ಜನಸ್ಪಂದನ ನ್ಯೂಸ್, ಬೀದರ್ : ದರೋಡೆಕೋರರು SBI ಬ್ಯಾಂಕ್ ನ ಎಟಿಎಂನಲ್ಲಿ ಹಣ ಜಮೆ ಮಾಡಲು ಬಂದಿದ್ದ ಸಿಬ್ಬಂದಿಗಳ ಮೇಲೆ ಗುಂಡು ಹಾರಿಸಿ, ಸಿನಿಮೀಯ ರೀತಿಯಲ್ಲಿ ಹಣ ದೋಚಿ ಎಸ್ಕೇಪ್ ಆದ ಘಟನೆ ಗುರುವಾರ (ಜ.16) ಬೀದರ್ ನಗರದಲ್ಲಿ ನಡೆದಿದೆ.
ಈ ವೇಳೆ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : Bollywood Hero ಸೈಫ್ ಅಲಿ ಖಾನ್ಗೆ ಚಾಕು ಇರಿತ ; ಸ್ಥಿತಿ ಗಂಭೀರ.!
ಬೀದರ್ ನಗರದ ಡಿಸಿ ಕಚೇರಿ ಸಮೀಪ ಇರುವ ಎಸ್ ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣ ಜಮೆ ಮಾಡಲು ಸಿಬ್ಬಂದಿ ಬಂದಿದ್ದರು.
ಈ ವೇಳೆ ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿದ್ದು, ಬಳಿಕ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : Sneck bite : ಹಾವಿನ ವಿಷವನ್ನು ದೇಹದಿಂದ ತೆಗೆದು ಹಾಕುತ್ತೆ ಈ ದಿವ್ಯೌಷಧಿ.!
ಈ ವೇಳೆ ಒಬ್ಬ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ದರೋಡೆಕೋರರು 93 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬ್ಯಾಂಕ್ ನ ಹೊರಗೆ ಸಾರ್ವಜನಿಕರು ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ವಿಡಿಯೋ ನೋಡಲು ಈ ಕೆಳಗಿನ link click ಮಾಡಿ
https://www.facebook.com/share/v/1BTZZBJriF/