ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮಗೆ ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆ (Serious illness) ಯ ಲಕ್ಷಣಗಳಾಗಿರಬಹುದು? ಕಡೆಗಣಿಸಬೇಡಿ. ಕೂಡಲೇ ವೈದ್ಯರನ್ನು ಸಂಪರ್ಕೀಸಿರಿ.
ನಮ್ಮ ದೇಹದಲ್ಲಿ ಯಾವುದೇ ಕಾಯಿಲೆ ಕಾಣಿಸಿಕೊಂಡಾಗ ದೇಹ ಅದರ ಮುನ್ಸೂಚನೆಯನ್ನು (Forecast) ನೀಡಲು ಆರಂಭಿಸುತ್ತದೆ. ನಾವು ಅದನ್ನು ಅರ್ಥ ಮಾಡಿಕೊಳ್ಳಬೇಕು.
ಇದನ್ನು ಓದಿ : whatsapp : ವಾಟ್ಸಪ್ಗೆ ಬರುವ ಈ ಪೋಟೋ ಕ್ಲಿಕ್ ಮಾಡಿದ್ರೆ ಖಾತೆಯಲ್ಲಿನ ಹಣವೆಲ್ಲ ಮಾಯ.!
ಡಯಾಬಿಟಿಸ್ (Diabetes) ಕಾಯಿಲೆ ನಮ್ಮನ್ನು ಬಾಧಿಸಲು ಆರಂಭವಾದರೆ ಆರೋಗ್ಯದ ಬಗ್ಗೆ ಬಹಳಷ್ಟು ಕಾಳಜಿ ವಹಿಸಬೇಕಾಗುತ್ತದೆ.
ಮಧುಮೇಹದ ಆರಂಭದ ಹಂತದಲ್ಲಿಯೇ ಪಾದಗಳಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
ಇದನ್ನು ಓದಿ : ರೇಪ್ ಕೇಸ್ : ತಾಯಿಯ ದೂರಷ್ಟೇ ಆರೋಪಿಯನ್ನು ದೋಷಿಯೆಂದು ನಿರ್ಧರಿಸಲಾಗದು ; Highcourt.
ಚರ್ಮ ಗಟ್ಟಿಯಾಗುವುದು :
ಪಾದಗಳು ಮತ್ತು ಅಡಿಭಾಗದ ಚರ್ಮವು ಗಟ್ಟಿಯಾಗಲು ಪ್ರಾರಂಭಿಸುತ್ತದೆ. ಕೆಲವೊಮ್ಮೆ ಚಪ್ಪಲಿ ಕಾರಣದಿಂದಲೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆದರೆ ಪಾದಗಳ ಮತ್ತು ಅಡಿಭಾಗದ ಚರ್ಮ ಗಟ್ಟಿಯಾಗುತ್ತಿದ್ದರೆ (Hard skin on the soles of the feet) ರಕ್ತದಲ್ಲಿನ ಸಕ್ಕರೆ ಪರೀಕ್ಷೆಯನ್ನು ಮಾಡಿಸುವುದು ಸೂಕ್ತ .
ಪಾದಗಳಲ್ಲಿ ನೋವು :
ನರಗಳು ಹಾನಿಗೊಳಗಾಗುತ್ತವೆ. ಇದರಿಂದಾಗಿ ಕಾಲುಗಳು ಊದಿಕೊಳ್ಳಬಹುದು (Legs may swell). ಕೆಲವೊಮ್ಮೆ ಕಾಲುಗಳು ಮರಗಟ್ಟಿದರೆ, ಕೆಲವೊಮ್ಮೆ ಇದ್ದಕ್ಕಿದ್ದಂತೆ ಬಲ ಇಲ್ಲದಂತೆ ಆಗಿ ಬಿಡುತ್ತದೆ.
ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.
ಪಾದಗಳಲ್ಲಿ ಹುಣ್ಣು :
ಫುಟ್ ಅಲ್ಸರ್ (Foot ulcer) ಕಾಣಿಸಿಕೊಂಡಾಗ ಪಾದಗಳಲ್ಲಿ ಗಾಯಗಳು ಏಳಲು ಶುರುವಾಗುತ್ತದೆ. ಹೀಗಾದಾಗ ಕೆಲವೊಮ್ಮೆ ಚರ್ಮವು ಕೂಡಾ ಕಿತ್ತು ಬರುತ್ತದೆ.
ಈ ರೋಗವು ಮಿತಿ ಮೀರಿ ಮುಂದುವರಿದರೆ, ಕಾಲು ಕತ್ತರಿಸಬೇಕಾದ ಪ್ರಮೇಯ ಕೂಡ ಎದುರಾಗಬಹುದು. ಹೀಗಾಗಿ ನಾವು ನಿರ್ಲಕ್ಷ್ಯ ತೋರದೆ ಸಮಯಕ್ಕೆ ಸರಿಯಾಗಿ ಮಧುಮೇಹವನ್ನು ಗುರುತಿಸುವುದು ಬಹಳ ಮುಖ್ಯ.
ಇದನ್ನು ಓದಿ : Garlic : ರಾತ್ರಿ ಮಲಗುವ ಮುನ್ನ 1 ಎಸಳು ಬೆಳ್ಳುಳ್ಳಿಯನ್ನು ತಿಂದು ನೋಡಿ.
ಉಗುರಿನ ಬಣ್ಣದಲ್ಲಿ ಬದಲಾವಣೆ :
ಮಧುಮೇಹ ಬಂದಾಗ, ಕಾಲ್ಬೆರಳ ಉಗುರುಗಳ ಬಣ್ಣ ಬದಲಾಗುತ್ತದೆ. ಸಾಮಾನ್ಯವಾಗಿ ಗುಲಾಬಿ ಬಣ್ಣದಲ್ಲಿರುವ ನಮ್ಮ ಉಗುರುಗಳು (Pink nail polish) ಇದ್ದಕ್ಕಿದ್ದಂತೆ ಕಪ್ಪಾಗಲು ಪ್ರಾರಂಭಿಸುತ್ತವೆ. ಉಗುರಿನ ಬಣ್ಣ ಬದಲಾಗುತ್ತಿದ್ದರೆ ಈ ಲಕ್ಷಣವನ್ನು ಲಘುವಾಗಿ ತೆಗೆದುಕೊಳ್ಳಬೇಡಿ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.
ಹಿಂದಿನ ಸುದ್ದಿ : ಉಪ್ಪು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತೀರಾ.?
ಜನಸ್ಪಂದನ ನ್ಯೂಸ್, ಡೆಸ್ಕ್ :ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದೇ.?
ಸಾಮಾನ್ಯವಾಗಿ ವೈದ್ಯರು ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಇನ್ನಾವುದೇ ಗಂಭೀರ ಕಾಯಿಲೆಯಿಂದ (serious illness) ಬಳಲುತ್ತಿರುವವರಿಗೆ ಮಾತ್ರ ಕಡಿಮೆ ಉಪ್ಪನ್ನು ಸೇವಿಸಬೇಕು ಎಂದು ಸಲಹೆ ನೀಡುತ್ತಾರೆ.
ಆದರೆ ಅತಿಯಾದ ಉಪ್ಪು ಯಾರಿಗಾದರೂ ಗಂಭೀರವಾದ ಹಾನಿಯನ್ನುಂಟು ಮಾಡಬಹುದು. ಹೀಗಾಗಿ ಬಹುತೇಕ ಜನರು ಕಡಿಮೆ ಉಪ್ಪನ್ನು ತಿನ್ನುವುದರಿಂದ ಗಂಭೀರ ಕಾಯಿಲೆಗಳು ಬರುವುದಿಲ್ಲ ಅಂತ ಅಂದುಕೊಂಡು ಉಪ್ಪನ್ನು ಕಡಿಮೆ ತಿನ್ನುತ್ತಾರೆ.
ಇದನ್ನು ಓದಿ : ವಿಡಿಯೋ : ಸೇವೆಗೆ ತೆರಳುತ್ತಿದ್ದ ಸೈನಿಕನ ಬಳಿ ಲಂಚ ಕೇಳಿದ TTE ; ಆಮೇಲೆನಾಯ್ತು.?
* ಕಡಿಮೆ ಉಪ್ಪನ್ನು ತಿನ್ನುವ ಜನರು ಸಾಮಾನ್ಯ ಜನರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರೆನಿನ್, ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಹೊಂದಿರುತ್ತಾರೆ.
ಆರೋಗ್ಯವಂತ ವ್ಯಕ್ತಿಗಳಲ್ಲಿ ಕಡಿಮೆ ಸೋಡಿಯಂ ಆಹಾರವು ಎಲ್ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಅನ್ನು ಶೇ. 4.6 ಮತ್ತು ಟ್ರೈಗ್ಲಿಸರೈಡ್ಗಳನ್ನು ಶೇ. 5.9 ರಷ್ಟು ಹೆಚ್ಚಿಸಿದೆ ಎಂದು National Library of Medicine ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.
ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.
* ಹೃದಯ ಮತ್ತು ರಕ್ತಕ್ಕೆ ಆಮ್ಲಜನಕದ ಅಗತ್ಯಗಳನ್ನು ಪೂರೈಸಲು ಬೇಕಾದಷ್ಟು ರಕ್ತವನ್ನು ಪಂಪ್ ಮಾಡಲು ಸಾಧ್ಯವಾಗದಿದ್ದಾಗ ಹೃದಯ ವೈಫಲ್ಯ (Heart failure) ಉಂಟಾಗುತ್ತದೆ. ಇದರ ಅರ್ಥ ಹೃದಯವು ಸಂಪೂರ್ಣವಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ಆದರೆ ಇದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದೆ.
ರಾಡ್ ಎಸ್. ಟೇಲರ್ ಮತ್ತು ಸಹೋದ್ಯೋಗಿಗಳ ಸಂಶೋಧನೆಯು (research), ಹೃದಯ ವೈಫಲ್ಯ ಹೊಂದಿರುವ ಜನರು ಕಡಿಮೆ ಸೋಡಿಯಂ ಸೇವನೆಯಿಂದ ಸಾಯುವ ಅಪಾಯವನ್ನು ಸೂಚಿಸುತ್ತದೆ.
ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!
* ಕಡಿಮೆ ಉಪ್ಪನ್ನು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ನಿಜ. ಅದಾಗ್ಯೂ, ಅಧಿಕ ರಕ್ತದೊತ್ತಡಕ್ಕೆ ಉಪ್ಪು ಮಾತ್ರ ಕಾರಣವಲ್ಲ (Salt is not the only cause of high blood pressure). ಅಧ್ಯಯನದ ಪ್ರಕಾರ, ದಿನಕ್ಕೆ 2,000 ಮಿ ಗ್ರಾಂ ಗಿಂತ ಕಡಿಮೆ Sodium ತೆಗೆದುಕೊಳ್ಳುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಹೃದ್ರೋಗದಿಂದ ಮರಣ ಹೊಂದುವ ಅಪಾಯ ಹೆಚ್ಚು.
* ಕಡಿಮೆ ಉಪ್ಪನ್ನು ತಿನ್ನುವುದರಿಂದ ಹೈಪೋನಾಟ್ರೀಮಿಯಾದ (Hyponatremia) ಅಪಾಯ ಹೆಚ್ಚಾಗುತ್ತದೆ. ಈ ಹೈಪೋನಾಟ್ರೀಮಿಯಾ ಎನ್ನುವುದು ರಕ್ತದಲ್ಲಿ ಕಡಿಮೆ ಮಟ್ಟದ ಸೋಡಿಯಂನಿಂದ ಉಂಟಾಗುವ ಸ್ಥಿತಿಯಾಗಿದೆ. ಇದರ ಲಕ್ಷಣಗಳು ನಿರ್ಜಲೀಕರಣದಿಂದ ಉಂಟಾಗುವ ಲಕ್ಷಣಗಳನ್ನು ಹೋಲುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಮೆದುಳಿನ ಊತ ಇರಬಹುದು.
ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್ ಖಂಡಿತವಾಗಿ ನೋಡಿ.
* ಉಪ್ಪನ್ನು ಸೇವಿಸದಿದ್ದರೆ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನಕ್ಕೆ (Electrolyte imbalance) ಕಾರಣವಾಗುತ್ತದೆ. ಇದರ ಪರಿಣಾಮ ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಯಾವುದೇ ರೀತಿಯ ನರ ಸಂವಹನವನ್ನು ಕಡಿತಗೊಳಿಸಲಾಗುತ್ತದೆ. ಇದರಿಂದ ದೇಹದಲ್ಲಿ ವಾಕರಿಕೆ, ತಲೆಸುತ್ತು, ನಿರ್ಜಲೀಕರಣದಂತಹ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ಉಪ್ಪನ್ನು ಬಿಡುವ ಬಗ್ಗೆ ಎಂದಿಗೂ ಯೋಚಿಸಬಾರದು
* ದಿನವಿಡೀ ಉಪ್ಪನ್ನು ತಿನ್ನದಿರುವುದು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಅಧ್ಯಯನದ ಪ್ರಕಾರ, ಜೀವಕೋಶಗಳು ಹಾರ್ಮೋನ್ ಇನ್ಸುಲಿನ್ ಸಿಗ್ನಲ್ಗೆ ಪ್ರತಿಕ್ರಿಯಿಸದಿದ್ದಾಗ, ಇನ್ಸುಲಿನ್ ಪ್ರತಿರೋಧ ಉಂಟಾಗುತ್ತದೆ.
ಇದನ್ನು ಓದಿ : Reels : ನಿಮಗೂ ರೀಲ್ಸ್ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.
* ಟೈಪ್ 1 ಹಾಗೂ ಟೈಪ್ 2 ಡಯಾಬಿಟಿಸ್ ಇರುವವರು ಕಡಿಮೆ ಸೋಡಿಯಂ ಡಯಟ್ನಿಂದ ಸಾಯುವ ಅಪಾಯವಿದೆ (There is a risk of death from a sodium diet) ಎಂದು ಸಂಶೋಧನೆಗಳು ತಿಳಿಸಿವೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ