ಜನಸ್ಪಂದನ ನ್ಯೂಸ್, ನೌಕರಿ : ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನಿಸಿದ್ದು (Applications are invited in the Railway Department), ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ಇನ್ನೂ 12ನೇ ತರಗತಿ ಪಾಸಾದವರಿಗೆ ರೈಲ್ವೆಯಲ್ಲಿ ಉದ್ಯೋಗ ಸಿಗಲಿದೆ.
ರೈಲ್ವೆ ನೇಮಕಾತಿ ಮಂಡಳಿಯು (RRB) ರೈಲ್ವೆ ಟಿಕೆಟ್ ಕಲೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಇದನ್ನು ಓದಿ : Video : ಯುವಕನ ಲವ್ ಪ್ರಪೋಸ್ ಒಪ್ಪದ ಯುವತಿ ; ಮುಂದಾದದ್ದು.?
ಖಾಲಿ ಇರುವ ಹುದ್ದೆಗಳ ಸಂಖ್ಯೆ :
2025ರಲ್ಲಿ ಟಿಕೆಟ್ ಕಲೆಕ್ಟರ್ ಹುದ್ದೆಗೆ (Post of Ticket Collector) ಒಟ್ಟು 11,250 ಅರ್ಹ ಅಭ್ಯರ್ಥಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಶೈಕ್ಷಣಿಕ ಅರ್ಹತೆ (Educational qualification) :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಶಿಕ್ಷಣ ಸಂಸ್ಥೆಯಿಂದ 12 ನೇ ತರಗತಿ ಅಥವಾ ತತ್ಸಮಾನ ಕೋರ್ಸ್ ಪೂರ್ಣಗೊಳಿಸಿರಬೇಕು.
ವೇತನ (salary) :
ರೂ. 21,700 ರಿಂದ ರೂ. 81,000 ರೂ.ವರೆಗೆ (ಮಾಸಿಕ ವೇತನ).
ಇದನ್ನು ಓದಿ : ಬಿಟ್ಟು ಹೋದ Wife ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾದ ಪತಿ ; ಏನು ಮಾಡಿದ ಗೊತ್ತಾ.?
ವಯಸ್ಸಿನ ಮಿತಿ :
* ಟಿಕೆಟ್ ಕಲೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿನವರಾಗಿರಬೇಕು.
* ಮೀಸಲಾತಿ ವರ್ಗಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ 18 ರಿಂದ 38 ವರ್ಷ, ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ :
* ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ : 500 ರೂಪಾಯಿ.
* SC/ST ಅಥವಾ ಮಾಜಿ ಸೈನಿಕರು / ಅಂಗವಿಕಲರು/ ಮಹಿಳೆಯರು/ ಅಲ್ಪಸಂಖ್ಯಾತರು/ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 250 ರೂಪಾಯಿ.
ಇದನ್ನು ಓದಿ : ಈಶಾನ್ಯ ಗಡಿ ರೈಲ್ವೆ ವಲಯ : 1,856 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ನೇಮಕಾತಿ ವಿಧಾನ :
* ಕಂಪ್ಯೂಟರ್ ಆಧಾರಿತ ಪರೀಕ್ಷೆ : ಸಾಮಾನ್ಯ ಜ್ಞಾನ, ಪ್ರಚಲಿತ ವ್ಯವಹಾರಗಳು, ಭಾರತೀಯ ರೈಲ್ವೆ ಮತ್ತು ಭೂಗೋಳಶಾಸ್ತ್ರ, ಗಣಿತ, ವಿಶ್ಲೇಷಣಾತ್ಮಕ ಮತ್ತು ಸಮಸ್ಯೆ ಪರಿಹರಿಸುವ ಕೌಶಲ್ಯಗಳು ಮತ್ತು ಇಂಗ್ಲಿಷ್ ಭಾಷೆಯ ಮೂಲಭೂತ ಜ್ಞಾನವನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಒಳಗೊಂಡಿರುತ್ತದೆ.
* ಮನೋವೈಜ್ಞಾನಿಕ ಪರೀಕ್ಷೆ (Psychological test)
* ದೈಹಿಕ ಸಾಮರ್ಥ್ಯ ಪರೀಕ್ಷೆ
* ವೈದ್ಯಕೀಯ ಪರೀಕ್ಷೆ
* ದಾಖಲೆ ಪರಿಶೀಲನೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು :
* ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಜನವರಿ 10, 2025.
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 27, 2025.
ಹೆಚ್ಚಿನ ಮಾಹಿತಿಗಾಗಿ :
indianrailways.gov.in.
ಹಿಂದಿನ ಸುದ್ದಿ : Health : ಕುಂಬಳಕಾಯಿ ಬೀಜದಿಂದ ನಿವಾರಣೆಯಾಗುತ್ತೆ ಈ ಸಮಸ್ಯೆಗಳು.!
ಜನಸ್ಪಂದನ ನ್ಯೂಸ್, ಆರೋಗ್ಯ : ಭಾರತದಲ್ಲಿ ತರಕಾರಿಗಳಲ್ಲಿ ಪ್ರಸಿದ್ಧಿ ಪಡೆದ ಒಂದು ವಿಶಿಷ್ಠವಾದ ತರಕಾರಿ ಎಂದರೆ ಅದು ಕುಂಬಳಕಾಯಿ (Pumpkin). ವಿಶೇಷವಾಗಿ ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಉತ್ಪಾದನೆ ಮಾಡಲಾಗುತ್ತದೆ.
ಕುಂಬಳಕಾಯಿ ಬಳಸಿ ಅಡುಗೆ ಮಾಡುವಾಗ ಬಹಳಷ್ಟು ಜನರು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ವಿಶ್ವದ 100 ಅತ್ಯಂತ ಶಕ್ತಿಶಾಲಿ ಆಹಾರಗಳ ಪಟ್ಟಿಯಲ್ಲಿ ಕುಂಬಳಕಾಯಿ ಬೀಜ ಆರನೇ ಸ್ಥಾನವನ್ನು ಪಡೆದಿದೆ.
ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ಕುಂಬಳಕಾಯಿ ಬೀಜಗಳು ಪೌಷ್ಠಿಕಾಂಶದ ವಿಷಯದಲ್ಲಿ ಮೀನಿಗಿಂತಲೂ ಹೆಚ್ಚು ಶಕ್ತಿಯುತವಾಗಿವೆ.
ಇದನ್ನು ಓದಿ : ಬೆಳಗಾವಿ : ಅನೈತಿಕ ಸಂಬಂಧಕ್ಕೆ ಅಡ್ಡಿ ; Lover ಜೊತೆ ಸೇರಿ ಗಂಡನನ್ನು ಕೊಂದು ನದಿಗೆ ಎಸೆದ ಪತ್ನಿ.!
* ರಂಜಕ, ಮೆಗ್ನೀಸಿಯಮ್ ಮತ್ತು ಸತುವನ್ನು (phosphorus, Magnesium and zinc) ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವ ಕುಂಬಳಕಾಯಿ ಬೀಜಗಳು, ಮೂಳೆ ಸಾಂದ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಆಸ್ಟಿಯೊಪೊರೋಸಿಸ್ ಅನ್ನು ತಡೆಯಲು ಸಹಾಯಕವಾಗಿವೆ.
* ಇದರಲ್ಲಿರುವ ಫೈಬರ್ ಮತ್ತು ಪ್ರೋಟೀನ್ ಹಸಿವು ಮತ್ತು ತೂಕವನ್ನು ನಿಯಂತ್ರಿಸುತ್ತದೆ (Controls hungry and weight). ಇನ್ನೂ 100 ಗ್ರಾಂ ಕುಂಬಳಕಾಯಿ ಬೀಜಗಳು ಕೇವಲ 164 ಕ್ಯಾಲೊರಿಗಳನ್ನು ಹೊಂದಿವೆ (100 grams of pumpkin seeds has only 164 calories) ಎಂದು ವರದಿಗಳು ತಿಳಿಸಿವೆ.
* ಕುಂಬಳಕಾಯಿ ಬೀಜಗಳಲ್ಲಿನ ಫೈಟೊಕೆಮಿಕಲ್ ಸಂಯುಕ್ತಗಳು (Phytochemical compounds) ಕೂದಲು ಉದುರುವಿಕೆಗೆ ಕಾರಣವಾಗುವ ಹಾರ್ಮೋನ್ ಡೈಹೈಡ್ರೊಟೆಸ್ಟೊಸ್ಟೆರಾನ್ (ಡಿಎಚ್ ಟಿ) ಉತ್ಪಾದನೆಯನ್ನು ತಡೆಗಟ್ಟಲು ಸಹಾಯ ಮಾಡುತ್ತವೆ. ಇದರಿಂದಾಗಿ ಕೂದಲು ಉದುರುವ ಸಮಸ್ಯೆ ಕ್ರಮೇಣವಾಗಿ ಕಡಿಮೆಯಾಗುವುದು.
ಇದನ್ನು ಓದಿ : ಭಾರತೀಯ ಅಂಚೆ ಇಲಾಖೆಯಲ್ಲಿ ನೌಕರಿ ; ರೂ.19,900/- ಪ್ರತಿ ತಿಂಗಳು ವೇತನ.!
ಕುಂಬಳಕಾಯಿ ಬೀಜಗಳಲ್ಲಿನ ಡಿಎಚ್ ಟಿ ಮಟ್ಟವನ್ನು ಕಡಿಮೆ ಮಾಡಿ ಕೂದಲು ಉದುರುವಿಕೆ ನಿಧಾನಗೊಳಿಸಿ, ಇರುವ ಕೂದಲನ್ನು ಸಂರಕ್ಷಿಸಲು (To preserve existing hair) ಸಹಾಯ ಮಾಡುತ್ತದೆ.
* ಈ ಬೀಜಗಳಲ್ಲಿ ಇರುವ ಸತುವು ದೇಹವನ್ನು ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯ ನೀಡುತ್ತದೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು (The immune system) ಬಲಪಡಿಸುತ್ತದೆ.
* ಇದರಲ್ಲಿರುವ ಕ್ಯಾರೊಟಿನಾಯ್ಡ್ಗಳು ಮತ್ತು ಆಂಟಿಆಕ್ಸಿಡೆಂಟ್ಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್ಗಳ ವಿರುದ್ಧ ಕೆಲಸ (Work against free radicals) ಮಾಡುತ್ತವೆ.
* ಹೃದಯದ ಲಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ.
* ಒಮೆಗಾ -3 ಮತ್ತು ಒಮೆಗಾ -6 ಕೊಬ್ಬಿನಾಮ್ಲಗಳು ಕೆಟ್ಟ ಕೊಲೆಸ್ಟ್ರಾಲ್ (LDL), ಉರಿಯೂತವನ್ನು ಕಡಿಮೆ ಮಾಡುತ್ತವೆ.
* ವಿಟಮಿನ್ ಇ ಹೊಂದಿರುವುದರಿಂದ ಉರಿಯೂತವನ್ನು ಕಡಿಮೆ ಮಾಡುವ ಗುಣ (Anti- inflammatory properties) ಹೊಂದಿದೆ.
* ಕುಂಬಳಕಾಯಿ ಬೀಜವು ಕಬ್ಬಿಣ, ಸೆಲೆನಿಯಂ, ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳಿಂದ (Antioxidant) ಸಮೃದ್ಧವಾಗಿದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಉತ್ತಮವಾಗಿವೆ.
* ಈ ಬೀಜಗಳ ನಿಯಮಿತ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ.
* ಕುಂಬಳಕಾಯಿ ಬೀಜಗಳು ಇನ್ಸುಲಿನ್ ಅನ್ನು ಸುಧಾರಿಸಿ, ಮಧುಮೇಹದಿಂದಾಗುವ ತೊಂದರೆಗಳನ್ನು ತಡೆಯುತ್ತವೆ (Improve insulin, prevent complications of diabetes).
* ನ್ಯೂಟ್ರಿಷನ್ ರಿಸರ್ಚ್ ನಡೆಸಿದ ಅಧ್ಯಯನದ ಪ್ರಕಾರ, ಕುಂಬಳಕಾಯಿ ಬೀಜಗಳನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಂಡಿದ್ದ ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿಕೊಂಡಿದ್ದಾರೆ (Lower sugar levels) ಎನ್ನಲಾಗಿದೆ.
ಇದನ್ನು ಓದಿ : ಮೊದಲ ಗಂಡನಿಂದ ಡಿವೋರ್ಸ್ ಪಡೆಯದಿದ್ದರೂ 2ನೇ ಪತಿಯಿಂದ ಹೆಂಡತಿ ಜೀವನಾಂಶ ಪಡೆಯಬಹುದು : ಸುಪ್ರೀಂ ಕೋರ್ಟ್
* ಕುಂಬಳಕಾಯಿ ಬೀಜಗಳು ಕಬ್ಬಿಣ ಮತ್ತು ಮ್ಯಾಂಗನೀಸ್ನ ಮೂಲವಾಗಿವೆ. ಕಬ್ಬಿಣವು ದೇಹದಲ್ಲಿನ ರಕ್ತಹೀನತೆಯನ್ನು (Anemia) ತೆಗೆದು ಹಾಕುವಲ್ಲಿ ಸಹಾಯ ಮಾಡುತ್ತದೆ. ಇನ್ನೂ ಮ್ಯಾಂಗನೀಸ್ ದೇಹ ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಕುಂಬಳಕಾಯಿ ಬೀಜಗಳು ಕ್ಯಾನ್ಸರ್ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು (positive effects) ಬೀರುತ್ತವೆ ಎಂಬ ಅಂಶವನ್ನು ಅಧ್ಯಯನಗಳು ಕಂಡು ಹಿಡಿದಿವೆ.