ಜನಸ್ಪಂದನ ನ್ಯೂಸ್, ಹಾಸನ : ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ (Channarayapatna) ಗಾಯತ್ರಿ ಬಡಾವಣೆಯ ಮನೆಯೊಂದರಲ್ಲಿ ಅತಿಥಿ ಉಪನ್ಯಾಸಕಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇದನ್ನು ಓದಿ : Double murder : ಪ್ರೀತಿಸುವಂತೆ ಪುತ್ರಿಯ ಹಿಂದೆ ಬಿದ್ದ ಯುವಕ ಹಾಗೂ ಆತನ ಸಹೋದರನ ಬರ್ಬರ ಹತ್ಯೆಗೈದ ತಂದೆ.!
ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಉಪನ್ಯಾಸಕಿಯನ್ನು ಸೋಮಶೇಖರ್ ಮತ್ತು ಭಾಗ್ಯ ದಂಪತಿಗಳ ಪುತ್ರಿ ದೀಪಾ(34) ಎಂದು ತಿಳಿದು ಬಂದಿದೆ.
ಮೃತ ದೀಪಾ ಅವರು ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನು ಓದಿ : ನಮ್ಮ ಮೆಟ್ರೋದಲ್ಲಿ ಎಲ್ಲರ ಮುಂದೆಯೇ ತಬ್ಬಿಕೊಂಡು ಕಿಸ್ ಮಾಡಿದ ಪ್ರೇಮಿಗಳು ; Video Viral.!
ಅವಿವಾಹಿತರಾಗಿದ್ದ ದೀಪಾ ಗುರುವಾರ (ಮೇ.09) ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳುದು ಬಂದಿಲ್ಲ.
ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.