ಜನಸ್ಪಂದನ ನ್ಯೂಸ್, ಬೆಳಗಾವಿ : ಸಾಲ ವಸೂಲಿಗೆ (Debt recovery) ಬಂದ ಖಾಸಗಿ ಫೈನಾನ್ಸ್ ಸಿಬ್ಬಂದಿಗಳು, ಒಂದು ತಿಂಗಳ ಬಾಣಂತಿ ಹಾಗೂ ಹಸುಗೂಸು ಸೇರಿ ಮನೆಯಲ್ಲಿದ್ದ ಜನರೆಲ್ಲರನ್ನೂ ಹೊರಗೆ ಹಾಕಿದ ಘಟನೆ ಬೆಳಗಾವಿ ತಾಲ್ಲೂಕಿನ ತಾರಿಹಾಳ (Tarihala of Belagavi Taluk) ಗ್ರಾಮದಲ್ಲಿ ನಡೆದಿದೆ.
ತಾರಿಹಾಳ ಗ್ರಾಮದ ಗಣಪತಿ ರಾಮಚಂದ್ರ ಲೋಹಾರ್ ಎಂಬುವರ ಮನೆ ಮನೆಯನ್ನು ಏಕಾಏಕಿ ಜಪ್ತಿ (Sudden seizure) ಮಾಡಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಬಾಣಂತಿ ಬೀದಿ ಪಾಲಾಗಿದ್ದಾಳೆ ಎನ್ನಲಾಗಿದೆ.
ಇದನ್ನು ಓದಿ : ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ Spa and Beauty parlour ಮೇಲೆ ಪೊಲೀಸರ ದಾಳಿ.!
5 ವರ್ಷಗಳ ಹಿಂದೆ ಫೈನಾನ್ಸ್ ಕಂಪನಿಯಿಂದ ಲೋಹಾರ್ ಕುಟುಂಬವು ಮನೆ ನಿರ್ಮಾಣಕ್ಕಾಗಿ 5 ಲಕ್ಷ ಗೃಹಸಾಲ (5 lakh home loan) ಪಡೆದಿತ್ತು. ಮೂರು ವರ್ಷಗಳ ಕಾಲಗಳ ತನಕ ನಿರಂತರವಾಗಿ ಕಂತು ತುಂಬುತ್ತಾ ಬಂದಿದ್ದಾರೆ (They have been paying installments continuously). ಆದರೆ ವೃದ್ಧ ತಾಯಿಗೆ ಅನಾರೋಗ್ಯ, ಮಗಳ ಹೆರಿಗೆ ಹಿನ್ನೆಲೆ ಕಳೆದ 6 ತಿಂಗಳಿನಿಂದ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಓದಿ : 3ನೇ ಮಹಡಿಯಿಂದ ಹಾರಿದ PU ಮೊದಲನೇ ವರ್ಷದ ವಿದ್ಯಾರ್ಥಿ : ದೃಶ್ಯ CCTV ಯಲ್ಲಿ ಸೆರೆ.!
ಫೈನಾನ್ಸ್ ಕಂಪನಿಯು (A finance company) ಕಂತು ತುಂಬದ ಹಿನ್ನೆಲೆ ಕೋರ್ಟ್ ಮೊರೆ ಹೋಗಿದ್ದು, ಕೋರ್ಟ್ ಆದೇಶದಂತೆ ಪೊಲೀಸರು ಹಾಗೂ ವಕೀಲರ ಸಮ್ಮುಖದಲ್ಲಿ ಮನೆ ಜಪ್ತಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಹೀಗಾಗಿ ಮನೆಯಲ್ಲಿದ್ದ ಒಂದು ತಿಂಗಳ ಬಾಣಂತಿ, ಕುಟುಂಬ ಬೀದಿ ಪಾಲಾಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳನ್ನು ತೆಗೆದುಕೊಳ್ಳಲು ಬಿಡದೆ ಮನೆಯಿಂದ ಹೊರ ಹಾಕಿದ್ದಾರೆ ಎಂದು ನೊಂದ ಕುಟುಂಬ ಕಣ್ಣೀರು ಹಾಕುತ್ತಿದೆ.
ಇದನ್ನು ಓದಿ : ಅಪಾರ್ಟ್ಮೆಂಟ್ನ ಮಹಡಿ ಮೇಲೆ Car ಪಾರ್ಕ್ ಮಾಡತ್ತಿರಾ.? ಹಾಗಾದ್ರೆ ಈ ವಿಡಿಯೋ ನೋಡಿ.!
ಇನ್ನೂ ಲೋಹಾರ್ ಕುಟುಂಬಕ್ಕೆ ಮೂರು ವರ್ಷ ಕಟ್ಟಿರುವ ಕಂತಿನ ಸ್ಟೇಟ್ಮೆಂಟ್ ನೀಡಲು ಬ್ಯಾಂಕ್ ಸಿಬ್ಬಂದಿಗಳು ಹಿಂದೇಟು ಹಾಕಿರುವ ಆರೋಪ ಕೇಳಿ ಬಂದಿದೆ.
ಬ್ಯಾಂಕ್ ಸ್ಟೇಟ್ ಮೆಂಟ್ ಬೇಕೆಂದ್ರೆ ಹಣ ಕೊಡಬೇಕು ಎಂದು ಕೇಳುತ್ತಿದ್ದಾರೆ. ಅಲ್ಲದೇ 7.5 ಲಕ್ಷ ರೂ. ಹಣವನ್ನು ಒಂದೇ ಹಂತದಲ್ಲಿ ಕಟ್ಟಿ ಎಂದು ಫೈನಾನ್ಸ್ ಸಿಬ್ಬಂದಿಗಳು ಹೇಳುತ್ತಿದ್ದಾರೆ ಎಂದು ಕುಟುಂಬ ಆರೋಪಿಸಿದೆ.
ಹಿಂದಿನ ಸುದ್ದಿ : ವಿಚ್ಛೇದನದ ಕೇಸ್ ನಲ್ಲಿ ಪುರುಷರು ಸಹ ಸಂತ್ರಸ್ತರು : ಹೈಕೋರ್ಟ್.
ಜನಸ್ಪಂದನ ನ್ಯೂಸ್, ಬೆಂಗಳೂರು : ಇತ್ತೀಚೆಗೆ ವೈವಾಹಿಕ ವಿವಾದಗಳ ಪ್ರಕರಣಗಳಲ್ಲಿ (A case of matrimonial disputes) ಮಹಿಳೆಯರು ಹೆಚ್ಚಾಗಿ ಬಲಿಪಶುಗಳಾಗಿದ್ದರೂ, ಅಂತಹ ಪ್ರಕರಣಗಳಲ್ಲಿ ಪುರುಷರು ಸಹ ಸಂತ್ರಸ್ತರು. ಹೀಗಾಗಿ ಲಿಂಗ ಸಮಾನತೆಯ ಸಮಾಜ ಈಗಿನ ಅಗತ್ಯವಾಗಿದೆ (A gender egalitarian society is the need of the hour) ಎಂದು ಕರ್ನಾಟಕ High court ಅಭಿಪ್ರಾಯಪಟ್ಟಿದೆ.
ಇದನ್ನು ಓದಿ : ಟ್ರೈನ್ನಲ್ಲಿ ಬೆಂಕಿ ವದಂತಿ : ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು 10 ಜನರ ಸಾ*ವು ; ವಿಡಿಯೋ.!
ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರು ಹೊರಡಿಸಿದ ಆದೇಶದಲ್ಲಿ ಈ ಬಗ್ಗೆ ತಿಳಿಸಲಾಗಿದೆ.
ಮಹಿಳೆಯೊಬ್ಬರು ತಮ್ಮ Divorce ಕುರಿತು ತಾವು ಹಾಜರಾಗಬೇಕಿರುವ ಕೋರ್ಟ್ ತಮ್ಮ ಮನೆಯಿಂದ 130 ಕಿಲೋಮೀಟರ್ ದೂರದಲ್ಲಿದೆ.
ಇದನ್ನು ಓದಿ : ರಸ್ತೆಯಲ್ಲಿ ಮಲಗಿದ್ದ ನಾಯಿಮರಿಯ ಮೇಲೆ ಕಾರು ಹತ್ತಿಸಿದ ಕ್ರೂರ ನಿವೃತ್ತ Police ಸಿಬ್ಬಂದಿ.!
ಹೀಗಾಗಿ ಪ್ರತಿ ಸಲವೂ ವಿಚಾರಣೆಗೆ ಹಾಜರಾಗಲು ಕಷ್ಟವಾಗುತ್ತಿದೆ ಎಂದು ವರ್ಗಾವಣೆ ಅರ್ಜಿಯನ್ನು (Transfer application) ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ (Dismissed).
ಮಹಿಳೆ ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ಪ್ರಕರಣದಲ್ಲಿ ಪ್ರತಿವಾದಿ ಆಕೆಯ ಪತಿ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿದರೆ, ಪತಿಗೆ ಇನ್ನಷ್ಟು ತೊಂದರೆಯಾಗುತ್ತೆ ಎಂದು ವಾದಿಸಿದ್ದು, ಇದನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ.
ಇದನ್ನು ಓದಿ : All India Institute of Medical Science ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮಹಿಳೆಗೆ ಪುರುಷನಂತೆಯೇ ಸಮಾನ ಹಕ್ಕುಗಳಿವೆ. ವಾಸ್ತವವಾಗಿ, ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯರು ಪ್ರಾಥಮಿಕ ಬಲಿಪಶುಗಳು. ಆದರೆ ಪುರುಷರು ಸ್ತ್ರೀಯರ ಕ್ರೌರ್ಯದಿಂದ ಪ್ರಭಾವಿತರಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.
ಆದ್ದರಿಂದ, ಲಿಂಗ ಸಮಾನ ಸಮಾಜದ ಅವಶ್ಯಕತೆ ಇದೆ. ಆ ರೀತಿಯ ಸಮಾಜ ಲಿಂಗ ಅಥವಾ ಲಿಂಗದ ಆಧಾರದ ಮೇಲೆ ಕರ್ತವ್ಯಗಳನ್ನು ಬೇರ್ಪಡಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಹೈಕೋರ್ಟ್ ತಿಳಿಸಿದೆ.