿಗೆ ಮದುವೆಯಾಗಲು ಹೊರಟ ವಧು ಮಂಟಪದಿಂದ ಎದ್ದು ಕೋಣೆಗೆ ಹೋಗಿದ್ದಾಳೆ. ಈ ವೇಳೆ ವಧುವಿನ ಮನೆಯವರು ಅವಳನ್ನು ಸಮಾಧಾನಪಡಿಸಿ, ಮದುವೆಯನ್ನು ರದ್ದುಗೊಳಿಸಿದ್ದಾರೆ.
ಇದನ್ನು ಓದಿ : “ನೀವು Night ಲೈಟ್ ಆನ್ ಇಟ್ಟು ಮಲಗ್ತೀರಾ? ಹಾಗಾದ್ರೆ ಈ ಸುದ್ದಿ ಓದಿ.”
ಹಿನ್ನೆಲೆ :
ರೇಷ್ಮಾ ಮತ್ತು ವಿನಯ್ ನಡುವೆ ಸುಮಾರು ಒಂಬತ್ತು ವರ್ಷಗಳ ಸಂಬಂಧವಿತ್ತು ಎಂದು ರೇಷ್ಮಾ ಹೇಳಿರುವುದಾಗಿ ದೈನಿಕ್ ಭಾಸ್ಕರ್ ವರದಿ ಮಾಡಿದೆ. ಇಬ್ಬರೂ 30 ಮಾರ್ಚ್ 2022 ರಂದು ನ್ಯಾಯಾಲಯದಲ್ಲಿ ವಿವಾಹ (Marriage) ವಾಗಿದೆ. ನಂತರ 8 ಡಿಸೆಂಬರ್ 2022 ರಂದು ಕುಟುಂಬದ ಸದಸ್ಯರ ಮುಂದೆ ಮದುವೆ ಆಚರಿಸಲಾಗಿದೆ.
ಎರಡು ವರ್ಷದ ನಂತರ ಇಬ್ಬರೂ ವಿಚ್ಛೇದನ ಅರ್ಜಿ ಹಾಕಿರುವಾಗ, ವಿನಯ್ ಎರಡನೇ ಮದುವೆಗೆ ಮುಂದಾಗಿದ್ದಾನೆ. ರೇಷ್ಮಾ ಆಭರಣಗಳೊಂದಿಗೆ ಓಡಿಹೋಗಿರುವುದಾಗಿ ಆರೋಪಿಸಿ ಕಾನೂನು ನೋಟಿಸ್ ವಿನಯ್ ಕಳಿಸಿದ್ದಾನೆ. ಪ್ರಕರಣದ ವಿಚಾರಣೆ ಕುರಿತು ಈಗ ಪೊಲೀಸ್ ಮಧ್ಯಸ್ಥತೆ ನಡೆದಿದೆ.
ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ತನಿಖೆ ಮಾಡುತ್ತಿದ್ದು, ಇದೀಗ ಪೊಲೀಸರು ಮಧ್ಯಪ್ರವೇಶಿಸಿ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದಾರೆ.
ವಿಡಿಯೋ :
View this post on Instagram
Kiss ಕೊಡಲು ಮುಂದಾದ ಪ್ರಿಯಕರ ; ನಾಲಿಗೆಯನ್ನೇ ಕಚ್ಚಿ ಕತ್ತರಿಸಿದ ಪ್ರಿಯತಮೆ.

ಜನಸ್ಪಂದನ ನ್ಯೂಸ್, ಕಾನ್ಪುರ್ (ಉ.ಪ್ರ) : ಓರ್ವ ಮಾಜಿ ಪ್ರಿಯಕರ ತನ್ನ ಮಾಜಿ ಪ್ರೆಯಸಿಗೆ ಬಲವಂತವಾಗಿ ಮುತ್ತು (Kiss) ಕೊಡುವಾಗ ಕೋಪಗೊಂಡ ಪ್ರೇಯಸಿ ಆತನ ನಾಲಿಗೆಯನ್ನೇ ಕಚ್ಚಿ ಕತ್ತರಿಸಿ ಹಾಕಿರುವ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಈ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಶಾಕ್ ಉಂಟುಮಾಡಿದೆ. ಇಲ್ಲಿ ಪ್ರೇಯಸಿ ಮತ್ತು ಆಕೆಯ ಮಾಜಿ ಪ್ರಿಯಕರ ಇಬ್ಬರೂ ವಿವಾಹಿತರಾಗಿದ್ದಾರೆ.
ಇದನ್ನು ಓದಿ : Biker ಗೆ ಡಿಕ್ಕಿ ಹೊಡೆದ ಲಾರಿ ; ಭೀಕರ ಘಟನೆಯ ವಿಡಿಯೋ ವೈರಲ್.
ಪ್ರೇಯಸಿ, ಮುತ್ತು (Kiss) ಕೊಡುವಾಗ ಪ್ರಿಯಕರ ನಾಲಿಗೆಯನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿ ಹಾಕಿರುವ ಪರಿಣಾಮ ಬಾಯಿಂದ ರಕ್ತಸ್ರಾವವಾಗುತ್ತಲೇ ಆತ ಕೆಳಗೆ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ದೌಡಾಯಿಸಿ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹಿನ್ನಲೆ :
35 ವರ್ಷದ ವಿವಾಹಿತ ಚಂಪಿ ಎಂಬ ಉತ್ತರ ಪ್ರದೇಶದ ಕಾನ್ಪುರದ ದರಿಯಾಪುರ ಗ್ರಾಮದ ನಿವಾಸಿ ತನ್ನದೇ ಗ್ರಾಮದ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಮಹಿಳೆಯ ಪೊಷಕರಿಗೆ ಈ ವಿಷಯ ತಿಳಿಯುತ್ತಿದಂತೆಯೇ ಆಕೆಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿಸಿದ್ದರು.
ಮಹಿಳೆಯ ಮದುವೆಯ ನಂತರವೂ ಸಹ ವಿವಾಹಿತ ಚಂಪಿ ಆಗಾಗ್ಗೆ ತನ್ನ ಮಾಜಿ ಪ್ರೆಯಸಿ ಹಾಗು ವಿವಾಹಿತೆಯನ್ನು ಭೇಟಿಯಾಗುತ್ತಿದ್ದ, ಅಷ್ಟೆ ಅಲ್ಲದೆ ಪ್ರೆಯಸಿಗೆ ತನ್ನೊಂದಿಗೆ ಬರುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದ.
ಇದನ್ನು ಓದಿ : ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್ನಲ್ಲಿ Engineer ಹತ್ಯೆ.
ಮಾಜಿ ಪ್ರೇಯಸಿ ಕುಟುಂಬದ ಸಲುವಾಗಿ ಜೇಡಿಮಣ್ಣನ್ನು ಸಂಗ್ರಹಿಸಲು ಸೋಮವಾರ ಮಧ್ಯಾಹ್ನ ಸಮೀಪದ ಕೆರೆಗೆ ಹೋಗಿದ್ದಾಳೆ. ಇದನ್ನು ಗಮನಿಸಿದ ಮಾಜಿ ಪ್ರಿಯಕರ ಚಂಪಿ, ಒಂಟಿಯಾಗಿರುವ ಆಕೆಯನ್ನು ಆಕೆಯನ್ನು ಭೇಟಿ ಮಾಡಿ ಮಾತನಾಡಿಸಲು ಯತ್ನಿಸಿದ್ದಾನೆ.
ಆದರೆ ಮಹಿಳೆ ಅಂದರೆ ಮಾಜಿ ಗೆಳತಿ ಆತನೊಂದಿಗೆ ಮಾತನಾಡಲು ಒಪ್ಪದಿದ್ದಾಗ ಚಂಪಿ ಆಕೆಯನ್ನು ಬಲವಂತವಾಗಿ ಹಿಡಿದು ಚುಂಬಿಸಲು (Kiss) ಮುಂದಾಗಿದ್ದಾನೆ. ಆದರೆ ಪ್ರೇಯಸಿ ಇಷ್ಟವಿರದ ಕಾರಣ ಹಿಂದಕ್ಕೆ ಸರಿಯಲು ಮುಂದಾಗಿದ್ದಾಳೆ.
ಆದರೆ ಮಾಜಿ ಪ್ರಿಯಕರ ಆಕೆಯನ್ನು ಬಲವಂತಾಗಿ ತಬ್ಬಿಕೊಂಡು ಚುಂಬಿಸಲು (Kiss) ಯತ್ನಿಸುತ್ತಿದಂತೆಯೇ ಮಹಿಳೆ (ಪ್ರೇಯಸಿ) ಬಿಡಿಸಿಕೊಳ್ಳಲು ಸಾಧ್ಯವಾಗದೇ ಆತನ ನಾಲಿಗೆಯನ್ನೇ ತನ್ನ ಹಲ್ಲುಗಳಿಂದ ಕತ್ತರಿಸಿ ಹಾಕಿದ್ದಾಳೆ.
ಮುತ್ತು (Kiss) ಕೊಡುವಾಗ ಹುಲ್ಲುಗಳಿಂದ ನಾಲಿಗೆ ಕತ್ತರಿಸಿದ ಪರಿಣಾಮ ನೋವಿನಿಂದ ಚಂಪಿ ಜೋರಾಗಿ ಚಿರಾಡಿದ್ದಾನೆ. ಆತನ ಚಿರಾಟ ಕೇಳಿದ ಸ್ಥಳಿಯರು ಸ್ಥಳಕ್ಕಾಗಮಿಸಿ ನೋಡಿದಾಗ, ಆತ ರಕ್ತದ ಮಡುವಿನಲ್ಲಿದ್ದ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನು ಓದಿ : ಆಕಸ್ಮಿಕ Snake ಮೇಲೆ ಹರಿದ ಬೈಕ್ – ಮುಂದೆನಾಯ್ತು? ವಿಡಿಯೋ ನೋಡಿ.!
ಉಪ ಪೊಲೀಸ್ ಆಯುಕ್ತ ದಿನೇಶ್ ತ್ರಿಪಾಠಿ ಪ್ರಕರಣವನ್ನು ದೃಢಪಡಿಸಿದ್ದಾರೆ ಮತ್ತು ಕಾನೂನು ಕ್ರಮ ಮುಂದುವರಿಸುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಸುದ್ದಿ ಓದಲು janaspandhan.com ಕ್ಲಿಕ್ ಮಾಡಿ







