Tuesday, May 13, 2025
HomeState Newsಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ : KMD.!
spot_img
spot_img
spot_img

ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ : KMD.!

ಜನಸ್ಪಂದನ ನ್ಯೂಸ್, ಬೆಂಗಳೂರು : ಮುಂದಿನ 4-5 ದಿನ ಬೆಳಗಾವಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಅಂದರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆ (Forecast) ಸಿಕ್ಕಿದೆ.

ನಾಳೆ ಅಂದರೆ ದಿ. 27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾದರೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ (KMD) ತಿಳಿಸಿದೆ.

ಇದನ್ನು ಓದಿ : Video : ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ.!

ಹಾಗೆಯೇ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ (thunderstorms) ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ದಿ. 28ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜೊತೆಗೆ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ (Moderate rain) ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ದಿ. 29‌ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅದರಂತೆ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಸಾಧ್ಯತೆ (Chance of rain) ಇದೆ.

ಇದನ್ನು ಓದಿ : Bengaluru : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಗೆಯೇ ದಿ. 30ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೀದ‌ರ್, ಯಾದಗಿರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Chance) ಹೆಚ್ಚಿದೆ.

ಇದರೊಂದಿಗೆ ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆ (Hail rain) ಯಾಗುವ ಸಾಧ್ಯತೆ ಇದೆ.

ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

ಇನ್ನು ಮೇ 1 ಮತ್ತು 2ರಂದು ಕೂಡ ಇದೇ ರೀತಿಯ ವಾತಾವರಣ ಇರಲಿದ್ದು, ಬರುವ ಐದು ದಿನಗಳ ಕಾಲ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.

ಆದರೆ ಮುಂದಿನ 2 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ. ನಂತರದ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 0C ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದಿನ ಸುದ್ದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೇಡ, ಬೇಡ ಎಂದರೂ ಮಧ್ಯರಾತ್ರಿ ಮನೆಗೆ ನುಗ್ಗಿದ ಸರ್ಕಾರಿ ಶಾಲೆ ಶಿಕ್ಷಕ (Government school teacher) ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೇಳೆ ಗ್ರಾಮಸ್ಥರಿಗೆ ಸಿಕ್ಕಿಬಿದ್ದ ಘಟನೆ ರಾಜಸ್ಥಾನದ ಭರತ್‌ಪುರ (Bharatpur, Rajasthan) ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಮಧ್ಯರಾತ್ರಿಯಲ್ಲಿ ಶಿಕ್ಷಕ ಮಹಿಳೆಯ ಮನೆಗೆ ನುಗ್ಗಿದ್ದಾನೆ. ಆಗ ಮಹಿಳೆ ಜೋರಾಗಿ ಕಿರುಚಲು ಶುರು ಮಾಡಿದ್ದಾರೆ. ಇದನ್ನು ಕೇಳಿ ಗ್ರಾಮಸ್ಥರು ಸೇರಿ ಆತನನ್ನು ಹಿಡಿದು ಥಳಿಸಿದ್ದಾರೆ.

ಇದನ್ನು ಓದಿ : Health : ಉಗುರಿನ ಮೇಲೆ ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿಯೂ ಸಂಚಲನ ಮೂಡಿಸಿದ್ದು (Incident caused a stir), ಭಾರೀ ವೈರಲ್ ಆಗಿದೆ.

ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಎರಗಿದ್ದ ಆರೋಪಿಯನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಅವನನ್ನು ಹಿಡಿದು ನೋಡಿದಾಗ ಶಿಕ್ಷಕ ಅಮಿತ್ ಕುಮಾರ್‌ ಎಂಬುದು ತಿಳಿದು ಬಂದಿದೆ. ಗ್ರಾಮಸ್ಥರು ಕೂಡಲೇ ಆ ಕಾಮಿ ಶಿಕ್ಷಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ (Tied to an electric pole and beaten).

ಇದನ್ನು ಓದಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

ವರದಿಗಳ ಪ್ರಕಾರ, ಜರುಬಾರ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕ ಅಮಿತ್ ಕುಮಾರ್ ಗುರುವಾರ ಬೆಳಗಿನ ಜಾವ 2.30 ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಮಹಿಳೆಯ ಮನೆಗೆ ತಲುಪಿ ಗೇಟ್ ಹಾರಿ ಒಳಗೆ ಪ್ರವೇಶಿಸಿದನು.

ಇನ್ನು ಆರೋಪಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಲ್ಲದೇ ಈತನಿಗೆ ಶಿಕ್ಷೆ ಕೊಡಿಸಬೇಕು ಎಂದು ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ.

ಇದನ್ನು ಓದಿ : Health : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ.!

ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ರಕ್ಷಿಸಿದ್ದಾರೆ. ಅಲ್ಲದೇ ಆರೋಪಿಯನ್ನು ಶಾಂತಿಭಂಗದ ಆರೋಪದ ಮೇಲೆ ವಶಕ್ಕೆ ಪಡೆದಿದ್ದಾರೆ (He was arrested on the charge of disturbing the peace) ಎಂದು ವರದಿಯಿಂದ ತಿಳಿದು ಬಂದಿದೆ.

ಶಿಕ್ಷಕ ಮಹಿಳೆಗೆ ಗೊತ್ತಿಲ್ಲದೇ ಮಧ್ಯರಾತ್ರಿ ಮನೆಗೆ ನುಗ್ಗಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಾನೆ ಎಂದರೆ ನಂಬಲು ಸಾಧ್ಯವಿಲ್ಲ. ಹೀಗಾಗಿ ಈ ಘಟನೆಯಲ್ಲಿ ಮಹಿಳೆಯ ಪಾತ್ರ ಏನಿದೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : ಟ್ರಂಕ್​​ನಲ್ಲಿ ಪತ್ನಿಯ Lover ; ಬೆತ್ತಲೆಯಾಗಿ ಸಿಕ್ಕಿಬಿದ್ದವನನ್ನು ಪತಿ ಮಾಡಿದ್ದೇನು ಗೊತ್ತಾ.?

ಏತನ್ಮಧ್ಯೆ, ಬಲಿಪಶುವಿನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಸೂಕ್ತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments