Wednesday, March 12, 2025
HomeState Newsಹೋಳಿಗೆ ಪ್ರಿಯರಿಗೆ Shocking News ಕೊಟ್ಟ ಆಹಾರ ಇಲಾಖೆ.!
spot_img
spot_img
spot_img
spot_img
spot_img

ಹೋಳಿಗೆ ಪ್ರಿಯರಿಗೆ Shocking News ಕೊಟ್ಟ ಆಹಾರ ಇಲಾಖೆ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಇನ್ನೇನು ಯುಗಾದಿ ಹಬ್ಬ (Yugadi Festival) ಬರುತ್ತಿರುವುದರಿಂದ ಅಂಗಡಿಗಳಲ್ಲಿ ರೆಡಿಮೇಡ್​ ಹೋಳಿಗೆಯ ಘಮ ಜೋರಾಗುತ್ತೆ. ಬಿಸಿ ಬಿಸಿ ಹೋಳಿಗೆ ಮಾಡಿ ಅದನ್ನು ಒಂದು ಪ್ಲಾಸ್ಟಿಕ್​​​ ಕವರ್ ನಲ್ಲಿ ಸೇರಿಸಿ ಇಡುತ್ತಾರೆ. ಆದ್ರೆ, ಅದನ್ನು ತಿನ್ನುವ ಮುನ್ನ ಜನರು ಎಚ್ಚರ ವಹಿಸುವುದು ಒಳ್ಳೆಯದು (People would do well to be careful).

ಯಾಕೆಂದರೆ ಹೋಟೆಲ್​ಗಳಲ್ಲಿ ಹೋಳಿಗೆ ಮಾಡಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು (Plastic is being used to make Holige in hotels), ಈ ಹಿನ್ನೆಲೆ ಬೆಂಗಳೂರಿನ ಕೆಲ ಅಂಗಡಿಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Arrest ಮಾಡಲು ಹೋಗಿದ್ದ ಪೊಲೀಸರನ್ನೇ ತಪಾಸಣೆ ಮಾಡಿಸಿದ ಆರೋಪಿ ; ವಿಡಿಯೋ ವೈರಲ್.!

ಆಹಾರ ಇಲಾಖೆ ಅಧಿಕಾರಿಗಳು ಬೆಂಗಳೂರು ಹಾಗೂ ಮೈಸೂರಿನಲ್ಲಿ (Bangalore and Mysore) ತಪಾಸಣೆ ನಡೆಸಿದ್ದು, ಹೋಳಿಗೆ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆ ಕಂಡು ಬಂದಿದೆ.

ಮೈಸೂರಿನ ಎರಡು ಅಂಗಡಿಗಳಲ್ಲಿ ಹೋಳಿಗೆ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆ ಕಂಡು ಬಂದಿದೆ. ಹೀಗಾಗಿ ಮೈಸೂರಿನ ಎರಡು ಹೋಳಿಗೆ ಅಂಗಡಿಗಳಿಗೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Special news : ನೀವು ಹುಟ್ಟಿದ ತಿಂಗಳು ಯಾವ್ದು.? ನಿಮ್ಮ ಗುಣದ ಬಗ್ಗೆ ತಿಳಿದುಕೊಳ್ಳಿ.!

ಹೋಳಿಗೆಗೆ ಪ್ಲಾಸ್ಟಿಕ್ ಕವರ್ ಬಳಸಿದ್ರೆ ವಿಷಕಾರಿ ಅಂಶ (Toxicity) ಹೋಳಿಗೆ ಸೇರುವ ಸಾಧ್ಯತೆ ಇದೆ. ಇದರಿಂದ ಹೋಳಿಗೆಗೆ ಪ್ಲಾಸ್ಟಿಕ್​ ಬಳಸಬಾರದು ಎಂದು ಸೂಚಿಸಲಾಗಿದೆ. ಒಂದು ವೇಳೆ ಇಂತಹ ಹೋಳಿಗೆಯನ್ನು ನಾವು ಸೇವಿಸಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುವುದು ಗ್ಯಾರಂಟಿ.

ಹಿಂದಿನ ಸುದ್ದಿ : ನಿಮ್ಮ ಹುಟ್ಟಿದ ತಿಂಗಳು ಯಾವ್ದು.? ನಿಮ್ಮ ಗುಣದ ಬಗ್ಗೆ ತಿಳಿದುಕೊಳ್ಳಿ.!

ಜನಸ್ಪಂದನ ನ್ಯೂಸ್, ವಿಶೇಷ : ಸಂಖ್ಯಾಶಾಸ್ತ್ರದಲ್ಲಿ (Numerology) ನಮ್ಮ ಹುಟ್ಟಿದ ದಿನ, ತಿಂಗಳು, ವರ್ಷ ಎಲ್ಲವೂ ಬಹಳ ಮುಖ್ಯ. ಇವು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ .

ನಮ್ಮ ಮುಂದಿನ ಜೀವನ ಆರ್ಥಿಕ ಸ್ಥಿತಿ, ಕೌಟುಂಬಿಕ ಜೀವನ (Financial status, family life) ಹೀಗೆ ಎಲ್ಲವು ಇದರಿಂದ ನಿರ್ಧಾರವಾಗುತ್ತದೆ ಎಂದು ಹೇಳುತ್ತದೆ. ಹಾಗಾದರೆ ನಿಮ್ಮ ಹುಟ್ಟಿದ ತಿಂಗಳು, ನಿಮ್ಮ ಗುಣಗಳ ಬಗ್ಗೆ ಏನು ಹೇಳುತ್ತದೆ ಎಂದು ತಿಳಿಯೋಣ.

ಇದನ್ನು ಓದಿ : ಯುವಕನನ್ನು ಸೆಕ್ಸ್‌ಗೆ ಬಳಸಿಕೊಂಡು ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ.?

ಜನವರಿ :
ಈ ತಿಂಗಳಿನಲ್ಲಿ ಜನಿಸಿದ ವ್ಯಕ್ತಿಯು ಯಾವುದಕ್ಕೂ ಹೆದರುವುದಿಲ್ಲ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಹಾಗೂ ಅಭಿಪ್ರಾಯವನ್ನು (decision and opinion) ಬೇರೆಯವರ ಮಾತು ಕೇಳಿ ಬದಲಾಯಿಸಿಕೊಳ್ಳುವುದಿಲ್ಲವಂತೆ. ನಾಯಕತ್ವ ಗುಣಗಳನ್ನು (Leadership qualities) ಈ ವ್ಯಕ್ತಿ ಹೊಂದಿರುತ್ತಾರೆ.

ಫೆಬ್ರವರಿ :
ಈ ತಿಂಗಳಿನಲ್ಲಿ ಜನಿಸಿದ ವ್ಯಕ್ತಿಯು ಸ್ವತಂತ್ರ ಜೀವನದ ಕನಸು (Dream of independent life) ಕಾಣುತ್ತಾರೆ. ಇವರು ಸಾಹಸಮಯ ಜೀವನ ಇಷ್ಟಪಡುತ್ತಾರೆ‌. ಅಲ್ಲದೇ ಹೆಚ್ಚು ನಿಷ್ಠಾವಂತರಾಗಿದ್ದು (faithful), ಉದ್ಯೋಗ ಕ್ಷೇತ್ರದಲ್ಲಿ ಯಾವಾಗಲೂ ಯಶಸ್ಸು ಸಿಗುತ್ತದೆ.

ಇದನ್ನು ಓದಿ : ನೀವು Filter ನೀರು ಕುಡಿಯುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.!

ಮಾರ್ಚ್ :
ಮಾರ್ಚ್‌ನಲ್ಲಿ ಜನಿಸಿದರೆ ವ್ಯಕ್ತಿಗಳು ತುಂಬಾ ತಾಳ್ಮೆ, ನಾಚಿಕೆ, ಕಲಾತ್ಮಕ ಗುಣಗಳನ್ನು (Artistic qualities) ಹೊಂದಿರುತ್ತಾರೆ. ಭಾವನೆಗಳಿಗೆ ಹೆಚ್ಚು ಒತ್ತು ನೀಡಿ, ಎಲ್ಲರಿಗೂ ಒಳಿತು ಬಯಸುವ ಮಂದಿ ಆಗಿರುತ್ತಾರೆ. ಶಾಂತಿ ಪ್ರಿಯರು, ಸಹಾನುಭೂತಿ ಗುಣ (Peace loving, compassionate nature) ಹೊಂದಿರುತ್ತಾರೆ.

ಏಪ್ರಿಲ್ :
ಈ ತಿಂಗಳಲ್ಲಿ ಜನಿಸಿದವರು ತುಂಬಾನೆ ಬಲಶಾಲಿಗಳು, ಮೇಲ್ನೋಟಕ್ಕೆ (Apparently) ಕಾಣುವುದಕ್ಕಿಂತ ತುಂಬಾನೆ ದೃಢಶಾಲಿಗಳು (strong) ಆಗಿರುತ್ತಾರೆ. ಮನೋಬಲದಿಂದ ಯಾವ ವಿಚಾರವನ್ನು ಬೇಕಾದರೆ ಜಯಿಸುವ ಮನೋಭಾವದವರಾಗಿದ್ದು, ಬೇರೆಯವರ ಬಗ್ಗೆ ಹೆಚ್ಚು ಆಲೋಚಿಸುವುದಿಲ್ಲ. ಎಂತಹ ರಿಸ್ಕ್ ಬೇಕಾದರೂ ತೆಗೆದುಕೊಳ್ಳಲು ಸಿದ್ಧರಿರುವ ವ್ಯಕ್ತಿಯಾಗಿರುತ್ತಾರೆ ಇವರು.

ಇದನ್ನು ಓದಿ : SSLC ಪಾಸ್ ಆಗಿದ್ರೆ ಸಾಕು : ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ; ಇಲ್ಲಿದೆ ಮಾಹಿತಿ.!

ಮೇ :
ಮೇ ತಿಂಗಳಲ್ಲಿ ಜನಿಸಿದವರಲ್ಲಿ ಕಲಾತ್ಮಕ ವಿಚಾರಗಳಲ್ಲಿ ಹೆಚ್ಚಿನ ಆಸಕ್ತಿ ಇರಲಿದೆ. ಇವರಿಗೆ ಹೆಚ್ಚು ಸ್ನೇಹಿತರ ಬಳಗವೇ (group of friends) ಇರುತ್ತದೆ. ಯಾವಾಗಲು ಏನಾದರೂ ಕೆಲಸ ಮಾಡುತ್ತಲೇ ಇರಬೇಕು ಎಂಬ ವರ್ಗಕ್ಕೆ ಸೇರಿದವರು ಇವರು. ಕಷ್ಟದ ಸಮಯದಲ್ಲೂ ಆತ್ಮಸ್ಥೈರ್ಯ (self- confidence) ಕಳೆದುಕೊಳ್ಳದ ಜನರಾಗಿರುತ್ತಾರೆ.

ಜೂನ್ :
ಈ ತಿಂಗಳಿನಲ್ಲಿ ಜನಿಸಿದವರು ತುಂಬಾ ಭಾವನಾತ್ಮಕ ಜೀವಿಗಳಾಗಿರುತ್ತಾರೆ (An emotional being). ಬೇರೆಯವರಿಗೆ ನೋವಾಗುವಂತೆ ನಡೆದುಕೊಳ್ಳದ ಮನೋಭಾವದವರು. ಯಾರಿಗಾದರೂ ಕಷ್ಟ ಎಂದರೆ ಅವರ ಸಹಾಯಕ್ಕೆ ಮೊದಲು ಬರುವ ವ್ಯಕ್ತಿಗಳಾಗಿರುತ್ತಾರೆ. ಇವರು ಎಲ್ಲ ಸಮಯದಲ್ಲೂ ಧನಾತ್ಮಕ ವಿಚಾರಗಳ (Positive thoughts) ಕುರಿತು ಯೋಚಿಸುತ್ತಾರೆ.

ಇದನ್ನು ಓದಿ : Arrest ಮಾಡಲು ಹೋಗಿದ್ದ ಪೊಲೀಸರನ್ನೇ ತಪಾಸಣೆ ಮಾಡಿಸಿದ ಆರೋಪಿ ; ವಿಡಿಯೋ ವೈರಲ್.!

ಜುಲೈ :
ಜುಲೈನಲ್ಲಿ ಜನಿಸಿದ ವ್ಯಕ್ತಿಗಳು ಬಹುಬೇಗ ಕೋಪಗೊಂಡರೂ ಅಷ್ಟೇ ಬೇಗ ಶಾಂತಿಯಿಂದ (peaceful) ಎಲ್ಲವನ್ನು ನಿಭಾಯಿಸುವ ಗುಣ ಹೊಂದಿರುತ್ತಾರೆ. ಇವರು ಕುಟುಂಬಕ್ಕಾಗಿ ಯಾವ ರೀತಿಯ ಕಷ್ಟಗಳನ್ನು ಕೂಡ ಎದುರಿಸುವ ಮನಸ್ಸು ಉಳ್ಳವರು.

ಆಗಸ್ಟ್ :
ಆಗಸ್ಟ್‌ನಲ್ಲಿ ಜನಿಸಿದ ವ್ಯಕ್ತಿ ಎಲ್ಲರನ್ನು ಪ್ರೀತಿಸುವ ಗುಣಗಳ ಹೊಂದಿರುತ್ತಾರೆ. ಇವರು ಆಧ್ಯಾತ್ಮದ ಕಡೆಗೆ ಹೆಚ್ಚು ಒಲವು (More inclined towards spirituality) ಹೊಂದಿರುವವರು. ಕಷ್ಟಪಟ್ಟು ದುಡಿಯುವ ವರ್ಗಕ್ಕೆ ಸೇರಿದ ಮಂದಿ. ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವ ಗುಣ ಇವರು ಹೊಂದಿರುತ್ತಾರೆ. ಹಿರಿಯರಿಗೆ, ಪ್ರೀತಿ ಪಾತ್ರರಲ್ಲಿ ವಿನಯದಿಂದ (Sincerely) ನಡೆದುಕೊಳ್ಳುವ ಗುಣ ಹೊಂದಿರುತ್ತಾರೆ.

ಇದನ್ನು ಓದಿ : ಕಿಟಕಿಯಿಂದ ರೈಲಿನೊಳಗಿದ್ದ ಪ್ರಯಾಣಿಕರ ಮೇಲೆ ನೀರೆರಚಿ ಪುಂಡಾಟ ; ರೈಲ್ವೆ ಪೊಲೀಸ್‌ ಮಾಡಿದ್ದೇನು ; ಈ ವಿಡಿಯೋ ನೋಡಿ.!

ಸೆಪ್ಟೆಂಬರ್ :
ಸೆಪ್ಟೆಂಬರ್ ತಿಂಗಳಲ್ಲಿ ಜನಿಸಿದ ಜನರು ಆಲೋಚನೆಗಳನ್ನು ದೃಢವಾಗಿ ನಂಬುವ ಗುಣದವರು. ಬೇರೆಯವರ ಮಾತಿಗಿಂತ ಅವರ ಮೇಲೆ ಅವರಿಗೆ ನಂಬಿಕೆ ಹೆಚ್ಚಾಗಿರುತ್ತದೆ (They trust their words more than anyone else’s words).

ಅಕ್ಟೋಬರ್ :
ಅಕ್ಟೋಬರ್‌ನಲ್ಲಿ ಜನಿಸಿದ ವ್ಯಕ್ತಿಗಳು ಹೆಚ್ಚು ಪ್ರಮಾಣಿಕರು, ಬುದ್ಧಿವಂತರು, ಗುರಿ ಕಡೆಗೆ ಯಾವಾಗಲು ಯೋಚಿಸುವವರು (Conscientious, intelligent, always thinking towards the goal). ಇವರೆದುರು ವಾದ ಮಾಡುವುದು ಬಹಳ ಕಷ್ಟ. ಹೆಚ್ಚು ಹೆಚ್ಚು ವಿಚಾರಗಳನ್ನು ತಿಳಿಯಲು ಯಾವಾಗಲು ಮುಂದಾಗಿರುತ್ತಾರೆ.

ಇದನ್ನು ಓದಿ : ಜಗತ್ತಿನ ಅತಿ ಚಿಕ್ಕ ಕಳ್ಳನ ಕಿತಾಪತಿ : ವಜ್ರವನ್ನೇ ಕದ್ದೊಯ್ದ ಇರುವೆ, Video Viral.!

ನವೆಂಬರ್ :
ನವೆಂಬರ್‌ನಲ್ಲಿ ಜನಿಸಿದವರು ಕುಟುಂಬಕ್ಕಾಗಿ ಯಾವುದೇ ಹಂತದಲ್ಲಿ ಕೆಲಸ ಮಾಡಲು ತಯಾರಿರುತ್ತಾರೆ. ಯಾರನ್ನಾದರೂ ಒಮ್ಮೆ ನಂಬಿದರೆ ಕುರುಡಾಗಿ ಅವರನ್ನೇ ಹಿಂಬಾಲಿಸುವ ಗುಣ ಹೊಂದಿರುತ್ತಾರೆ. ದಾನ ಧರ್ಮದಲ್ಲಿ ಹೆಚ್ಚು ನಂಬಿಕೆ (More faith in charity) ಇಟ್ಟಿದ್ದು ಧೈರ್ಯಶಾಲಿಗಳು, ಸಮಾಜಮುಖಿ ಕಾರ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುತ್ತಾರೆ.

ಡಿಸೆಂಬರ್ :
ಡಿಸೆಂಬರ್ ತಿಂಗಳಲ್ಲಿ ಜನಿಸಿದ ಜನರು ಉದ್ಯೋಗ ಕ್ಷೇತ್ರ ಹಾಗೂ ಹಣಕಾಸು ಸ್ಥಿತಿಯ (Employment sector and financial status) ಬಗ್ಗೆ ಹೆಚ್ಚು ತಲೆ ಕೆಡೆಸಿಕೊಳ್ಳುವುದಿಲ್ಲ. ಯಾವುದೇ ವಿಚಾರದ ಬಗ್ಗೆ ಮಾತನಾಡಲು, ಕೆಲಸ ಮಾಡಲು ಹಿಂಜರಿಯುವುದಿಲ್ಲ ಇವರು. ಪ್ರೀತಿ ಉಳಿಸಿಕೊಳ್ಳಲು ಎಂತಹ ರಿಸ್ಕ್ ಕೂಡ ತೆಗೆದುಕೊಳ್ಳುತ್ತಾರೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!