ಜನಸ್ಪಂದನ ನ್ಯೂಸ್, ಬೀದರ್ : ಬೀದರ್ ಜಿಲ್ಲೆಯ ಭಾಲ್ಕಿ (Bhalki) ತಾಲೂಕಿನ ಸೇವಾನಗರ ತಾಂಡಾ ಬಳಿ ಟ್ರಕ್ ಮತ್ತು ಟಾಟಾ ಎಸ್ (truck and TATA ace) ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು (3 ಗಂಡು, 1 ಹೆಣ್ಣು) ಮೃತಪಟ್ಟ ಘಟನೆ ನಡೆದಿದೆ.
ಸಾವಿಗೀಡಾದವರು ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಎಂದು ತಿಳಿದು ಬಂದಿದೆ.
ಇದನ್ನು ಓದಿ : ಬೆದರಿಸಿ ಸುಲಿಗೆ ಕೇಸ್ ; ಇನ್ಸ್ಪೆಕ್ಟರ್ ಸೇರಿ ನಾಲ್ವರು ಪೊಲೀಸ್ ಸಸ್ಪೆಂಡ್.!
ಬೆಳಗ್ಗೆ 4-30 ರ ಸುಮಾರಿಗೆ ಸೇವಾನಗರ ತಾಂಡಾ ಬಳಿ ಬೀದರ್ ಭಾಲ್ಕಿ ಎನ್ಎಚ್ 50 ರಲ್ಲಿ ಉದ್ಗೀರ್ನಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಪಿಕ್ ಅಪ್ ಮತ್ತು ಬೀದರ್ನಿಂದ ಭಾಲ್ಕಿ ಕಡೆಗೆ ತೆರಳುತ್ತಿದ್ದ ಎನ್ಎಸ್ಎಸ್ಕೆ ಸಕ್ಕರೆ ಕಾರ್ಖಾನೆಯ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಇನ್ನೂ ಈ ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಬೀದರ್ನ ಬ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರೆಲ್ಲರೂ ಮಹಾರಾಷ್ಟ್ರದ (Maharashtra) ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.
ಇದನ್ನು ಓದಿ : ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅ*ತ್ಯಾ*ಚಾ*ರವೆಸಗಿದ 11 ಜನ ದುರುಳರು.!
ಒಟ್ಟು 14 ಜನರು ಉಗ್ಗಿರ್ ನಿಂದ ಹೈದರಾಬಾದ್ ಗೆ ಟಾಟಾ ಎಸ್ ನಲ್ಲಿ ಪ್ರಯಾಣಿಸುತ್ತಿದ್ದರು (travel) ಎಂಬ ಮಾಹಿತಿ ಲಭ್ಯವಾಗಿದೆ.
ಲಾರಿ ಚಾಲಕನ ಅತಿರೇಕ ಮತ್ತು ನಿರ್ಲಕ್ಷ್ಯದ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ದನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.