Tuesday, May 13, 2025
HomeGeneral NewsHubballi : ಲಾರಿಗೆ ಕಾರು ಡಿಕ್ಕಿ ; ಸ್ಥಳದಲ್ಲೇ ಐವರ ಸಾವು.!
spot_img
spot_img
spot_img

Hubballi : ಲಾರಿಗೆ ಕಾರು ಡಿಕ್ಕಿ ; ಸ್ಥಳದಲ್ಲೇ ಐವರ ಸಾವು.!

ಜನಸ್ಪಂದನ ನ್ಯೂಸ್, ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ (Hubli, Dharwad district) ತಾಲೂಕಿನ ಕಿರೇಸೂರು ಕ್ರಾಸ್ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಸಾವಿಗೀಡಾದವರು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು (People from Sagar, Shimoga district) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಬೆಳಿಗ್ಗೆ ಮೂತ್ರದಲ್ಲಿ ಈ ಲಕ್ಷಣಗಳಿದ್ದರೆ ಎಚ್ಚರ! Cholesterol ಹೆಚ್ಚಾಗಿರಬಹುದು.

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ವೇತಾ (29), ಅಂಜಲಿ(26), ಸಂದೀಪ (26), ವಿಠಲ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

ಇದನ್ನು ಓದಿ : ಪ್ರಕೃತಿ ವಿಕೋಪ, ಸುನಾಮಿ, ಭೂಕಂಪ, 2-3 ಮಹಾನ್ ನಾಯಕರ ಅಪಮೃತ್ಯು : ಕೋಡಿಮಠ ಶ್ರೀ

ನವಲಗುಂದ ಕಡೆಯಿಂದ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ತೀವ್ರ ಹಾನಿಗಿಳಗಾಗಿದೆ.

ಅಪಘಾತ ಸಂಭವಿಸುತ್ತಿದಂತೆಯೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯಕ್ಕೆ ಪೊಲೀಸರು ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments