ಜನಸ್ಪಂದನ ನ್ಯೂಸ್, ಡೆಸ್ಕ್ : ಬಿಜೆಪಿ ನಾಯಕರೊಬ್ಬರನ್ನು ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಗುಂಪೊಂದು ಅಟ್ಟಾಡಿಸಿಕೊಂಡು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ ಲಡ್ಪುರದ ಕಸ್ನಾ ಎಂಬ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಹಲ್ಲೆಗೊಳಗಾದ ಬಿಜೆಪಿ ನಾಯಕ ರಾಹುಲ್ ಪಂಡಿತ್ ಎಂದು ವರದಿಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಹುಲ್ ಪಂಡಿತ್ ಹಾಗೂ ಗುಂಪಿನ ನಡುವೆ ಯಾವುದೋ ಒಂದು ವಿಚಾರಕ್ಕೆ ಗಲಾಟೆ ಶುರುವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಈ ಹಲ್ಲೆ ನಡೆದಿದೆ. ಯಾವ ಕಾರಣಕ್ಕೆ ಗಲಾಟೆಯಾಯಿತು ಎಂದು ತಿಳಿದುಬಂದಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಗಳು ತಲೆಮರಿಸಿಕೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬಿಜೆಪಿ ನಾಯಕ ರಾಹುಲ್ ಪಂಡಿತ್ ಮೇಲಿನ ಹಲ್ಲೆ ಉತ್ತರಪ್ರದೇಶದಲ್ಲಿನ ಕಾನೂನು ಸುವ್ಯವಸ್ಥೆಯ ಕುರಿತು ಕಳವಳ ವ್ಯಕ್ತವಾಗಿದೆ. ರಾಜಕೀಯ ನಾಯಕರಿಗೆ ರಕ್ಷಣೆ ಇಲ್ಲವೆಂದರೆ ಮಿಕ್ಕವರ ಗತಿಯೇನು ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.
ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕೆಂಡಕಾರಿರುವ ನೆಟ್ಟಿಗರು ಆಡಳಿತ ಪಕ್ಷದ ನಾಯಕನ ಮೇಲೆ ಹಾಡಹಗಲೇ ಈ ರೀತಿ ಥಳಿಸಿದರೆ ಸಾರ್ವಜನಿಕರ ಕಥೆಯೇನು.? ಶೀಘ್ರವೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಆಗ್ರಹಿಸಿದ್ದಾರೆ.
BJP leader Rahul Pandit assaulted by goons, brutally beaten with sticks. Police say it's a clash between factions. #ViralVideo captures shocking attack in Ladpura, Kasna. #GreaterNoida pic.twitter.com/pTZSfN7hSh
— अनुराग 🇮🇳 (@VnsAnuTi) July 28, 2023