ಹೃದಯಾಘಾತದಿಂದ ಪೊಲೀಸ್ ಕಾನ್ಸ್​ಟೆಬಲ್​ ಸಾವು.!

ಜನಸ್ಪಂದನ ನ್ಯೂಸ್, ಮಂಗಳೂರು : ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಎಆರ್ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಕೊನೆಯುಸಿರೆಳೆದ ಘಟನೆ ನಡೆದಿದೆ.

ಮೃತ ದುರ್ದೈವಿ ಸೋಮನಗೌಡ ಚೌಧರಿ (31) ಎಂದು ತಿಳಿದುಬಂದಿದೆ.

ಇವರು ಮಂಗಳೂರು ಸಿಎಆರ್ ತುಕಡಿಯ ಹೆಡ್ ಕಾನ್ಸ್​ಟೆಬಲ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸೋಮನಗೌಡ ಅವರು ತಮ್ಮ ಮೇಲಾಧಿಕಾರಿಗೆ ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ಬಿಟ್ಟು ಜೀಪ್ ಬಳಿ ಬಂದ ವೇಳೆ ಹೃದಯಾಘಾತವಾಗಿದೆ ಎನ್ನಲಾಗಿದೆ. ತಕ್ಷಣ ಅವರನ್ನು ವೆನ್ಲಾಕ್​ ಆಸ್ಪತ್ರೆಗೆ ರವಾನಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ‌.

ಸೋಮನಗೌಡ ಸ್ವಂತ ಹಣದಿಂದ ಕೊರೊನಾ​ ಸಂದರ್ಭದಲ್ಲಿ ಬಡವರಿಗೆ ಸಹಾಯ ಮಾಡಿದ್ದರು. ಅಲ್ಲದೆ, ವರ್ಷಕ್ಕೆ ಎರಡು ಬಾರಿ ರಕ್ತದಾನ ಸಹ ಮಾಡುತ್ತಿದ್ದರು ಎಂದು ಸಹೋದ್ಯೋಗಿಗಳು ತಿಳಿಸಿದ್ದಾರೆ.

ಇಂದು ಮಂಗಳೂರಿನಲ್ಲೇ ಸೋಮನಗೌಡ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.